By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಭಾರತೀಯ ವಿಜ್ಞಾನ ಸಂಸ್ಥೆ
    ಎಸ್‌ಸಿ, ಎಸ್‌ಟಿ ಯುವಜನರಿಗೆ ಒಣಭೂಮಿ ಆಹಾರ ಉದ್ಯಮಗಳ ಕುರಿತು 3 ದಿನಗಳ ತರಬೇತಿ
    1 hour ago
    ಶ್ರೀ ಕೃಷ್ಣ ಜಯಂತಿ ಆಚರಣೆ ಸಂಬಂಧ ಪೂರ್ವಭಾವಿ ಸಭೆ
    ಸೆಪ್ಟೆಂಬರ್ 04ರಂದು ಶ್ರೀ ಕೃಷ್ಣ ಜಯಂತಿ | ಅರ್ಥಪೂರ್ಣ, ಶ್ರದ್ಧಾಭಕ್ತಿಯಿಂದ ಜಯಂತಿ ಆಚರಣೆ
    1 hour ago
    ಹುಣಸೇಕಟ್ಟೆ ಗ್ರಾಮದ ಸೇವಂತಿಗೆ ಜಮೀನುಗಳಿಗೆ ತೋಟಗಾರಿಕೆ ಅಧಿಕಾರಿಗಳ ತಂಡ ಭೇಟಿ ನೀಡಿ
    ಹುಣಸೇಕಟ್ಟೆಯಲ್ಲಿ ಸೇವಂತಿಗೆ ಬೆಳೆಗೆ ಫ್ಯೂಜೇರಿಯಂ ವಿಲ್ಟ್ ರೋಗ | ರೈತರಿಗೆ ತೋಟಗಾರಿಕೆ ಇಲಾಖೆ ತಾಂತ್ರಿಕ ಸಲಹೆ
    14 hours ago
    DC Office Chitradurga
    ನೇಪಾಳ ಪ್ರಕೃತಿ ವಿಕೋಪ | ಸಂಪರ್ಕಕ್ಕೆ ಸಿಗದ ಪ್ರವಾಸಿಗರ ಮಾಹಿತಿ ನೀಡಲು ಜಿಲ್ಲಾಡಳಿತ ಮನವಿ
    14 hours ago
    ಆಗಸ್ಟ್ 30 ರಂದು ಚಿತ್ರದುರ್ಗ ನಗರ, ಚಿಕ್ಕಜಾಜೂರು ರೈಲ್ವೆ ಮೇಲುಸೇತುವೆಗಳ ಭೂಮಿಪೂಜೆ | ಸಚಿವ ವಿ.ಸೋಮಣ್ಣ ಭಾಗಿ
    14 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    1 week ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    2 weeks ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    1 month ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    2 months ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    2 months ago
  • ತಾಲೂಕು
    ತಾಲೂಕುShow More
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    5 days ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    3 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    4 weeks ago
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    1 month ago
    Bus crashes into divider
    ಡಿವೈಡರ್‌ಗೆ ಅಪ್ಪಳಿಸಿದ ಬಸ್‌ | 28 ಪ್ರಯಾಣಿಕರಿಗೆ ಗಾಯ | ಇಬ್ಬರು ಮೃತ
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    3 months ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    3 months ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    3 months ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    3 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಆಗಸ್ಟ್ 28 | ವೃತ್ತಿಪರ ವ್ಯವಹಾರದಲ್ಲಿ ಲಾಭ, ಹೊಸ ಉದ್ಯೋಗಾವಕಾಶಗಳು ದೊರೆಯುತ್ತವೆ
    2 hours ago
    today bhavishya
    ದಿನ ಭವಿಷ್ಯ | ಆಗಸ್ಟ್ 27 | ಹಠಾತ್ ಆರ್ಥಿಕ ಲಾಭದ ಸೂಚನೆ, ಅರೋಗ್ಯದಲ್ಲಿ ಎಚ್ಚರ
    1 day ago
    today bhavishya
    ದಿನ ಭವಿಷ್ಯ | ಆಗಸ್ಟ್ 26 | ಶುಭ ಸುದ್ದಿ, ಕೈಗೊಂಡ ಕಾರ್ಯಗಳು ಯಶಸ್ವಿ
    2 days ago
    today bhavishya
    ದಿನ ಭವಿಷ್ಯ | ಆಗಸ್ಟ್ 25 | ನಿರುದ್ಯೋಗಿಗಳಿಗೆ ಹೊಸ ಉದ್ಯೋಗ, ಅರೋಗ್ಯದಲ್ಲಿ ಜಾಗೃತಿ ವಹಿಸಿ
    3 days ago
    today bhavishya
    ದಿನ ಭವಿಷ್ಯ | ಆಗಸ್ಟ್ 24 | ಅನಿರೀಕ್ಷಿತ ಸಮಸ್ಯೆಗಳು, ಉದ್ಯೋಗದಲ್ಲಿ ಬಡ್ತಿ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಆಗಸ್ಟ್ 27 | ಹತ್ತಿ ರೇಟ್ ಎಷ್ಟಿದೆ?
    17 hours ago
