By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಶೆಡ್ ನಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ ಅಕ್ಕಿ, ಗೋಧಿ ಜಪ್ತಿ
    ಶೆಡ್ ನಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ ಅಕ್ಕಿ, ಗೋಧಿ ಜಪ್ತಿ
    16 hours ago
    ಸುದ್ದಿಗೋಷ್ಠಿಯಲ್ಲಿ ಶ್ವೇತಾ ಲಮಾಣಿ ಮಾತನಾಡಿದರು
    ಚಿತ್ರದುರ್ಗದಲ್ಲಿ ಸೋಮನಾಥ ಜ್ಯೋತಿರ್ಲಿಂಗ ದರ್ಶನ | ಆರ್ಟ್ ಆಫ್ ಲಿವಿಂಗ್ ಸಂಸ್ಥೆಯಿಂದ ಆಯೋಜನೆ
    18 hours ago
    ಅರ್ಜಿ ಅಹ್ವಾನ
    6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ
    19 hours ago
    ಪ್ರಥಮ PUC ಪ್ರವೇಶಕ್ಕೆ ಅರ್ಜಿ ಆಹ್ವಾನ
    20 hours ago
    ಜಿಲ್ಲಾಸ್ಪತ್ರೆ
    ಜಿಲ್ಲಾಸ್ಪತ್ರೆಯಲ್ಲಿ ಏ.28ರಂದು ಉಚಿತ ಗ್ಯಾಸ್ಟೊ ಶಿಬಿರ
    1 day ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಬೈಕ್ – ಕಾರ್ ನಡುವೆ ಭೀಕರ ಅಪಘಾತ | ಬೈಕ್ ಸವಾರರು ಇಬ್ಬರು ಸಾವು
    1 week ago
    ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ | ಚಾಲಕರು ಸಾವು
    2 weeks ago
    car accident near molakalmuru rajapura
    ಭೀಕರ ರಸ್ತೆ ಅಪಘಾತ | ಇಬ್ಬರು ಸ್ಥಳದಲ್ಲೇ ಮೃತ
    3 weeks ago
    ಎತ್ತಿನ ಗಾಡಿಗೆ ಬುಲೆರೋ ಡಿಕ್ಕಿ | ಸ್ಥಳದಲ್ಲೇ ಎತ್ತುಗಳು ಸಾವು
    3 weeks ago
    ಶಿವಲಿಂಗಪ್ಪ
    ರೈತ ಮುಖಂಡ, ರೇಣುಕಾ ಆಗ್ರೋ ಫರ್ಟಿಲೈಜರ್ಸ್‌ನ ಶಿವಲಿಂಗಪ್ಪ ಶವವಾಗಿ ಪತ್ತೆ
    3 weeks ago
  • ತಾಲೂಕು
    ತಾಲೂಕುShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    2 weeks ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    2 weeks ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    2 weeks ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    3 weeks ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    4 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಭೀಮಸಮುದ್ರ, ತೀರ್ಥಹಳ್ಳಿ ಸೇರಿ ರಾಜ್ಯದ ಮಾರುಕಟ್ಟೆಗಳ ಅಡಿಕೆ ರೇಟ್‌
    2 days ago
    arecanut price list
    ಅಡಿಕೆ ಧಾರಣೆ | 23 ಏಪ್ರಿಲ್‌ | ರಾಜ್ಯದ ಮಾರುಕಟ್ಟೆಗಳ ಅಡಿಕೆ ರೇಟ್‌
    3 days ago
    arecanut price list
    ಅಡಿಕೆ ಧಾರಣೆ | ಏಪ್ರಿಲ್‌ 22 | ಇಂದಿನ ಅಡಿಕೆ ರೇಟ್‌
    4 days ago
    arecanut price list
    ಅಡಿಕೆ ಧಾರಣೆ |17 ಏಪ್ರಿಲ್‌ |ಇಂದಿನ ಮಾರುಕಟ್ಟೆಯಲ್ಲಿ ಯಾವ ಅಡಿಕೆಗೆ ಎಷ್ಟು ರೇಟ್‌
    1 week ago
    arecanut price list
    ಅಡಿಕೆ ಧಾರಣೆ | ರಾಶಿ ಅಡಿಕೆ ಬೆಲೆಯಲ್ಲಿ ಮತ್ತಷ್ಟು ಏರಿಕೆ
    1 week ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 26 | ಕೈಗೊಂಡ ಕೆಲಸಗಳಲ್ಲಿ ಅಡೆತಡೆಗಳು, ದೂರದ ಪ್ರಯಾಣಗಳಲ್ಲಿ ಎಚ್ಚರ
    7 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 25 | ಉದ್ಯೋಗಿಗಳಿಗೆ ಕೆಲಸದ ಒತ್ತಡ, ದೀರ್ಘಕಾಲದ ಸಮಸ್ಯೆಗಳಿಂದ ಪರಿಹಾರ
    1 day ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 24 | ಕೈಗೊಳ್ಳುವ ಕೆಲಸದಲ್ಲಿ ಯಶಸ್ಸು, ಆರ್ಥಿಕ ಲಾಭ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 23 | ಉದ್ಯೋಗಗಳಲ್ಲಿ ಅನುಕೂಲಕರ ವಾತಾವರಣ, ಪ್ರಯಾಣದ ಸೂಚನೆ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 22 | ನಿರುದ್ಯೋಗಿಗಳಿಗೆ ಹೊಸ ಉದ್ಯೋಗ, ಮಕ್ಕಳ ಆರೋಗ್ಯದ ಬಗ್ಗೆ ಎಚ್ಚರ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 25 | ಹತ್ತಿ ರೇಟ್…
