
CHITRADURGA NEWS | 23 DECEMBER 2024
ಹೊಸದುರ್ಗ: ತಾಲೂಕು ನಾಕೀಕೆರೆ ಗ್ರಾಮದ ಶ್ರೀ ಕೋಡಿ ಆಲದ ಕೆಂಚಾಂಬಿಕಾ ದೇವಿಯ ಕಾರ್ತಿಕ ಮಹೋತ್ಸವ ಡಿ.24 ಮಂಗಳವಾರ ನಡೆಯಲಿದೆ.
ಕ್ಲಿಕ್ ಮಾಡಿ ಓದಿ: ಕಿಚ್ಚನ ಜೊತೆ ಕಾರಲ್ಲಿ ಕುಳಿತ ಡಾಲಿಗೆ ಅಚ್ಚರಿ

ಡಿ.23 ಸೋಮವಾರ ರಾತ್ರಿ 10.30 ರಿಂದ ಶ್ರೀ ದೇವಿಯ ಪಾರಾಯಣ ನಡೆಯುತ್ತದೆ. ಡಿ.24 ಮಂಗಳವಾರ ಬೆಳಗ್ಗೆ 5.30ಕ್ಕೆ ಶ್ರೀ ಕೋಡಿ ಆಲದ ಕೆಂಚಾಂಬಿಕಾ ದೇವಿಗೆ ಅಭಿಷೇಕ ನಡೆಯುವುದು. ಬೆಳಗ್ಗೆ 9.30ಕ್ಕೆ ಕಾರ್ತಿಕ ಮಹೋತ್ಸವ ನಡೆಯಲಿದ್ದು, 10.30 ರಿಂದ ಹೋಳಿಗೆ ಅನ್ನ ಸಂತರ್ಪಣೆ ಏರ್ಪಡಿಸಲಾಗಿದೆ.
ಕ್ಲಿಕ್ ಮಾಡಿ ಓದಿ: ಚಿತ್ರದುರ್ಗ ಇಲ್ಲ ಅಂದ್ರೆ ಹುಚ್ಚ ಸಿನಿಮಾ ಇಲ್ಲ | ಕಿಚ್ಚ
ಈ ಕಾರ್ಯಕ್ರಮಕ್ಕೆ ವಿಶೇಷ ಆಹ್ವಾನಿತರಾಗಿ ಶಾಸಕರಾದ ಬಿ.ಜಿ.ಗೋವಿಂದಪ್ಪ, ಎಂ.ಚಂದ್ರಪ್ಪ, ಕೆ.ಎಸ್.ನವೀನ್, ಸಂಸದರಾದ ಗೋವಿಂದ ಎಂ.ಕಾರಜೋಳ, ಮಾಜಿ ಸಚಿವರಾದ ಎಚ್.ಆಂಜನೇಯ, ಗೂಳಿಹಟ್ಟಿ ಡಿ.ಶೇಖರ್, ಮುಖಂಡರಾದ ಎಸ್.ಲಿಂಗಮೂರ್ತಿ, ಡಿ.ಗುರುಸ್ವಾಮಿ, ಪಿ.ಹನುಮಂತಪ್ಪ ಬಿ.ಎಸ್.ದ್ಯಾಮಪ್ಪ, ಶಿಮುಲ್ ನಿರ್ದೇಶಕ ಬಿ.ಆರ್.ರವಿಕುಮಾರ್ ಮತ್ತಿತರರು ಭಾಗವಹಿಸುವರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