    ಮಾರುಕಟ್ಟೆ ಧಾರಣೆ | ಆಗಸ್ಟ್ 24 | ಮೆಕ್ಕೆಜೋಳ, ಶೇಂಗಾ ರೇಟ್…..
    4 days ago
    ಮಾರುಕಟ್ಟೆ ಧಾರಣೆ | ಆಗಸ್ಟ್ 20 | ಹತ್ತಿ ರೇಟ್ ಎಷ್ಟಿದೆ?
    1 week ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಆಗಸ್ಟ್ 19 | ಮೆಕ್ಕೆಜೋಳ, ಶೇಂಗಾ ರೇಟ್…..
    1 week ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    1 week ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    2 weeks ago
    ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ
    ಮನೆ ಮನೆಗೆ ಶುದ್ಧ ಕುಡಿಯುವ ನೀರು, ಮಕ್ಕಳಿಗೆ ಉಚಿತ ಶಿಕ್ಷಣ–ಸೌಲಭ್ಯ | ಶಾಸಕ ಚಂದ್ರಪ್ಪ
    3 weeks ago
    ಗುರು–ಲಿಂಗ–ಜಂಗಮ ವಿಷಯದ ಕುರಿತು ಉಪನ್ಯಾಸ
    ಅಷ್ಟಾವರಣಗಳು ಆಧ್ಯಾತ್ಮಿಕ ಬದುಕಿನ ರಕ್ಷಣಾ ಕವಚ | ಡಾ.ಜಿ.ವಿ.ಮಂಜುನಾಥ
    3 weeks ago
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಚಾಲನೆ
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ
    1 month ago
    ಮಾದಕ ವಸ್ತುಗಳ ಬಳಕೆ ತಡೆಗಟ್ಟುವಿಕೆ ವಿಷಯ ಕುರಿತು ಉಪನ್ಯಾಸಕ ಎಸ್.ಬಸವರಾಜು ಮಾತನಾಡಿದರು
    ಮಾದಕ ವಸ್ತುಗಳ ದುಶ್ಚಟಮುಕ್ತ ಜೀವನದಿಂದ ಉತ್ತಮ ಆರೋಗ್ಯ | ಎಸ್.ಬಸವರಾಜು
    1 month ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    2 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    2 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    3 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    5 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    6 months ago
  • ಹೊಸದುರ್ಗ
    ಹೊಸದುರ್ಗShow More
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    5 days ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    3 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    4 weeks ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    2 months ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    2 months ago
  • Life Style
    Life StyleShow More
    Omkaalu (Carom seed snack)
    ಓಂಕಾಳನ್ನು ಬಳಸಿ ಹೊಟ್ಟೆಯ ಕೊಬ್ಬನ್ನು ಕಳೆದುಕೊಳ್ಳುವುದು ಹೇಗೆ? ತಿಳಿಯಿರಿ
    24 minutes ago
    garlic with mustard oil
    ಬೆಳ್ಳುಳ್ಳಿಯನ್ನು ಸಾಸಿವೆ ಎಣ್ಣೆಯೊಂದಿಗೆ ಬೆರೆಸಿ ಕೂದಲಿಗೆ ಹಚ್ಚಿದರೆ ಏನಾಗುತ್ತದೆ? ತಿಳಿಯಿರಿ 
    1 hour ago
    Dark circles
    ಡಾರ್ಕ್ ಸರ್ಕಲ್‍ಗೆ ಆಲೂಗಡ್ಡೆ ಅಥವಾ ಸೌತೆಕಾಯಿಯಲ್ಲಿ ಯಾವುದು ಉತ್ತಮ? ತಿಳಿಯಿರಿ
    1 day ago
    Rahu Dosha
    ಜಾತಕದಲ್ಲಿ ರಾಹು ದೋಷವಿರುವವರು ಈ ಶುಭ ಬಣ್ಣಗಳನ್ನು ಬಳಸಿದರೆ ದೋಷಗಳು ದೂರವಾಗುತ್ತವೆಯಂತೆ
    1 day ago
    Pomegranate
    ಈ ಐದು ಜನರು ದಾಳಿಂಬೆ ತಿನ್ನುವುದು ಹಾನಿಕಾರಕವಂತೆ
    2 days ago
Reading: ಅಯೋಧ್ಯೆಯಲ್ಲಿ ದುರ್ಗದ ‘ಕೀರ್ತಿ’ | ಗಣಪತಿ ವಿಗ್ರಹ ಕೆತ್ತನೆಗೆ ಅವಕಾಶ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಅಯೋಧ್ಯೆಯಲ್ಲಿ ದುರ್ಗದ ‘ಕೀರ್ತಿ’ | ಗಣಪತಿ ವಿಗ್ರಹ ಕೆತ್ತನೆಗೆ ಅವಕಾಶ

