
CHITRADURGA NEWS | 04 DECEMBER 2025
ಚಿತ್ರದುರ್ಗ: ಸುಂದರವಾಗಿರಬೇಕಾದ ದಾಂಪತ್ಯದಲ್ಲಿ ಅನುಮಾನದ ಸುಳಿ ಬಂದು ಬಿರುಗಾಳಿ ಎದ್ದ ಪರಿಣಾಮ ಇಡೀ ಕುಟುಂಬ ನರಕ ಅನುಭವಿಸುವಂತಾಗಿದೆ.
ಹೌದು, ಚಳ್ಳಕೆರೆ ತಾಲೂಕು ಸೋಮಗುದ್ದು ಗ್ರಾಮದಲ್ಲಿ ಪತ್ನಿಯ ಶೀಲ ಶಂಕಿಸಿ ಗಲಾಟೆ ಮಾಡಿ, ಗಲಾಟೆ ವಿಕೋಪಕ್ಕೆ ಹೋಗಿ ಕೋಪದ ಕೈಗೆ ಬುದ್ದಿ ಕೊಟ್ಟ ಪತಿರಾಯ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದಾನೆ.

ಇದನ್ನೂ ಓದಿ:ಹಿರಿಯೂರು ತಾಲೂಕಿನಲ್ಲಿ ಬೆಳೆ ವಿಮೆ ನೋಂದಣಿ ಪ್ರಾರಂಭ
ಸುಮಾರು 12 ವರ್ಷಗಳ ಹಿಂದೆ ಮದುವೆಯಾಗಿದ್ದ ಸೋಮಗುದ್ದು ಗ್ರಾಮದ ದ್ಯಾಮೇಶ ಹಾಗೂ ಕೆರೆಯಾಗಲಹಳ್ಳಿ ಗ್ರಾಮದ ನೇತ್ರಾವತಿಗೆ ಇಬ್ಬರು ಮುದ್ದು ಮಕ್ಕಳಿದ್ದರು.
ಆದರೆ, ಕಳೆದ ಐದಾರು ವರ್ಷಗಳಿದಂ ಪತ್ನಿ ಬೇರೆಯವರ ಜೊತೆ ಮಾತನಾಡುತ್ತಾಳೆ ಎಂಬ ಶಂಕೆಯಿಂದ ಶುರುವಾದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿದೆ.
ಇದನ್ನೂ ಓದಿ: ಡಿಸೆಂಬರ್ 07 ರಂದು ಶಿಕ್ಷಕರ ಅರ್ಹತಾ ಪರೀಕ್ಷೆ | 12,813 ಅಭ್ಯರ್ಥಿಗಳ ನೊಂದಣಿ
ಪತ್ನಿಯ ಶೀಲ ಶಂಕಿಸಿ ಕೊಲೆ ಮಾಡಿದ್ದ ಆರೋಪಿಗೆ ದ್ಯಾಮೇಶನಿಗೆ ಚಿತ್ರದುರ್ಗ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ಹಾಗೂ 2.10 ಲಕ್ಷ ರೂ ದಂಡ ವಿಧಿಸಿ ಆದೇಶ ನೀಡಿದೆ.
ಪತಿ ದ್ಯಾಮಣ್ಣ ಪದೇ ಪದೇ ಪತ್ನಿಯ ಶೀಲ ಶಂಕಿಸಿ ಜಗಳವಾಡುತ್ತಿದ್ದ. ದ್ಯಾಮಣ್ಣನ ಕುಟುಂಂಬದವರು ಮಾನಸಿಕ ಕಿರುಕುಳ ನೀಡುತ್ತಿದ್ದರು. ಈ ಸಂಬಂಧ ನೇತ್ರಾವತಿ ಕುಟುಂಬದವರು ಬಂದು ರಾಜಿ ಪಂಚಾಯಿತಿ ಮಾಡಿ ಹೋಗಿದ್ದರು.
ಇದನ್ನೂ ಓದಿ: ಮುರುಘಾ ಮಠದಲ್ಲಿ ಮಾದಾರ ಚೆನ್ನಯ್ಯ ಜಯಂತಿ | ಜಾತಿ ಮೂಲಕ ವ್ಯಕ್ತಿತ್ವ ಗುರುತಿಸುವುದು ಸಲ್ಲ
ಇದರಿಂದ ಕುಪಿತಗೊಂಡಿದ್ದ ದ್ಯಾಮಣ್ಣ, 2022 ಏಪ್ರಿಲ್ 14 ರಂದು ಪತ್ನಿ ನೇತ್ರಾವತಿಯೊಂದಿಗೆ ಜಮೀನಿಗೆ ಹೋಗಿದ್ದಾಗ ಜಗಳವಾಗಿ ಮಚ್ಚಿನಿಂದ ಕುತ್ತಿಗೆಗೆ ಹಲ್ಲೆ ನಡೆಸಿ ಕೊಲೆ ಮಾಡಿದ್ದಾಗಿ ಚಳ್ಳಕೆರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.
ಪ್ರಕರಣದ ತನಿಖೆ ನಡೆಸಿದ ಇನ್ಸ್ಪೆಕ್ಟರ್ ಜಿ.ಎಸ್.ತಿಪ್ಪೇಸ್ವಾಮಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.
ಇದನ್ನೂ ಓದಿ:
ಪ್ರಕರಣದ ವಿಚಾರಣೆ ನಡೆಸಿದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ರೋಣ ವಾಸುದೇವ ಅವರು, ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಆರೋಪಿಗೆ ಜೀವಾವಧಿ ಶಿಕ್ಷೆ ಹಾಗೂ 2.10 ಲಕ್ಷ ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ದಂಡದ ಮೊತ್ತದಲ್ಲಿ ಇಬ್ಬರು ಮಕ್ಕಳಿಗೆ ತಲಾ ಒಂದು ಲಕ್ಷ ರೂ. ಹಾಗೂ ಸರ್ಕಾರಕ್ಕೆ ಹತ್ತು ಸಾವಿರ ಪಾವತಿಸುವಂತೆ ಆದೇಶಿಸಿದ್ದಾರೆ.
ಸರ್ಕಾರದ ಪರವಾಗಿ ಪ್ರಧಾನ ಸರ್ಕಾರಿ ಅಭಿಯೋಜಕ ಎನ್.ಎಸ್.ಮಲ್ಲಯ್ಯ ವಿಚಾರಣೆ ನಡೆಸಿ ವಾದ ಮಂಡನೆ ಮಾಡಿದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
