ಚಿತ್ರದುರ್ಗ ನ್ಯೂಸ್.ಕಾಂ:
ಹೊಸದುರ್ಗ ತಾಲೂಕಿನ ಸಾಣೇಹಳ್ಳಿ ಪುಟ್ಟ ಗ್ರಾಮವಾದರೂ, ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಖ್ಯಾತಿ ಪಡೆದಿದೆ. ಇಂತಹ ಗ್ರಾಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನಿಂದ ಮೊದಲ ಅಂತರ್ ಜಿಲ್ಲಾ ಸಾಹಿತ್ಯ ಸಮ್ಮೇಳನ ಸಂಘಟಿಸುತ್ತಿರುವುದು ಸಂತಸದ ವಿಚಾರ ಎಂದು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನಾಡೋಜ ಡಾ.ಮಹೇಶ್ ಜೋಷಿ ಹೇಳಿದರು.
ಸಾಣೇಹಳ್ಳಿಯಲ್ಲಿ ಜರುಗಿದ ಸಾಹಿತ್ಯ ಸಮ್ಮೇಳನ ಕುರಿತ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಸಮ್ಮೇಳನವು ಸಾಹಿತ್ಯ ಮತ್ತು ಸಂಸ್ಕøತಿ ಕೇಂದ್ರಿತವಾಗಿದೆ ಎಂದರು.
ಸಾಣೇಹಳ್ಳಿ ಗ್ರಾಮವು ಸಾಂಸ್ಕøತಿಕ, ನಾಟಕ ಮತ್ತು ಸಾಂಸ್ಕøತಿಕ ಶ್ರೀಮತಿಕೆ ಪಡೆದಿದೆ. ಸಾಹಿತ್ಯ ಮತ್ತು ಕಲಾ ರಂಗಗಳು ಜಾತಿ, ಧರ್ಮವನ್ನು ಮೀರಿ ನಿಂತಿವೆ. ಇಲ್ಲಿನ ಕನ್ನಡ ಮಠದಲ್ಲಿ ಜಾತಿ ಮತ್ತು ಧರ್ಮವನ್ನು ಮೀರಿದ ಕಲಾ ಪ್ರಪಂಚವಿದೆ ಎಂದು ಶ್ಲಾಘಿಸಿದರು.
ಇದನ್ನೂ ಓದಿ: ಪ್ರಥಮ ಅಂತರ್ ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಪಂಡಿತಾರಾಧ್ಯ ಶ್ರೀಗಳ ಆಯ್ಕೆ
ಸಾಹಿತ್ಯ ಪರಿಷತ್ತಿನಲ್ಲಿ ಯಾವುದೇ ಪಂಥಗಳಿಲ್ಲ. ಪ್ರತಿಯೊಬ್ಬರಿಗೆ ಅಭಿಪ್ರಾಯ ವ್ಯಕ್ತಪಡಿಸಲು ಅವಕಾಶವಿದೆ. ಆದರೆ, ಇನ್ನೊಬ್ಬರ ಅಭಿಪ್ರಾಯ ಗೌರವಿಸುವ ಗುಣವನ್ನು ಬೆಳೆಸಿಕೊಳ್ಳಬೇಕು. ಪರಿಷತ್ತಿನಲ್ಲೆ ಕೇವಲ ಕನ್ನಡದ ಪಂಥ ಮಾತ್ರ ರೂಢಿಯಲ್ಲಿದೆ. ಸಮ್ಮೇಳನವು ಸಾಹಿತ್ಯ, ಸಂಸ್ಕøತಿ ಮತ್ತು ಕಲೆಗೆ ಮಾತ್ರ ಸಂಬಂಧಿಸಿದೆ. ಧಾರ್ಮಿಕ ಅಭಿಪ್ರಾಯಗಳು ಸಮ್ಮೇಳನದಲ್ಲಿ ಅಪ್ರಸ್ತುತವಾಗಿವೆ. ಹೀಗಾಗಿ ಸಮ್ಮೇಳದಲ್ಲಿ ಯಾವುದೇ ಗೊಂದಲಗಳಿಲ್ಲ ಎಂದರು.
ಕರ್ನಾಟಕ ಎಂದು ನಾಮಕರಣವಾಗಿ 50 ವರ್ಷಗಳು ಪೂರ್ಣಗೊಂಡಿರುವ ಈ ವರ್ಷದಲ್ಲಿ ಇದರ ಬಗ್ಗೆ ಒಂದು ಗೋಷ್ಠಿ ಏರ್ಪಡಿಸಬೇಕು. ಸಮ್ಮೇಳನದಲ್ಲಿ ಭೂರೀ ಭೋಜನಕ್ಕೆ ಬದಲಾಗಿ, ಸರಳ ಹಾಗೂ ಪರಿಸರಕ್ಕೆ ಪೂರಕವಾದ ರೀತಿಯಲ್ಲಿ ಆಯೋಜನೆಯಾಗಬೇಕು. ಹಾವೇರಿಯಲ್ಲಿ ಜರುಗಿದ ಅಖಿಲ ಬಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಸಮಯ ನಿರ್ವಹಣೆ ಮತ್ತು ಅಚ್ಚುಕಟ್ಟುತನದಿಂದ ಜನ ಮಾನಸದಲ್ಲಿ ಹೆಸರು ಮಾಡಿದೆ.