chitradurganews.com
Last updated: 4 January 2024 23:02
chitradurganews.com
3 years ago
Share
ಅಯೋಧ್ಯೆಯಲ್ಲಿ ದುರ್ಗದ ‘ಕೀರ್ತಿ
ಅಯೋಧ್ಯೆಯಲ್ಲಿ ದುರ್ಗದ ‘ಕೀರ್ತಿ
SHARE

ಚಿತ್ರದುರ್ಗ ನ್ಯೂಸ್.ಕಾಂ: ಶತ ಶತಮಾನಗಳ ಹೋರಾಟ, ಕೋಟ್ಯಾಂತರ ಹಿಂದುಗಳ ಕನಸು, ಅಯೋಧ್ಯೆಯಲ್ಲಿ ಭವ್ಯ ಶ್ರೀರಾಮ ಮಂದಿರ ನಿರ್ಮಾಣ ಆಗುತ್ತಿದೆ.

ಶ್ರೀರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ಮಂದಿರ ನಿರ್ಮಾಣ ಆಗಲೇಬೇಕು ಎನ್ನುವ ಪಣತೊಟ್ಟು ಕಳೆದ ಹಲವು ದಶಕಗಳಿಂದ ಸಂಘ ಪರಿವಾರದ ನೇತೃತ್ವದಲ್ಲಿ ಕೋಟ್ಯಾಂತರ ಹಿಂದುಗಳು ಹೋರಾಡಿದ್ದಾರೆ.

ಈಗ ಈ ಹೋರಾಟಕ್ಕೆ ಸಾರ್ಥಕತೆ ಬಂದಿದೆ. ಭವ್ಯವಾದ ಮಂದಿರ ಅಯೋಧ್ಯೆಯಲ್ಲೇ ನಿರ್ಮಾಣ ಆಗುತ್ತಿದೆ. ಅದನ್ನು ಕಣ್ತುಂಬಿಕೊಳ್ಳುವುದು, ಅಲ್ಲಿರುವ ಬಾಲರಾಮನ ದರ್ಶನ ಪಡೆಯುವುದು, ಶ್ರೀರಾಮ ಜನಿಸಿದ ಭೂಮಿಯ ಸ್ಪರ್ಶ ಮಾಡುವುದು ಬಹುತೇಕರ ಹೆಬ್ಬಯಕೆ.

