By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: Election: ಮೆದೇಹಳ್ಳಿ ಗ್ರಾ.ಪಂ ಚುನಾವಣೆ | ಅಧ್ಯಕ್ಷರಾಗಿ ಕಾವ್ಯ ವಿಜಯಕುಮಾರ್ ಆಯ್ಕೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » Election: ಮೆದೇಹಳ್ಳಿ ಗ್ರಾ.ಪಂ ಚುನಾವಣೆ | ಅಧ್ಯಕ್ಷರಾಗಿ ಕಾವ್ಯ ವಿಜಯಕುಮಾರ್ ಆಯ್ಕೆ

ಮುಖ್ಯ ಸುದ್ದಿ

Election: ಮೆದೇಹಳ್ಳಿ ಗ್ರಾ.ಪಂ ಚುನಾವಣೆ | ಅಧ್ಯಕ್ಷರಾಗಿ ಕಾವ್ಯ ವಿಜಯಕುಮಾರ್ ಆಯ್ಕೆ

chitradurganews.com
Last updated: 11 December 2024 21:31
chitradurganews.com
7 months ago
Share
Medehally GP Election
ಮೆದೇಹಳ್ಳಿ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷರಾಗಿ ಕಾವ್ಯ ವಿಜಯಕುಮಾರ್
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 11 DECEMBER 2024

ಚಿತ್ರದುರ್ಗ: ಚಿತ್ರದುರ್ಗ ನಗರಕ್ಕೆ ಹೊಂದಿಕೊಂಡಿರುವ, ಚಿತ್ರದುರ್ಗದ ಭಾಗವೇ ಆಗಿರುವ ಮೆದೇಹಳ್ಳಿ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷರಾಗಿ ಕಾವ್ಯ ವಿಜಯಕುಮಾರ್ ಆಯ್ಕೆಯಾಗಿದ್ದಾರೆ.

ಮೆದೇಹಳ್ಳಿಯ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಮುಂದಿನ 13 ತಿಂಗಳ ಅವಧಿಗೆ ಇಂದು ನಡೆದ ಅಧ್ಯಕ್ಷ ಸ್ಥಾನದ (Election) ಚುನಾವಣೆಗೆ ಕಾವ್ಯ ವಿಜಯಕುಮಾರ್ ಹಾಗೂ ನಿರಂಜನಮೂರ್ತಿ ನಾಮಪತ್ರ ಸಲ್ಲಿಸಿದ್ದರು.

ಇದನ್ನೂ ಓದಿ: ನಿರುದ್ಯೋಗಿಗಳಿಗೆ ಶುಭ ಸುದ್ದಿ | ಕಂಪ್ಯೂಟರ್ ರಿಪೇರಿ, ಕುರಿ ಸಾಕಾಣಿಕೆ, ಮಶ್ರೂಮ್ ಕೃಷಿ, ಇನ್ನಿತರೆ ತರಬೇತಿಗೆ ಅರ್ಜಿ ಆಹ್ವಾನ

ಆನಂತರ ನಿರಂಜನಮೂರ್ತಿ ನಾಮಪತ್ರ ವಾಪಸ್ ಪಡೆದ ಹಿನ್ನೆಲೆಯಲ್ಲಿ ಅಂತಿಮವಾಗಿ ಕಾವ್ಯ ವಿಜಯಕುಮಾರ್ ಹೆಸರನ್ನು ಚುನಾವಣಾಕಾರಿ, ತಹಶೀಲ್ದಾರ್ ಡಾ.ನಾಗವೇಣಿ ಘೋಷಣೆ ಮಾಡಿದರು.

ಮೆದೇಹಳ್ಳಿ ಗ್ರಾಮ ಪಂಚಾಯಿತಿಯ ಒಟ್ಟು 21 ಸದಸ್ಯ ಬಲದಲ್ಲಿ 15 ಸದಸ್ಯರು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ವಿಜಯಕುಮಾರ್ ಅವರ ಪತ್ನಿ ಕಾವ್ಯ ಅವರಿಗೆ ಬೆಂಬಲ ಸೂಚಿಸಿದರು.

ಇದನ್ನೂ ಓದಿ: ಡಿ.25ಕ್ಕೆ ಹೊಳಲ್ಕೆರೆಗೆ ವೀರೇಂದ್ರ ಹೆಗ್ಗಡೆ ಭೇಟಿ | ನೂತನ ಕಟ್ಟಡ ವಿಕಾಸ ಸೌಧ ಉದ್ಘಾಟನೆ

ಉಪಾಧ್ಯಕ್ಷೆ ಲೀಲಾವತಿ, ಸದಸ್ಯರಾದ ದುಗ್ಗಪ್ಪ, ಮಮತ, ಶೃತಿ ವಿಜಯಕುಮಾರ್, ಭಾಗ್ಯಮ್ಮ, ನಿಂಗಪ್ಪ, ಧನ್ಯಕುಮಾರ್, ಪ್ರಿಯದರ್ಶಿನಿ, ಸುಶೀಲಮ್ಮ, ಕಮಲಮ್ಮ ಶ್ರೀನಿವಾಸ್, ಲಕ್ಷ್ಮಿದೇವಿ, ಗೌರಮ್ಮ, ಶ್ರೀನಿವಾಸ್ ಉಪಸ್ಥಿತರಿದ್ದು ಕಾವ್ಯ ವಿಜಯಕುಮಾರ್ ಅಧ್ಯಕ್ಷ ಸ್ಥಾನಕ್ಕೆ ಬೆಂಬಲಿಸಿದರು.

