By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: Kanaka Jayanti: ಕನಕ ಜಯಂತಿಯಲ್ಲಿ ವಿವಿಧ ಕ್ಷೇತ್ರಗಳ ಸಾಧಕರಿಗೆ ಸನ್ಮಾನ | ಬಿ.ಟಿ.ಜಗದೀಶ್
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » Kanaka Jayanti: ಕನಕ ಜಯಂತಿಯಲ್ಲಿ ವಿವಿಧ ಕ್ಷೇತ್ರಗಳ ಸಾಧಕರಿಗೆ ಸನ್ಮಾನ | ಬಿ.ಟಿ.ಜಗದೀಶ್

ಮುಖ್ಯ ಸುದ್ದಿ

Kanaka Jayanti: ಕನಕ ಜಯಂತಿಯಲ್ಲಿ ವಿವಿಧ ಕ್ಷೇತ್ರಗಳ ಸಾಧಕರಿಗೆ ಸನ್ಮಾನ | ಬಿ.ಟಿ.ಜಗದೀಶ್

News Desk Chitradurga News
Last updated: 16 November 2024 19:36
News Desk Chitradurga News
8 months ago
Share
ಬಿ.ಟಿ.ಜಗದೀಶ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು
ಬಿ.ಟಿ.ಜಗದೀಶ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 16 NOVEMBER 2024

ಚಿತ್ರದುರ್ಗ: ಸಂತ ಶ್ರೇಷ್ಠ ಭಕ್ತ ಕನಕದಾಸರ ಜಯಂತಿ( Kanaka Jayanti)ಯನ್ನು ನ.18 ರಂದು ನಗರದಲ್ಲಿ ಆಚರಣೆ ಮಾಡುತ್ತಿದ್ದು, ಕಾರ್ಯಕ್ರಮದಲ್ಲಿ ಸಮಾಜದ ವಿವಿಧ ಕ್ಷೇತ್ರಗಳ ಸಾಧಕರಿಗೆ ಕನಕಶ್ರೀ ಪುರಸ್ಕಾರ, ಸನ್ಮಾನ ಮಾಡಲಾಗುವುದು ಎಂದು ಜಿಲ್ಲಾ ಕುರುಬರ ಸಂಘದ ಪ್ರಧಾನ ಕಾರ್ಯದರ್ಶಿ ಬಿ.ಟಿ.ಜಗದೀಶ್ ತಿಳಿಸಿದ್ದಾರೆ.

ಕ್ಲಿಕ್ ಮಾಡಿ ಓದಿ: ಉಪ್ಪರಿಗೇನಹಳ್ಳಿ ಮಹಿಳೆ ಕೊಲೆಗಾರರ ಬಂಧನಕ್ಕೆ ಗಡುವು | ನ.30 ರಿಂದ ಎಸ್‌ಪಿ ಕಚೇರಿ ಬಳಿ ಉಪವಾಸ ಸತ್ಯಾಗ್ರಹ | ಪ್ರಣವಾನಂದ ಶ್ರೀ

ಪತ್ರಿಕಾ ಭವನದಲ್ಲಿ ಶನಿವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕನಕದಾಸರ ಜಯಂತಿಯನ್ನು ಮುಂದಿನ ದಿನಗಳಲ್ಲಿ ಗ್ರಾಮ, ಹೋಬಳಿ ಮಟ್ಟದಲ್ಲೂ ಆಚರಣೆ ಮಾಡುವ ಬಗ್ಗೆ ಕುರುಬರ ಸಂಘ ಆಲೋಚನೆ ನಡೆಸುತ್ತಿದೆ. ಇದಕ್ಕೆ ಬೇಕಾದ ತಯಾರಿಯನ್ನೂ ಮಾಡಿಕೊಳ್ಳಲಾಗುತ್ತಿದೆ ಎಂದರು.

ನ.18 ರಂದು ಜಿಲ್ಲಾಡಳಿತ, ಜಿಲ್ಲಾ ಕುರುಬರ, ತಾಲ್ಲೂಕು, ಮಹಿಳಾ ಕನಕ ನೌಕರರ ಹಾಗೂ ಸಮಾಜದ ಇತರೆ ಸಂಘ- ಸಂಸ್ಥೆಗಳ ಆಶ್ರಯದಲ್ಲಿ ನಡೆಯಲಿರುವ ಕನಕದಾಸ ಜಯಂತಿ ಅಂಗವಾಗಿ ಅಂದು ಬೆಳಿಗ್ಗೆ 9.30ಕ್ಕೆ ನಗರದ ಹೊಳಲ್ಕೆರೆ ರಸ್ತೆಯಲ್ಲಿನ ಕನಕದಾಸರ ಪ್ರತಿಮೆ ಬಳಿ ಶ್ರೀ ಈಶ್ವರಾನಂದ ಸ್ವಾಮೀಜಿ ಮಾಲಾರ್ಪಣೆ ಮಾಡಿ ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ ಎಂದರು.