    23 hours ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 24 | ಮೆಕ್ಕೆಜೋಳ, ರಾಗಿ ರೇಟ್…
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 23 | ಹತ್ತಿ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 22 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್…
    4 days ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್..
    5 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    2 weeks ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    3 weeks ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    1 month ago
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ 
    1 month ago
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ | ಶಾಸಕ ಚಂದ್ರಪ್ಪ, MLC ಕೆ.ಎಸ್.ನವೀನ್ ಭಾಗೀ 
    1 month ago
  • ಹಿರಿಯೂರು
    ಹಿರಿಯೂರುShow More
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    2 weeks ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    2 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    2 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    3 months ago
    M.G. Rangaswamy
    ಹಿರಿಯೂರು ಕಸಾಪ ಸಮ್ಮೇಳನಾಧ್ಯಕ್ಷರಾಗಿ ‘ಎಂಜಿಆರ್‌ʼ
    3 months ago
  • ಹೊಸದುರ್ಗ
    ಹೊಸದುರ್ಗShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    2 weeks ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    2 weeks ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    2 weeks ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    3 weeks ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    4 weeks ago
  • Life Style
    Life StyleShow More
    Omega-3
    ಪುರುಷರಿಗಿಂತ ಮಹಿಳೆಯರಿಗೆ ಹೆಚ್ಚು ಒಮೆಗಾ-3 ಅಗತ್ಯವಿದೆ; ಯಾಕೆ ಗೊತ್ತಾ?
    4 hours ago
    Apply this natural fruit facial to keep your skin hydrated in summer
    ಬೇಸಿಗೆಯಲ್ಲಿ ನಿಮ್ಮ ಚರ್ಮವನ್ನು ಹೈಡ್ರೇಟ್‍ ಆಗಿಡಲು ಈ ನೈಸರ್ಗಿಕ ಹಣ್ಣಿನ ಫೇಶಿಯಲ್ ಹಚ್ಚಿ
    5 hours ago
    Orange juice
    ಪ್ರತಿದಿನ ಬೆಳಿಗ್ಗೆ ಒಂದು ಲೋಟ ತಾಜಾ ಕಿತ್ತಳೆ ರಸ ಕುಡಿಯಿರಿ, ಈ ಪ್ರಯೋಜನ ಪಡೆಯಿರಿ
    1 day ago
    Thigh itching problem
    ಬೇಸಿಗೆಯಲ್ಲಿ ತೊಡೆಯ ತುರಿಕೆ ಸಮಸ್ಯೆ ನಿಮ್ಮ ಕಾಡುತ್ತಿದೆಯೇ? ಹಾಗಾದ್ರೆ ಈ ಸಲಹೆ ಅನುಸರಿಸಿ
    1 day ago
    PCOS for women
    ಯಾವ ಮಹಿಳೆಯರಿಗೆ ಪಿಸಿಓಎಸ್ ಬರುವ ಅಪಾಯ ಹೆಚ್ಚಿರುತ್ತದೆ
    2 days ago
Reading: ಅಯೋಧ್ಯೆಯಲ್ಲಿ ದುರ್ಗದ ‘ಕೀರ್ತಿ’ | ಗಣಪತಿ ವಿಗ್ರಹ ಕೆತ್ತನೆಗೆ ಅವಕಾಶ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಅಯೋಧ್ಯೆಯಲ್ಲಿ ದುರ್ಗದ ‘ಕೀರ್ತಿ’ | ಗಣಪತಿ ವಿಗ್ರಹ ಕೆತ್ತನೆಗೆ ಅವಕಾಶ

