
CHITRADURGA NEWS | 29 DECEMBER 2025
ಚಿತ್ರದುರ್ಗ: ಕುವೆಂಪು ಅವರ ಜೀವನದ ಮೌಲ್ಯಗಳು ಹಾಗೂ ಜೀವಿಸಿದಂತಹ ಬದುಕಿನ ಪಥ ಎಲ್ಲರಿಗೂ ಆದರ್ಶಪ್ರಾಯ. ಕುವೆಂಪು ಅವರು ಸಾಹಿತಿ, ಕವಿ, ದಾರ್ಶನಿಕ ಹಾಗೂ ತತ್ವಜ್ಞಾನಿಯಾಗಿ ಹೊರಹೊಮ್ಮಿದರು. ಸೃಷ್ಠಿಯಲ್ಲಿ ಮನುಷ್ಯನನ್ನು ಬುದ್ದಿವಂತ ಪ್ರಾಣಿ ಎಂದು ಕರೆಯುವ ಈ ಪರಿಸರದಲ್ಲಿ ವಿಶ್ವಮಾನವರಾಗಿ ಹಾಗೂ ಈ ವಿಶ್ವಕ್ಕೆ ಏನಾದರೂ ಒಳಿತು ಮಾಡುವುದು ಮಾನವನ ಕಾಯಕ ಧರ್ಮ ಎಂದು ಉಪವಿಭಾಗಾಧಿಕಾರಿ ಮಹೆಬೂಬ್ ಜಿಲಾನಿ ಖುರೇಷಿ ಹೇಳಿದರು.
ಇದನ್ನೂ ಓದಿ: ಡಿವಿಜಿ ಕಗ್ಗಗಳ ಗಮಕ ವಾಚನ – ವ್ಯಾಖ್ಯಾನ | ಜೆಸಿಆರ್ ಗಣಪತಿ ದೇವಸ್ಥಾನದಲ್ಲಿ ಆಯೋಜನೆ

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ನಗರಸಭೆ ವತಿಯಿಂದ ಹಮ್ಮಿಕೊಂಡಿದ್ದ ವಿಶ್ವಮಾನವ ದಿನಾಚರಣೆ ಸಮಾರಂಭದಲ್ಲಿ ಅವರು ಮಾತನಾಡಿದರು.
ಚಿತ್ರದುರ್ಗ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಇಂಗ್ಲಿಷ್ ಉಪನ್ಯಾಸಕ ಎಸ್.ಎನ್.ಡಾ.ಹೇಮಂತರಾಜು ಮಾತನಾಡಿ, ಜಗತ್ತಿನ ಎಲ್ಲ ಧರ್ಮಗಳ ಸಾರವೇ ಕುವೆಂಪು ಅವರ ವಿಶ್ವ ಮಾನವ ಸಂದೇಶವಾಗಿದೆ.
ಮನುಜಮತ, ವಿಶ್ವಪಥ, ಸರ್ವೋದಯ, ಸಮನ್ವಯ, ಪೂರ್ಣದೃಷ್ಠಿ ಕುವೆಂಪು ಅವರ ವಿಶ್ವ ಮಾನವ ಸಂದೇಶವಾಗಿದ್ದು, ವಿಶ್ವ ಮಾನವ ಸಂದೇಶ ಅಳವಡಿಸಿಕೊಂಡರೆ ನಮ್ಮ ಬದುಕು ಪಾವನವಾಗಲಿದೆ ಎಂದು ತಿಳಿಸಿದ ಅವರು, ನಮ್ಮ ಅಹಮ್ಮಿನ ಕೋಟೆ ಭೇದಿಸಲು ವಿಶ್ವ ಮಾನವ ಸಂದೇಶ ಸಾರಿದ ಕುವೆಂಪು ಮಾರ್ಗ ಅವಶ್ಯ ಎಂದು ಹೇಳಿದರು.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಡಿಸೆಂಬರ್ 29 | ಮೆಕ್ಕೆಜೋಳ, ಸೂರ್ಯಕಾಂತಿ ರೇಟ್ ಎಷ್ಟಿದೆ?
