
CHITRADURGA NEWS | 03 APRIL 2025
ಚಿತ್ರದುರ್ಗ: ನಗರದ ಪ್ರವಾಸಿತಾಣವಾದ ಕೋಟೆಯಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು, ಪ್ರವಾಸಿಗರಲ್ಲಿ ಆತಂಕ ಮೂಡಿಸಿದೆ.
Also Read: ವಿದ್ಯುತ್ ಶಾಕ್ | ತಾಯಿ, ಮಗು ಸಾವು
ಇಂದು ಸಂಜೆ 5.45ಕ್ಕೆ ಕೋಟೆ ಮಾರ್ಗದರ್ಶಿ ಮೊಹಿದ್ದೀನ್ ಖಾನ್ ಬಸವರಾಜ್, ಪರಶುರಾಮ್ ಮತ್ತು ಪ್ರವಾಸಿಗರಿಗೆ ಚಿರತೆ ಕಂಡಿದೆ.
ಸಂಜೆ 5.50 ಕ್ಕೆ ಗಂಗಾವತಿಯ ಪ್ರವಾಸಿಗರು ಟಿಕೆಟ್ ಪಡೆದು ಸುಮಾರು 50 ಜನರ ತಂಡ ಕೋಟೆ ನೋಡಲು ಮೇಲೆ ಹತ್ತುತ್ತಿರುವಾಗ, ಕೋಟೆಯ 6 ನೇ ಸುತ್ತಿನ ಬಾಗಿಲು ಮೇಲೆ ಹೊಸದಾಗಿ ನಿರ್ಮಾಣ ವಾಗಿರುವ ಟಾಯಿಲೆಟ್ ಮೇಲಿನ ಹೆಬ್ಬoಡೆ ಮೇಲೆ ಕೂತು ಜನರನ್ನು ದಿಟ್ಟಿಸುತ್ತಿತ್ತು.
Also Read: ರಾಷ್ಟ್ರೀಯ ಹೆದ್ದಾರಿ ಯೋಜನೆ | ನಿಗಧಿತ ಅವಧಿಯೊಳಗೆ ಪೂರ್ಣಗೊಳಿಸಿ | ಸಂಸದ ಗೋವಿಂದ ಕಾರಜೋಳ
ಅದನ್ನು ಕಂಡ ಪ್ರವಾಸಿಗರು ಮೇಲಿಂದ ಓಡಿ ಬಂದು ಚಿರತೆ ತೋರಿಸಿದರು. ಸುಮಾರು 1 ರಿಂದ 2 ಗಂಟೆಗಳ ಕಾಲ ಅಲ್ಲೇ ಕೂತು ಓಡಿ ಹೋಯಿತು ಎಂದು ಹಿರಿಯ ಪ್ರವಾಸಿ ಮಾರ್ಗದರ್ಶಿ ಬಿ.ಮೊಹಿದ್ದೀನ್ ಖಾನ್ ತಿಳಿಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