chitradurganews.com
Last updated: 4 January 2024 23:02
chitradurganews.com
2 years ago
Share
ಅಯೋಧ್ಯೆಯಲ್ಲಿ ದುರ್ಗದ ‘ಕೀರ್ತಿ
ಅಯೋಧ್ಯೆಯಲ್ಲಿ ದುರ್ಗದ ‘ಕೀರ್ತಿ
SHARE

ಚಿತ್ರದುರ್ಗ ನ್ಯೂಸ್.ಕಾಂ: ಶತ ಶತಮಾನಗಳ ಹೋರಾಟ, ಕೋಟ್ಯಾಂತರ ಹಿಂದುಗಳ ಕನಸು, ಅಯೋಧ್ಯೆಯಲ್ಲಿ ಭವ್ಯ ಶ್ರೀರಾಮ ಮಂದಿರ ನಿರ್ಮಾಣ ಆಗುತ್ತಿದೆ.

ಶ್ರೀರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ಮಂದಿರ ನಿರ್ಮಾಣ ಆಗಲೇಬೇಕು ಎನ್ನುವ ಪಣತೊಟ್ಟು ಕಳೆದ ಹಲವು ದಶಕಗಳಿಂದ ಸಂಘ ಪರಿವಾರದ ನೇತೃತ್ವದಲ್ಲಿ ಕೋಟ್ಯಾಂತರ ಹಿಂದುಗಳು ಹೋರಾಡಿದ್ದಾರೆ.

ಈಗ ಈ ಹೋರಾಟಕ್ಕೆ ಸಾರ್ಥಕತೆ ಬಂದಿದೆ. ಭವ್ಯವಾದ ಮಂದಿರ ಅಯೋಧ್ಯೆಯಲ್ಲೇ ನಿರ್ಮಾಣ ಆಗುತ್ತಿದೆ. ಅದನ್ನು ಕಣ್ತುಂಬಿಕೊಳ್ಳುವುದು, ಅಲ್ಲಿರುವ ಬಾಲರಾಮನ ದರ್ಶನ ಪಡೆಯುವುದು, ಶ್ರೀರಾಮ ಜನಿಸಿದ ಭೂಮಿಯ ಸ್ಪರ್ಶ ಮಾಡುವುದು ಬಹುತೇಕರ ಹೆಬ್ಬಯಕೆ.

ಇದನ್ನೂ ಓದಿ: ಅಯೋಧ್ಯೆಯ ಮಂತ್ರಾಕ್ಷತೆ ವಿತರಣೆಗೆ ಚಾಲನೆ

ಎಲ್ಲವೂ ಕನಸಿನಂತೆಯೇ ಸಾಗುತ್ತಿದ್ದು, ಮಂದಿರ ನಿರ್ಮಾಣ ಕಾರ್ಯ ಭರದಿಂದ ಸಾಗಿದೆ. ಜನವರಿ 22ರಂದು ಮಂದಿರದ ಮೊದಲ ಮಹಡಿಯಲ್ಲಿ ಶ್ರೀರಾಮ ಲಲ್ಲಾ ವಿಗ್ರಹದ ಪ್ರಾಣ ಪ್ರತಿಷ್ಠಾಪನೆಯಾಗಲಿದೆ.

ಈ ಕಾರ್ಯಕ್ಕಾಗಿ ದೇಶಾದ್ಯಂತ ಅನೇಕ ರಾಜ್ಯಗಳಿಂದ ಶಿಲ್ಪಿಗಳು, ದೇವಸ್ಥಾನ ನಿರ್ಮಾಣ ತಂತ್ರಜ್ಞರು ಮೂರ್ನಾಲ್ಕು ವರ್ಷದಿಂದ ಹಗಲಿರುಳು ಶ್ರಮಿಸುತ್ತಿದ್ದಾರೆ.