ಈ ಮೆರವಣಿಗೆಯಲ್ಲಿ ಡೊಳ್ಳು, ಭಜನಾ ತಂಡ, ಸೋಬಾನೆ ತಂಡ, ಗೊರವರ ತಂಡ ನಂಧಿಧ್ವಜ, ಕರಡಿ ಚಮ್ಮಾಳ, ಕೋಲಾಟದಂತಹ ಸಾಂಸ್ಕೃತಿಕ ತಂಡದೊ0ದಿಗೆ ಮರೆವಣಿಗೆಯೂ ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಮಾಲಾರ್ಪಣೆಯನ್ನು ಮಾಡಿ ಗಾಂಧಿವೃತ್ತ, ಮೈಸೂರು ಬ್ಯಾಂಕ್ ವೃತ್ತ, ಮಾರ್ಗವಾಗಿ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ತರಾಸು ರಂಗಮಂದಿರವನ್ನು ತಲುಪಲಿದೆ.

ಕ್ಲಿಕ್ ಮಾಡಿ ಓದಿ: ಜಿಲ್ಲಾ ಮಟ್ಟದ ಯುವಜನೋತ್ಸವ | ಪೂರ್ವಭಾವಿ ಸಭೆ

ತರಾಸು ರಂಗಮಂದಿರದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಕೊಪ್ಪಳ ವಿಶ್ವ ವಿದ್ಯಾಲಯದ ಉಪ ಕುಲಪತಿಗಳಾದ ಡಾ.ಬಿ.ಕೆ.ರವಿ ಕನಕದಾಸರ ಬಗ್ಗೆ ಉಪನ್ಯಾಸ ನೀಡಲಿದ್ದಾರೆ. ಇದೇ ಸಂದರ್ಭದಲ್ಲಿ ಜಿಲ್ಲಾ ಕುರುಬ ಸಂಘದಿಂದ ನೀಡುವ ಕನಕಶ್ರೀ ಪ್ರಶಸ್ತಿಗೆ ವೀರಶೈವ ಸಮಾಜದ ಮುಖಂಡರಾದ ಷಣ್ಮುಖಪ್ಪ, ವೈದ್ಯಕೀಯ ಕ್ಷೇತ್ರದಲ್ಲಿ ಡಾ.ಸತೀಶ್, ಸಮಾಜ ಸೇವೆಯಲ್ಲಿ ಲಿಂಗವ್ವ ನಾಗತಿಹಳ್ಳಿಯ ತಿಪ್ಪೇಸ್ವಾಮಿ, ಸರ್ಕಾರಿ ನೌಕರರಲ್ಲಿ ಚೋಳಗಟ್ಟದ ಪಿಡಿಓ ರೂಪಕುಮಾರಿ, ನಗರಾಭಿವೃದ್ದಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ತಿಪ್ಪೇಸ್ವಾಮಿ ಅವರಿಗೆ ಪ್ರಧಾನ ಮಾಡಲಾಗುವುದು ಎಂದು ಜಗದೀಶ್ ತಿಳಿಸಿದರು.

ನ.18 ರ ಸಂಜೆ 6.30ಕ್ಕೆ ಕನಕ ವೃತ್ತದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಯನ್ನು ಮಾಡಿದ ಪತ್ರಿಕಾರಂಗದಲ್ಲಿ ಮಾಲತೇಶ್ ಅರಸ್, ಶಿಕ್ಷಣ ಕ್ಷೇತ್ರದಲ್ಲಿ ಯೋಗೀಶ್ ಸಹ್ಯಾದ್ರಿ, ಪರಿಸರ ಕ್ಷೇತ್ರದಲ್ಲಿ ಮಲ್ಲಿಕಾರ್ಜನಯ್ಯ, ಆರೋಗ್ಯವೇ ಭಾಗ್ಯ ಸಂಘದ ಅಧ್ಯಕ್ಷ ಪರಶುರಾಮ್, ಕೃಷಿ ಕ್ಷೇತ್ರದಲ್ಲಿ ಕ್ಯಾದಿಗೆರೆಯ ರೇಣುಕಾ ರಾಜ್ ಅವರನ್ನು ಸನ್ಮಾನಿಸಲಾಗುವುದು ಎಂದರು.

ಇದೇ ವೇಳೆ ಕಂಬದ ರಂಗಯ್ಯ ಅವರ ತಂಡದಿಂದ ಸಂಗೀತ ಕಾರ್ಯಕ್ರಮ ನಡೆಯಲಿದೆ ಎಂದು ವಿವರಿಸಿದರು.

