
CHITRADURGA NEWS | 09 JULY 2026
ಚಿತ್ರದುರ್ಗ: ಭದ್ರಾ ಜಲಾಶಯದಿಂದ ನೀರನ್ನು ಲಿಫ್ಟ್ ಮಾಡಿ, ತುಮಕೂರು ಶಾಖಾ ಕಾಲುವೆ ಮೂಲಕ ವಿವಿ ಸಾಗರ ಜಲಾಶಯಕ್ಕೆ ಹರಿಸುವಂತೆ ನೀರಾವರಿ ಅನುಷ್ಠಾನ ಹೋರಾಟ ಸಮಿತಿ ಕಾರ್ಯಾಧ್ಯಕ್ಷ ಬಿ.ಎ.ಲಿಂಗಾರೆಡ್ಡಿ ಆಗ್ರಹಿಸಿದ್ದಾರೆ.
ಇದನ್ನೂ ಓದಿ: SIR ಸಂಬಂಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಜೊತೆ ಡಿಸಿ ಸಭೆ | ಮತದಾರರ ಪಟ್ಟಿ ನಿಖರತೆಗೆ ಸಹಕರಿಸಿ
ಮುಂಗಾರು ವೈಫಲ್ಯದಿಂದಾಗಿ ಭದ್ರಾ ಜಲಾಶಯದಲ್ಲಿ ನೀರಿನ ಸಂಗ್ರಹ ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗಿತ್ತು. ಇಪ್ಪತ್ತು ದಿನಗಳ ಹಿಂದೆ ನೀರಿನ ಮಟ್ಟ 134 ಅಡಿಗೆ ಇಳಿದಿತ್ತು. ಆದರೆ ಕಳೆದ ವಾರದಿಂದ ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆಯಾಗುತ್ತಿರುವುದರಿಂದ ಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ.
ಜುಲೈ 9 ರ ಗುರುವಾರ ಜಲಾಶಯದ ನೀರಿನ ಮಟ್ಟ 144 ಅಡಿ ದಾಟಿದ್ದು, ಒಳ ಹರಿವು 16 ಸಾವಿರ ಕ್ಯೂಸೆಕ್ಸ್ ನಷ್ಟಿದೆ. ಇನ್ನೂ ಮಳೆ ಬರುತ್ತಿರುವುದರಿಂದ ಭದ್ರಾ ಜಲಾಶಯ ಭರ್ತಿಯಾಗುವ ಸಾಧ್ಯತೆ ಹೆಚ್ಚಾಗಿವೆ.
ಭದ್ರಾ ಜಲಾಶಯದ ಒಟ್ಟಾರೆ ನೀರಿನ ಸಂಗ್ರಹ 71 ಟಿಎಂಸಿ. ಜಲಾಶಯದ ಗರಿಷ್ಟ ನೀರಿನ ಸಂಗ್ರಹ 186 ಅಡಿ. ಭದ್ರಾ ಮೇಲ್ದಂಡೆಗಾಗಿ 12.50 ಟಿಎಂಸಿ ನೀರನ್ನು ಜಲಾಶಯದಿಂದ ಹಂಚಿಕೆ ಮಾಡಲಾಗಿದೆ. ಭದ್ರಾ ಜಲಾಶಯದ ನೀರಿನ ಗರಿಷ್ಟ ಮಟ್ಟ 186 ಅಡಿಗಳಷ್ಟಿದ್ದರೆ ಭದ್ರಾ ಮೇಲ್ದಂಡೆ ಯೋಜನೆಗಾಗಿ ನೀರನ್ನು ಡ್ರಾ ಮಾಡುವ ಪಾಯಿಂಟನ್ನು 144 ಅಡಿಗೆ ಸೀಮಿತಗೊಳಿಸಲಾಗಿದೆ. ಅಂದರೆ ಭದ್ರಾ ಜಲಾಶಯದಲ್ಲಿ 144 ಅಡಿಗಳಿಗೆ ಮೇಲ್ಪಟ್ಟು ನೀರಿದ್ದರೆ ಮಾತ್ರ ಭದ್ರಾ ಮೇಲ್ಡಂಡೆಗೆ ಪಡೆಯುವ ಸಾಧ್ಯತೆಗಳಿವೆ. ಈ ರೀತಿ ಡಿಸೈನ್ ಮಾಡಿ ನೀರನ್ನು ಡ್ರಾ ಮಾಡಲಾಗುತ್ತದೆ.