ಹೀಗೆ ಮಂದಿರ ಹಾಗೂ ಇಲ್ಲಿನ ದೇವರ ವಿಗ್ರಹಗಳ ಕೆತ್ತನೆಗೆ ದೇಶದ ವಿವಿಧ ರಾಜ್ಯಗಳ ಶಿಲ್ಪಿಗಳ ಜೊತೆಗೆ ಕರ್ನಾಟಕದಿಂದಲೂ ನಾಲ್ವರು ಶಿಲ್ಪಿಗಳಿಗೆ ಆಹ್ವಾನ ಬಂದಿತ್ತು.

ಇದರಲ್ಲಿ ಚಿತ್ರದುರ್ಗದ ಯುವಕ ಕೀರ್ತಿ ನಂಜುಂಡಸ್ವಾಮಿ ಇರುವುದು ಇಡೀ ಚಿತ್ರದುರ್ಗ ಜಿಲ್ಲೆಯ ಜನತೆ ಅಭಿಮಾನಪಡುವ ಸಂಗತಿಯಾಗಿದೆ.

ಚಿತ್ರದುರ್ಗದ ಯುವಕ ಕೀರ್ತಿ ನಂಜುಂಡಸ್ವಾಮಿ
ಚಿತ್ರದುರ್ಗದ ಯುವಕ ಕೀರ್ತಿ ನಂಜುಂಡಸ್ವಾಮಿ

ಹೌದು, ಚಿತ್ರದುರ್ಗದ ಕೋಟೆ ಎದುರಿನಲ್ಲಿ ಸನಾತನ ಕಲಾವೈಭವ ಎನ್ನುವ ಹೆಸರಿನಲ್ಲಿ ಶಿಲ್ಪಗಳ ಕೆತ್ತನೆ ಮಾಡಿಕೊಂಡಿರುವ ಕೀರ್ತಿ ನಂಜುಂಡಸ್ವಾಮಿ ಚಿತ್ರದುರ್ಗದ ಕಾಮನಬಾವಿ ಬಡಾವಣೆಯ ಯುವಕ. 32 ವರ್ಷದ ಕೀರ್ತಿ ಕಳೆದ 12 ವರ್ಷಗಳಿಂದ ಶಿಲ್ಪಗಳ ಕೆತ್ತನೆಯಲ್ಲಿ ತೊಡಗಿಸಿಕೊಂಡಿದ್ದಾರೆ.

ಕಾರ್ಕಳದ ಕೆನರಾ ಶಿಲ್ಪಕಲಾ ಸಂಸ್ಥೆಯಲ್ಲಿ ತರಬೇತಿ ಪಡೆದಿರುವ ಕೀರ್ತಿಗೆ ಇದೇ ಸಂಸ್ಥೆಯ ಮೂಲಕ ಅಯೋಧ್ಯೆಗೆ ಆಹ್ವಾನ ಬಂದಿದೆ. ಈ ವಿಷಯ ಕೇಳಿ ಕೀರ್ತಿ ಅವರ ತಂದೆ ಕೆ.ನಂಜುಂಡಸ್ವಾಮಿ, ತಾಯಿ ಶಾರದಮ್ಮ ಸೇರಿದಂತೆ ಇಡೀ ಕುಟುಂಬ, ಅಕ್ಕಪಕ್ಕದ ಮನೆಯವರು, ಪರಿಚಯಸ್ಥರು ಹೆಮ್ಮೆಪಡುತ್ತಿದ್ದಾರೆ.

ಇದನ್ನೂ ಓದಿ: ಶ್ರೀರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆಗೆ ಅಯೋಧ್ಯೆಗೆ ಶ್ರೀ ಮಾದಾ ಚನ್ನಯ್ಯ ಶ್ರೀಗಳಿಗೆ ಆಹ್ವಾನ

ಅಯೋಧ್ಯೆಯಲ್ಲಿ ಭವ್ಯ ರಾಮ ಮಂದಿರ ನಿರ್ಮಾಣವಾಗಬೇಕು. ಅಲ್ಲಿ ಪ್ರತಿಷ್ಠಾಪನೆಗೊಳ್ಳುವ ಶ್ರೀರಾಮನ ದರ್ಶನ ಪಡೆದುಕೊಳ್ಳಬೇಕು ಎನ್ನುವುದು ಕೋಟ್ಯಾಂತರ ಜನರ ಬಯಕೆ. ಆದರೆ, ಕೋಟೆನಾಡು ಚಿತ್ರದುರ್ಗ ಜಿಲ್ಲೆಯ ಯುವಕನೊಬ್ಬನಿಗೆ ಇದೇ ಮಂದಿರದಲ್ಲಿ ನೂರಾರು ಕೋಟಿ ಜನತೆ ಕೈ ಮುಗಿಯುವ ದೇವರ ಮೂರ್ತಿ ಕೆತ್ತನೆಗೆ ಅವಕಾಶ ಸಿಕ್ಕಿರುವುದು ಪುಣ್ಯದ ಫಲ ಎಂದು ಕುಟುಂಬ ಸಾರ್ಥಕ ಪಟ್ಟುಕೊಳ್ಳುತ್ತಿದೆ.