ಕ್ಲಿಕ್ ಮಾಡಿ ಓದಿ: ಸಹ್ಯಾದ್ರಿ ದುರ್ಗ | ಬಯಲು ಸೀಮೆಯ ಹೊಸ ಶೇಂಗಾ ತಳಿ ಸಂಶೋಧನೆ | ಬಬ್ಬೂರು ಕೃಷಿ ವಿಜ್ಞಾನಿಗಳ ಸಾಧನೆ

ಜಿಲ್ಲಾ ಕುರುಬರ ಸಂಘದ ಗೌರವಾಧ್ಯಕ್ಷ ಎಚ್.ಮಂಜಪ್ಪ ಮಾತನಾಡಿ, ಜಿಲ್ಲಾ ಪ್ರಶಸ್ತಿ ಪುರಸ್ಕೃತರಾದ ಭರಮಸಾಗರ ಪಿಎಸ್‌ಐ ಸುರೇಶ್, ಸಾಹಿತಿಗಳಾದ ಸುಭಾಷ ಚಂದ್ರ, ವೈದ್ಯಕೀಯ ಕ್ಷೇತ್ರದಲ್ಲಿ ಡಾ.ರಶ್ಮಿ ಮಲ್ಲಪ್ಪ, ಸಮಾಜ ಸೇವೆಯಲ್ಲಿ ಎಂ.ವಿ.ಮಾಲತೇಶ್, ಕಾರ್ಮಿಕ ಕ್ಷೇತ್ರದಲ್ಲಿ ತಿಪ್ಪೇಸ್ವಾಮಿ ಹಾಗೂ ಕೃಷಿ ಕ್ಷೇತ್ರದಲ್ಲಿ ಜಗನ್ನಾಥ್ ಅವರನ್ನೂ ಸನ್ಮಾನಿಸಲಾಗುತ್ತದೆ ಎಂದರು.

ಸುದ್ದಿಗೋಷ್ಟಿಯಲ್ಲಿ ಓಂಕಾರ್, ಪ್ರೇಮ್, ಲೋಕೇಶ್, ರಾಜು, ಮಹಾಲಿಂಗಪ್ಪ, ನಾರಾಯಣಗೌಡ, ಉಮೇಶ್ ಮಾಲೇಶ್ ಇದ್ದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:BT JagdishChitradurgaChitradurga newsChitradurga UpdatesfeaturedHonorKanaka JayantiKannada Latest NewsKannada Newsprosಕನಕ ಜಯಂತಿಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗಚಿತ್ರದುರ್ಗ ಅಪ್ಡೇಟ್ಸ್ಚಿತ್ರದುರ್ಗ ನ್ಯೂಸ್ಫೀಚರ್ಡ್ಬಿ.ಟಿ.ಜಗದೀಶ್ಸನ್ಮಾನಸಾಧಕರಿಗೆ
Share This Article
Facebook Email Print
Previous Article ಶ್ರೀ ಪ್ರಣವಾನಂದ ಸ್ವಾಮೀಜಿ SP office: ಉಪ್ಪರಿಗೇನಹಳ್ಳಿ ಮಹಿಳೆ ಕೊಲೆಗಾರರ ಬಂಧನಕ್ಕೆ ಗಡುವು | ನ.30 ರಿಂದ ಎಸ್‌ಪಿ ಕಚೇರಿ ಬಳಿ ಉಪವಾಸ ಸತ್ಯಾಗ್ರಹ | ಪ್ರಣವಾನಂದ ಶ್ರೀ
Next Article ನಗರಸಭೆ ಸದಸ್ಯ ಶ್ರೀನಿವಾಸ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು municipal space: ನಗರಸಭೆ ಜಾಗಗಳನ್ನು ರಕ್ಷಿಸಲು ವಿಶೇಷ ಅಭಿಯಾನ | ಶ್ರೀನಿವಾಸ್
Leave a Comment

Leave a Reply Cancel reply

Your email address will not be published. Required fields are marked *

Gavayi smaranothsava
ಶಾರದಮ್ಮ ರುದ್ರಪ್ಪ ಕಲ್ಯಾಣ ಮಂಟಪದಲ್ಲಿ ಗಾನಯೋಗಿಗಳ ಪುಣ್ಯ ಸ್ಮರಣೆ | ಸಾಧಕರಿಗೆ ಸನ್ಮಾನ
ಮುಖ್ಯ ಸುದ್ದಿ
ಮುರುಘಾಮಠದಲ್ಲಿ ಜಾಗತಿಕ ಲಿಂಗಾಯತ ಮಹಾಸಭಾದ ಮೊದಲನೇ ಕಾರ್ಯಕಾರಿ ಸಭೆ | ಮಠಾಧೀಶರು ಸೇರಿದಂತೆ ಗಣ್ಯರು ಭಾಗೀ
ಮುಖ್ಯ ಸುದ್ದಿ
ಉಸಿರಾಟದ ಕಾಯಿಲೆಗಳಿಗೆ ಈ ಎಲೆಯನ್ನು ಬಳಸಿ
Life Style
ಹೃದಯಾಘಾತದ ನಂತರ ಈ ತಪ್ಪುಗಳನ್ನು ಮಾಡಬೇಡಿ
Life Style
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up