ನಮ್ಮ ಬದುಕನ್ನು ಸರಿಮಾಡಿಕೊಳ್ಳಲು ಪ್ರಪಂಚದ ಎಲ್ಲ ಸಾಹಿತ್ಯವನ್ನು ನಾವು ಓದುವ ಅವಶ್ಯಕತೆ ಇದೆ. ಈ ನಿಟ್ಟಿನಲ್ಲಿ ಕುವೆಂಪು ಅಗ್ರ ಶ್ರೇಣಿಯ ಬರಹಗಾರರಾಗಿ ಕಾಣುತ್ತಾರೆ. ಉತ್ತಮ ಸಂದೇಶ ನೀಡುವ ಮೂಲಕ ಸಮಾಜದ ಬದಲಾವಣೆಗೆ ಶ್ರಮಿಸಿದ್ದಾರೆ ಎಂದು ಹೇಳಿದರು.
ಪ್ರಪಂಚದ ಎಲ್ಲ ಸಮಸ್ಯೆಗಳಿಗೂ ಪ್ರಕೃತಿಯೇ ಪರಿಹಾರ. ಮಾನವ ಸೃಷ್ಠಿ ಮಾಡಿದ ಎಲ್ಲ ಸಮಸ್ಯೆಗಳಿಗೂ ಪ್ರಕೃತಿ ನಮಗೆ ಪರಿಹಾರವಾಗಿದೆ ಎಂದು ಹೇಳಿದ ಇಂಗ್ಲೀಷ್ ಕವಿ ವಡ್ರ್ಸ್ ವರ್ತ್ನ ದೊಡ್ಡ ಪ್ರಭಾವ ಕುವೆಂಪು ಅವರ ಮೇಲಾಗಿದೆ. ಕುವೆಂಪು ಇದನ್ನು ಸಂಪೂರ್ಣವಾಗಿ ಕಾರ್ಯರೂಪಕ್ಕೆ ತಂದರು, ಇದನ್ನು ಮನಸ್ಸು, ಅಲೋಚನೆ, ಬದುಕಿನಲ್ಲಿ ಅಕ್ಷರಶಃ ಪಾಲಿಸಿದ ಏಕಮೇವ ಅದ್ವೀತಿಯ ಕವಿ ಕುವೆಂಪು ಎಂದು ಬಣ್ಣಿಸಿದರು.
ಕುವೆಂಪು ಹೇಗೆ ಬರೆದಿದ್ದಾರೆಯೇ ಅದೇ ರೀತಿಯಾಗಿ ಬದುಕಿದವರು. ಹೇಗೆ ಬದುಕಿದ್ದಾರೆಯೇ ಅದನ್ನೇ ಹೇಳಿದ್ದಾರೆ. ಹಾಗಾಗಿ ಅವರ ಮಾತು ಮತ್ತು ಕೃತಿಯ ನಡುವೆ ವ್ಯತ್ಯಾಸವಿಲ್ಲದೇ ಬದುಕಿದ ಮಹನೀಯರು. ಕುವೆಂಪು ಅವರ ಶಿಕ್ಷಣದ ಬದುಕಿನ ಆಲೋಚನೆಗಳು ನಮಗೆ ತುಂಬಾ ಆದರ್ಶಪ್ರಾಯವಾಗಿವೆ. ಕುವೆಂಪು ಅವರ ಆದರ್ಶಮಯ ಜೀವನ, ಸಾಹಿತ್ಯ ಪರಿಚಯ ಮಕ್ಕಳಿಗೆ ತಿಳಿಸಬೇಕು ಎಂದು ಅಭಿಪ್ರಾಯಪಟ್ಟರು.
