By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ಮೋಡ ಮುಸುಕಿದ ವಾತಾವರಣ | ಮೆಕ್ಕೆಜೋಳಕ್ಕೆ ಲದ್ದಿ ಹುಳು ಕಾಟ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ಮೋಡ ಮುಸುಕಿದ ವಾತಾವರಣ | ಮೆಕ್ಕೆಜೋಳಕ್ಕೆ ಲದ್ದಿ ಹುಳು ಕಾಟ

ಮುಖ್ಯ ಸುದ್ದಿ

ಮೋಡ ಮುಸುಕಿದ ವಾತಾವರಣ | ಮೆಕ್ಕೆಜೋಳಕ್ಕೆ ಲದ್ದಿ ಹುಳು ಕಾಟ

News Desk Chitradurga News
Last updated: 21 June 2024 14:55
News Desk Chitradurga News
1 year ago
Share
laddi hulu
ಮೆಕ್ಕೆಜೋಳದ ಎಲೆಗಳ ರಸ ಹೀರಿರುವ ಲದ್ದಿ ಹುಳು
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 21 JUNE 2024
ಚಿತ್ರದುರ್ಗ: ಬರದಿಂದ ಕಂಗಲಾಗಿದ್ದ ರೈತರು ಕೆಲ ದಿನಗಳಿಂದ ಬರುತ್ತಿರುವ ಮಳೆಯಿಂದ ಸಂತಸಗೊಂಡು ಬಿತ್ತನೆ ಕಾರ್ಯ ಪ್ರಾರಂಭಿಸಿದ್ದಾರೆ. ಆದರೆ ಕೆಲ ಭಾಗದಲ್ಲಿ ಮುಂಚಿತವಾಗಿಯೇ ಬಿತ್ತನೆ ಮಾಡಿದ್ದ ಮೆಕ್ಕೆಜೋಳದ ಪೈರಿಗೆ ಲದ್ದಿ ಹುಳು ರೋಗ ಬಾಧೆ ತಟ್ಟಿದೆ.
ಭರಮಸಾಗರ ಹೋಬಳಿ ವ್ಯಾಪ್ತಿಯಲ್ಲಿ ಮಳೆ ಉತ್ತಮವಾಗಿದ್ದರಿಂದ ಮುಂಚಿತವಾಗಿಯೇ ಮೆಕ್ಕೆಜೋಳ ಬಿತ್ತನೆ ಮಾಡಲಾಗಿತ್ತು. ಇದೀಗ ಬೆಳೆಗೆ ಹುಳ ಕಾಟ ಶುರುವಾಗಿದೆ.

ಸಿರಿಗೆರೆ ಸುತ್ತಲಿನ ಹಲವು ಹಳ್ಳಿಗಳಲ್ಲಿ ಬಿತ್ತನೆಯಾಗಿರುವ ಮೆಕ್ಕೆಜೋಳದ ಜಮೀನುಗಳಿಗೆ ಕೃಷಿ ಅಧಿಕಾರಿ ಎಚ್.‌ಎಸ್.‌ ವನಜಾಕ್ಷಿ ಮತ್ತು ತಂಡ ಬುಧವಾರ ಭೇಟಿ ನೀಡಿ ರೋಗವನ್ನು ದೃಢೀಕರಿಸಿದ್ದಾರೆ. ಹೊಲದಲ್ಲಿ ಮೆಕ್ಕೆಜೋಳ ಬೆಳೆಯಲ್ಲಿ ಎಲೆ ಮತ್ತು ಸುಳಿಯನ್ನು ತಿನ್ನುವ ಹುಳುಗಳು ಕಾಣಿಸಿಕೊಂಡಿವೆ. ಇದನ್ನು ವೈಜ್ಞಾನಿಕವಾಗಿ ಸ್ಫೋಡಾಫ್ಟರಾ ಫ್ಯೂಜಿಫಡಾ ಎಂದು ಕರೆಯಲಾಗುತ್ತದೆ. ಈ ಹುಳುಗಳ ಜೊತೆಗೆ ಇತರೆ ಕಾಂಡ ಕೊರಕ ಬಾಧೆಯೂ ಕಂಡುಬಂದಿದೆ.

ಕ್ಲಿಕ್ ಮಾಡಿ ಓದಿ: ರಾಜ್ಯಮಟ್ಟದ ಭೋವಿ ಜನೋತ್ಸವ 18ಕ್ಕೆ | ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ

ತಾಲ್ಲೂಕಿನಲ್ಲಿ ಮೋಡ ಮುಸುಕಿದ ವಾತಾವರಣವಿದ್ದು, ಕಡಿಮೆ ಉಷ್ಣಾಂಶ ಮತ್ತು ಹೆಚ್ಚಿನ ಆದ್ರತೆಯ ವಾತಾವರಣ ಈ ರೋಗ ಉಲ್ಬಣಿಸಲು ಕಾರಣವಾಗುತ್ತದೆ. ಹೆಚ್ಚು ಪ್ರಮಾಣದಲ್ಲಿ ಮಳೆ ಬಂದರೆ ಈ ರೋಗ ತಾನಾಗಿ ನಿಯಂತ್ರಣಕ್ಕೆ ಬರುತ್ತದೆ. ಮಳೆ ಕಡಿಮೆ ಆದಲ್ಲಿ ಈ ರೋಗ ಕಂಡುಬರುವ ಜಮೀನಿನ ರೈತರು ಬಿತ್ತನೆ ಮಾಡಿದ 15–20 ದಿನಗಳಲ್ಲಿ ಮೆಟರೀಜಿಯಂ ಅನಿಸೋಷ್ಠಿಯೆ 5 ಗ್ರಾಂ ಪ್ರತಿ ಲೀಟರ್‌ ನೀರಿಗೆ ಸೇರಿಸಿ ಸುಳಿಗೆ ಸಿಂಪಡಿಸಬೇಕು ಎಂದು ವನಜಾಕ್ಷಿ ತಿಳಿಸಿದರು.

ಕ್ಲಿಕ್ ಮಾಡಿ ಓದಿ: ಕಲ್ಲು ಗಣಿ ಗುತ್ತಿಗೆ ಮಂಜೂರಾತಿಗೆ 160 ಅರ್ಜಿ ಬಾಕಿ| ಜಿಲ್ಲಾಧಿಕಾರಿ ಟಿ.ವೆಂಕಟೇಶ್‌

ರೈತರು ತಮ್ಮ ಜಮೀನುಗಳಲ್ಲಿ ದೀರ್ಘಕಾಲದಿಂದ ಒಂದೇ ಬೆಳೆಯನ್ನು ಬೆಳೆಯುವ ಪದ್ಧತಿ ಅನುಸರಿಸುತ್ತಿರುವುದೂ ಕೂಡ ಇದಕ್ಕೆ ಕಾರಣವಾಗಿದೆ. ಜಮೀನಿನಲ್ಲಿ ಪ್ರತಿ ವರ್ಷವೂ ಬೇರೆ ಬೇರೆ ಬೆಳೆಗಳನ್ನು ರೂಢಿ ಮಾಡಿಕೊಳ್ಳುವುದು ಅಗತ್ಯ. ಇದರಿಂದ ಭೂಮಿಯ ಫಲವತ್ತತೆಯೂ ಹೆಚ್ಚುತ್ತದೆ ಎಂದು ಹೇಳಿದರು.

ರೈತರಾದ ಬೆನ್ನೂರು ಸತೀಶ್‌, ಪಂಚಾಕ್ಷರಯ್ಯ, ಷಣ್ಮುಖ, ಕೊಟ್ರೇಶ್‌ ಇದ್ದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:AtmosphereBharamasagaraCloudMaizeWorm Forestಭರಮಸಾಗರಮೆಕ್ಕೆಜೋಳಮೋಡವಾತಾವರಣಹುಳು ಕಾಟ
Share This Article
Facebook Email Print
Previous Article bhovi matta ರಾಜ್ಯಮಟ್ಟದ ಭೋವಿ ಜನೋತ್ಸವ 18ಕ್ಕೆ | ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ
Next Article ಲಿಂ. ಜಗದ್ಗುರು ಶ್ರೀ ಮಲ್ಲಿಕಾರ್ಜುನ ಮುರುಘರಾಜೇಂದ್ರ ಮಹಾಸ್ವಾಮಿ ಮಲ್ಲಿಕಾರ್ಜುನ ಜಗದ್ಗುರುಗಳ ಸ್ಮರಣೋತ್ಸವ | ಎಸ್‍ಜೆಎಂ ವಿದ್ಯಾಪೀಠ ಸಂಸ್ಥಾಪನಾ ದಿನಾಚರಣೆಗೆ ತೀರ್ಮಾನ
Leave a Comment

Leave a Reply Cancel reply

Your email address will not be published. Required fields are marked *

ಲಿಫ್ಟ್ ಹತ್ತಿದ ತಕ್ಷಣ ತಲೆ ಸುತ್ತುವವರು ಒಮ್ಮೆ ಈ ವಿಚಾರ ತಿಳಿದಿರಿ
Life Style
ಮಳೆಗಾಲದಲ್ಲಿ ಶೀತ ಮತ್ತು ಕೆಮ್ಮು ಬಂದಾಗ ಏನು ತಿನ್ನಬೇಕು ಮತ್ತು ಏನು ತಿನ್ನಬಾರದು? ಎಂಬುದನ್ನು ತಿಳಿಯಿರಿ
Life Style
ಹೆರಿಗೆಯ ನಂತರ ಬೇಗ ಚೇತರಿಸಿಕೊಳ್ಳಲು ಈ ಲಡ್ಡುಗಳನ್ನು ತಿನ್ನಿರಿ
Life Style
today bhavishya
Astrology: ದಿನ ಭವಿಷ್ಯ | ಜೂನ್ 30 | ಉದ್ಯೋಗಗಳಲ್ಲಿ ಬಡ್ತಿ, ದೂರದ ಪ್ರಯಾಣ, ಆರೋಗ್ಯದಲ್ಲಿ ಎಚ್ಚರ
Dina Bhavishya
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up