By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಹುಣಸೇಕಟ್ಟೆ ಗ್ರಾಮದ ಸೇವಂತಿಗೆ ಜಮೀನುಗಳಿಗೆ ತೋಟಗಾರಿಕೆ ಅಧಿಕಾರಿಗಳ ತಂಡ ಭೇಟಿ ನೀಡಿ
    ಹುಣಸೇಕಟ್ಟೆಯಲ್ಲಿ ಸೇವಂತಿಗೆ ಬೆಳೆಗೆ ಫ್ಯೂಜೇರಿಯಂ ವಿಲ್ಟ್ ರೋಗ | ರೈತರಿಗೆ ತೋಟಗಾರಿಕೆ ಇಲಾಖೆ ತಾಂತ್ರಿಕ ಸಲಹೆ
    10 hours ago
    DC Office Chitradurga
    ನೇಪಾಳ ಪ್ರಕೃತಿ ವಿಕೋಪ | ಸಂಪರ್ಕಕ್ಕೆ ಸಿಗದ ಪ್ರವಾಸಿಗರ ಮಾಹಿತಿ ನೀಡಲು ಜಿಲ್ಲಾಡಳಿತ ಮನವಿ
    10 hours ago
    ಆಗಸ್ಟ್ 30 ರಂದು ಚಿತ್ರದುರ್ಗ ನಗರ, ಚಿಕ್ಕಜಾಜೂರು ರೈಲ್ವೆ ಮೇಲುಸೇತುವೆಗಳ ಭೂಮಿಪೂಜೆ | ಸಚಿವ ವಿ.ಸೋಮಣ್ಣ ಭಾಗಿ
    10 hours ago
    ನೇಪಾಳ
    ನೇಪಾಳ ದುರಂತ | ನಾಪತ್ತೆಯಾದ ಕನ್ನಡಿಗರ ಮಾಹಿತಿ ನೀಡಲು ಸರ್ಕಾರ ಮನವಿ
    10 hours ago
    41ನೇ ರಾಷ್ಟ್ರೀಯ ನೇತ್ರದಾನ ಪಾಕ್ಷಿಕ
    ನೇತ್ರದಾನದಿಂದ ಅನೇಕರ ಬಾಳಿಗೆ ಬೆಳಕು ನೀಡಬಹುದು | ಡಾ.ಅನುಶ್ರೀ
    20 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    7 days ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    2 weeks ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    1 month ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    2 months ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    2 months ago
  • ತಾಲೂಕು
    ತಾಲೂಕುShow More
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    4 days ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    3 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    4 weeks ago
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    1 month ago
    Bus crashes into divider
    ಡಿವೈಡರ್‌ಗೆ ಅಪ್ಪಳಿಸಿದ ಬಸ್‌ | 28 ಪ್ರಯಾಣಿಕರಿಗೆ ಗಾಯ | ಇಬ್ಬರು ಮೃತ
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    3 months ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    3 months ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    3 months ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    3 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಆಗಸ್ಟ್ 27 | ಹಠಾತ್ ಆರ್ಥಿಕ ಲಾಭದ ಸೂಚನೆ, ಅರೋಗ್ಯದಲ್ಲಿ ಎಚ್ಚರ
    23 hours ago
    today bhavishya
    ದಿನ ಭವಿಷ್ಯ | ಆಗಸ್ಟ್ 26 | ಶುಭ ಸುದ್ದಿ, ಕೈಗೊಂಡ ಕಾರ್ಯಗಳು ಯಶಸ್ವಿ
    2 days ago
    today bhavishya
    ದಿನ ಭವಿಷ್ಯ | ಆಗಸ್ಟ್ 25 | ನಿರುದ್ಯೋಗಿಗಳಿಗೆ ಹೊಸ ಉದ್ಯೋಗ, ಅರೋಗ್ಯದಲ್ಲಿ ಜಾಗೃತಿ ವಹಿಸಿ
    3 days ago
    today bhavishya
    ದಿನ ಭವಿಷ್ಯ | ಆಗಸ್ಟ್ 24 | ಅನಿರೀಕ್ಷಿತ ಸಮಸ್ಯೆಗಳು, ಉದ್ಯೋಗದಲ್ಲಿ ಬಡ್ತಿ
    4 days ago
    today bhavishya
    ದಿನ ಭವಿಷ್ಯ | ಆಗಸ್ಟ್ 23 | ಆಕಸ್ಮಿಕ ಧನಲಾಭ, ದೂರದ ಪ್ರಯಾಣ ಬೇಡ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಆಗಸ್ಟ್ 27 | ಹತ್ತಿ ರೇಟ್ ಎಷ್ಟಿದೆ?
    13 hours ago