ಚಿತ್ರದುರ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿರುವ ಚಲನಚಿತ್ರದ ಹಾಗೂ ಜಾನಪದದ ಬಗ್ಗೆ ಗೋಷ್ಠಿಗಳಿರಬೇಕು. ಕನ್ನಡ ಚಲನ ಚಿತ್ರ ಹಾಡುಗಳ ಗಾಯನಕ್ಕೆ ಅವಕಾಶ ನೀಡಬೇಕು. ಸಮ್ಮೇಳನದ ಆಹ್ವಾನ ಪತ್ರಿಕೆಯನ್ನು ಅಂಚೆ ಮೂಲಕ ಕಳಿಸುವುದು ಹೆಚ್ಚಿನ ಆರ್ಥಿಕ ಹೊರೆಯಾಗಿದೆ. ಆದ್ದರಿಂದ ಸಾಮಾಜಿಕ ಜಾಲತಾಣಗಳ ಮೂಲಕ ಕಳಿಸಬೇಕು ಎಂದು ಹೇಳಿದರು.
ಇದನ್ನೂ ಓದಿ: ನಾಯಿ ತಪ್ಪಿಸಲು ಹೋದ ಬೈಕ್ ಸವಾರ ಸಾವು
ಚಿಕ್ಕಮಗಳೂರು ಜಿಲ್ಲಾ ಕಸಾಪ ಅಧ್ಯಕ್ಷ ಸೂರಿ ಶ್ರೀನಿವಾಸ್ ಮಾತನಾಡಿ, ಈ ಹಿಂದೆ ಡಿ.30 ಮತ್ತು 31 ರಂದು ಅಂತರ ಜಿಲ್ಲಾ ಸಮ್ಮೇಳನ ನಿಗದಿಯಾಗಿತ್ತು. ಆದರೆ ಮುಖ್ಯಮಂತ್ರಿಗಳು ಕಾರ್ಯಕ್ರಮಕ್ಕೆ ಬರಬೇಕು ಎನ್ನುವ ಉದ್ದೇಶದಿಂದ ಶೀಘ್ರದಲ್ಲಿ ಹೊಸ ದಿನಾಂಕ ನಿಗದಿಗೊಳಿಸಲಾಗುವುದು. ಸಮ್ಮೇಳನಕ್ಕೆ ಆಗಮಿಸಲು ಮುಖ್ಯಮಂತ್ರಿಗಳು ಒಪ್ಪಿದ್ದಾರೆ. ದಿನಾಂಕ ನಿಗದಿಗಾಗಿ ಶಾಸಕ ಬಿ.ಜಿ.ಗೋವಿಂದಪ್ಪ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಬಿ.ಎನ್.ಚಂದ್ರಪ್ಪ ಪ್ರಯತ್ನ ನಡೆಸಿದ್ದಾರೆ ಎಂದರು.
ಸಮ್ಮೇಳನದಲ್ಲಿ ಸಮಯ ಮತ್ತು ಅಚ್ಚುಕಟ್ಟುತನ ಇರಬೇಕು. ಎಲ್ಲವನ್ನೂ ನಿಗದಿತ ಸಮಯದಲ್ಲಿ ಪೂರ್ಣಗೊಳಿಸಬೇಕು. ಸಮ್ಮೇಳನಕ್ಕೆ ಆಗಮಿಸುವ ಸಾಹಿತ್ಯಸಾಕ್ತರಿಗೆ ವಸತಿ ವ್ಯವಸ್ಥೆ ಒದಗಿಸಲಾಗುವುದು.
| ಡಾ.ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ, ಸಾಣೇಹಳ್ಳಿ.
ಚಿತ್ರದುರ್ಗ ಜಿಲ್ಲಾ ಕಸಾಪ ಅಧ್ಯಕ್ಷ ಕೆ.ಎಂ.ಶಿವಸ್ವಾಮಿ ಮಾತನಾಡಿ, ಸಾಣೇಹಳ್ಳಿಯಲ್ಲಿ ಜರುಗುವ ಪ್ರಥಮ ಅಂತರ ಜಿಲ್ಲಾ ಸಮ್ಮೇಳನದಲ್ಲಿ ಹಲವಾರು ವಿಶೇಷಗಳಿವೆ. ಎರಡು ಜಿಲ್ಲೆಗಳ ಸಾಹಿತ್ಯ, ಸಂಸ್ಕøತಿ ಮತ್ತು ಕಲೆಗಳ ಸಮ್ಮಿಳಿನವಾಗಿದೆ. ಪಂಡಿತಾರಾಧ್ಯ ಶ್ರೀಗಳ ಸಲಹೆ ಮತ್ತು ಮಾರ್ಗದರ್ಶನ ಹಾಗೂ ಡಾ. ಮಹೇಶ್ ಜೋಷಿಯವರ ನೇತೃತ್ವದಲ್ಲಿ ಈ ಸಮ್ಮೇಳನ ಅದ್ದೂರಿಯಾಗಿ ಜರುಗಲಿದೆ. ಇದಕ್ಕೆ ಎರಡೂ ಜಿಲ್ಲೆಗಳ ಕಸಾಪ ಪದಾಧಿಕಾರಿಗಳು ಮತ್ತು ಸಾಹಿತ್ಯಾಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಸಹಕಾರ ನೀಡಬೇಕು ಎಂದು ಹೇಳಿದರು.
ಸ್ವಾಗತ ಸಮಿತಿ ಅಧ್ಯಕ್ಷ ಎ.ಎನ್.ಚಂದ್ರಪ್ಪ, ಕೋಶಾಧ್ಯಕ್ಷ ಆರ್.ಮಲ್ಲಿಕಾರ್ಜುನಯ್ಯ ಸೇರಿದಂತೆ ಎರಡೂ ಜಿಲ್ಲೆಗಳ ಕನ್ನಡ ಸಾಹಿತ್ಯ ಪರಿಷತ್ ಪದಾಧಿಕಾರಿಗಳು ಸಭೆಯಲ್ಲಿದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number