ಇದನ್ನೂ ಓದಿ: ಅಯೋಧ್ಯೆಯ ಮಂತ್ರಾಕ್ಷತೆ ವಿತರಣೆಗೆ ಚಾಲನೆ

ಎಲ್ಲವೂ ಕನಸಿನಂತೆಯೇ ಸಾಗುತ್ತಿದ್ದು, ಮಂದಿರ ನಿರ್ಮಾಣ ಕಾರ್ಯ ಭರದಿಂದ ಸಾಗಿದೆ. ಜನವರಿ 22ರಂದು ಮಂದಿರದ ಮೊದಲ ಮಹಡಿಯಲ್ಲಿ ಶ್ರೀರಾಮ ಲಲ್ಲಾ ವಿಗ್ರಹದ ಪ್ರಾಣ ಪ್ರತಿಷ್ಠಾಪನೆಯಾಗಲಿದೆ.

ಈ ಕಾರ್ಯಕ್ಕಾಗಿ ದೇಶಾದ್ಯಂತ ಅನೇಕ ರಾಜ್ಯಗಳಿಂದ ಶಿಲ್ಪಿಗಳು, ದೇವಸ್ಥಾನ ನಿರ್ಮಾಣ ತಂತ್ರಜ್ಞರು ಮೂರ್ನಾಲ್ಕು ವರ್ಷದಿಂದ ಹಗಲಿರುಳು ಶ್ರಮಿಸುತ್ತಿದ್ದಾರೆ.

ಹೀಗೆ ಮಂದಿರ ಹಾಗೂ ಇಲ್ಲಿನ ದೇವರ ವಿಗ್ರಹಗಳ ಕೆತ್ತನೆಗೆ ದೇಶದ ವಿವಿಧ ರಾಜ್ಯಗಳ ಶಿಲ್ಪಿಗಳ ಜೊತೆಗೆ ಕರ್ನಾಟಕದಿಂದಲೂ ನಾಲ್ವರು ಶಿಲ್ಪಿಗಳಿಗೆ ಆಹ್ವಾನ ಬಂದಿತ್ತು.

ಇದರಲ್ಲಿ ಚಿತ್ರದುರ್ಗದ ಯುವಕ ಕೀರ್ತಿ ನಂಜುಂಡಸ್ವಾಮಿ ಇರುವುದು ಇಡೀ ಚಿತ್ರದುರ್ಗ ಜಿಲ್ಲೆಯ ಜನತೆ ಅಭಿಮಾನಪಡುವ ಸಂಗತಿಯಾಗಿದೆ.

ಚಿತ್ರದುರ್ಗದ ಯುವಕ ಕೀರ್ತಿ ನಂಜುಂಡಸ್ವಾಮಿ
ಚಿತ್ರದುರ್ಗದ ಯುವಕ ಕೀರ್ತಿ ನಂಜುಂಡಸ್ವಾಮಿ

ಹೌದು, ಚಿತ್ರದುರ್ಗದ ಕೋಟೆ ಎದುರಿನಲ್ಲಿ ಸನಾತನ ಕಲಾವೈಭವ ಎನ್ನುವ ಹೆಸರಿನಲ್ಲಿ ಶಿಲ್ಪಗಳ ಕೆತ್ತನೆ ಮಾಡಿಕೊಂಡಿರುವ ಕೀರ್ತಿ ನಂಜುಂಡಸ್ವಾಮಿ ಚಿತ್ರದುರ್ಗದ ಕಾಮನಬಾವಿ ಬಡಾವಣೆಯ ಯುವಕ. 32 ವರ್ಷದ ಕೀರ್ತಿ ಕಳೆದ 12 ವರ್ಷಗಳಿಂದ ಶಿಲ್ಪಗಳ ಕೆತ್ತನೆಯಲ್ಲಿ ತೊಡಗಿಸಿಕೊಂಡಿದ್ದಾರೆ.

