
CHITRADURGA NEWS | 16 DECEMBER 2025
ಚಿತ್ರದುರ್ಗ: ರಾಜ್ಯದಲ್ಲಿ ಮಾದಾರ ಗುತ್ತಿಗೆದಾರರ ಮಹಾಸಭಾ ಅಸ್ತಿತ್ವಕ್ಕೆ ಬಂದಿದ್ದು, ನೂತನ ಲೋಗೊವನ್ನು ಶ್ರೀ ಮಾದಾರ ಚನ್ನಯ್ಯ ಸ್ವಾಮೀಜಿ ಲೋಕಾರ್ಪಣೆ ಮಾಡಿದರು.
ಇದನ್ನೂ ಓದಿ: ಚಿತ್ರದುರ್ಗದಲ್ಲಿ ಎಚ್.ಡಿ.ಕುಮಾರಸ್ವಾಮಿ ಜನ್ಮ ದಿನಾಚರಣೆ | ಮುಖ್ಯಮಂತ್ರಿಯಾಗಲಿ ಎಂದು ಹಾರೈಕೆ

ಕರ್ನಾಟಕ ರಾಜ್ಯ ಮಾದಾರ ಗುತ್ತಿಗೆದಾರರ ಮಹಾಸಭಾ ಹೆಸರಿನಲ್ಲಿ ಗುತ್ತಿಗೆದಾರರ ಸಂಘ ಅಸ್ತಿತ್ವಕ್ಕೆ ಬಂದಿದೆ.
ಲೋಗೋ ಅನಾವರಣ ಮಾಡಿದ ಶ್ರೀ ಮಾದಾರ ಚನ್ನಯ್ಯ ಸ್ವಾಮೀಜಿ ಮಾತನಾಡುತ್ತಾ, ಮಾದಾರ ಗುತ್ತಿಗೆದಾರರ ಸಂಘವನ್ನು ಮುನ್ನಡೆಸಿಕೊಂಡು ಹೋಗುವ ಹೊಣೆಗಾರಿಕೆ ನಿಮ್ಮ ಮೇಲಿದೆ.
ಸರ್ಕಾರ ಮತ್ತು ಅಧಿಕಾರಿಗಳೊಂದಿಗೆ ಉತ್ತಮ ಬಾಂಧವ್ಯವಿಟ್ಟುಕೊಂಡು ನಿಮಗೆ ವಹಿಸಿರುವ ಕಾಮಗಾರಿಗಳನ್ನು ನಿಗಧಿತ ಅವಧಿಯೊಳಗೆ ಗುಣಮಟ್ಟದಲ್ಲಿ ಪೂರೈಸುವಂತೆ ತಿಳಿಸಿದರು.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಡಿಸೆಂಬರ್ 16 | ಹತ್ತಿ ರೇಟ್ ಎಷ್ಟಿದೆ?
ಕರ್ನಾಟಕ ರಾಜ್ಯ ಮಾದಾರ ಗುತ್ತಿಗೆದಾರರ ಮಹಾಸಭಾದ ಸಂಸ್ಥಾಪಕ ರಾಜ್ಯಾಧ್ಯಕ್ಷ ಡಿ.ಸಿ.ರಾಜಣ್ಣ, ಗೌರವಾಧ್ಯಕ್ಷ ಹೆಚ್.ಶ್ರೀನಿವಾಸ್, ನಿಂಗಜ್ಜ ಶಾಪುರ್ ಹೆಚ್. ಮಹಾರಾಜ್ ಕುಮಾರಯ್ಯ, ಆರ್.ಕೃಷ್ಣಮೂರ್ತಿ, ಗೂಳಿಹಟ್ಟಿ ಗಿರೀಶ್, ಕೆ.ಜಿ. ಲಕ್ಷ್ಮಿನರಸಯ್ಯ, ಮಾಲತೇಶ್, ಬ್ಯಾಡಗಿ ಉಮೇಶ್ ಕಡೆಮನಿ, ಪರಶುರಾಮ್, ಜಿ.ಹೆಚ್.ಮೋಹನ್ ಇನ್ನು ಅನೇಕರು ಈ ಸಂದರ್ಭದಲ್ಲಿದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
