ಚಿತ್ರದುರ್ಗ: ಕವಾಡಿಗರಹಟ್ಟಿಗೆ ಜಿಲ್ಲಾಡಳಿತದಿಂದ ಮಂಗಳವಾರ ರಾತ್ರಿ ಸರಬರಾಜು ಮಾಡಿದ ಉಪಹಾರದಲ್ಲಿ ಜಿರಳೆ ಕಾಣಿಸಿಕೊಂಡಿದೆ ಆರೋಪಿಸಿ ಎಂದು ಕವಾಡಿಗರಹಟ್ಟಿ ನಿವಾಸಿಗಳು ರಾತ್ರಿ ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ.
ಕಲುಷಿತ ನೀರಿನಿಂದ ವಾಂತಿ-ಭೇದಿ ಕಾಣಿಸಿಕೊಂಡು 6 ಜನ ಮೃತಪಟ್ಟು, 250 ಕ್ಕೂ ಹೆಚ್ಚು ಮಂದಿ ತೀವ್ರ ಅಸ್ವಸ್ಥರಾಗಿದ್ದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ನಿವಾಸಿಗಳಿಗೆ ಊಟ, ಉಪಹಾರ ಪೂರೈಸುತ್ತಿತ್ತು.
ಮಂಗಳವಾರ ರಾತ್ರಿ ಸರಬರಾಜು ಮಾಡಿದ್ದ ರೈಸ್ ಬಾತ್ ನಲ್ಲಿ ಜಿರಳೆ ಕಾಣಿಸಿಕೊಂಡಿದೆ. ಈ ವಿಷಯ ವಾಟ್ಸಪ್ ಮೂಲಕ ಇಲ್ಲಿನ ಕವಾಡಿಗರಹಟ್ಟಿ ನಿವಾಸಿಗಳಿಗೆ ತಿಳಿದು ತಡರಾತ್ರಿವರೆಗೆ ಪ್ರತಿಭಟನೆ ನಡೆದಿದೆ.
ಜಿಲ್ಲಾಡಳಿತ ನಮ್ಮ ಆರೋಗ್ಯವನ್ನು ನಿರ್ಲಕ್ಷಿಸುತ್ತಿದೆ ಎಂದು ಸ್ಥಳೀಯರು, ಆಹಾರ ಸರಬರಾಜು ಮಾಡಿದ ಹೋಟೆಲ್ ಹಾಗೂ ಅಧಿಕಾರಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು. ಸ್ಥಳಕ್ಕೆ ಆಗಮಿಸಿದ ಪೆÇಲೀಸರು ಜನರನ್ನು ಸಮಾಧಾನಪಡಿಸಿದ್ದಾರೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