ಕಾರ್ಕಳದ ಕೆನರಾ ಶಿಲ್ಪಕಲಾ ಸಂಸ್ಥೆಯಲ್ಲಿ ತರಬೇತಿ ಪಡೆದಿರುವ ಕೀರ್ತಿಗೆ ಇದೇ ಸಂಸ್ಥೆಯ ಮೂಲಕ ಅಯೋಧ್ಯೆಗೆ ಆಹ್ವಾನ ಬಂದಿದೆ. ಈ ವಿಷಯ ಕೇಳಿ ಕೀರ್ತಿ ಅವರ ತಂದೆ ಕೆ.ನಂಜುಂಡಸ್ವಾಮಿ, ತಾಯಿ ಶಾರದಮ್ಮ ಸೇರಿದಂತೆ ಇಡೀ ಕುಟುಂಬ, ಅಕ್ಕಪಕ್ಕದ ಮನೆಯವರು, ಪರಿಚಯಸ್ಥರು ಹೆಮ್ಮೆಪಡುತ್ತಿದ್ದಾರೆ.

ಇದನ್ನೂ ಓದಿ: ಶ್ರೀರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆಗೆ ಅಯೋಧ್ಯೆಗೆ ಶ್ರೀ ಮಾದಾ ಚನ್ನಯ್ಯ ಶ್ರೀಗಳಿಗೆ ಆಹ್ವಾನ

ಅಯೋಧ್ಯೆಯಲ್ಲಿ ಭವ್ಯ ರಾಮ ಮಂದಿರ ನಿರ್ಮಾಣವಾಗಬೇಕು. ಅಲ್ಲಿ ಪ್ರತಿಷ್ಠಾಪನೆಗೊಳ್ಳುವ ಶ್ರೀರಾಮನ ದರ್ಶನ ಪಡೆದುಕೊಳ್ಳಬೇಕು ಎನ್ನುವುದು ಕೋಟ್ಯಾಂತರ ಜನರ ಬಯಕೆ. ಆದರೆ, ಕೋಟೆನಾಡು ಚಿತ್ರದುರ್ಗ ಜಿಲ್ಲೆಯ ಯುವಕನೊಬ್ಬನಿಗೆ ಇದೇ ಮಂದಿರದಲ್ಲಿ ನೂರಾರು ಕೋಟಿ ಜನತೆ ಕೈ ಮುಗಿಯುವ ದೇವರ ಮೂರ್ತಿ ಕೆತ್ತನೆಗೆ ಅವಕಾಶ ಸಿಕ್ಕಿರುವುದು ಪುಣ್ಯದ ಫಲ ಎಂದು ಕುಟುಂಬ ಸಾರ್ಥಕ ಪಟ್ಟುಕೊಳ್ಳುತ್ತಿದೆ.

2013-14ರಲ್ಲಿ ಕಾರ್ಕಳದ ಕೆನರಾ ಸಂಸ್ಥೆಯಲ್ಲಿ ಶಿಲ್ಪ ಕಲೆ ವಿಚಾರದಲ್ಲಿ ಶಿಕ್ಷಣ ಪಡೆದಿದ್ದ ಕೀರ್ತಿ, ಆನಂತರ ಚಿತ್ರದುರ್ಗಕ್ಕೆ ಬಂದು ಶಿಲ್ಪಗಳ ಕೆತ್ತನೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಜೊತೆಗೆ ಯಾರನ್ನೂ ಇಟ್ಟುಕೊಳ್ಳದೇ ಒಬ್ಬರೇ ಕೆಲಸ ಮಾಡುವುದು ಕೀರ್ತಿ ಅವರ ವಿಶೇಷತೆಯಾಗಿದೆ.

