By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: Kanaka jayanti: ತಾಳಿಕಟ್ಟೆ ಗ್ರಾಮದಲ್ಲಿ ಕನಕ ಜಯಂತಿ, ಕನ್ನಡ ರಾಜ್ಯೋತ್ಸವ ಆಚರಣೆ | ಶಾಸಕ ಚಂದ್ರಪ್ಪ, ಈಶ್ವರಾನಂದಪುರಿ ಸ್ವಾಮೀಜಿ ಭಾಗೀ 
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » Kanaka jayanti: ತಾಳಿಕಟ್ಟೆ ಗ್ರಾಮದಲ್ಲಿ ಕನಕ ಜಯಂತಿ, ಕನ್ನಡ ರಾಜ್ಯೋತ್ಸವ ಆಚರಣೆ | ಶಾಸಕ ಚಂದ್ರಪ್ಪ, ಈಶ್ವರಾನಂದಪುರಿ ಸ್ವಾಮೀಜಿ ಭಾಗೀ 

ಹೊಳಲ್ಕೆರೆ

Kanaka jayanti: ತಾಳಿಕಟ್ಟೆ ಗ್ರಾಮದಲ್ಲಿ ಕನಕ ಜಯಂತಿ, ಕನ್ನಡ ರಾಜ್ಯೋತ್ಸವ ಆಚರಣೆ | ಶಾಸಕ ಚಂದ್ರಪ್ಪ, ಈಶ್ವರಾನಂದಪುರಿ ಸ್ವಾಮೀಜಿ ಭಾಗೀ 

News Desk Chitradurga News
Last updated: 1 December 2024 08:27
News Desk Chitradurga News
7 months ago
Share
ತಾಳಿಕಟ್ಟೆ ಗ್ರಾಮದಲ್ಲಿ ಕನಕ ಜಯಂತಿ, ಕನ್ನಡ ರಾಜ್ಯೋತ್ಸವ ಆಚರಣೆ
ತಾಳಿಕಟ್ಟೆ ಗ್ರಾಮದಲ್ಲಿ ಕನಕ ಜಯಂತಿ, ಕನ್ನಡ ರಾಜ್ಯೋತ್ಸವ ಆಚರಣೆ
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 01 DECEMBER 2024

ಹೊಳಲ್ಕೆರೆ: ತಾಳಿಕಟ್ಟೆ ಗ್ರಾಮದಲ್ಲಿ ಆಯೋಜಿಸಿದ್ದ 537 ನೇ ಕನಕ ಜಯಂತಿ(Kanaka jayanti) ಹಾಗೂ ಕನ್ನಡ ರಾಜ್ಯೋತ್ಸವ ಆಚರಣೆ ಕಾರ್ಯಕ್ರಮವನ್ನು ಶಾಸಕ ಎಂ. ಚಂದ್ರಪ್ಪ ಹಾಗೂ ಕಾಗಿನೆಲೆ ಕನಕ ಗುರುಪೀಠದ ಈಶ್ವರಾನಂದಪುರಿ ಸ್ವಾಮೀಜಿ ಉದ್ಘಾಟಿಸಿದರು.

ಕ್ಲಿಕ್ ಮಾಡಿ ಓದಿ: ಆಕಾಶವಾಣಿ ಕೇಂದ್ರದಲ್ಲಿ ಕನ್ನಡ ರಾಜ್ಯೋತ್ಸವ | ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ

ಇದೇ ವೇಳೆ ಈಶ್ವರಾನಂದಪುರಿ ಸ್ವಾಮೀಜಿ ಮಾತನಾಡಿ, ಹಾಲು ಕೆಟ್ಟರು ಕೆಡಬಹುದು. ಹಾಲು ಮತಸ್ಥರು ಎಂದಿಗೂ ಕೆಡುವುದಿಲ್ಲ. ಹಾಲು ಮತ ಧರ್ಮಕ್ಕೆ ಅಂತಹ ಶ್ರೇಷ್ಟತೆಯಿದೆ. ಕನಕ ಜಯಂತಿಯನ್ನು ಶ್ರದ್ಧಾಭಕ್ತಿಯಿಂದ ಆಚರಿಸಬೇಕು.

