
CHITRADURGA NEWS | 12 July 2025
ಚಿತ್ರದುರ್ಗ: ಚಿತ್ರದುರ್ಗ ಸ್ಪೋರ್ಟ್ಸ್ ಕ್ಲಬ್, ಕರ್ನಾಟಕ ರಾಜ್ಯ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಬೆಂಗಳೂರು, ಚಿತ್ರದುರ್ಗ ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಸಹಯೋಗದೊಂದಿಗೆ ನಗರದ ಹಳೆ ಮಾಧ್ಯಮಿಕ ಶಾಲಾ ಆವರಣದಲ್ಲಿ ಶುಕ್ರವಾರದಿಂದ ಮೂರು ದಿನಗಳ ಕಾಲ ನಡೆಯುತ್ತಿರುವ 25 ವರ್ಷದೊಳಗಿನ ರಾಜ್ಯ ಮಟ್ಟದ ಪುರುಷರ ಹೊನಲು ಬೆಳಕಿನ ಕಬಡ್ಡಿ ಪಂದ್ಯಾವಳಿ-2025 ಪ್ರೀಮಿಯರ್ ಲೀಗ್ ಸೀಸನ್-4 ಮಾದಾರ ಚನ್ನಯ್ಯ ಗುರುಪೀಠದ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಉದ್ಘಾಟಿಸಿದರು.
ನಂತರ ಮಾತನಾಡಿದ ಮಾದಾರ ಚನ್ನಯ್ಯ ಸ್ವಾಮೀಜಿ, ಹೆಚ್ಚಿನ ಸಂಖ್ಯೆಯಲ್ಲಿ ಪ್ರೇಕ್ಷಕರು ಕ್ರೀಡೆಗಳನ್ನು ವೀಕ್ಷಿಸಿದರೆ ಆಯೋಜಕರುಗಳಿಗೆ ಪ್ರೋತ್ಸಾಹ ನೀಡಿದಂತಾಗುತ್ತದೆ. ಕ್ರೀಡೆಯಲ್ಲಿ ಸೋಲು-ಗೆಲುವು ಮುಖ್ಯವಲ್ಲ. ಸೌಹಾರ್ಧಯುತವಾಗಿ ಕ್ರೀಡಾ ಭಾವನೆಗಳನ್ನು ಸ್ವೀಕರಿಸಬೇಕು. ಮುಂದಿನ ಸಾರಿ ನಡೆಯುವ ಇಂತಹ ಪಂದ್ಯಗಳನ್ನು ಶಾಲಾ-ಕಾಲೇಜು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಹೆಚ್ಚು ವೀಕ್ಷಿಸಲು ಅವಕಾಶ ಮಾಡಿದರೆ ಒಳ್ಳೆಯದು.

ಈ ಸಾರಿ ಹಿಂದೂ ಮಹಾ ಗಣಪತಿ ಉತ್ಸವ ಸಂದರ್ಭದಲ್ಲಿ ಕಬಡ್ಡಿ ಆಡಿಸಿದರೆ ಲಕ್ಷಾಂತರ ಜನ ವೀಕ್ಷಿಸುತ್ತಾರೆ. ಯಾವುದೇ ಕ್ರೀಡೆಗಳನ್ನು ಆಯೋಜಿಸುವಾಗ ಒಂದು ತಿಂಗಳು ಮುಂಚೆ ನನ್ನ ಗಮನಕ್ಕೆ ತಂದರೆ ಪೂರಕವಾಗಿ ಬೆಂಬಲ ನೀಡುತ್ತೇನೆ. ದಾವಣಗೆರೆ, ತುಮಕೂರು, ಬೆಂಗಳೂರು ಜಿಲ್ಲೆಗಳಲ್ಲಿ ಕ್ರೀಡೆಗಳಿಗೆ ಹೆಚ್ಚಿನ ಒತ್ತು ಕೊಡಲಾಗುತ್ತಿದೆ. ನಮ್ಮ ಜಿಲ್ಲೆಯಲ್ಲಿಯೂ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸಬೇಕೆಂದು ಹೇಳಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್ಪೀರ್ ಮಾತನಾಡಿ, ವರ್ಷವಿಡಿ ಅಭ್ಯಾಸದಲ್ಲಿ ತೊಡಗಿದಾಗ ಮಾತ್ರ ಉತ್ತಮ ಕಬಡ್ಡಿ ಪಟುಗಳಾಗಿ ಹೊರ ಹೊಮ್ಮಲು ಸಾಧ್ಯ. ಶಾಲಾ-ಕಾಲೇಜು ವಿದ್ಯಾರ್ಥಿಗಳು ಇಂತಹ ಪಂದ್ಯಗಳನ್ನು ಹೆಚ್ಚು ವೀಕ್ಷಿಸಿದಾಗ ಕ್ರೀಡಾಪುಟುಗಳಿಗೆ ಹಾಗೂ ಆಯೋಜಕರುಗಳಿಗೆ ಬೆಂಬಲಿಸಿದಂತಾಗುತ್ತದೆ ಎಂದರು.
ಈ ವೇಳೆ ಎಸ್.ಬಿ.ಐ. ಡಿವಿಷನಲ್ ಮ್ಯಾನೇಜರ್ ವೀರಯ್ಯ ಮಾತನಾಡಿದರು. ಹಿರಿಯ ಪತ್ರಕರ್ತ ಟಿ.ಕೆ.ಬಸವರಾಜ್ ಅಧ್ಯಕ್ಷತೆ ವಹಿಸಿದ್ದರು. ರಾಜ್ಯಸಭೆ ಮಾಜಿ ಸದಸ್ಯ ಹೆಚ್.ಹನುಮಂತಪ್ಪ, ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಸುರೇಶ್ನಾಯ್ಕದೇವರಾಜ್, ಪರಶುರಾಂ, ದಾವಣಗೆರೆ ನಾಗರಾಜ್, ಚಂದ್ರಶೇಖರ್, ಜಿಲ್ಲಾ ಕಾಂಗ್ರೆಸ್ ರೈತ ಮೋರ್ಚಾ ವಿಭಾಗದ ಉಪಾಧ್ಯಕ್ಷ ಶಿವಲಿಂಗಪ್ಪ, ದೈಹಿಕ ಶಿಕ್ಷಕ ಮುರುಗೇಶ್, ಕೋಚ್ಗಳಾದ ಸತೀಶ್ನಾಯ್ಕ, ವಿಜಯ್, ನಾಗಭೂಷಣ್, ದಾದಾಪೀರ್ ಇದ್ದರು.
ಮಂಗಳೂರು, ಬಾಗಲಕೋಟೆಯಿಂದ ತೀರ್ಪುಗಾರರು ಆಗಮಿಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
