CHITRADURGA NEWS | 03 OCTOBER 2025
ಚಿತ್ರದುರ್ಗ: ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಮಕ್ಕಳು ಮತ್ತು ಯುವ ಜನರ ಕಲಾ ಪ್ರತಿಭೆ ಗುರುತಿಸಿ ಅವರಿಗೆ ಉತ್ತೇಜನ ನೀಡುವ ಮತ್ತು ಅವರ ತಮ್ಮ ಕಲಾನೈಪುಣ್ಯತೆ ವೃದ್ಧಿಗೊಳಿಸುವಂತೆ ಪ್ರೋತ್ಸಾಹಿಸಲು ಕಲಾ ಪ್ರತಿಭೋತ್ಸವ ಕಾರ್ಯಕ್ರಮ ಆಯೋಜನೆ ಮಾಡಲಾಗುವುದು.
ಇದನ್ನೂ ಓದಿ: ಮುರುಘಾ ಮಠದಲ್ಲಿ ಜಯದೇವ ಜಂಗಿಕುಸ್ತಿ | ವಿವಿಧ ರಾಜ್ಯಗಳಿಂದ ಕುಸ್ತಿಪಟುಗಳು ಭಾಗೀ
ಚಿತ್ರದುರ್ಗದಲ್ಲಿ ಸ್ಪರ್ಧೆಗಳನ್ನು ಇದೇ ಅ.18 ಮತ್ತು 19ರಂದು ನಡೆಸಲು ಉದ್ದೇಶಿಸಲಾಗಿದ್ದು, ಈ ಸಂಬಂಧ ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ.
ಬಾಲಪ್ರತಿಭೆ: ಬಾಲ ಪ್ರತಿಭೆಯ ವಿಭಾಗದಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ ಕನಿಷ್ಟ 8 ವರ್ಷ ತುಂಬಿರಬೇಕು ಹಾಗೂ 14 ವರ್ಷಕ್ಕಿಂತ ಕಡಿಮೆಯಿರಬೇಕು. ಸ್ಪರ್ಧೆಗಳಲ್ಲಿ ಭಾಗವಹಿಸುವ ಪ್ರತಿಯೊಬ್ಬ ಅಭ್ಯರ್ಥಿಯ ವಯೋಮಿತಿ ದೃಢೀಕರಣಕ್ಕಾಗಿ ಶಾಲೆಯಿಂದ ಪಡೆದ ಪ್ರಮಾಣ ಪತ್ರವನ್ನು ಸಲ್ಲಿಸಬೇಕು.
ಶಾಲೆಯಿಂದ ಬಂದ ಅಭ್ಯರ್ಥಿಯಲ್ಲದಿದ್ದಲ್ಲಿ ಅವರ ವಯಸ್ಸಿನ ಬಗ್ಗೆ ಪಂಚಾಯಿತಿ, ನಗರಸಭೆ, ಪುರಸಭೆ, ಪಾಲಿಕೆ ಕಚೇರಿಯಿಂದ ದೃಢೀಕರಣ ಪತ್ರ ಪಡೆದು ಸಲ್ಲಿಸಬೇಕು.
ಕಿಶೋರ ಪ್ರತಿಭೆ:
ಕಿಶೋರ ಪ್ರತಿಭೆ ವಿಭಾಗದಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ ಕನಿಷ್ಟ 14 ವರ್ಷವಾಗಿರಬೇಕು. 18 ವರ್ಷಕ್ಕಿಂತ ಕಡಿಮೆ ಇರಬೇಕು. ಸ್ಪರ್ಧೆಗಳಲ್ಲಿ ಭಾಗವಹಿಸುವ ಪ್ರತಿಯೊಬ್ಬ ಅಭ್ಯರ್ಥಿಯು ವಯೋಮಿತಿಯ ದೃಢೀಕರಣಕ್ಕಾಗಿ ಶಾಲೆ, ಕಾಲೇಜಿನಿಂದ ಪಡೆದ ಪ್ರಮಾಣ ಪತ್ರವನ್ನು ಸಲ್ಲಿಸಬೇಕು.
ಇದನ್ನೂ ಓದಿ: ಗಾಂಧೀಜಿ ಜಯಂತಿ | ಸ್ವಚ್ಛತಾ ಶ್ರಮದಾನ | ಪ್ರಬಂಧ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ
ಯುವ ಪ್ರತಿಭೆ: ಯುವ ಪ್ರತಿಭೆ ವಿಭಾಗದಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ ಕನಿಷ್ಟ 18 ವರ್ಷ ತುಂಬಿರಬೇಕು ಹಾಗೂ 30 ವರ್ಷಕ್ಕಿಂತ ಕಡಿಮೆ ಇರಬೇಕು. ಸ್ಪರ್ಧೆಗಳಲ್ಲಿ ಭಾಗವಹಿಸುವ ಪ್ರತಿಯೊಬ್ಬ ಅಭ್ಯರ್ಥಿಯ ವಯೋಮಿತಿ ದೃಢೀಕರಣಕ್ಕಾಗಿ ಕಾಲೇಜಿನಿಂದ ಪಡೆದ ಪ್ರಮಾಣ ಪತ್ರವನ್ನು ಸಲ್ಲಿಸಬೇಕು.
