CHITRADURGA NEWS | 02 JUNE 2025
ಚಿತ್ರದುರ್ಗ: ಜಿಲ್ಲೆಯ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ನೂತನ ಉಪ ನಿರ್ದೇಶಕರಾಗಿ ಕೆ.ತಿಮ್ಮಯ್ಯ ಅಧಿಕಾರ ವಹಿಸಿಕೊಂಡರು.
Also Read: ಹಿರಿಯ ವಕೀಲರಾದ ಡಾ.ಎಂ.ಸಿ.ನರಹರಿ ಇನ್ನಿಲ್ಲ

ಈ ಸಂದರ್ಭದಲ್ಲಿ ನೂತನ ಉಪನಿರ್ದೇಶಕರನ್ನು ಪ್ರಾಚಾರ್ಯರು ಮತ್ತು ಉಪನ್ಯಾಸಕರು ಕಚೇರಿಯಲ್ಲಿ ಸನ್ಮಾನಿಸಿದರು.
ಸನ್ಮಾನ ಸ್ವೀಕರಿಸಿದ ನೂತನ ಉಪ ನಿರ್ದೇಶಕ ಕೆ.ತಿಮ್ಮಯ್ಯ ಮಾತನಾಡಿ, ನಾನು ಈ ಜಿಲ್ಲೆಯವನಾಗಿದ್ದು, ಈ ಜಿಲ್ಲೆಯಲ್ಲಿ ಉಪನ್ಯಾಸಕನಾಗಿ ಮತ್ತು ಪ್ರಾಚಾರ್ಯರಾಗಿ ಸೇವೆ ಸಲ್ಲಿಸಿದ್ದೇನೆ. ಹಾಗಾಗಿ ಈ ಜಿಲ್ಲೆಯ ಎಲ್ಲಾ ಪದವಿ ಪೂರ್ವ ಕಾಲೇಜುಗಳ ಕುಂದು ಕೊರತೆಗಳ ಬಗ್ಗೆ ಅರಿತಿದ್ದೇನೆ.
ನಾನು ಮುಂದಿನ ದಿನಗಳಲ್ಲಿ ಪ್ರಾಚಾರ್ಯರ ಮತ್ತು ಉಪನ್ಯಾಸಕರ ಸಹಕಾರ ಪಡೆದು ದ್ವಿತೀಯ ಪಿಯುಸಿ ಫಲಿತಾಂಶ ಹೆಚ್ಚಿಸುವುದಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಹಾಗೂ ನನ್ನ ಅಧಿಕಾರ ಅವಧಿಯಲ್ಲಿ ಉಪ ನಿರ್ದೇಶಕರ ನೂತನ ಕಟ್ಟಡ ನಿರ್ಮಿಸುವುದಕ್ಕೆ ಪ್ರಯತ್ನಿಸುತ್ತೇನೆ ಎಂದು ಹೇಳಿದರು.
Also Read: ಭಾಗ್ಯಲಕ್ಷ್ಮಿ ಯೋಜನೆ | 18 ವರ್ಷ ತುಂಬಿದ ಫಲಾನುಭವಿಗಳ ಪಟ್ಟಿ ಪ್ರಕಟ
ಈ ವೇಳೆ ಜಿಲ್ಲಾ ಉಪನ್ಯಾಸಕರ ಸಂಘದ ಮಾಜಿ ಅಧ್ಯಕ್ಷ ಎಸ್.ಲಕ್ಷ್ಮಣ, ಪ್ರಾಚಾರ್ಯ ವಸಂತ ಕುಮಾರ್, ಡಾ.ಬಿ.ಕೃಷ್ಣಪ್ಪ, ಲಲಿತಮ್ಮ, ಪುಷ್ಪಲತಾ, ಡಾ. ತಿಮ್ಮಣ್ಣ, ಭೀಮರೆಡ್ಡಿ, ಉಪನ್ಯಾಸಕರಾದ ಜಬೀವುಲ್ಲಾ, ವಿ.ಚನ್ನಬಸಪ್ಪ, ಚಂದ್ರಶೇಖರ್, ಅಬೀಬ್ವುಲ್ಲಾ, ಶಾಂತಕುಮಾರಿ, ಎಂ.ಶ್ರೀನಿವಾಸ್, ಡಾ.ರೇಖಾ, ಹೀನಾಕೌಸರ್, ವೀರಣ್ಣ ಮತ್ತಿತರರಿದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