    ಮಾರುಕಟ್ಟೆ ಧಾರಣೆ | ಆಗಸ್ಟ್ 24 | ಮೆಕ್ಕೆಜೋಳ, ಶೇಂಗಾ ರೇಟ್…..
    4 days ago
    ಮಾರುಕಟ್ಟೆ ಧಾರಣೆ | ಆಗಸ್ಟ್ 20 | ಹತ್ತಿ ರೇಟ್ ಎಷ್ಟಿದೆ?
    1 week ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಆಗಸ್ಟ್ 19 | ಮೆಕ್ಕೆಜೋಳ, ಶೇಂಗಾ ರೇಟ್…..
    1 week ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    1 week ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    2 weeks ago
    ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ
    ಮನೆ ಮನೆಗೆ ಶುದ್ಧ ಕುಡಿಯುವ ನೀರು, ಮಕ್ಕಳಿಗೆ ಉಚಿತ ಶಿಕ್ಷಣ–ಸೌಲಭ್ಯ | ಶಾಸಕ ಚಂದ್ರಪ್ಪ
    3 weeks ago
    ಗುರು–ಲಿಂಗ–ಜಂಗಮ ವಿಷಯದ ಕುರಿತು ಉಪನ್ಯಾಸ
    ಅಷ್ಟಾವರಣಗಳು ಆಧ್ಯಾತ್ಮಿಕ ಬದುಕಿನ ರಕ್ಷಣಾ ಕವಚ | ಡಾ.ಜಿ.ವಿ.ಮಂಜುನಾಥ
    3 weeks ago
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಚಾಲನೆ
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ
    1 month ago
    ಮಾದಕ ವಸ್ತುಗಳ ಬಳಕೆ ತಡೆಗಟ್ಟುವಿಕೆ ವಿಷಯ ಕುರಿತು ಉಪನ್ಯಾಸಕ ಎಸ್.ಬಸವರಾಜು ಮಾತನಾಡಿದರು
    ಮಾದಕ ವಸ್ತುಗಳ ದುಶ್ಚಟಮುಕ್ತ ಜೀವನದಿಂದ ಉತ್ತಮ ಆರೋಗ್ಯ | ಎಸ್.ಬಸವರಾಜು
    1 month ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    2 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    2 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    3 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    5 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    6 months ago
  • ಹೊಸದುರ್ಗ
    ಹೊಸದುರ್ಗShow More
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    4 days ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    3 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    4 weeks ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    2 months ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    2 months ago
  • Life Style
    Life StyleShow More
    Dark circles
    ಡಾರ್ಕ್ ಸರ್ಕಲ್‍ಗೆ ಆಲೂಗಡ್ಡೆ ಅಥವಾ ಸೌತೆಕಾಯಿಯಲ್ಲಿ ಯಾವುದು ಉತ್ತಮ? ತಿಳಿಯಿರಿ
    21 hours ago
    Rahu Dosha
    ಜಾತಕದಲ್ಲಿ ರಾಹು ದೋಷವಿರುವವರು ಈ ಶುಭ ಬಣ್ಣಗಳನ್ನು ಬಳಸಿದರೆ ದೋಷಗಳು ದೂರವಾಗುತ್ತವೆಯಂತೆ
    21 hours ago
    Pomegranate
    ಈ ಐದು ಜನರು ದಾಳಿಂಬೆ ತಿನ್ನುವುದು ಹಾನಿಕಾರಕವಂತೆ
    2 days ago
    Noni fruit
    ಕೂದಲು ಉದುರುವಿಕೆಗೆ ನೋನಿ ಹಣ್ಣು ಪ್ರಯೋಜನಕಾರಿಯೇ? ತಿಳಿಯಿರಿ
    2 days ago
    Rose petal
    ನಿಮ್ಮ ಮುಖ ಕಾಂತಿಯುತವಾಗಿರಲು ಗುಲಾಬಿ ದಳಗಳು ಮತ್ತು ಹಸಿ ಹಾಲಿನಿಂದ ತಯಾರಿಸಿದ ಈ ಫೇಸ್ ಪ್ಯಾಕ್ ಅನ್ನು ಪ್ರಯತ್ನಿಸಿ
    3 days ago
Reading: Kanakadasa jayanti: ಚಿತ್ರದುರ್ಗದಲ್ಲಿ ಕನಕದಾಸರ ಅದ್ದೂರಿ ಜಯಂತಿ ಆಚರಣೆ | ಕನಕ ಪ್ರತಿಮೆಗೆ ವಿಶೇಷ ಅಲಂಕಾರ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