ಇದನ್ನೂ ಓದಿ: ನನ್ನ ಮೇಲಿನ ಆರೋಪ ಸತ್ಯಕ್ಕೆ ದೂರ | ಕಾರೇಹಳ್ಳಿ ಉಲ್ಲಾಸ್ ಸ್ಪಷ್ಟನೆ
ಜಲಾಶಯದಲ್ಲಿ ನೀರಿನ ಸಂಗ್ರಹ 144 ಅಡಿ ದಾಟಿರುವುದರಿಂದ ಭದ್ರಾ ಮೇಲ್ದಂಡೆಗೆ ನೀರನ್ನು ಲಿಫ್ಟ್ ಮಾಡಲು ಯಾವುದೇ ತೊಂದರೆಗಳಿಲ್ಲ. ಚಿತ್ರದುರ್ಗ ಶಾಖಾ ಕಾಲುವೆ ಕಾಮಗಾರಿ ಪೂರ್ಣಗೊಳ್ಳದೇ ಇರುವುದರಿಂದ ಇಲ್ಲಿ ನೀರು ಹರಿಸಲು ಸಾಧ್ಯವಿಲ್ಲ. ಆದರೆ ತುಮಕೂರು ಬ್ರಾಂಚ್ ಕಾಲುವೆ ಮೂಲಕ ನೀರು ಹರಿಸಲು ಯಾವುದೇ ತೊಂದರೆಗಳಿಲ್ಲ.
ಚಿತ್ರದುರ್ಗ ಶಾಖಾ ಕಾಲುವೆ ಕಾಮಗಾರಿ ಪೂರ್ಣಗೊಳ್ಳುವ ತನಕ ವಿವಿ ಸಾಗರ ಜಲಾಶಯಕ್ಕೆ ನೀರು ಹಾಯಿಸಬೇಕೆಂದು ಸಮಿತಿ ಆಗ್ರಹಿಸುತ್ತದೆ.
ವಿವಿ ಸಾಗದ ಜಲಾಶಯದ ಗುರುವಾರದ ನೀರಿನ ಸಂಗ್ರಹ 122 ಅಡಿಗಳಷ್ಟಿದೆ. ಅಂದರೆ ಜಲಾಶಯ ಭರ್ತಿಗೆ ಹದಿಮೂರು ಅಡಿ ಬಾಕಿ ಇದೆ. ಮಳೆಗಾಲದಲ್ಲಿ ಈ ಜಲಾಶಯಕ್ಕೆ ಇದುವರೆಗೂ ಒಂದು ಬೊಗಸೆ ಒಳಹರಿವು ಬಂದಿಲ್ಲ.ಹಾಗಾಗಿ ಭದ್ರಾ ಮೇಲ್ದಂಡೆಯಡಿ ಕನಿಷ್ಟ ಎರಡು ತಿಂಗಳು ನೀರು ಲಿಫ್ಟ್ ಮಾಡಿದರೆ ನಾಲ್ಕು ಟಿಎಂಸಿ ಯಷ್ಟು ಸಂಗ್ರಹವಾಗುತ್ತದೆ. ಭವಿಷ್ಯದ ಆತಂಕ ನಿವಾರಣೆಯಾಗುತ್ತದೆ.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಜುಲೈ 09 | ಹತ್ತಿ ರೇಟ್ ಎಷ್ಟಿದೆ?
ಹಾಲಿ ಮುಂಗಾರು ಹಂಗಾಮಿನಲ್ಲಿ ನೀರು ಪಡೆಯಲು ಯಾವುದೇ ಅಡ್ಡಿ ಇಲ್ಲ. ಯಾವ ರೈತರ ವಿರೋಧವೂ ಇಲ್ಲ. ಜಲ ಸಂಪನ್ಮೂಲ ಇಲಾಖೆ ಉನ್ನತ ಅಧಿಕಾರಿಗಳು ತಕ್ಷಣವೇ ಭದ್ರಾ ಜಲಾಶಯದಿಂದ ನೀರು ಲಿಫ್ಟ ಮಾಡಿ ತುಮಕೂರು ಶಾಖಾ ಕಾಲುವೆ ಮೂಲಕ ವಿವಿ ಸಾಗರಕ್ಕೆ ಹಾಯಿಸಬೇಕು ಎಂದು ನೀರಾವರಿ ಅನುಷ್ಠಾನ ಹೋರಾಟ ಸಮಿತಿ ಕಾರ್ಯಾಧ್ಯಕ್ಷ ಬಿ.ಎ.ಲಿಂಗಾರೆಡ್ಡಿ ಒತ್ತಾಯಿಸಿದ್ದಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

