
CHITRADURGA NEWS | 15 AUGUST 2025
ಚಿತ್ರದುರ್ಗ: ಚಿತ್ರದುರ್ಗ ನಗರದ ಮುರುಘ ರಾಜೇಂದ್ರ ಕ್ರೀಡಾಂಗಣದಲ್ಲಿ ಶುಕ್ರವಾರ ಪತ್ರಕರ್ತರ ಹೊಸ ವಾಹನವನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಗೆ ಯೋಜನಾ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ಹಸಿರು ನಿಶಾನೆ ಮೂಲಕ ಚಾಲನೆ ನೀಡಿದರು.
ಇದನ್ನೂ ಓದಿ: ರಸ್ತೆ ಅಗಲೀಕರಣ ಶತಃಸಿದ್ಧ | ಮೆಡಿಕಲ್ ಕಾಲೇಜು ಹೊಸ ಡಿಸಿ ಆಫೀಸಿಗೆ | ಸಚಿವ ಸುಧಾಕರ್ ಮಹತ್ವದ ಸಭೆ
ಈ ವೇಳೆ ಸ್ವತಃ ಸಚಿವ ಡಿ.ಸುಧಾಕರ್ ಅವರೇ ಪತ್ರಕರ್ತರ ನೂತನ ವಾಹನವನ್ನು ನಗರದ ಮುರುಘಾ ರಾಜೇಂದ್ರ ಕ್ರೀಡಾಂಗಣದಿಂದ ಜಿಲ್ಲಾ ಪಂಚಾಯತ್ ಕಚೇರಿವರೆಗೂ ವಾಹನ ಚಲಾಯಿಸಿದ್ದು ವಿಶೇಷವಾಗಿತ್ತು. ಎಲ್ಲ ಪತ್ರಕರ್ತರು, ಗಣ್ಯಮಾನ್ಯರು ಇದೇ ವಾಹನದಲ್ಲಿ ಜಿಲ್ಲಾ ಪಂಚಾಯತ್ ವರೆಗೂ ಪ್ರಯಾಣಿಸಿದರು.
ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ಅವರು ಶಾಸಕರ ವಿಶೇಷ ಪ್ರದೇಶಾಭಿವೃದ್ಧಿ ನಿಧಿ ಯೋಜನೆಯಡಿ ಅಂದಾಜು ರೂ.27 ಲಕ್ಷ ವೆಚ್ಚದಲ್ಲಿ ಒಂದು ಸ್ವರಾಜ್ ಮಜ್ಡಾ ವಾಹನವನ್ನು ಪತ್ರಕರ್ತರಿಗಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಗೆ ಹಸ್ತಾಂತರ ಮಾಡಿದರು.
ಇದನ್ನೂ ಓದಿ: ಸ್ವಾತಂತ್ರ್ಯ ದಿನಾಚರಣೆ | ಸಚಿವ ಸುಧಾಕರ್ ಧ್ವಜಾರೋಹಣ | ವಿದ್ಯಾರ್ಥಿಗಳ ಆಕರ್ಷಕ ಪಥ ಸಂಚಲನ
ಈ ಸಂದರ್ಭದಲ್ಲಿ ಚಿತ್ರದುರ್ಗ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮದ ಅಧ್ಯಕ್ಷ ಜಿ.ಎಸ್.ಮಂಜುನಾಥ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಂ.ಕೆ. ತಾಜ್ಪೀರ್, ನಗರಸಭೆ ಅಧ್ಯಕ್ಷೆ ಸುಮಿತಾ ಬಿ.ಎನ್.ರಾಘವೇಂದ್ರ, ಜಿಲ್ಲಾ ಗ್ಯಾರಂಟಿ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಆರ್.ಶಿವಣ್ಣ, ಉಪಾಧ್ಯಕ್ಷ ಡಿ.ಎನ್.ಮೈಲಾರಪ್ಪ, ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಜಿಲ್ಲಾ ವಾರ್ತಾಧಿಕಾರಿ ಬಿ.ವಿ.ತುಕಾರಾಂರಾವ್ ಇದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