ಇದನ್ನೂ ಓದಿ: ರಾಮತೀರ್ಥಾಮೃತ ಕೃತಿ ಲೋಕಾರ್ಪಣೆ ಸಮಾರಂಭ | ಜನವರಿ 1
ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಂ.ಕೆ.ತಾಜ್ಪೀರ್ ಮಾತನಾಡಿ, ಕರ್ನಾಟಕ, ಅದನ್ನೊಳಗೊಂಡ ಭಾರತ, ಜಗತ್ತು ಶಾಂತಿಯ ತೋಟವಾಗಿರಲಿ ಎಂದು ಆಶಿಸುವ ಉದಾತ್ತ ಭಾವ ಕನ್ನಡ ನಾಡಗೀತೆ ಹೊಂದಿದೆ. ಕುವೆಂಪು ಅವರು ಜಾತಿ, ಮತ, ಧರ್ಮದ ಗಡಿಗಳನ್ನು ಮೀರಿ ಎಲ್ಲರೂ ಮಾನವರೇ ಎಂಬ ಸಂದೇಶ ನೀಡಿದ್ದಾರೆ ಎಂದು ಹೇಳಿದರು.
ಜಿಲ್ಲಾ ಗ್ಯಾರಂಟಿ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಆರ್.ಶಿವಣ್ಣ ಗಂಜಿಗಟ್ಟೆ ಮಾತನಾಡಿ, ಕುವೆಂಪು ಅವರು ಮಾನವ ಕುಲಕ್ಕೆ ನೀಡಿದ ಮಾರ್ಗದರ್ಶನ, ಆದರ್ಶಗಳು ಸಾರ್ವಕಾಲಿಕ. ಮನುಜಮತ ವಿಶ್ವಪಥ ಸಂದೇಶ ಸಾರಿದ ಶ್ರೇಷ್ಠ ವಿಶ್ವಮಾನವ. ಕುವೆಂಪು ಅವರ ತತ್ವ ಸಿದ್ದಾಂತ, ಅಲೋಚನೆಗಳನ್ನು ಪ್ರತಿಯೊಬ್ಬರು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ವಿಶ್ವಮಾನವ ದಿನಾಚರಣೆ ಅಂಗವಾಗಿ ಕುವೆಂಪು ಅವರ ಕುರಿತ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಹಾಗೂ ಕವನ ವಾಚನ ಮಾಡಿದ ಉಪನ್ಯಾಸಕರಾದ ತಿಪ್ಪೇಸ್ವಾಮಿ ಮಂಜುನಾಥ್, ಹುಲ್ಲೂರು ವಸಂತ ಕುಮಾರ್ ಅವರಿಗೆ ಪ್ರಮಾಣ ಪತ್ರ ವಿತರಿಸಲಾಯಿತು.
ಇದನ್ನೂ ಓದಿ: ವರ್ಷಾಂತ್ಯಕ್ಕೆ ಏರಿಕೆ ಕಂಡ ಅಡಿಕೆ ಬೆಲೆ
ಕಾರ್ಯಕ್ರಮದಲ್ಲಿ ಜಿಲ್ಲಾ ಗ್ಯಾರಂಟಿ ಯೋಜನಾ ಪ್ರಾಧಿಕಾರದ ಉಪಾಧ್ಯಕ್ಷ ಡಿ.ಎನ್.ಮೈಲಾರಪ್ಪ, ಉಪವಿಭಾಗಾಧಿಕಾರಿಗಳ ಕಚೇರಿ ತಹಶೀಲ್ದಾರ್ ನರಸಿಂಹಮೂರ್ತಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಡಾ.ಬಿ.ಎಂ.ಗುರುನಾಥ್, ಜಿಲ್ಲಾ ಆಯುಷ್ ಅಧಿಕಾರಿ ಡಾ.ಚಂದ್ರಕಾಂತ್ ನಾಗಸಮುದ್ರ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು. ಮೊಳಕಾಲ್ಮೂರು ತಾಲ್ಲೂಕು ಚಿಕ್ಕೋಬನಹಳ್ಳಿಯ ಮುರಾರ್ಜಿ ಮತ್ತು ತಂಡದವರು ಗೀತಗಾಯನ ನಡೆಸಿಕೊಟ್ಟರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
