By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: loan facility; ಕಾಡುಗೊಲ್ಲ ಅಭಿವೃದ್ಧಿ ನಿಗಮ | ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » loan facility; ಕಾಡುಗೊಲ್ಲ ಅಭಿವೃದ್ಧಿ ನಿಗಮ | ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಮುಖ್ಯ ಸುದ್ದಿ

loan facility; ಕಾಡುಗೊಲ್ಲ ಅಭಿವೃದ್ಧಿ ನಿಗಮ | ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

News Desk Chitradurga News
Last updated: 11 August 2024 08:34
News Desk Chitradurga News
11 months ago
Share
apply now
SHARE
https://chat.whatsapp.com/Jhg5KALiCFpDwME3sTUl7x

CHITRADURGA  NEWS | 11 AUGUST 2024

ಚಿತ್ರದುರ್ಗ: ಕರ್ನಾಟಕ ರಾಜ್ಯ ಕಾಡುಗೊಲ್ಲ ಅಭಿವೃದ್ಧಿ ನಿಗಮದಿಂದ ಹಿಂದುಳಿದ ವರ್ಗಗಳಿಗೆ ಸೇರಿದ ಕಾಡುಗೊಲ್ಲ ಜನಾಂಗದ ಅಭಿವೃದ್ಧಿಗಾಗಿ 2024-25ನೇ ಸಾಲಿನಲ್ಲಿ ಹಲವು ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿದೆ. ಈ ಯೋಜನೆಗಳಡಿ ಸಹಾಯಧನ, ಸಾಲ ಸೌಲಭ್ಯ(loan facility)ಕ್ಕೆ ಆನ್‌ಲೈನ್ ಮೂಲಕ ಸೇವಾಸಿಂಧು ಫೋರ್ಟಲ್‌ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಆಗಸ್ಟ್ 31 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

ಕ್ಲಿಕ್ ಮಾಡಿ ಓದಿ: Chitradurga fort: ಕೋಟೆಯ ಒನಕೆ ಓಬವ್ವನ ಕಿಂಡಿಯಲ್ಲಿ ಕುಸಿದು ಬಿದ್ದ ವ್ಯಕ್ತಿ | ಸಕಾಲಕ್ಕೆ ಹೊತ್ತು ತಂದು ಆಸ್ಪತ್ರೆ ಸೇರಿಸಿ ರಕ್ಷಿಸಿದ ಪ್ರವಾಸಿ ಮಿತ್ರರು

ಕರ್ನಾಟಕ ರಾಜ್ಯ ಕಾಡುಗೊಲ್ಲ ಅಭಿವೃದ್ಧಿ ನಿಗಮದಡಿಯಲ್ಲಿ ಅನುಷ್ಠಾನಗೊಳ್ಳುತ್ತಿರುವ ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ, ಗಂಗಾಕಲ್ಯಾಣ ಯೋಜನೆ (ಈ ಯೋಜನೆಯಲ್ಲಿ ಒಂದೇ ಸ್ಥಳದಲ್ಲಿ ಹೊಂದಿಕೊಂಡಂತೆ ಇರುವ ಕನಿಷ್ಠ 2 ಎಕರೆ ಗರಿಷ್ಠ 5 ಎಕರೆ ಜಮೀನು ಹೊಂದಿರಬೇಕು), ಸ್ವಯಂ ಉದ್ಯೋಗ ನೇರ ಸಾಲ (ಬ್ಯಾಂಕ್‌ಗಳ ಸಹಯೋಗದೊಂದಿಗೆ), ವಿದೇಶಿ ವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ವಿದೇಶಿ ವ್ಯಾಸಂಗ ಯೋಜನೆ (ವಾರ್ಷಿಕ ವರಮಾನ ರೂ.8 ಲಕ್ಷ ಮಿತಿಯೊಳಗಿರಬೇಕು).

ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು: ಅರ್ಜಿದಾರರು ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು. ನಿಗಮದ ಯೋಜನೆಗಳಲ್ಲಿ ಸೌಲಭ್ಯಗಳನ್ನು ಪಡೆಯಲು ಇಚ್ಚಿಸುವವರು ಸರ್ಕಾರದ ಆದೇಶದನ್ವಯ ಕಾಡುಗೊಲ್ಲ ಜಾತಿಗೆ ಸೇರಿದವರಾಗಿರಬೇಕು. ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಚಾಲ್ತಿಯಲ್ಲಿರಬೇಕು. 18-55 ವರ್ಷಗಳ ವಯೋಮಿತಿ ಹೊಂದಿರಬೇಕು. ನಿಗಮ / ಸರ್ಕಾರದ ಯಾವುದಾದರೂ ಯೋಜನೆಗಳಡಿಯಲ್ಲಿ ಈ ಹಿಂದೆ ಸೌಲಭ್ಯ ಪಡೆದಿರಬಾರದು. ಕುಟುಂಬದ ಒಬ್ಬರಿಗೆ ಮಾತ್ರ ಸೌಲಭ್ಯ ಒದಗಿಸಲಾಗುವುದು.