ಅಧ್ಯಕ್ಷರಾಗಿ ಆಯ್ಕೆಯಾದ ಕಾವ್ಯ ವಿಜಯಕುಮಾರ್ ರವರನ್ನು ಚುನಾವಣಾಕಾರಿ ಡಾ.ನಾಗವೇಣಿ, ಪಿಡಿಓ ಆರ್.ಪಾತಣ್ಣ ಸೇರಿದಂತೆ ಸದಸ್ಯರು ಹಾಗೂ ಮುಖಂಡರು ಅಭಿನಂದಿಸಿದರು.

ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಇಂದಿನ ಮೆಕ್ಕೆಜೋಳ ರೇಟ್

ಈ ಸಂದರ್ಭದಲ್ಲಿ ಜಿಪಂ ಕೆಡಿಪಿ ಸದಸ್ಯ ಕೆ.ಸಿ.ನಾಗರಾಜ್, ಮೆದೇಹಳ್ಳಿ ಗ್ರಾಪಂ ಮಾಜಿ ಅಧ್ಯಕ್ಷ ಆರ್.ವಿಜಯಕುಮಾರ್, ವೀರಶೈವ ಲಿಂಗಾಯತ ಯುವ ವೇದಿಕೆ ಅಧ್ಯಕ್ಷ ಎಚ್.ಎಂ.ಮಂಜುನಾಥ್, ಮುಖಂಡರಾದ ದ್ಯಾಮಣ್ಣ, ರಮೇಶ್, ಮಾರೇಶ್, ತಿಪ್ಪೇಸ್ವಾಮಿ, ನಾಗರಾಜ್, ಶಾಂತಕುಮಾರ್, ಆರ್.ನರಸಿಂಹರಾಜು, ಮಾಜಿ ಸದಸ್ಯ ಮಂಜುನಾಥ್, ತಾಲೂಕು ಗ್ಯಾರಂಟಿ ಅನುಷ್ಟಾನ ಸಮಿತಿ ಸದಸ್ಯ ವಿ.ದಿನೇಶ್, ಅನೀಸ್, ಸೈಯದ್ ಖುದ್ದೂಸ್, ಪ್ರಕಾಶ್ ರಾಮಾನಾಯ್ಕ ಇತರರಿದ್ದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:Chitradurga LatestChitradurga newsChitradurga UpdatesElectionfeaturedGram PanchayatKannada NewsMedehalliMedehalli Gram Panchayat KavyaPresident Electiontahsildarಅಧ್ಯಕ್ಷರಾಗಿ ಆಯ್ಕೆಕನ್ನಡ ಸುದ್ದಿಗ್ರಾಮ ಪಂಚಾಯಿತಿಚಿತ್ರದುರ್ಗ ಅಪ್ಡೇಟ್ಸ್ಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಲೇಟೆಸ್ಟ್ಚುನಾವಣೆತಹಶೀಲ್ದಾರ್ಮೆದೇಹಳ್ಳಿಮೆದೇಹಳ್ಳಿ ಗ್ರಾಪಂ ಅಧ್ಯಕ್ಷೆ ಕಾವ್ಯ
Share This Article
Facebook Email Print
Previous Article ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ Reservation: ಪಂಚಮಸಾಲಿ ಮೀಸಲಾತಿ ಹೋರಾಟ | ಸರ್ಕಾರದ ನಡೆಗೆ ರೇಣುಕಾಚಾರ್ಯ ಗರಂ
Next Article today bhavishya Horoscope: 12 ಡಿಸೆಂಬರ್ | ಇಂದಿನ ದಿನ ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ?
Leave a Comment

Leave a Reply Cancel reply

Your email address will not be published. Required fields are marked *

Sadguru Pradeep participate hosadurga bandh
ಹೊಸದುರ್ಗ ಬಂದ್‌ | ಇಂದು ಅಂತ್ಯವಲ್ಲ, ಆರಂಭ | ಸದ್ಗುರು ಪ್ರದೀಪ್‌
ಹೊಸದುರ್ಗ
ಹೊಸದುರ್ಗ ಸ್ಥಿತಿ ಸಮುದ್ರದ ನೆಂಟಸ್ಥನ, ಉಪ್ಪಿಗೆ ಬರ | ಕೆ.ಎಸ್.ನವೀನ್
ಹೊಸದುರ್ಗ
ಹೊಸದುರ್ಗ ಬಂದ್ | ನೀರಿಗೆ ಅಡ್ಡಿ ಕಿಡಿಗೇಡಿ ಕೃತ್ಯ | ಎಸ್.ಲಿಂಗಮೂರ್ತಿ
ಹೊಸದುರ್ಗ
ಹೊಸದುರ್ಗ ಬಂದ್ | ಶಾಸಕ ಬಿ.ಜಿ.ಗೋವಿಂದಪ್ಪ ನೇತೃತ್ವದಲ್ಲಿ ಹೋರಾಟ
ಹೊಸದುರ್ಗ
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up