ಮಗನ ಆಸಕ್ತಿಯನ್ನು ಗುರುತಿಸಿದ್ದ ತಂದೆ:

ಕೀರ್ತಿ ಅವರಿಗೆ ಚಿತ್ರಕಲೆಯಲ್ಲಿ ಬಹಳ ಆಸಕ್ತಿ ಇರುವುದನ್ನು ಅವರ ತಂದೆ ನಂಜುಂಡಸ್ವಾಮಿ ಗುರುತಿಸಿದ್ದಾರೆ. ಪಿಯುಸಿ ನಂತರ ಬಿಎ ಓದಲು ಆಸಕ್ತಿ ತೋರಿದ್ದ ಮಗನಿಗೆ ಬೇಡ, ಚಿತ್ರಕಲೆಗೆ ಸೇರು ಎಂದು ಸೇರಿಸಿದ್ದಾರೆ. ಆನಂತರ ಕಾರ್ಕಳದ ಸಂಸ್ಥೆಯ ಬಗ್ಗೆ ಮಾಹಿತಿ ತಿಳಿದು ಅಲ್ಲಿಗೆ ಸೇರಿಸಿದ್ದಾರೆ.

ಅಯೋಧ್ಯೆಯ ಮಂದಿರದಲ್ಲಿ ಕೀರ್ತಿ ಕೆತ್ತನೆಯ ಗಣಪತಿ:

ಕರ್ನಾಟಕದಿಂದ ನಾಲ್ವರು ಶಿಲ್ಪಿಗಳು ಅಯೋಧ್ಯೆಯಲ್ಲಿ ದೇವರ ವಿಗ್ರಹಗಳ ಕೆತ್ತನೆ ಮಾಡುತ್ತಿದ್ದಾರೆ. ಅದರಲ್ಲಿ ಚಿತ್ರದುರ್ಗದ ಕೀರ್ತಿ ನಂಜುಂಡಸ್ವಾಮಿ ಅವರಿಗೆ ಗಣಪತಿಯ ವಿಗ್ರಹದ ಕೆತ್ತನೆ ಜವಾಬ್ದಾರಿ ನೀಡಲಾಗಿದೆ. ಸುಮಾರು ಮೂರು ಅಡಿ ಎತ್ತರದ ವಿಗ್ರಹ ಇದಾಗಿದೆ.

ಡಿಸೆಂಬರ್ 8 ರಂದು ಅಯೋಧ್ಯೆಗೆ ತೆರಳಿದ್ದು, ಮುಂದಿನ 10 ದಿನಗಳಲ್ಲಿ ಕೆತ್ತನೆ ಕಾರ್ಯ ಪೂರ್ಣಗೊಳ್ಳಲಿದೆ ಎಂದು ಮಗ ಕೀರ್ತಿ ತಿಳಿಸಿದ್ದಾನೆ ಎಂದು ತಂದೆ ನಂಜುಂಡಸ್ವಾಮಿ ಮಾಹಿತಿ ನೀಡಿದರು.

 ಕೆ.ನಂಜುಂಡಸ್ವಾಮಿ, ಕೀರ್ತಿ ಅವರ ತಂದೆ
ಕೆ.ನಂಜುಂಡಸ್ವಾಮಿ, ಕೀರ್ತಿ ಅವರ ತಂದೆ

ಇಂಥದ್ದೊಂದು ಅವಕಾಶ ನಮ್ಮ ಮಗನಿಗೆ ಬರುತ್ತದೆ ಎನ್ನುವ ನಿರೀಕ್ಷೆಯೇ ಇರಲಿಲ್ಲ. ಯಾವ ಗೌರವ ಧನವೂ ಬೇಡ. ಸುಮ್ಮನೆ ಹೋಗಿ ಕೆಲಸ ಮಾಡಿ ಬಾ. ಶ್ರದ್ಧೆಯಿಂದ ಕೆಲಸ ಮಾಡಿದರೆ ಎಲ್ಲವೂ ನಿನ್ನನ್ನು ಹರಸಿ ಬರುತ್ತದೆ ಎಂದು ಆಶೀರ್ವದಿಸಿ ಕಳಿಸಿದ್ದೇವೆ. ಕಳೆದ ಒಂದು ತಿಂಗಳಿಂದ ಕೆತ್ತನೆ ಕೆಲಸದಲ್ಲಿ ತೊಡಗಿಸಿಕೊಂಡಿದ್ದು ಮುಂದಿನ ಒಂದು ವಾರದಲ್ಲಿ ವಿಗ್ರಹ ಕೆತ್ತನೆ ಪೂರ್ಣಗೊಳ್ಳಲಿದೆ ಎಂದು ತಿಳಿಸಿದ್ದಾನೆ
| ಕೆ.ನಂಜುಂಡಸ್ವಾಮಿ, ಕೀರ್ತಿ ಅವರ ತಂದೆ.