ಏಕವ್ಯಕ್ತಿ ಸ್ಪರ್ಧೆಗಳಲ್ಲಿ ಬಾಲ ಪ್ರತಿಭೆ, ಕಿಶೋರ ಪ್ರತಿಭೆ ವಿಭಾಗದ ಸ್ಪರ್ಧೆಗೆ ನಿಗಧಿಪಡಿಸಿದ ಕಲಾ ಪ್ರಕಾರಗಳು ಇಂತಿವೆ. ಶಾಸ್ತ್ರೀಯ ಸಂಗೀತಕ್ಕೆ 10 ನಿಮಿಷ, ಚಿತ್ರಕಲೆಗೆ 120 ನಿಮಿಷ ಹಾಗೂ ಸುಗಮ ಸಂಗೀತ, ಜಾನಪದ ಗೀತೆ, ಹಿಂದೂಸ್ತಾನಿ, ಕರ್ನಾಟಕ ವಾದ್ಯ ಸಂಗೀತ, ಹಿಂದೂಸ್ತಾನಿ, ಕರ್ನಾಟಕ ಶಾಸ್ತ್ರೀಯ ಸಂಗೀತಕ್ಕೆ 7 ನಿಮಿಷ ನಿಗದಿಪಡಿಸಲಾಗಿದೆ.
ಯುವ ಪ್ರತಿಭೆ ವಿಭಾಗದ ಸ್ಪರ್ಧೆಗೆ ನಿಗದಿಪಡಿಸಿದ ಸ್ಪರ್ಧೆಗಳು ಇಂತಿವೆ. ನನ್ನ ಮೆಚ್ಚಿನ ಸಾಹಿತಿ (ಆಶುಭಾಷಣ), ಸುಗಮ ಸಂಗೀತ, ಹಿಂದೂಸ್ತಾನಿ,ಕರ್ನಾಟಕ ಶಾಸ್ತ್ರೀಯ ಸಂಗೀತ, ಹಿಂದೂಸ್ತಾನಿ, ಕರ್ನಾಟಕ ವಾದ್ಯ ಸಂಗೀತಕ್ಕೆ 7 ನಿಮಿಷ ನಿಗದಿಪಡಿಸಲಾಗಿದೆ. ಶಾಸ್ತ್ರೀಯ ನೃತ್ಯಗೆ 10 ನಿಮಿಷ, ಚಿತ್ರಕಲೆಗೆ 120 ನಿಮಿಷ ನಿಗಪಡಿಸಲಾಗಿದೆ. ಸಮೂಹ ಸ್ಪರ್ಧೆಗಳಲ್ಲಿ ನಾಟಕ ಪ್ರಕಾರ ನಿಗದಿಪಡಿಸಲಾಗಿದ್ದು, ತಂಡದ ಸದಸ್ಯರ ಸಂಖ್ಯೆ ಕನಿಷ್ಟ 10, ಗರಿಷ್ಟ 15 ಜನರನ್ನು ಮೀರಬಾರದು.
ಸ್ಪರ್ಧೆಯ ಪ್ರತಿ ಪ್ರಕಾರಗಳಲ್ಲಿಯೂ ಜಿಲ್ಲಾಮಟ್ಟದಲ್ಲಿ ಪ್ರಥಮ, ದ್ವಿತೀಯ ಸ್ಥಾನ ಪಡೆದವರನ್ನು ವಲಯ ಮಟ್ಟದ ಸ್ಪರ್ಧೆಗಳಿಗೆ ಹಾಗೂ ವಲಯ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದವರನ್ನು ರಾಜ್ಯಮಟ್ಟದ ಸ್ಪರ್ಧೆಗಳಿಗೆ ಆಯ್ಕೆ ಮಾಡಲಾಗುವುದು. ರಾಜ್ಯಮಟ್ಟದಲ್ಲಿ ಪ್ರಥಮ, ದ್ವಿತೀಯ ಮತ್ತು ತೃತೀಯ ಸ್ಥಾನದಲ್ಲಿ ವಿಜೇತರಾದವರಿಗೆ ನಗದು ಬಹುಮಾನ ನೀಡಲಾಗುವುದು.
ಇದನ್ನೂ ಓದಿ: ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ
ಯಾವುದೇ ಸ್ಪರ್ಧೆಯಲ್ಲಿ ತೀರ್ಪುಗಾರರು ನೀಡುವ ಆಯ್ಕೆಯೇ ಅಂತಿಮ. ಒಬ್ಬ ಸ್ಪರ್ಧಿಯು ಒಂದಕ್ಕಿಂತ ಹೆಚ್ಚಿನ ಸ್ಪರ್ಧೆಯಲ್ಲಿ ಭಾಗವಹಿಸಲು ಅವಕಾಶ ಇಲ್ಲ. ಸ್ಪರ್ಧೆಯಲ್ಲಿ ಭಾಗವಹಿಸುವ ಅಭ್ಯರ್ಥಿಗಳು ತಮ್ಮ ಸ್ವ-ವಿವರವಾದ ಅರ್ಜಿಯನ್ನು ಇದೇ ಅಕ್ಟೋಬರ್ 13ರೊಳಗಾಗಿ ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ತರಾಸು ರಂಗಮಂದಿರ, ಚಿತ್ರದುರ್ಗ ಇಲ್ಲಿ ಕಚೇರಿ ವೇಳೆಯಲ್ಲಿ ಸಲ್ಲಿಸಲು ಕೋರಿದೆ.
ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ ಸಂಖ್ಯೆ 08194-224496 ಸಂಪರ್ಕಿಸಬಹುದು ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಡಾ.ಬಿ.ಎಂ.ಗುರುನಾಥ ತಿಳಿಸಿದ್ದಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________


pradhan g d s/o devendra v brujanahatti uppu nearu bavi road chitradurga