2013-14ರಲ್ಲಿ ಕಾರ್ಕಳದ ಕೆನರಾ ಸಂಸ್ಥೆಯಲ್ಲಿ ಶಿಲ್ಪ ಕಲೆ ವಿಚಾರದಲ್ಲಿ ಶಿಕ್ಷಣ ಪಡೆದಿದ್ದ ಕೀರ್ತಿ, ಆನಂತರ ಚಿತ್ರದುರ್ಗಕ್ಕೆ ಬಂದು ಶಿಲ್ಪಗಳ ಕೆತ್ತನೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಜೊತೆಗೆ ಯಾರನ್ನೂ ಇಟ್ಟುಕೊಳ್ಳದೇ ಒಬ್ಬರೇ ಕೆಲಸ ಮಾಡುವುದು ಕೀರ್ತಿ ಅವರ ವಿಶೇಷತೆಯಾಗಿದೆ.

ಮಗನ ಆಸಕ್ತಿಯನ್ನು ಗುರುತಿಸಿದ್ದ ತಂದೆ:

ಕೀರ್ತಿ ಅವರಿಗೆ ಚಿತ್ರಕಲೆಯಲ್ಲಿ ಬಹಳ ಆಸಕ್ತಿ ಇರುವುದನ್ನು ಅವರ ತಂದೆ ನಂಜುಂಡಸ್ವಾಮಿ ಗುರುತಿಸಿದ್ದಾರೆ. ಪಿಯುಸಿ ನಂತರ ಬಿಎ ಓದಲು ಆಸಕ್ತಿ ತೋರಿದ್ದ ಮಗನಿಗೆ ಬೇಡ, ಚಿತ್ರಕಲೆಗೆ ಸೇರು ಎಂದು ಸೇರಿಸಿದ್ದಾರೆ. ಆನಂತರ ಕಾರ್ಕಳದ ಸಂಸ್ಥೆಯ ಬಗ್ಗೆ ಮಾಹಿತಿ ತಿಳಿದು ಅಲ್ಲಿಗೆ ಸೇರಿಸಿದ್ದಾರೆ.

ಅಯೋಧ್ಯೆಯ ಮಂದಿರದಲ್ಲಿ ಕೀರ್ತಿ ಕೆತ್ತನೆಯ ಗಣಪತಿ:

ಕರ್ನಾಟಕದಿಂದ ನಾಲ್ವರು ಶಿಲ್ಪಿಗಳು ಅಯೋಧ್ಯೆಯಲ್ಲಿ ದೇವರ ವಿಗ್ರಹಗಳ ಕೆತ್ತನೆ ಮಾಡುತ್ತಿದ್ದಾರೆ. ಅದರಲ್ಲಿ ಚಿತ್ರದುರ್ಗದ ಕೀರ್ತಿ ನಂಜುಂಡಸ್ವಾಮಿ ಅವರಿಗೆ ಗಣಪತಿಯ ವಿಗ್ರಹದ ಕೆತ್ತನೆ ಜವಾಬ್ದಾರಿ ನೀಡಲಾಗಿದೆ. ಸುಮಾರು ಮೂರು ಅಡಿ ಎತ್ತರದ ವಿಗ್ರಹ ಇದಾಗಿದೆ.

ಡಿಸೆಂಬರ್ 8 ರಂದು ಅಯೋಧ್ಯೆಗೆ ತೆರಳಿದ್ದು, ಮುಂದಿನ 10 ದಿನಗಳಲ್ಲಿ ಕೆತ್ತನೆ ಕಾರ್ಯ ಪೂರ್ಣಗೊಳ್ಳಲಿದೆ ಎಂದು ಮಗ ಕೀರ್ತಿ ತಿಳಿಸಿದ್ದಾನೆ ಎಂದು ತಂದೆ ನಂಜುಂಡಸ್ವಾಮಿ ಮಾಹಿತಿ ನೀಡಿದರು.