Kanakadasa jayanti: ಚಿತ್ರದುರ್ಗದಲ್ಲಿ ಕನಕದಾಸರ ಅದ್ದೂರಿ ಜಯಂತಿ ಆಚರಣೆ | ಕನಕ ಪ್ರತಿಮೆಗೆ ವಿಶೇಷ ಅಲಂಕಾರ

News Desk Chitradurga News
Last updated: 18 November 2024 18:48
News Desk Chitradurga News
2 years ago
Share
ಕನಕ ವೃತ್ತದಲ್ಲಿರುವ ಪ್ರತಿಮೆಗೆ ವಿಶೇಷ ಅಲಂಕಾರ
ಕನಕ ವೃತ್ತದಲ್ಲಿರುವ ಪ್ರತಿಮೆಗೆ ವಿಶೇಷ ಅಲಂಕಾರ
SHARE

CHITRADURGA NEWS | 18 NOVEMBER 2024

ಚಿತ್ರದುರ್ಗ: ಕಲಿ ಹಾಗೂ ಕವಿಯಾಗಿ ತಮ್ಮ ಸಾಹಿತ್ಯದ ಮೂಲಕ ಸಮಾಜದ ಅಂಕುಡೊಂಕುಗಳನ್ನು ತಿದ್ದಿದವರು ಸಂತಶ್ರೇಷ್ಠ ಭಕ್ತ ಕನಕದಾಸ(Kanakadasa)ರು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಬಣ್ಣಿಸಿದರು.

ಕ್ಲಿಕ್ ಮಾಡಿ ಓದಿ: ಭೀಮಸಮುದ್ರದ ಸುವರ್ಣಮ್ಮ ನಿಧನ

ನಗರದ ತರಾಸು ರಂಗಮಂದಿರದಲ್ಲಿ ಸೋಮವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ನಗರಸಭೆ ಹಾಗೂ ಜಿಲ್ಲಾ ಕುರುಬ ಸಮಾಜದ ಸಹಯೋಗದಲ್ಲಿ ಆಯೋಜಿಸಿದ್ದ ಸಂತಶ್ರೇಷ್ಠ ಭಕ್ತ ಕನಕದಾಸರ ಜಯಂತಿ ಉದ್ಘಾಟಿಸಿ ಮಾತನಾಡಿದರು.

ನೆಲಮೂಲ ಸಂಸ್ಕೃತಿಯ ಸತ್ವ ಹಾಗೂ ಸಾರವನ್ನು ಹೀರಿ ಬೆಳೆದ ಅಪ್ಪಟ ದೇಸಿಯ ಚಿಂತನೆ ಉಳ್ಳ ಕೀರ್ತನಕಾರರು. ಮುಖ್ಯವಾಗಿ ಮಾನವೀಯ ತುಡಿತ ಮಿಡಿತಗಳೊಂದಿಗೆ ತಮ್ಮ ಕೀರ್ತನೆಗಳನ್ನು ರಚಿಸಿದರು ಎಂದು ಹೇಳಿದರು.

ಕನಕದಾಸರು ಕೆಳ ವರ್ಗದಲ್ಲಿ ಜನಿಸಿದರೂ, ಎಲ್ಲಾ ಸಮಾಜದ ನಾಯಕರಾಗಿ ಉದಯಿಸಿದರು. ನಾಡಿನಲ್ಲಿ ಜ್ಯಾತ್ಯಾತೀತ ತತ್ವ ಪಸರಿಸಲು ಕನಕದಾಸರು ಕಾರಣೀಭೂತರಾಗಿದ್ದಾರೆ. ಕೀರ್ತನೆಗಳ ಮೂಲಕ ಅಸಮಾನತೆ ಹಾಗೂ ಜಾತಿ ವ್ಯವಸ್ಥೆಯನ್ನು ಪ್ರಶ್ನಿಸಿದರು. ಕುಲ ಕುಲ ಕುಲವೆಂದು ಹೊಡೆದಾಡದಿರಿ, ನಿಮ್ಮ ಕುಲದ ನೆಲೆ ಏನಾದರೂ ಬಲ್ಲಿರಾ? ಎಂದು ಕುಲೀನ ವರ್ಗದವರು ತಾವು ಎಂದು ಬೀಗುತ್ತಿದ್ದವರನೇ ನೇರವಾಗಿ ಪ್ರಶ್ನಿಸಿದರು.

