CHITRADURGA NEWS | 21 JUNE 2024
ಚಿತ್ರದುರ್ಗ: ಬರದಿಂದ ಕಂಗಲಾಗಿದ್ದ ರೈತರು ಕೆಲ ದಿನಗಳಿಂದ ಬರುತ್ತಿರುವ ಮಳೆಯಿಂದ ಸಂತಸಗೊಂಡು ಬಿತ್ತನೆ ಕಾರ್ಯ ಪ್ರಾರಂಭಿಸಿದ್ದಾರೆ. ಆದರೆ ಕೆಲ ಭಾಗದಲ್ಲಿ ಮುಂಚಿತವಾಗಿಯೇ ಬಿತ್ತನೆ ಮಾಡಿದ್ದ ಮೆಕ್ಕೆಜೋಳದ ಪೈರಿಗೆ ಲದ್ದಿ ಹುಳು ರೋಗ ಬಾಧೆ ತಟ್ಟಿದೆ.
ಭರಮಸಾಗರ ಹೋಬಳಿ ವ್ಯಾಪ್ತಿಯಲ್ಲಿ ಮಳೆ ಉತ್ತಮವಾಗಿದ್ದರಿಂದ ಮುಂಚಿತವಾಗಿಯೇ ಮೆಕ್ಕೆಜೋಳ ಬಿತ್ತನೆ ಮಾಡಲಾಗಿತ್ತು. ಇದೀಗ ಬೆಳೆಗೆ ಹುಳ ಕಾಟ ಶುರುವಾಗಿದೆ.
ಸಿರಿಗೆರೆ ಸುತ್ತಲಿನ ಹಲವು ಹಳ್ಳಿಗಳಲ್ಲಿ ಬಿತ್ತನೆಯಾಗಿರುವ ಮೆಕ್ಕೆಜೋಳದ ಜಮೀನುಗಳಿಗೆ ಕೃಷಿ ಅಧಿಕಾರಿ ಎಚ್.ಎಸ್. ವನಜಾಕ್ಷಿ ಮತ್ತು ತಂಡ ಬುಧವಾರ ಭೇಟಿ ನೀಡಿ ರೋಗವನ್ನು ದೃಢೀಕರಿಸಿದ್ದಾರೆ. ಹೊಲದಲ್ಲಿ ಮೆಕ್ಕೆಜೋಳ ಬೆಳೆಯಲ್ಲಿ ಎಲೆ ಮತ್ತು ಸುಳಿಯನ್ನು ತಿನ್ನುವ ಹುಳುಗಳು ಕಾಣಿಸಿಕೊಂಡಿವೆ. ಇದನ್ನು ವೈಜ್ಞಾನಿಕವಾಗಿ ಸ್ಫೋಡಾಫ್ಟರಾ ಫ್ಯೂಜಿಫಡಾ ಎಂದು ಕರೆಯಲಾಗುತ್ತದೆ. ಈ ಹುಳುಗಳ ಜೊತೆಗೆ ಇತರೆ ಕಾಂಡ ಕೊರಕ ಬಾಧೆಯೂ ಕಂಡುಬಂದಿದೆ.
ಕ್ಲಿಕ್ ಮಾಡಿ ಓದಿ: ರಾಜ್ಯಮಟ್ಟದ ಭೋವಿ ಜನೋತ್ಸವ 18ಕ್ಕೆ | ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ
ತಾಲ್ಲೂಕಿನಲ್ಲಿ ಮೋಡ ಮುಸುಕಿದ ವಾತಾವರಣವಿದ್ದು, ಕಡಿಮೆ ಉಷ್ಣಾಂಶ ಮತ್ತು ಹೆಚ್ಚಿನ ಆದ್ರತೆಯ ವಾತಾವರಣ ಈ ರೋಗ ಉಲ್ಬಣಿಸಲು ಕಾರಣವಾಗುತ್ತದೆ. ಹೆಚ್ಚು ಪ್ರಮಾಣದಲ್ಲಿ ಮಳೆ ಬಂದರೆ ಈ ರೋಗ ತಾನಾಗಿ ನಿಯಂತ್ರಣಕ್ಕೆ ಬರುತ್ತದೆ. ಮಳೆ ಕಡಿಮೆ ಆದಲ್ಲಿ ಈ ರೋಗ ಕಂಡುಬರುವ ಜಮೀನಿನ ರೈತರು ಬಿತ್ತನೆ ಮಾಡಿದ 15–20 ದಿನಗಳಲ್ಲಿ ಮೆಟರೀಜಿಯಂ ಅನಿಸೋಷ್ಠಿಯೆ 5 ಗ್ರಾಂ ಪ್ರತಿ ಲೀಟರ್ ನೀರಿಗೆ ಸೇರಿಸಿ ಸುಳಿಗೆ ಸಿಂಪಡಿಸಬೇಕು ಎಂದು ವನಜಾಕ್ಷಿ ತಿಳಿಸಿದರು.
ಕ್ಲಿಕ್ ಮಾಡಿ ಓದಿ: ಕಲ್ಲು ಗಣಿ ಗುತ್ತಿಗೆ ಮಂಜೂರಾತಿಗೆ 160 ಅರ್ಜಿ ಬಾಕಿ| ಜಿಲ್ಲಾಧಿಕಾರಿ ಟಿ.ವೆಂಕಟೇಶ್
ರೈತರು ತಮ್ಮ ಜಮೀನುಗಳಲ್ಲಿ ದೀರ್ಘಕಾಲದಿಂದ ಒಂದೇ ಬೆಳೆಯನ್ನು ಬೆಳೆಯುವ ಪದ್ಧತಿ ಅನುಸರಿಸುತ್ತಿರುವುದೂ ಕೂಡ ಇದಕ್ಕೆ ಕಾರಣವಾಗಿದೆ. ಜಮೀನಿನಲ್ಲಿ ಪ್ರತಿ ವರ್ಷವೂ ಬೇರೆ ಬೇರೆ ಬೆಳೆಗಳನ್ನು ರೂಢಿ ಮಾಡಿಕೊಳ್ಳುವುದು ಅಗತ್ಯ. ಇದರಿಂದ ಭೂಮಿಯ ಫಲವತ್ತತೆಯೂ ಹೆಚ್ಚುತ್ತದೆ ಎಂದು ಹೇಳಿದರು.
ರೈತರಾದ ಬೆನ್ನೂರು ಸತೀಶ್, ಪಂಚಾಕ್ಷರಯ್ಯ, ಷಣ್ಮುಖ, ಕೊಟ್ರೇಶ್ ಇದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number