CHITRADURGA NEWS | 24 DECEMBER 2024
ಹೊಸದುರ್ಗ: ತಾಲೂಕಿನ ನಾಕೀಕೆರೆ ಗ್ರಾಮದ ಶ್ರೀ ಕೋಡಿ ಆಲದ ಕೆಂಚಾಂಬಿಕಾ ದೇವಿಯ ಕಾರ್ತಿಕ ಮಹೋತ್ಸವ ವಿಜೃಂಭಣೆಯಿಂದ ಜರುಗಿತು.
ಕ್ಲಿಕ್ ಮಾಡಿ ಓದಿ: ಹಾಸ್ಟೇಲ್ ವಾರ್ಡನ್ ಅಮಾನತು | ಜಿ.ಪಂ. ಸಿಇಓ ಸೋಮಶೇಖರ್ ಆದೇಶ
ಸೋಮವಾರ ರಾತ್ರಿ ಶ್ರೀ ದೇವಿ ಪಾರಾಯಣ, ಬೆಳಗ್ಗೆ ಶ್ರೀ ಕೆಂಚಾಂಬಿಕಾ ದೇವಿಗೆ ಅಭಿಷೇಕ ನೆರವೇರಿಸಲಾಯಿತು. ಮಂಗಳವಾರ ಬೆಳಗ್ಗೆ ಮಹಾ ಮಂಗಳಾರತಿ ನಂತರ ಬೆಳಗ್ಗೆ 11 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ನಿರಂತರವಾಗಿ ಹೋಳಿಗೆ, ಅನ್ನ ದಾಸೋಹ ಕಾರ್ಯಕ್ರಮ ನೆರವೇರಿತು.
ನಾಕೀಕೆರೆ, ಹೊಳಲ್ಕೆರೆ ತಾಲೂಕಿನ ಬೂದಿಪುರ, ಹಾಲೇನಹಳ್ಳಿ, ಗೂಳಿಹೊಸಹಳ್ಳಿ, ಡಿ.ಕೆ.ಹಳ್ಳಿ ಸೇರಿದಂತೆ ಸುತ್ತಮುತ್ತಲ ಹತ್ತಾರು ಹಳ್ಳಿಗಳ ಸಹಸ್ರಾರು ಭಜ್ತಾದಿಗಳು ಕಾರ್ತಿಕ ಮಹೋತ್ಸವದಲ್ಲಿ ಭಾಗವಹಿಸಿದ್ದರು.
ಕ್ಲಿಕ್ ಮಾಡಿ ಓದಿ: ಕನಕ ವೃತ್ತದಿಂದ ಚಳ್ಳಕೆರೆ ಗೇಟ್ ವರೆಗೆ ರಸ್ತೆ ಅಗಲೀಕರಣ | ಡಿಸಿ ವೆಂಕಟೇಶ್
ಕಾರ್ಯಕ್ರಮದಲ್ಲಿ ಶಾಸಕ ಬಿ.ಜಿ.ಗೋವಿಂದಪ್ಪ, ವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್, ಖನಿಜ ನಿಗಮದ ಮಾಜಿ ಅಧ್ಯಕ್ಷ ಎಸ್.ಲಿಂಗಮೂರ್ತಿ, ಮುಖಂಡರಾದ ಡಿ.ಗುರುಸ್ವಾಮಿ, ದೊಡ್ಡಘಟ್ಟ ದ್ಯಾಮಣ್ಣ, ಲಕ್ಕಿಹಳ್ಳಿ ಮುದ್ದಣ್ಣ, ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸದಸ್ಯರು ಭಾಗವಹಿಸಿದ್ದರು.
ರಾತ್ರಿಯಿಡೀ ಹೋಳಿಗೆ ತಯಾರಿ:
ನಾಕೀಕೆರೆ, ಹಾಲೇನಹಳ್ಳಿ ಹಾಗೂ ಬೂದಿಪುರ ಗ್ರಾಮದ ನೂರಾರು ಮಹಿಳೆಯರು ಸೋಮವಾರ ಇಡೀ ರಾತ್ರಿ ಮೂರು ಕ್ವಿಂಟಾಲ್ ಬೇಳೆಯ ಹೋಳಿಗೆ ತಯಾರಿಸಿದರು.
ಸಾವಿರಾರು ಹೋಳಿಗೆ ಹಾಗೂ ಅನ್ನ ಸಂತರ್ಪಣೆ ಇಡೀ ದಿನ ನಡೆಯಿತು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