ಕ್ಲಿಕ್ ಮಾಡಿ ಓದಿ: ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ ಕಾರು | ಸ್ಥಳದಲ್ಲೇ ಇಬ್ಬರು ಮೃತ

ಕನಕದಾಸರು ರಚಿಸಿದ ಕೀರ್ತನೆಗಳು ಒಂದು ವಿಶಿಷ್ಟ ಪ್ರಯೋಗ. ಅವರು ಕನ್ನಡ ಸಂಗೀತ ಲೋಕಕ್ಕೆ ಬಹಳಷ್ಟು ಕೊಡುಗೆ ನೀಡಿದ್ದಾರೆ. ಕೀರ್ತನೆಗಳ ಮೂಲಕ ಸಮಾಜದಲ್ಲಿನ ಜಾತಿ ವ್ಯವಸ್ಥೆ ಮತ್ತು ಅಸಮಾನತೆಯ ವಿರುದ್ಧ ಧ್ವನಿ ಎತ್ತಿದರು. ಈ ಕೀರ್ತನೆಗಳು ಸಾಮಾಜಿಕ ನ್ಯಾಯ, ಮಾನವೀಯ ಮೌಲ್ಯಗಳ ಬಗ್ಗೆ ಮಾತನಾಡುತ್ತವೆ ಮತ್ತು ಕೋಮು ಸೌಹಾರ್ದದ ಭಾವನೆಯನ್ನು ಎತ್ತಿ ತೋರಿಸುತ್ತವೆ ಎಂದು ಸಚಿವ ಡಿ.ಸುಧಾಕರ್ ಹೇಳಿದರು.

ಕನಕ ಜಯಂತಿ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದ ಸಾಧಕರಿಗೆ ಕನಕಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಕನಕ ಜಯಂತಿ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದ ಸಾಧಕರಿಗೆ ಕನಕಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಕನಕದಾಸರ ಜಯಂತಿ ಎಂದರೆ ಕನ್ನಡ ಸಾಹಿತ್ಯ ಮತ್ತು ದಾಸ ಸಾಹಿತ್ಯಕ್ಕೆ ವಿಶೇಷವಾದ ಕೃತಜ್ಞತೆ ಸಲ್ಲಿಸುವ ದಿನ. ಕನಕದಾಸರ ಜೀವನ, ಸಂದೇಶ, ಮಾನವ ಕುಲದ ಬದುಕಿಗೆ ಸಂಜೀವಿನಿ ದ್ರವ್ಯ ಇದ್ದಂತೆ. ಕನಕದಾಸರಿಗೆ ಅಧಿಕಾರ, ಶ್ರೀಮಂತಿಕೆ, ಸಂಸಾರ, 78 ಗ್ರಾಮಗಳ ಒಡೆತನವಿತ್ತು, ಅದೆಲ್ಲವನ್ನು ಮೀರಿ ಸಹಜ ಸರಳ ಬದುಕು ನಡೆದು ತೋರಿಸಿದವರು ಕನಕದಾಸರು. ಕನ್ನಡ ಪರಂಪರೆಯ ಜಾತ್ಯಾತೀತ ಮತ್ತು ಮಾನವೀಯ ಮೌಲ್ಯಗಳ ನಿಟ್ಟಿನಲ್ಲಿ ಕನಕದಾಸರು ನಡೆಸಿದ ಏಕಾಂಗಿತನದ ಹೋರಾಟ ನಿಜಕ್ಕೂ ಶ್ಲಾಘನೀಯ ಎಂದು ಸಚಿವ ಡಿ.ಸುಧಾಕರ್ ಹೇಳಿದರು.

ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಮಾತನಾಡಿ, ಸಮಾಜಕ್ಕೆ ಸನ್ಮಾರ್ಗ ತೋರಿದ ಮಹನೀಯರನ್ನು ಜಾತಿಗೆ ಸೀಮಿತಗೊಳಿಸಬಾರದು. ಆರಂಭದಲ್ಲಿ ವಿಜಯನಗರ ಸೇನೆಯಲ್ಲಿ ದಂಡನಾಯಕರಾಗಿ ಸೇವೆ ಸಲ್ಲಿಸುತ್ತಿದ್ದ ತಿಮ್ಮಪ್ಪ, ತನ್ನ ಹೊಲದಲ್ಲಿ ಸಿಕ್ಕ ಬಂಗಾರವನ್ನು ಜನರಿಗೆ ಹಂಚಿ ಕನಕ ಎಂದು ಪ್ರಸಿದ್ಧರಾದರು ಎಂದರು.

ಕ್ಲಿಕ್ ಮಾಡಿ ಓದಿ: ಸರ್ಕಾರಿ ನೌಕರರ ಸಂಘ | ಯಾವ ಇಲಾಖೆಯಿಂದ ಯಾರು ಆಯ್ಕೆ | ಸಂಪೂರ್ಣ ವಿವರ

ಯುದ್ದದ ಬಗ್ಗೆ ವೈರಾಗ್ಯ ಹೊಂದಿದ ಕನಕ, ಸಮಾಜ ಸುಧಾರಣೆ ಹಾಗೂ ಆಧ್ಯಾತ್ಮದ ಕಡೆ ಮುಖಮಾಡಿ ಸಂತಶ್ರೇಷ್ಠ ಕನಕದಾಸ ಎನಿಸಿದರು. ಸಮಾಜದ ಕೆಳ ವರ್ಗದ ಧ್ವನಿಯಾಗಿದ್ದ ಕನಕದಾಸರ, ತಮ್ಮ ಕೀರ್ತನೆ ಹಾಗೂ ಕೃತಿಗಳಲ್ಲಿ ಜಾತಿ ಹಾಗೂ ಕುಲ ಶ್ರೇಷ್ಠತೆ ಖಂಡಿಸಿದರು. ತಮ್ಮ ಸಾಹಿತ್ಯದಲ್ಲಿ ಸರ್ವರಿಗೂ ಸಮಪಾಲು ಹಾಗೂ ಸಮಬಾಳು ತತ್ವ ಪ್ರತಿಪಾದಿಸಿದರು. ನಾಡಿನ ಎಲ್ಲ ಜನರ ಮನ ಮನೆಗಳಲ್ಲಿ ಕನಕರ ತತ್ವಾದರ್ಶಗಳ ಜ್ಯೋತಿ ಬೆಳಗಬೇಕು ಎಂದರು.

ಕೊಪ್ಪಳ ವಿಶ್ವವಿದ್ಯಾಲಯ ಕುಲಪತಿ ಡಾ.ಬಿ.ಕೆ.ರವಿ ತಮ್ಮ ವಿಶೇಷ ಉಪನ್ಯಾಸದಲ್ಲಿ, ಕನ್ನಡ ನಾಡಿನಲ್ಲೆಡೆ ಉತ್ಸಾಹ ಹಾಗೂ ವಿಜೃಂಭಣೆಯಿಂದ ಕನಕ ಜಯಂತಿ ಆಚರಿಸಲಾಗುತ್ತದೆ. ಕನಕದಾಸರ ಮುಂಡಿಗೆಗಳನ್ನು ಅರ್ಥ ಮಾಡಲು ಅಳವಾದ ಅಧ್ಯಯನ ಬೇಕು ಎಂದು ತಿಳಿಸಿದರು.

ಕನಕನನ್ನು ಕೆಣಕ ಬೇಡ, ಕೆಣಕಿ ತಿಣುಕ ಬೇಡ ಎಂಬ ನಾಣ್ನುಡಿ ಅವರ ಜ್ಞಾನದ ಪ್ರಬುದ್ಧತೆ ತೋರಿಸುತ್ತದೆ. ಶ್ರೇಣಿಕೃತ ವರ್ಗ ಸಂಘರ್ಷದ ಸಮಾಜದಲ್ಲಿ ಕುಲೀನ ಕುಲ ವ್ಯವಸ್ಥೆ ಪ್ರಶ್ನಿಸಿದರು. ಎಲ್ಲರೂ ಮಾಡುವುದು ಹೊಟ್ಟೆಗಾಗಿ ಗೇಣು ಬಟ್ಟೆಗಾಗಿ ಎಂದು ಎಲ್ಲ ಜನರ ಬದುಕಿನ ವಾಸ್ತವ ತೆರೆದಿಟ್ಟರು. ರಾಜ್ಯದ ಹಲವು ವಿಶ್ವವಿದ್ಯಾಲಯಗಳಲ್ಲಿ ಕನಕ ಅಧ್ಯಯನ ಪೀಠ ತೆರೆಯಲಾಗಿದೆ. ಅವರ ಕೃತಿಗಳ ಭಾಷಾಂತರ ವಿಭಾಗಗಳಿಂದ ತರ್ಜುಮೆ ಮಾಡಲಾಗುತ್ತಿದೆ ಎಂದು ತಿಳಿಸಿದರು.