ಡಿ.ಜೆ. ಹಾಕಿಕೊಂಡು ಕುಣಿಯುವುದು, ಮದ್ಯಪಾನ ಸೇವಿಸುವುದು ನಿಜವಾಗಿಯೂ ಕನಕದಾಸರಿಗೆ ಎಸಗುವ ಅಪಚಾರ ಎಂದು ತಾಳಿಕಟ್ಟೆ ಗ್ರಾಮದ ಯುವ ಜನಾಂಗವನ್ನು ಎಚ್ಚರಿಸಿದರು.

600 ವರ್ಷಗಳ ಹಿಂದೆಯೇ ಸಮಾನತೆಯ ಸಂದೇಶ ಸಾರಿದ ಸಂತ ಶ್ರೇಷ್ಟ ಭಕ್ತ ಕನಕದಾಸರು ಕೀರ್ತನೆಯ ಮೂಲಕ ಜಾತಿ ಪದ್ದತಿಯನ್ನು ವಿರೋಧಿಸಿದರು, ಅಂತಹ ಮಹನೀಯರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಬೇಕೆಂದು ಕರೆ ನೀಡಿದರು.

ಕ್ಲಿಕ್ ಮಾಡಿ ಓದಿ: ಭೀಮಸಮುದ್ರದಲ್ಲಿ ‌ಜಿ.ಮಲ್ಲಿಕಾರ್ಜುನಪ್ಪ, ಶ್ರೀಮತಿ ಹಾಲಮ್ಮ ಪುಣ್ಯತಿಥಿ

ಶಾಸಕ ಎಂ.ಚಂದ್ರಪ್ಪ ಮಾತನಾಡಿ, ಸಂತ ಶ್ರೇಷ್ಟ ಭಕ್ತ ಕನಕದಾಸನ ಭಕ್ತಿಗೆ ಮೆಚ್ಚಿ ಶ್ರೀಕೃಷ್ಣ ಪರಮಾತ್ಮ ದರ್ಶನ ನೀಡಿದ ಇತಿಹಾಸವಿದೆ. ಜಾತಿ ಪದ್ದತಿಯನ್ನು ಆರುನೂರು ವರ್ಷಗಳ ಹಿಂದೆಯೇ ವಿರೋಧಿಸಿದ ಕನಕದಾಸರ ಆಚಾರ ವಿಚಾರಗಳನ್ನು ಇಂದಿನ ಪೀಳಿಗೆ ತಿಳಿದುಕೊಳ್ಳಬೇಕು. ಕನಕ ಜಯಂತಿಯನ್ನು ಶ್ರದ್ದಾಭಕ್ತಿಯಿಂದ ಆಚರಿಸುವುದೇ ಅವರಿಗೆ ನೀಡುವ ಗೌರವ ಎಂದು ತಿಳಿಸಿದರು.

ಹಿರಿಯೂರಿನ ವಾಣಿವಿಲಾಸಸಾಗರದಿಂದ ನೀರು ತಂದು ಹೊಳಲ್ಕೆರೆ ತಾಲ್ಲೂಕಿನ ಪ್ರತಿ ಹಳ್ಳಿಗಳಲ್ಲಿ ಮನೆ ಮನೆಗೆ ಶುದ್ದ ಕುಡಿಯುವ ನೀರು ಪೂರೈಸಲು 367 ಕೋಟಿ ರೂ.ಗಳನ್ನು ಖರ್ಚು ಮಾಡಲಾಗುತ್ತಿದೆ ಎಂದು ಹೇಳಿದರು.

ರೇವಣ್ಣಯ್ಯ ಒಡೆಯರ್, ಗುರಯ್ಯ ಒಡೆಯರ್, ಗ್ರಾಮ ಪಂಚಾಯಿತಿ ಅಧ್ಯಕ್ಷ ಟಿ.ಬಸವರಾಜ್, ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಬಿ.ಗಂಗಾಧರ್, ಡಿ.ಸಿ.ಮೋಹನ್, ಕರಿಯಣ್ಣ, ನುಲೇನೂರು ಶೇಖರ್, ಲೋಕೇಶ್, ಚಂದ್ರಪ್ಪ, ಗೋವಿಂದಪ್ಪ, ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ತಾಳಿಕಟ್ಟೆ ಗ್ರಾಮಸ್ಥರು ಉಪಸ್ಥಿತರಿದ್ದರು.