 ಕೆ.ನಂಜುಂಡಸ್ವಾಮಿ, ಕೀರ್ತಿ ಅವರ ತಂದೆ
ಕೆ.ನಂಜುಂಡಸ್ವಾಮಿ, ಕೀರ್ತಿ ಅವರ ತಂದೆ

ಇಂಥದ್ದೊಂದು ಅವಕಾಶ ನಮ್ಮ ಮಗನಿಗೆ ಬರುತ್ತದೆ ಎನ್ನುವ ನಿರೀಕ್ಷೆಯೇ ಇರಲಿಲ್ಲ. ಯಾವ ಗೌರವ ಧನವೂ ಬೇಡ. ಸುಮ್ಮನೆ ಹೋಗಿ ಕೆಲಸ ಮಾಡಿ ಬಾ. ಶ್ರದ್ಧೆಯಿಂದ ಕೆಲಸ ಮಾಡಿದರೆ ಎಲ್ಲವೂ ನಿನ್ನನ್ನು ಹರಸಿ ಬರುತ್ತದೆ ಎಂದು ಆಶೀರ್ವದಿಸಿ ಕಳಿಸಿದ್ದೇವೆ. ಕಳೆದ ಒಂದು ತಿಂಗಳಿಂದ ಕೆತ್ತನೆ ಕೆಲಸದಲ್ಲಿ ತೊಡಗಿಸಿಕೊಂಡಿದ್ದು ಮುಂದಿನ ಒಂದು ವಾರದಲ್ಲಿ ವಿಗ್ರಹ ಕೆತ್ತನೆ ಪೂರ್ಣಗೊಳ್ಳಲಿದೆ ಎಂದು ತಿಳಿಸಿದ್ದಾನೆ
| ಕೆ.ನಂಜುಂಡಸ್ವಾಮಿ, ಕೀರ್ತಿ ಅವರ ತಂದೆ.

ವಿಶೇಷ ಅಂದ್ರೆ, ಅಯೋಧ್ಯೆಯಲ್ಲಿ ಶ್ರೀರಾಮ ಮಂದಿ ನಿರ್ಮಾಣ ಆಗಬೇಕು ಎಂದು ಕೀರ್ತಿ ಅವರ ತಂದೆ ನಂಜುಂಡಸ್ವಾಮಿ ಹಾಗೂ ದೊಡ್ಡಪ್ಪ ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಟೈಗರ್ ತಿಪ್ಪೇಸ್ವಾಮಿ ಸಾಕಷ್ಟು ಹೋರಾಟ ನಡೆಸಿದ್ದಾರೆ. ಟೈಗರ್ ತಿಪ್ಪೇಸ್ವಾಮಿ 1990ರಲ್ಲಿ ಕರಸೇವೆಗೆ ತೆರಳಿದ್ದರು. ಈಗ ಅವರದ್ದೇ ಕುಟುಂಬದ ಕುಡಿ ಶ್ರೀರಾಮ ಮಂದಿರ ನಿರ್ಮಾಣ ಕಾರ್ಯದಲ್ಲಿ ಭಾಗವಹಿಸಿರುವುದು ಪೂರ್ವಜನ್ಮದ ಪುಣ್ಯ ಎಂದೇ ಈ ಕುಟುಂಬ ಭಾವಿಸುತ್ತಿದೆ.

ಕೀರ್ತಿ ಈವರೆಗೆ ಸುಮಾರು 40 ವಿಗ್ರಹಗಳನ್ನು ಕೆತ್ತನೆ ಮಾಡಿದ್ದು, ಗಣಪತಿ, ಆಂಜನೇಯ, ನವಗ್ರಹಗಳು, ಬೀರಲಿಂಗೇಶ್ವರ, ಸಿಂಹ, ಸೇವಾಲಾಲ್, ತಿರುಪತಿ ತಿಮ್ಮಪ್ಪ, ಚೌಡಮ್ಮ, ನಾಗರ ವಿಗ್ರಹಗಳು, ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ನಾರಾಯಣಗೌಡರ ವಿಗ್ರಹ ಸೇರಿದಂತೆ ಅನೇಕ ಶಿಲ್ಪಗಳನ್ನು ಕೆತ್ತನೆ ಮಾಡಿದ್ದಾರೆ.
ಮೈಸೂರಿನ ಎಚ್.ಡಿ.ಕೋಟೆಯಿಂದ ಕೆತ್ತನೆಗೆ ಕೃಷ್ಣಶಿಲೆ ತರಿಸಿಕೊಂಡು ಕೆತ್ತನೆ ಮಾಡುತ್ತಾರೆ.

