CHITRADURGA NEWS | 16 AUGUST 2025
ಚಿತ್ರದುರ್ಗ: ನಗರದಲ್ಲಿನ ಶ್ರೀ ಸದ್ಗುರು ಕಬೀರಾನಂದಸ್ವಾಮಿ ಆಂಗ್ಲ ಮಾದ್ಯಮ ಶಾಲೆಯಲ್ಲಿ ಶನಿವಾರ ಶ್ರೀ ಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ ಶಾಲೆಯಲ್ಲಿನ ಎಲ್.ಕೆ.ಜಿ. ಹಾಗೂ ಯುಕೆ.ಜಿ.ಮಕ್ಕಳಿಗೆ ಕೃಷ್ಣ ಹಾಗೂ ರಾಧೆಯವರ ವೇಷ ಹಾಕಲಾಗಿತ್ತು.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಆಗಸ್ಟ್ 16 | ಹತ್ತಿ ರೇಟ್ ಎಷ್ಟಿದೆ?
ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಕಬೀರಾನಂದಾಶ್ರಮದ ಶಿವಲಿಂಗಾನಂದ ಶ್ರೀಗಳು ಮಾತನಾಡಿ, ಭಾರತೀಯರು ಶ್ರೀಕೃಷ್ಣನ ಜನ್ಮದಿನವನ್ನು ಶ್ರೀಕೃಷ್ಣಜನ್ಮಾಷ್ಟಮಿ, ಗೋಕುಲಾಷ್ಟಮಿ, ಅಷ್ಟಮಿ ರೋಹಿಣಿ, ಶ್ರೀಕೃಷ್ಣ ಜಯಂತಿ ಎಂದು ಆಚರಿಸುತ್ತಾರೆ.
ಪ್ರತಿಯೊಬ್ಬರ ಮನೆಗಳಲ್ಲಿ ಶ್ರೀಕೃಷ್ಣನನ್ನು ಶೃಂಗಾರ ಮಾಡಿ, ತೊಟ್ಟಿಲಲ್ಲಿ ತೂಗಿ, ಮೃಷ್ಟಾನ್ನಗಳ ನೈವೇದ್ಯವನ್ನು ಅರ್ಪಣೆ ಮಾಡುತ್ತಾರೆ. ಜೀವನದಲ್ಲಿ ಸುಖ ಶಾಂತಿಗಾಗಿ ಅವನನ್ನು ಆಹ್ವಾನಿಸುತ್ತಾರೆ. ಇದು ಒಂದು ದಿನಕ್ಕೆ ಮಾತ್ರ ಸೀಮಿತವಾಗಿದೆ.
ಮಾರನೆಯ ದಿನ ಪುನ: ನಮ್ಮ ಜೀವನಯಾತ್ರೆ ಎಂದಿನಂತೆ ಪ್ರಾರಂಭವಾಗುತ್ತದೆ. ಸಡಗರ ಸಂಭ್ರಮದಿಂದ ಮಾಡಿದ ಆಚರಣೆ ಮುಂದಿನ ಹಬ್ಬ ಬರುವವರೆಗೆ ನಿಂತು ಹೋಗುತ್ತದೆ. ನಾವು ಮಾಡುವ ಹಬ್ಬಗಳ ಆಚರಣೆಯು ನಮಗೆ ಖುಷಿ, ಉಲ್ಲಾಸ, ಉತ್ಸಾಹ, ಧ್ಯೆರ್ಯ, ಸಾಹಸ ನೀಡುತ್ತದೆ ಎಂದರು.
ಇದನ್ನೂ ಓದಿ: ದಿನ ಭವಿಷ್ಯ | ಆಗಸ್ಟ್ 16 | ಶುಭ ಸುದ್ದಿ, ಹೊಸ ಉದ್ಯೋಗಾವಕಾಶಗಳು, ಆರೋಗ್ಯದ ಬಗ್ಗೆ ಕಾಳಜಿ ವಹಿಸಿ
ಕೃಷ್ಣ ಜನ್ಮಾಷ್ಠಮಿ ಕಾರ್ಯಕ್ರಮದಲ್ಲಿ ಕೃಷ್ಣನ ಪಾತ್ರಧಾರಿಗಳಿಗೆ ಮಡಿಕೆ ಹೊಡೆಯು ಕಾರ್ಯವನ್ನು ಏರ್ಪಡಿಸಲಾಗಿತ್ತು. ಮಕ್ಕಳು ಬಹಳ ಶ್ರಮವನ್ನು ಪಟ್ಟು ಮಡಿಕೆಯನ್ನು ಹೊಡೆಯುವುದರ ಮೂಲಕ ಅದರಲ್ಲಿ ಇದ್ದ ಚಾಕಲೇಟುಗಳನ್ನು ಬಾಚಿಕೊಂಡರು.
ಈ ಸಂದರ್ಭದಲ್ಲಿ ಸಂಸ್ಕøತ ಪಾಠ ಶಾಲೆಯ ಮುಖ್ಯ ಶಿಕ್ಷಕರಾದ ಗಣಪತಿ ಶಾಸ್ತ್ರಿ, ಶ್ರೀ ಸದ್ಗುರು ಕಬೀರಾನಂದಸ್ವಾಮಿ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕರು ಭಾಗವಹಿಸಿದ್ದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
