
CHITRADURGA NEWS | 13 JANUARY 2025
ಚಿತ್ರದುರ್ಗ: ಸಂಘಟನೆ ಕೊರತೆಯಿರುವುದರಿಂದ ಛಲವಾದಿ ಸಮಾಜವನ್ನು ಬಲಪಡಿಸುವ ಸಂಬಂಧ ನಗರದ ಪ್ರವಾಸಿ ಮಂದಿರದಲ್ಲಿ ಮುಖಂಡರ ಸಭೆ ಜರುಗಿತು.
Also Read: ಡೆಸ್ಟಿನಿ-2025 | 42ನೇ ವರ್ಷದ ಅದ್ದೂರಿ ಉತ್ಸವಕ್ಕೆ ಭರದ ಸಿದ್ಧತೆ | ಮ್ಯೂಸಿಕ್, ರ್ಯಾಪ್, ಡಿಜೆ ಅಬ್ಬರ

ಸಭೆಯಲ್ಲಿ ಮಾತನಾಡಿದ ಛಲವಾದಿ ಮಹಾಸಭಾ ಮಾಜಿ ರಾಜ್ಯಾಧ್ಯಕ್ಷ ಎಸ್.ಕೆ.ಬಸವರಾಜ್, ಮಧ್ಯ ಕರ್ನಾಟಕದಲ್ಲಿ ಛಲವಾದಿ ಸಮಾಜದವರು ವೈಯಕ್ತಿಕ ಪ್ರತಿಷ್ಟೆಯನ್ನು ಬದಿಗಿರಿಸಿ ಜನಾಂಗದ ಹಿತದೃಷ್ಟಿಯಿಂದ ಒಂದಾಗಬೇಕಿದೆ. ಆರ್ಥಿಕ, ಸಾಮಾಜಿಕ, ಶೈಕ್ಷಣಿಕ, ರಾಜಕೀಯವಾಗಿ ನಮ್ಮ ಜನಾಂಗ ಮುಂದೆ ಬರಬೇಕಾಗಿರುವುದರಿಂದ ಎಲ್ಲಾ ಬಣಗಳು ಒಂದಾಗಿ ಸೇರಿದಾಗ ಮಾತ್ರ ಶಕ್ತಿ ಮೂಡಿಸಿದಂತಾಗುತ್ತದೆ.
ರಾಜ್ಯ ಮಟ್ಟದಲ್ಲಿ ಎರಡು ಮೂರು ಸಂಘಟನೆಗಳಾಗಿ ಛಲವಾದಿ ಜನಾಂಗ ಅಲ್ಲಲ್ಲಿ ಚದುರಿರುವುದನ್ನು ಸರಿಪಡಿಸಬೇಕಾಗಿದೆ ಎಂದು ತಿಳಿಸಿದರು.
ದಾವಣಗೆರೆ ಛಲವಾದಿ ಸಮಾಜದ ಜಿಲ್ಲಾಧ್ಯಕ್ಷ ನಿವೃತ್ತ ಎಸ್ಪಿ ಎನ್.ರುದ್ರಮುನಿ ಸಭೆಯಲ್ಲಿ ಮಾತನಾಡಿ, ರಾಜ್ಯಾದ್ಯಂತ ಹರಿದು ಹಂಚಿ ಹೋಗಿರುವ ಛಲವಾದಿ ಜನಾಂಗವನ್ನು ಒಂದು ವೇದಿಕೆಯಡಿ ಕರೆತಂದು ಸಂಘಟಿಸುವ ಅನಿವಾರ್ಯತೆಯಿದೆ. ಹಾಗಾಗಿ ತಮ್ಮ ತಮ್ಮ ವೈಯಕ್ತಿಕ ಭಿನ್ನಾಭಿಪ್ರಾಯಗಳನ್ನು ಬಿಟ್ಟು ಎಲ್ಲರೂ ಒಂದುಗೂಡಬೇಕಿದೆ ಎಂದು ಹೇಳಿದರು.
Also Read: ರೀಲ್ಸ್ ಮಾಡಿ ಬಹುಮಾನ ಗೆಲ್ಲಿ | ಪೊಲೀಸ್ ಇಲಾಖೆಯ ಪ್ರಕಟಣೆ
ಚಿತ್ರದುರ್ಗ ಜಿಲ್ಲಾ ಛಲವಾದಿ ಸಮಾಜದ ಮುಖಂಡ ಹೆಚ್.ಸಿ.ನಿರಂಜನಮೂರ್ತಿ ಮಾತನಾಡಿ, ಛಲವಾದಿ ಸಮಾಜದ ಚದುರುವುದು ಬೇಡ, ಸಂಘಟನೆಗಳ ಜೊತೆ ಚರ್ಚಿಸಿ ಒಂದುಗೂಡಿಸುವ ಪ್ರಯತ್ನ ಮಾಡಬೇಕಿದೆ. ಆಗ ಮಾತ್ರ ಛಲವಾದಿ ಜನಾಂಗದ ಸಮಾಜದ ಮುಖ್ಯವಾಹಿನಿಗೆ ಬರಲು ಸಾಧ್ಯ ಎಂದು ಹೇಳಿದರು.
ಸಭೆಯಲ್ಲಿ ಚನ್ನಗಿರಿ ನಾಗರಾಜ್, ಸೋಮಶೇಖರ್ ಹೊಸಮನೆ, ನ್ಯಾಯವಾದಿ ಹೆಚ್.ಅಣ್ಣಪ್ಪಸ್ವಾಮಿ, ಎಸ್.ಎನ್.ರವಿಕುಮಾರ್, ದಯಾನಂದ, ಭಾರ್ಗವಿ ದ್ರಾವಿಡ್, ಜಯರಾಂ, ಪಿಲ್ಲಾಳಿ ಪರಮೇಶ್ವರ್, ರಂಗಸ್ವಾಮಿ ಸೇರಿದಂತೆ ಮುಖಂಡರು ಇದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
