CHITRADURGA NEWS | 29 SEPTEMBER 2024
ಚಿತ್ರದುರ್ಗ: ವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್ ಅವರಿಗೆ ನಾಳೆಗೆ (ಸೆ.30ಕ್ಕೆ) 50 ವರ್ಷ. ಸುವರ್ಣ ಸಂಭ್ರಮದ ಹಿನ್ನೆಲೆಯಲ್ಲಿ ಹೊಸದುರ್ಗದಲ್ಲಿ ಸುವರ್ಣ ಮಹೋತ್ಸವ ಹಮ್ಮಿಕೊಳ್ಳಲಾಗಿದೆ.
ಸುವರ್ಣ ಮಹೋತ್ಸವದ ಹಿನ್ನೆಲೆಯಲ್ಲಿ ಹೊಸದುರ್ಗ ಪಟ್ಟಣದಲ್ಲಿ ಕೆ.ಎಸ್.ನವೀನ್ ಅವರ ಅದ್ದೂರಿ ಜನ್ಮ ದಿನಾಚರಣೆಗೆ (BIRTH DAY) ಭರ್ಜರಿ ತಯಾರಿ ಮಾಡಿಕೊಳ್ಳಲಾಗುತ್ತಿದೆ.
ಇದನ್ನೂ ಓದಿ: ಹೊತ್ತಿ ಉರಿದ ಕಂಟೇನರ್ ಲಾರಿ | ಜನವಸತಿ ಪ್ರದೇಶದ ಬಳಿ ತಪ್ಪಿದ ಅನಾಹುತ
ಜನ್ಮ ದಿನಾಚರಣೆ ಕಾರ್ಯಕ್ರಮದ ಅಂಗವಾಗಿ ಸೋಮವಾರ ಹೊಸದುರ್ಗಕ್ಕೆ ತೆರಳಲಿರುವ ಎಂಎಲ್ಸಿ ಕೆ.ಎಸ್.ನವೀನ್, ಭಗೀರಥ ಗುರುಪೀಠ, ಸಾಣೇಹಳ್ಳಿ ತರಳಬಾಳು ಶಾಖಾ ಮಠ, ಕುಂಚಿಟಿಗ ಮಠ ಹಾಗೂ ಕೆಲ್ಲೋಡು ಕನಕ ಗುರುಪೀಠಕ್ಕೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆಯಲಿದ್ದಾರೆ.
ನಂತರ ವೀರಭದ್ರ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ, ಅಲ್ಲಿಂದ ಅಂಬೇಡ್ಕರ್ ವೃತ್ತಕ್ಕೆ ಆಗಮಿಸಿ ಮಾಲಾರ್ಪಣೆ ಮಾಡಲಿದ್ದಾರೆ.
ಇದನ್ನೂ ಓದಿ: ಕೆನ್ನಳ್ಳಿಯ ದುರಂತ | ಹಬ್ಬಿದಾ ಮಲೆಮಧ್ಯದೊಳಗೆ
ಮಧ್ಯಾಹ್ನ 1 ಗಂಟೆಗೆ ಸಿದ್ದರಾಮೇಶ್ವರ ಕಲ್ಯಾಣ ಮಂಟಪದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದ್ದು, ರೈತರು, ಪೌರ ಕಾರ್ಮಿಕರು, ಸೈನಿಕರು, ಆಶಾ ಕಾರ್ಯಕರ್ತೆಯರು, ಕ್ರೀಡಾ ಸಾಧಕರು, ಮಹಿಳಾ ಸಾಧಕರು ಸೇರಿದಂತೆ ವಿವಿಧ ವರ್ಗದ ಸುಮಾರು 50 ಜನರನ್ನು ಸನ್ಮಾನಿಸುವ ಕಾರ್ಯಕ್ರಮವಿದೆ.
ಸಂಸದ ಗೋವಿಂದ ಕಾರಜೋಳ, ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಸೇರಿದಂತೆ ಸ್ಥಳೀಯ ಬಿಜೆಪಿ ಮುಖಂಡರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಆಯೋಜಕರು ತಿಳಿಸಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
