CHITRADURGA NEWS | 16 APRIL 2025
ಚಿತ್ರದುರ್ಗ: ಹಿರಿಯೂರು ತಾಲ್ಲೂಕಿನ ಕೆ.ಟಿ.ತಿಪ್ಪೇಸ್ವಾಮಿ ಅವರನ್ನು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಜಿಲ್ಲಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಯಿತು.
Also Read: ಏಪ್ರಿಲ್ 21 ರಂದು ಆರೋಗ್ಯ ಸಂಜೀವಿನ ಯೋಜನೆ ಜಾರಿ | ಸಿ.ಎಸ್.ಷಡಾಕ್ಷರಿ
9 ಏಪ್ರಿಲ್ 2025 ರಂದು ಹಿಂದಿನ ಜಿಲ್ಲಾ ಸಮಿತಿ ಸಭೆಯಲ್ಲಿ ಜಿಲ್ಲಾ ಸಮಿತಿ ಪುನಃ ರಚನೆ ಮಾಡಲು ತೀರ್ಮಾನಿಸಿ, ಆರಂಭಿಕ ಹಂತದಲ್ಲಿ ಜಿಲ್ಲಾಧ್ಯಕ್ಷರ ಆಯ್ಕೆ ಬಗ್ಗೆ ಚರ್ಚಿಸಿ, ಜಿಲ್ಲೆಯಲ್ಲಿ ಮುಂಚೂಣಿಯಲ್ಲಿ ಚಳುವಳಿಯನ್ನು ಮಾಡುತ್ತಿರುವವರಲ್ಲಿ ಕೆ.ಟಿ.ತಿಪ್ಪೇಸ್ವಾಮಿ ಅವರು ಉತ್ತಮ ಹೋರಾಟಗಳನ್ನು ರೂಪಿಸುತ್ತಿದ್ದು, ಅವರ ಬುದ್ಧಿಮತ್ತೆಯನ್ನು ಸಂಪೂರ್ಣ ಜಿಲ್ಲೆಗೆ ಬಳಸಿಕೊಂಡು, ರೈತರ ಹಿತದೃಷ್ಟಿಯಿಂದ ಸಂಘಟನೆಯನ್ನು ಬಲಪಡಿಸಲು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.
ಅಕ್ಕ-ತಂಗಿ ಭೇಟಿ ಉತ್ಸವದ ವೀಡಿಯೋ ನೋಡಿ:
ಸಭೆಯಲ್ಲಿ ಹಾಜರಿದ್ದ ಸದಸ್ಯರ ಸಮಕ್ಷಮ ಮೂಲ ಸಿದ್ಧಾಂತಗಳ ಯಜಮಾನಿಕೆಯಲ್ಲಿ ನಡೆಯುವ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಮೂಲ ಆಶಯಗಳಿಗೆ ಧಕ್ಕೆ ಬಾರದಂತೆ ಜನ ಹಿತದೃಷ್ಟಿಯಿಂದ, ಪಾರದರ್ಶಕವಾಗಿ ಹೋರಾಟಗಳನ್ನು ರೂಪಿಸಿ ಜಿಲ್ಲೆಯಲ್ಲಿ ಸಂಘಟನೆಯನ್ನು ಬಲಪಡಿಸಬೇಕೆಂಬ ನಿಬಂಧನೆಯ ಮೇರೆಗೆ ಚಿತ್ರದುರ್ಗ ಜಿಲ್ಲೆಯ ಜಿಲ್ಲಾಧ್ಯಕ್ಷರ ಜವಾಬ್ದಾರಿಯನ್ನು ವಹಿಸಲಾಯಿತು.
Also Read: ಹೊಳಲ್ಕೆರೆಯ ನಂಟು ಬಿಟ್ಟು ಹೋದ ಹಾಸ್ಯ ನಟ ಬ್ಯಾಂಕ್ ಜನಾರ್ದನ್
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number