ಕ್ಲಿಕ್ ಮಾಡಿ ಓದಿ: ಆತಂಕ ಸೃಷ್ಟಿಸಿದ್ದ ಚಿರತೆ ಸೆರೆ | ಅರಣ್ಯ ಇಲಾಖೆ ಅಧಿಕಾರಿಗಳ ಕಾರ್ಯಾಚರಣೆ

ಇದೇ ಸಂದರ್ಭದಲ್ಲಿ ಕರ್ನಾಟಕ ಪ್ರದೇಶ ಕುರುಬರ ಸಂಘ ಹೊರತಂದಿರುವ ಎಚ್.ದಂಡಪ್ಪ ಸಂಪಾದಕತ್ವದ “ಕವಿ ಕನಕದಾಸರು” ಕೃತಿ ಬಿಡುಗಡೆ ಮಾಡಲಾಯಿತು.

ಜಿಲ್ಲಾ ಕುರುಬರ ಸಂಘದಿಂದ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಮಾಜ ಸೇವಕರಾದ ಎಸ್.ಷಣ್ಮುಖಪ್ಪ, ಎಂ.ತಿಪ್ಪೇಸ್ವಾಮಿ, ಕೆ.ತಿಪ್ಪೆಸ್ವಾಮಿ, ಎಂ.ವಿ.ಮಾಲತೇಶ್, ಪರುಶುರಾಮ, ವೈದ್ಯರಾದ ಡಾ.ಈ.ಸತೀಶ, ಡಾ.ರಶ್ಮಿ.ಡಿ.ಮಲ್ಲಪ್ಪ, ಕೃಷಿಕರಾದ ಬಿ.ಜಗನ್ನಾಥ್, ರೇಣುಕಾ ರಾಜ್, ಸಾಹಿತಿ ಸುಭಾಷ್ ಚಂದ್ರ ದೇವರಗುಡ್ಡ, ಶಿಕ್ಷಣ ಕ್ಷೇತ್ರ ಯೋಗೀಶ್ ಸಹ್ಯಾದ್ರಿ, ಆಡಳಿತ ಕ್ಷೇತ್ರದಲ್ಲಿ ರೂಪಾ ಕುಮಾರಿ, ಪೊಲೀಸ್ ಅಧಿಕಾರಿ ಸುರೇಶ್.ಪಿ, ಪತ್ರಕರ್ತ ಮಾಲತೇಶ್ ಅರಸ್, ಕಾರ್ಮಿಕ ಕ್ಷೇತ್ರದ ತಿಪ್ಪೇಸ್ವಾಮಿ.ಆರ್ ಕನಕಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ನಗರಸಭೆ ಅಧ್ಯಕ್ಷೆ ಸುಮಿತಾ ಬಿ.ಎನ್ ರಾಘವೇಂದ್ರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ನಗಾರಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಎಂ.ಕೆ.ತಾಜ್‌ಪೀರ್, ಜಿಲ್ಲಾ ಗ್ಯಾರಂಟೆ ಯೋಜನೆಗಳ ಅಧ್ಯಕ್ಷ ಶಿವಣ್ಣ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಉಪವಿಭಾಗಾಧಿಕಾರಿ ಎಂ.ಕಾರ್ತಿಕ್, ತಹಶೀಲ್ದಾರ್ ಡಾ.ನಾಗವೇಣಿ, ತಾ.ಪಂ ಇಓ ರವಿಕುಮಾರ್, ನಗರಸಭೆ ಪೌರಾಯುಕ್ತೆ ಎಂ.ರೇಣುಕಾ, ನಗರಸಭೆ ಸದಸ್ಯ ಪಿ.ಕೆ.ಮೀನಾಕ್ಷಮ್ಮ, ಜಿಲ್ಲಾ ಕುರುಬರ ಸಂಘದ ಅಧ್ಯಕ್ಷ ಎಸ್.ಶ್ರೀರಾಮ್, ಕಾರ್ಯದರ್ಶಿ ಬಿ.ಟಿ.ಜಗದೀಶ್, ತಾಲ್ಲೂಕು ಅಧ್ಯಕ್ಷ ಕೆ.ಓಂಕಾರಪ್ಪ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಎಸ್.ಕೆ.ಮಲ್ಲಿಕಾರ್ಜುನ್ ಇದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:celebrationChitradurgaChitradurga newsChitradurga UpdatesD. SudhakarDecorationfeaturedKanakadasa's JayantiKannada Latest NewsKannada Newslavishಅದ್ದೂರಿಅಲಂಕಾರಆಚರಣೆಕನಕದಾಸರ ಜಯಂತಿಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಲೇಟೆಸ್ಟ್ ಸುದ್ದಿಚಿತ್ರದುರ್ಗಚಿತ್ರದುರ್ಗ ಅಪ್ಡೇಟ್ಸ್ಚಿತ್ರದುರ್ಗ ನ್ಯೂಸ್ಡಿ.ಸುಧಾಕರ್ಫೀಚರ್ಡ್
Share This Article
Facebook Email Print
Previous Article ಸುವರ್ಣಮ್ಮ Death News: ಭೀಮಸಮುದ್ರದ ಸುವರ್ಣಮ್ಮ ನಿಧನ
Next Article ಮುರುಘಾ ಮಠದಲ್ಲಿ ಕನಕದಾಸರ ಜಯಂತಿ Basavakumar Swamiji: ಸಮಾಜ ಸುಧಾರಕರನ್ನು ಜಾತಿಗೆ ಸೀಮಿತ ಮಾಡುವುದು ಸಲ್ಲ | ಬಸವಕುಮಾರ ಸ್ವಾಮೀಜಿ
Leave a Comment