***********

ಇದೊಂದು ಪೂರ್ವ ಜನ್ಮದ ಸುಕೃತ ಎಂದು ಭಾವಿಸುತ್ತೇವೆ. ನಾವೆಲ್ಲಾ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವಾಗಲಿ ಎಂದು ಪ್ರಾಣ ಪಣಕ್ಕಿಟ್ಟು ಹೋರಾಟ ಮಾಡಿದ್ದೆವು. ಈಗ ನಮ್ಮ ಮಗನಿಗೆ ಅದೇ ಮಂದಿರದಲ್ಲಿ ದೇವರ ವಿಗ್ರಹ ಕೆತ್ತನೆಗೆ ಆಹ್ವಾನ ಬಂದಿದ್ದು, ಬಹಳ ಖುಷಿಯ ಸಂಗತಿ. ಮುಂದೆ ಶತ ಶತಮಾನಗಳ ಕಾಲ ಇದು ಚಿರವಾಗಿರಲಿದೆ.
| ಟೈಗರ್ ತಿಪ್ಪೇಸ್ವಾಮಿ, ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ, (ಕೀರ್ತಿ ಅವರ ದೊಡ್ಡಪ್ಪ)

*********

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:AyodhyaChitradurgaIdol CarvingKeerthi NanjundaswamySri RamaTempleಅಯೋಧ್ಯೆಕೀರ್ತಿ ನಂಜುಂಡಸ್ವಾಮಿಚಿತ್ರದುರ್ಗಮಂದಿರವಿಗ್ರಹ ಕೆತ್ತನೆಶ್ರೀರಾಮ
Share This Article
Facebook Email Print
Previous Article ಚಿತ್ರದುರ್ಗ ಅಪರಾಧ ಗೋಡೆ ಮೇಲಿಂದ ಬಿದ್ದು, ಕಾರ್ಮಿಕ ಮೃತ
Next Article ‘ನಾನು ಸೋಮನಹಳ್ಳಿ ಮಠದ ಶ್ರೀಶೈಲ ಆರಾಧ್ಯ ಅಂತ’ …ಗುರುವಿನ ಮೊದಲ ಮಾತು ಸ್ಮರಿಸಿದ ಶಿಷ್ಯ ಡಾ.ಸಂಗೇನಹಳ್ಳಿ ಅಶೋಕ್ ಕುಮಾರ್ ‌| ಅಕ್ಷರ ನಮನ
Leave a Comment

Leave a Reply Cancel reply

Your email address will not be published. Required fields are marked *

Omega-3
ಪುರುಷರಿಗಿಂತ ಮಹಿಳೆಯರಿಗೆ ಹೆಚ್ಚು ಒಮೆಗಾ-3 ಅಗತ್ಯವಿದೆ; ಯಾಕೆ ಗೊತ್ತಾ?
Life Style
Apply this natural fruit facial to keep your skin hydrated in summer
ಬೇಸಿಗೆಯಲ್ಲಿ ನಿಮ್ಮ ಚರ್ಮವನ್ನು ಹೈಡ್ರೇಟ್‍ ಆಗಿಡಲು ಈ ನೈಸರ್ಗಿಕ ಹಣ್ಣಿನ ಫೇಶಿಯಲ್ ಹಚ್ಚಿ
Life Style
ದಿನ ಭವಿಷ್ಯ
ದಿನ ಭವಿಷ್ಯ | ಏಪ್ರಿಲ್ 26 | ಕೈಗೊಂಡ ಕೆಲಸಗಳಲ್ಲಿ ಅಡೆತಡೆಗಳು, ದೂರದ ಪ್ರಯಾಣಗಳಲ್ಲಿ ಎಚ್ಚರ
Dina Bhavishya
ಶೆಡ್ ನಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ ಅಕ್ಕಿ, ಗೋಧಿ ಜಪ್ತಿ
ಶೆಡ್ ನಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ ಅಕ್ಕಿ, ಗೋಧಿ ಜಪ್ತಿ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
 

Loading Comments...
 

    Welcome Back!

    Sign in to your account

    Username or Email Address
    Password

    Lost your password?

    Not a member? Sign Up