CHITRADURGA NEWS | 04 AUGUST 2026
ಚಿತ್ರದುರ್ಗ: ಹೊಸದುರ್ಗದ ಹಿರಿಯ ಶಾಸಕ ಬಿ.ಜಿ. ಗೋವಿಂದಪ್ಪ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಚಿತ್ರದುರ್ಗ ಜಿಲ್ಲಾ ಕುರುಬರ ಸಂಘವು ಆಗ್ರಹಿಸಿದೆ.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಆಗಸ್ಟ್ 04 | ಹತ್ತಿ ರೇಟ್ ಎಷ್ಟಿದೆ?
ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಕುರುಬರ ಸಂಘದ ಪ್ರಧಾನ ಕಾರ್ಯದರ್ಶಿ ಬಿ.ಟಿ.ಜಗದೀಶ್ ಮಾತನಾಡಿದ ಅವರು, ರಾಜ್ಯ ಸಂಪುಟ ವಿಸ್ತರಣೆಯಲ್ಲಿ ಕುರುಬ ಸಮುದಾಯಕ್ಕೆ ಸೂಕ್ತ ಪ್ರಾತಿನಿಧ್ಯ ನೀಡಿಲ್ಲ. ರಾಜ್ಯದಲ್ಲಿ ಕುರುಬ ಸಮುದಾಯದ ಜನಸಂಖ್ಯೆಗೆ ಅನುಗುಣವಾಗಿ ಸರ್ಕಾರದಲ್ಲಿ ಸೂಕ್ತ ಪಾಲು ಹಾಗೂ ಪ್ರಾತಿನಿಧ್ಯ ಸಿಕ್ಕಿಲ್ಲ. ಸಂಪುಟ ವಿಸ್ತರಣೆಯ ಕೊನೆಯ ಕ್ಷಣದವರೆಗೂ ಗಾಯತ್ರಿ ಶಾಂತೇಗೌಡ ಅವರ ಹೆಸರು ಕೇಳಿಬಂದರೂ ಸಹ ಅವರಿಗೆ ಪ್ರಮಾಣವಚನ ಸ್ವೀಕರಿಸಲು ಅವಕಾಶ ಸಿಗಲಿಲ್ಲ. ಇದರಿಂದ ಇಡೀ ಕುರುಬ ಸಮುದಾಯಕ್ಕೆ ಅನ್ಯಾಯವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ವಿಶೇಷವಾಗಿ ಕಿತ್ತೂರು ಕರ್ನಾಟಕ, ಕಲ್ಯಾಣ ಕರ್ನಾಟಕ ಹಾಗೂ ಮಧ್ಯ ಕರ್ನಾಟಕ ಭಾಗಗಳಲ್ಲಿ ಕುರುಬ ಜನಾಂಗದ ಜನಸಂಖ್ಯೆ ಅತ್ಯಧಿಕವಾಗಿದ್ದು, ಈ ಭಾಗಗಳಿಗೆ ಹೆಚ್ಚಿನ ಆದ್ಯತೆ ದೊರೆಯಬೇಕಿತ್ತು.
ನಾಲ್ಕು ಬಾರಿ ಹೊಸದುರ್ಗ ಕ್ಷೇತ್ರದ ಶಾಸಕರಾಗಿ ಆಯ್ಕೆಯಾಗಿ, ಗ್ರಾಮ ಪಂಚಾಯಿತಿಯಿಂದ ತಾಲೂಕು ಪಂಚಾಯಿತಿಯವರೆಗೆ ಆಡಳಿತ ಅನುಭವ ಹೊಂದಿರುವ ಹಾಗೂ ಕಾಗಿನೆಲೆ ಕನಕಗುರು ಪೀಠದ ಆಡಳಿತಾಧಿಕಾರಿಯಾಗಿ ಸೇವೆ ಸಲ್ಲಿಸಿರುವ ಹಿರಿಯ ರಾಜಕಾರಣಿ ಬಿ.ಜಿ.ಗೋವಿಂದಪ್ಪ ಅವರಿಗೆ ಸಚಿವ ಸಂಪುಟದಲ್ಲಿ ಉಳಿದಿರುವ ಸ್ಥಾನವನ್ನು ನೀಡಬೇಕೆಂದು ಕಾಂಗ್ರೆಸ್ ಹೈಕಮಾಂಡ್ ಹಾಗೂ ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.
