
CHITRADURGA NEWS | 27 AUGUST 2024
ಚಿತ್ರದುರ್ಗ: ಹೊಳಲ್ಕೆರೆ ರಸ್ತೆಯ ಶ್ರೀಕೃಷ್ಣ ಯಾದವ ಮಠದ ಹಿಂಭಾಗದಲ್ಲಿರುವ ಗುಡ್ಡದ ಬಂಡೆಯ ನಡುವೆ ಚಿರತೆ(leopard)ಯೊಂದು ಆರಾಮವಾಗಿ ಮಲಗಿ ರಸ್ತೆಯಲ್ಲಿ ಓಡಾಡುತ್ತಿದ್ದ ಜನ, ವಾಹನಗಳನ್ನು ನೋಡುತ್ತಿದ್ದ ದೃಶ್ಯ ಸಂಜೆ ಸಾರ್ವಜನಿಕರ ಕಣ್ಣಿಗೆ ಬಿದ್ದಿದೆ.
ರಸ್ತೆಯಲ್ಲಿ ಹೋಗುತ್ತಿದ್ದ ಯಾರದ್ದೋ ಕಣ್ಣಿಗೆ ಬಿದ್ದ ಚಿರತೆ ನೋಡಲು ಜನ ವಾಹನಗಳನ್ನು ಬದಿಗೆ ನಿಲ್ಲಿಸಿ ಕುತೂಹಲದಿಂದ ಬರುತ್ತಿದ್ದರು.
ಕ್ಲಿಕ್ ಮಾಡಿ ಓದಿ: Village Assistant; ಗ್ರಾಮ ಸಹಾಯಕರ ಹುದ್ದೆ | ಅರ್ಜಿ ಆಹ್ವಾನ
ಇನ್ನೂ ಹಾಡಹಗಲೇ ನಗರದ ಸಮೀಪದಲ್ಲೇ ಚಿರತೆ ಪ್ರತ್ಯಕ್ಷವಾಗಿದ್ದನ್ನ ಕಂಡು, ಚಿರತೆ ನೋಡಲು ಜನ ಮುಗಿ ಬಿದ್ದಿದ್ದಾರೆ. ಇನ್ನೂ ಚಿರತೆ ಕಾಣಿಸಿಕೊಂಡ ಬೆನ್ನಲ್ಲೇ ಸುತ್ತಮುತ್ತಲಿನ ಬಡಾವಣೆ ನಿವಾಸಿಗಳಲ್ಲಿ ಆತಂಕ ಮನೆ ಮಾಡಿದೆ.
ಹೊಳಲ್ಕೆರೆ ರಸ್ತೆಯಲ್ಲಿ ಓಡಾಟ ಮಾಡುವ ವಾಹನ ಸವಾರರಲ್ಲೂ ಕೂಡಾ ಚಿರತೆ ಭಯ ಮೂಡಿಸಿದೆ.
ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಿ, ಚಿರತೆ ಸೆರೆಗೆ ಮುಂದಾಗಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