ಕ್ಲಿಕ್ ಮಾಡಿ ಓದಿ: ಗ್ರಾಮ ಪಂಚಾಯತಿ ನೌಕರರ ಸಮಾವೇಶ | ಜಿಲ್ಲಾ ಪಂಚಾಯಿತಿ ಮುತ್ತಿಗೆಗೆ ನಿರ್ಧಾರ 

ಈ ಸಂದರ್ಭದಲ್ಲಿ ತಾಳಿಕಟ್ಟೆ ಗ್ರಾಮದಿಂದ ದೊಗ್ಗನಾಳ್ ಗ್ರಾಮದವರೆಗೂ 10 ಕೋಟಿ ರೂ.ವೆಚ್ಚದಲ್ಲಿ ಡಾಂಬರ್ ರಸ್ತೆ ಕಾಮಗಾರಿಗೆ ಹಾಗೂ ತಾಳಿಕಟ್ಟೆ ಗ್ರಾಮದಲ್ಲಿ 2.60 ಲಕ್ಷ ರೂ.ವೆಚ್ಚದ ಜಲಜೀವನ್ ಮಿಷನ್ ಯೋಜನೆಯಡಿಯಲ್ಲಿ ಮನೆ ಮನೆಗೆ ಕುಡಿಯುವ ನೀರು ಪೂರೈಕೆ ಕಾಮಗಾರಿ ಉದ್ಘಾಟಿಸಿದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:celebrationChitradurgaChitradurga newsChitradurga UpdatesfeaturedIswaranandpuri SwamijiKanaka JayantiKannada Latest NewsKannada NewsKannada RajyotsavaMLA Chandrappatalikatteಆಚರಣೆಈಶ್ವರಾನಂದಪುರಿ ಸ್ವಾಮೀಜಿಕನಕ ಜಯಂತಿಕನ್ನಡ ನ್ಯೂಸ್ಕನ್ನಡ ರಾಜ್ಯೋತ್ಸವಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗಚಿತ್ರದುರ್ಗ ಅಪ್ಡೇಟ್ಸ್ಚಿತ್ರದುರ್ಗ ನ್ಯೂಸ್ತಾಳಿಕಟ್ಟೆಫೀಚರ್ಡ್ಶಾಸಕ ಚಂದ್ರಪ್ಪ
Share This Article
Facebook Email Print
Previous Article today bhavishya Dina Bhavishya: ದಿನ ಭವಿಷ್ಯ | 01 ಡಿಸೆಂಬರ್ 2024 | ನಿರುದ್ಯೋಗಿಗಳಿಗೆ ಶುಭ ಸುದ್ದಿ, ವ್ಯಾಪಾರದಲ್ಲಿ ನಿರೀಕ್ಷಿತ ಲಾಭ
Next Article chitradurga city institute ಸಿಟಿ ಇನ್ಸ್ಟಿಟ್ಯೂಟ್(City club) ಚುನಾವಣೆ | ನಿರ್ದೇಶಕರ ಫಲಿತಾಂಶ ಪ್ರಕಟ 
Leave a Comment

Leave a Reply Cancel reply

Your email address will not be published. Required fields are marked *

ಉಸಿರಾಟದ ಕಾಯಿಲೆಗಳಿಗೆ ಈ ಎಲೆಯನ್ನು ಬಳಸಿ
Life Style
ಹೃದಯಾಘಾತದ ನಂತರ ಈ ತಪ್ಪುಗಳನ್ನು ಮಾಡಬೇಡಿ
Life Style
ಸ್ವಸ್ತಿಕ್ ಚಿಹ್ನೆ ಬಿಡಿಸುವಾಗ ನೀವು ಈ ತಪ್ಪನ್ನು ಮಾಡಬೇಡಿ
Life Style
today bhavishya
Astrology: ದಿನ ಭವಿಷ್ಯ | ಜೂನ್ 29 | ಆಕಸ್ಮಿಕ ಧನ ವ್ಯಯದ ಸೂಚನೆ, ಆಸ್ತಿ ವಿಷಯಗಳಲ್ಲಿ ವಿವಾದಗಳು
Dina Bhavishya
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up