ವಿಶೇಷ ಅಂದ್ರೆ, ಅಯೋಧ್ಯೆಯಲ್ಲಿ ಶ್ರೀರಾಮ ಮಂದಿ ನಿರ್ಮಾಣ ಆಗಬೇಕು ಎಂದು ಕೀರ್ತಿ ಅವರ ತಂದೆ ನಂಜುಂಡಸ್ವಾಮಿ ಹಾಗೂ ದೊಡ್ಡಪ್ಪ ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಟೈಗರ್ ತಿಪ್ಪೇಸ್ವಾಮಿ ಸಾಕಷ್ಟು ಹೋರಾಟ ನಡೆಸಿದ್ದಾರೆ. ಟೈಗರ್ ತಿಪ್ಪೇಸ್ವಾಮಿ 1990ರಲ್ಲಿ ಕರಸೇವೆಗೆ ತೆರಳಿದ್ದರು. ಈಗ ಅವರದ್ದೇ ಕುಟುಂಬದ ಕುಡಿ ಶ್ರೀರಾಮ ಮಂದಿರ ನಿರ್ಮಾಣ ಕಾರ್ಯದಲ್ಲಿ ಭಾಗವಹಿಸಿರುವುದು ಪೂರ್ವಜನ್ಮದ ಪುಣ್ಯ ಎಂದೇ ಈ ಕುಟುಂಬ ಭಾವಿಸುತ್ತಿದೆ.

ಕೀರ್ತಿ ಈವರೆಗೆ ಸುಮಾರು 40 ವಿಗ್ರಹಗಳನ್ನು ಕೆತ್ತನೆ ಮಾಡಿದ್ದು, ಗಣಪತಿ, ಆಂಜನೇಯ, ನವಗ್ರಹಗಳು, ಬೀರಲಿಂಗೇಶ್ವರ, ಸಿಂಹ, ಸೇವಾಲಾಲ್, ತಿರುಪತಿ ತಿಮ್ಮಪ್ಪ, ಚೌಡಮ್ಮ, ನಾಗರ ವಿಗ್ರಹಗಳು, ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ನಾರಾಯಣಗೌಡರ ವಿಗ್ರಹ ಸೇರಿದಂತೆ ಅನೇಕ ಶಿಲ್ಪಗಳನ್ನು ಕೆತ್ತನೆ ಮಾಡಿದ್ದಾರೆ.
ಮೈಸೂರಿನ ಎಚ್.ಡಿ.ಕೋಟೆಯಿಂದ ಕೆತ್ತನೆಗೆ ಕೃಷ್ಣಶಿಲೆ ತರಿಸಿಕೊಂಡು ಕೆತ್ತನೆ ಮಾಡುತ್ತಾರೆ.