ಇದನ್ನೂ ಓದಿ: ನಾಳೆ ಸಚಿವ ರಘುಮೂರ್ತಿಗೆ ಅದ್ದೂರಿ ಸ್ವಾಗತ | ಮದಕರಿ ವೃತ್ತದಲ್ಲಿ ಭರ್ಜರಿ ಸಿದ್ಧತೆ
2013 ಮತ್ತು 2023ರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಪರವಾಗಿ ಕುರುವ ಸಮಾಜ ಅಧಿಕ ರೀತಿಯಲ್ಲಿ ಮತ ಹಾಕುವುದರ ಮೂಲಕ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಆಧಿಕಾರಕ್ಕೆ ಬರಲು ಕಾರಣವಾಗಿದೆ ಎಂದರು. ಒಂದು ವೇಳೆ ಸಂಘದ ಈ ಮನವಿಯನ್ನು ಪರಿಗಣಿಸದಿದ್ದರೆ, ಚಿತ್ರದುರ್ಗ ಜಿಲ್ಲೆಯಾದ್ಯಂತ ಉಗ್ರ ಸ್ವರೂಪದ ಹೋರಾಟ ರೂಪಿಸುವುದಾಗಿ ಎಚ್ಚರಿಸಿದರು.
ಮುಂದಿನ ದಿನಗಳಲ್ಲಿ ನಿಗಮ, ಮಂಡಳಿ ಹಾಗೂ ಪ್ರಾಧಿಕಾರಗಳ ಎರಡನೇ ಅವಧಿಯ ನೇಮಕಾತಿಯಲ್ಲಿಯೂ ಸಹ ಜನಸಂಖ್ಯೆಗೆ ಅನುಗುಣವಾಗಿ ಕುರುಬ ಸಮುದಾಯಕ್ಕೆ ಹೆಚ್ಚಿನ ಸ್ಥಾನಗಳನ್ನು ನೀಡಬೇಕು ಎಂದು ಆಗ್ರಹಿಸಿದರು.
ಕುರುನ ಸಂಘದ ಗೌರವಾಧ್ಯಕ್ಷರು, ನಗರಸಭೆಯ ಮಾಜಿ ಅಧ್ಯಕ್ಷ ಹೆಚ್.ಮಂಜಪ್ಪ ಮಾತನಾಡಿ, ಜಿಲ್ಲಾ ಕುರುಬ ಸಮಾಜ ಗೋವಿಂದಪ್ಪ ಪರವಾಗಿ ನಿಂತಿದೆ, ಅವರಿಗೆ ಮುಂದಿನ ದಿನದಲ್ಲಿ ಸಚಿವ ಸ್ಥಾನ ಸಿಗಲಿದೆ ಎಂಬ ಆಶಾ ಭಾವನೆ ಇದೆ. ಈಗಿನ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದಲ್ಲಿ ಲಿಂಗಾಯತ ಸಮುದಾಯ ದಿಂದ 7 ಜನ, ಒಕ್ಕಲಿಗರಿಂದ 6 ಎಸ್.ಸಿ. ಎಸ್,ಟಿ.ಯಿಂದ 7 ಜನ ಹಾಗೂ ಮುಸ್ಲಿಂ ಸಮುದಾಯದಿಂದ 3 ಜನ ಸಚಿವರಾಗಿದ್ದಾರೆ.
ರಾಜ್ಯದಲ್ಲಿ ಜನಸಂಖ್ಯೆಯಲ್ಲಿ ಮೂರಷ್ಟು ಇರುವ ಕುರುಬ ಸಮುದಾಯಕ್ಕೆ ಬರೀ 2 ಸಚಿವ ಸ್ಥಾನವನ್ನು ಮಾತ್ರ ನೀಡಲಾಗಿದೆ, ಅವರು ಸಹಾ ಮೈಸೂರು, ಮಂಡ್ಯಕ್ಕೆ ಸೀಮಿತವಾಗಿದ್ದಾರೆ. ಮಧ್ಯ ಕರ್ನಾಟಕಕ್ಕೆ ನಮ್ಮ ಸಮುದಾಯದವರು ಯಾರು ಇಲ್ಲದಂತೆ ಆಗುತ್ತಿದೆ ಎಂದರು.
ಇದನ್ನೂ ಓದಿ: ಮಕ್ಕಳ ಹೃದಯ ಉಚಿತ ತಪಾಸಣೆ
ಪತ್ರಿಕಾಗೋಷ್ಠಿಯಲ್ಲಿ ಕುರುಬ ಸಂಘದ ಮಾಜಿ ಕಾರ್ಯದರ್ಶಿ ಮಲ್ಲಿಕಾರ್ಜನ್, ಖಂಜಾಚಿ ಮೃತ್ಯುಂಜಯ, ನಿದೇಶಕರಾದ ಸುರೇಶ್, ತಾಲ್ಲೂಕು ಸಂಘದ ಕಾರ್ಯದರ್ಶಿ ರಾಜು, ಉಪಾಧ್ಯಕ್ಷ ಉಮೇಶ್, ಮುಖಂಡರಾದ ಓಂಕಾರಪ್ಪ, ಸಂಪತ್ ಕುಮಾರ್ ಮಾಳೇಶ್ ಇದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