Leave a Reply Cancel reply

Your email address will not be published. Required fields are marked *

ಹುಣಸೇಕಟ್ಟೆ ಗ್ರಾಮದ ಸೇವಂತಿಗೆ ಜಮೀನುಗಳಿಗೆ ತೋಟಗಾರಿಕೆ ಅಧಿಕಾರಿಗಳ ತಂಡ ಭೇಟಿ ನೀಡಿ
ಹುಣಸೇಕಟ್ಟೆಯಲ್ಲಿ ಸೇವಂತಿಗೆ ಬೆಳೆಗೆ ಫ್ಯೂಜೇರಿಯಂ ವಿಲ್ಟ್ ರೋಗ | ರೈತರಿಗೆ ತೋಟಗಾರಿಕೆ ಇಲಾಖೆ ತಾಂತ್ರಿಕ ಸಲಹೆ
ಮುಖ್ಯ ಸುದ್ದಿ
DC Office Chitradurga
ನೇಪಾಳ ಪ್ರಕೃತಿ ವಿಕೋಪ | ಸಂಪರ್ಕಕ್ಕೆ ಸಿಗದ ಪ್ರವಾಸಿಗರ ಮಾಹಿತಿ ನೀಡಲು ಜಿಲ್ಲಾಡಳಿತ ಮನವಿ
ಮುಖ್ಯ ಸುದ್ದಿ
ಆಗಸ್ಟ್ 30 ರಂದು ಚಿತ್ರದುರ್ಗ ನಗರ, ಚಿಕ್ಕಜಾಜೂರು ರೈಲ್ವೆ ಮೇಲುಸೇತುವೆಗಳ ಭೂಮಿಪೂಜೆ | ಸಚಿವ ವಿ.ಸೋಮಣ್ಣ ಭಾಗಿ
ಮುಖ್ಯ ಸುದ್ದಿ
ನೇಪಾಳ
ನೇಪಾಳ ದುರಂತ | ನಾಪತ್ತೆಯಾದ ಕನ್ನಡಿಗರ ಮಾಹಿತಿ ನೀಡಲು ಸರ್ಕಾರ ಮನವಿ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Loading Comments...
Welcome Back!

Sign in to your account

Username or Email Address
Password

Lost your password?

Not a member? Sign Up