***********

ಇದೊಂದು ಪೂರ್ವ ಜನ್ಮದ ಸುಕೃತ ಎಂದು ಭಾವಿಸುತ್ತೇವೆ. ನಾವೆಲ್ಲಾ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವಾಗಲಿ ಎಂದು ಪ್ರಾಣ ಪಣಕ್ಕಿಟ್ಟು ಹೋರಾಟ ಮಾಡಿದ್ದೆವು. ಈಗ ನಮ್ಮ ಮಗನಿಗೆ ಅದೇ ಮಂದಿರದಲ್ಲಿ ದೇವರ ವಿಗ್ರಹ ಕೆತ್ತನೆಗೆ ಆಹ್ವಾನ ಬಂದಿದ್ದು, ಬಹಳ ಖುಷಿಯ ಸಂಗತಿ. ಮುಂದೆ ಶತ ಶತಮಾನಗಳ ಕಾಲ ಇದು ಚಿರವಾಗಿರಲಿದೆ.
| ಟೈಗರ್ ತಿಪ್ಪೇಸ್ವಾಮಿ, ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ, (ಕೀರ್ತಿ ಅವರ ದೊಡ್ಡಪ್ಪ)

*********

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:AyodhyaChitradurgaIdol CarvingKeerthi NanjundaswamySri RamaTempleಅಯೋಧ್ಯೆಕೀರ್ತಿ ನಂಜುಂಡಸ್ವಾಮಿಚಿತ್ರದುರ್ಗಮಂದಿರವಿಗ್ರಹ ಕೆತ್ತನೆಶ್ರೀರಾಮ
Share This Article
Facebook Email Print
Previous Article ಚಿತ್ರದುರ್ಗ ಅಪರಾಧ ಗೋಡೆ ಮೇಲಿಂದ ಬಿದ್ದು, ಕಾರ್ಮಿಕ ಮೃತ
Next Article ‘ನಾನು ಸೋಮನಹಳ್ಳಿ ಮಠದ ಶ್ರೀಶೈಲ ಆರಾಧ್ಯ ಅಂತ’ …ಗುರುವಿನ ಮೊದಲ ಮಾತು ಸ್ಮರಿಸಿದ ಶಿಷ್ಯ ಡಾ.ಸಂಗೇನಹಳ್ಳಿ ಅಶೋಕ್ ಕುಮಾರ್ ‌| ಅಕ್ಷರ ನಮನ
Leave a Comment

Leave a Reply Cancel reply

Your email address will not be published. Required fields are marked *

Omkaalu (Carom seed snack)
ಓಂಕಾಳನ್ನು ಬಳಸಿ ಹೊಟ್ಟೆಯ ಕೊಬ್ಬನ್ನು ಕಳೆದುಕೊಳ್ಳುವುದು ಹೇಗೆ? ತಿಳಿಯಿರಿ
Life Style
ಭಾರತೀಯ ವಿಜ್ಞಾನ ಸಂಸ್ಥೆ
ಎಸ್‌ಸಿ, ಎಸ್‌ಟಿ ಯುವಜನರಿಗೆ ಒಣಭೂಮಿ ಆಹಾರ ಉದ್ಯಮಗಳ ಕುರಿತು 3 ದಿನಗಳ ತರಬೇತಿ
ಮುಖ್ಯ ಸುದ್ದಿ
ಶ್ರೀ ಕೃಷ್ಣ ಜಯಂತಿ ಆಚರಣೆ ಸಂಬಂಧ ಪೂರ್ವಭಾವಿ ಸಭೆ
ಸೆಪ್ಟೆಂಬರ್ 04ರಂದು ಶ್ರೀ ಕೃಷ್ಣ ಜಯಂತಿ | ಅರ್ಥಪೂರ್ಣ, ಶ್ರದ್ಧಾಭಕ್ತಿಯಿಂದ ಜಯಂತಿ ಆಚರಣೆ
ಮುಖ್ಯ ಸುದ್ದಿ
garlic with mustard oil
ಬೆಳ್ಳುಳ್ಳಿಯನ್ನು ಸಾಸಿವೆ ಎಣ್ಣೆಯೊಂದಿಗೆ ಬೆರೆಸಿ ಕೂದಲಿಗೆ ಹಚ್ಚಿದರೆ ಏನಾಗುತ್ತದೆ? ತಿಳಿಯಿರಿ 
Life Style
© Chitradurga News 2025 | Powered By Karnatakabest.com
Loading Comments...
Welcome Back!

Sign in to your account

Username or Email Address
Password

Lost your password?

Not a member? Sign Up