ಅರಿವು ಯೋಜನೆಯಡಿ 18-30 ವರ್ಷ ವಯೋಮಿತಿಯೊಂದಿಗೆ, ವಾರ್ಷಿಕ ವರಮಾನ 3.50ಲಕ್ಷ ಹೊಂದಿರಬೇಕು. ಸ್ವಾವಲಂಬಿ ಸಾರಥಿ ಯೋಜನೆಯಡಿ ಅರ್ಜಿದಾರನು 21 ರಿಂದ 45 ವರ್ಷ ವಯೋಮಿತಿ ಹೊಂದಿರಬೇಕು. ಅರ್ಜಿದಾರನ ತಮ್ಮ ಮೊಬೈಲ್ ಸಂಖ್ಯೆಯನ್ನು ಹಾಗೂ ಬ್ಯಾಂಕ್ ಖಾತೆಯನ್ನು ತಮ್ಮ ಆಧಾರ್ ಸಂಖ್ಯೆಗೆ ಜೋಡಣೆ ಮಾಡಿರಬೇಕು.

ಕ್ಲಿಕ್ ಮಾಡಿ ಓದಿ: Adumalleshwara Zoo: ಆಹಾ ಬನ್ನಿ ಜೋಗಿಮಟ್ಟಿ – ಆಡುಮಲ್ಲೇಶ್ವರದ ಸೊಬಗ ನೋಡಿ | ವೀಡಿಯೋ ಸ್ಟೋರಿ

ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯ ಗ್ರಾಮಾಂತರ ಪ್ರದೇಶದಲ್ಲಿ ರೂ.98,000/ ಮತ್ತು ನಗರ ಪ್ರದೇಶದವರಿಗೆ ರೂ.1,20,000/ ಮೀರಿರಬಾರದು. ಆಯ್ಕೆ ಮಾಡುವಾಗ ಮಹಿಳೆಯರಿಗೆ ಶೇ.33, ವಿಕಲಚೇತನರಿಗೆ ಶೇ.5, ಹಾಗೂ ತೃತೀಯ ಲಿಂಗಿಗಳಿಗೆ ಶೇ.1 ನಷ್ಟು ಮೀಸಲಾತಿ ಹೊಂದಿದೆ.

ಹೆಚ್ಚಿನ ಮಾಹಿತಿಗಾಗಿ ನಿಗಮದ ಕೇಂದ್ರ ಕಚೇರಿಯ ದೂರವಾಣಿ ಸಂಖ್ಯೆ 080-22374848, 7899899039 ಹಾಗೂ ಜಿಲ್ಲೆಗಳಲ್ಲಿ ಡಿ.ದೇವರಾಜ ಅರಸು ನಿಗಮದ ಜಿಲ್ಲಾ ವ್ಯವಸ್ಥಾಪಕರನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಜಿಲ್ಲಾ ವ್ಯವಸ್ಥಾಪಕಿ ಹೆಚ್. ಶಿಲ್ಪಾ ತಿಳಿಸಿದ್ದಾರೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:ApplicationChitradurgaChitradurga newsKadugolla Development CorporationKannada Latest NewsLoan-facilityಅರ್ಜಿಕನ್ನಡ ಲೇಟೆಸ್ಟ್ ನ್ಯೂಸ್ಕಾಡುಗೊಲ್ಲ ಅಭಿವೃದ್ಧಿ ನಿಗಮಚಿತ್ರದುರ್ಗಚಿತ್ರದುರ್ಗ ನ್ಯೂಸ್ಸಾಲ-ಸೌಲಭ್ಯ
Share This Article
Facebook Email Print
Previous Article ಜಿಲ್ಲಾ ಸ್ಕೌಟ್ ಅಂಡ್ ಗೈಡ್ಸ್ ಸಂಸ್ಥೆಯಲ್ಲಿ ಪಿ.ಯು.ಕಾಲೇಜು ಉಪನ್ಯಾಸಕರಿಗೆ ಮಾಹಿತಿ ಶಿಬಿರ ಕಾರ್ಯಕ್ರಮ ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಗಳಿಂದ ಮಾನಸಿಕವಾಗಿ ಸದೃಢರಾಗುತ್ತಾರೆ | ಆರ್.ಪುಟ್ಟಸ್ವಾಮಿ
Next Article A bear visit anjaneyeya Temple Bear Temple run: ಹನುಮಪ್ಪನ ಗುಡಿಗೆ ಬಂದ ಜಾಂಬವಂತ | ದೀಪದ ಎಣ್ಣೆ ಕುಡಿದ ಕರಡಿ
Leave a Comment

Leave a Reply Cancel reply

Your email address will not be published. Required fields are marked *

ಲಿಫ್ಟ್ ಹತ್ತಿದ ತಕ್ಷಣ ತಲೆ ಸುತ್ತುವವರು ಒಮ್ಮೆ ಈ ವಿಚಾರ ತಿಳಿದಿರಿ
Life Style
ಮಳೆಗಾಲದಲ್ಲಿ ಶೀತ ಮತ್ತು ಕೆಮ್ಮು ಬಂದಾಗ ಏನು ತಿನ್ನಬೇಕು ಮತ್ತು ಏನು ತಿನ್ನಬಾರದು? ಎಂಬುದನ್ನು ತಿಳಿಯಿರಿ
Life Style
ಹೆರಿಗೆಯ ನಂತರ ಬೇಗ ಚೇತರಿಸಿಕೊಳ್ಳಲು ಈ ಲಡ್ಡುಗಳನ್ನು ತಿನ್ನಿರಿ
Life Style
today bhavishya
Astrology: ದಿನ ಭವಿಷ್ಯ | ಜೂನ್ 30 | ಉದ್ಯೋಗಗಳಲ್ಲಿ ಬಡ್ತಿ, ದೂರದ ಪ್ರಯಾಣ, ಆರೋಗ್ಯದಲ್ಲಿ ಎಚ್ಚರ
Dina Bhavishya
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up