By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ಸಂವಿಧಾನದಿಂದ ಬದುಕು ನೆಮ್ಮದಿ | ಹರಿಹರಪುರದ ಸ್ವಯಂಪ್ರಕಾಶ ಸಚ್ಚಿದಾನಂದ ಸರಸ್ವತಿ ಸ್ವಾಮೀಜಿ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ಸಂವಿಧಾನದಿಂದ ಬದುಕು ನೆಮ್ಮದಿ | ಹರಿಹರಪುರದ ಸ್ವಯಂಪ್ರಕಾಶ ಸಚ್ಚಿದಾನಂದ ಸರಸ್ವತಿ ಸ್ವಾಮೀಜಿ

ಮುಖ್ಯ ಸುದ್ದಿ

ಸಂವಿಧಾನದಿಂದ ಬದುಕು ನೆಮ್ಮದಿ | ಹರಿಹರಪುರದ ಸ್ವಯಂಪ್ರಕಾಶ ಸಚ್ಚಿದಾನಂದ ಸರಸ್ವತಿ ಸ್ವಾಮೀಜಿ

News Desk Chitradurga News
Last updated: 18 March 2024 08:54
News Desk Chitradurga News
1 year ago
Share
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 17 MARCH 2024
ಚಿತ್ರದುರ್ಗ: ದೇಶದಲ್ಲಿ ಪ್ರತಿಯೊಬ್ಬರು ನೆಮ್ಮದಿಯಿಂದ ಬದುಕುಬೇಕಾದರೇ ಸಂವಿಧಾನದ ಚೌಕಟ್ಟು ಬೇಕು. ಸಂವಿಧಾನಕ್ಕೆ ದೇಶದ ಪ್ರತಿಯೊಬ್ಬರೂ ಗೌರವ ನೀಡಬೇಕಾದ ಅಗತ್ಯತೆ ಇದೆ ಹರಿಹರಪುರದ ಸ್ವಯಂಪ್ರಕಾಶ ಸಚ್ಚಿದಾನಂದ ಸರಸ್ವತಿ ಸ್ವಾಮೀಜಿ ತಿಳಿಸಿದರು.

ನಗರದ ಕರುವಿನಕಟ್ಟೆ ವೃತ್ತದ ಲಕ್ಷ್ಮಿನರಸಿಂಹಸ್ವಾಮಿ ದೇವಸ್ಥಾನದಲ್ಲಿ ಭಾನುವಾರ ಆಯೋಜಿಸಿದ್ದ ಷಢಾದಾರ ಪ್ರತಿಷ್ಠಾಪನೆ ಹಾಗೂ ಭೂಮಿ ಪೂಜೆ ಕಾರ್ಯಕ್ರಮದ ಸಾನಿಧ್ಯ ವಹಿಸಿ ಮಾತನಾಡಿದ ಅವರು, ‘ಪರಸ್ಪರ ಸಹಬಾಳ್ವೆ ನಡೆಸಲು ಸಂವಿಧಾನ ಸಹಕಾರಿಯಾಗಿದೆ. ಮನುಷ್ಯ ಬದುಕಿರುವವರಿಗೂ ಸಂವಿಧಾನ ಅಗತ್ಯ ಇದ್ದೇ ಇರುತ್ತದೆ’ ಎಂದರು.

ಕ್ಲಿಕ್ ಮಾಡಿ ಓದಿ: https://chitradurganews.com/police-security-at-47-check-posts/

‘ಭಕ್ತಿ ನಿಜವಾದ ಸಂಪತ್ತಾಗಬೇಕಾದರೆ ಅಂತರಂಗ ಶುದ್ದವಾಗಿರಬೇಕು. ಲೋಕದ ಹಿತ ಕಲ್ಯಾಣಕ್ಕಾಗಿ ಭಗವಂತ ಭೂಮಿಗೆ ಬಂದ. ಕಾಲ ಕಾಲಕ್ಕೆ ತಕ್ಕಂತೆ ಭಗವಂತ ಅವತಾರ ತಾಳಿ ಸಾಕಾರ ಸ್ವರೂಪನಾಗಿರುತ್ತಾನೆ. ಭಕ್ತಿ ಮಾರ್ಗ, ಯೋಗ ಮಾರ್ಗ, ಜ್ಞಾನ ಮಾರ್ಗದ ಮೂಲಕ ಭಗವಂತನನ್ನು ಕಾಣಬಹುದು. ಎಲ್ಲಾ ಜೀವಿಗಳಲ್ಲಿರುವ ಮೂಲಭೂತ ಅಂಶವೆಂದರೆ ಚೈತನ್ಯ, ಜೀವ ಜಗತ್ತನ್ನು ನಿಯಂತ್ರಿಸುವ ಮಹಾ ಚೇತನವೆಂದರೆ ಭಗವಂತ’ ಎಂದು ತಿಳಿಸಿದರು.

‘ವಿಜ್ಞಾನ ಮುಂದಿಟ್ಟುಕೊಂಡು ತತ್ವಜ್ಞಾನ ಹರಿಸಬೇಕಿದೆ. ಭಕ್ತರ ಮಾತನ್ನು ಸತ್ಯಗೊಳಿಸಲು ಭಗವಂತ ನರಸಿಂಹಾವತಾರವಾಗುತ್ತಾನೆ. ಪ್ರತಿಯೊಬ್ಬ ಮಾನವನ ಕಷ್ಟ-ಸುಖಗಳಿಗೆ ಕರ್ಮವೆ ಕಾರಣ. ಅದಕ್ಕಾಗಿ ದೇವರನ್ನು ದೂಷಿಸಬಾರದು. ಸಂವಿಧಾನದ ಮೇಲೆ ಗೌರವವಿರಬೇಕು. ದೇವರಲ್ಲಿ ಶುದ್ದ ಭಕ್ತಿಯಿಟ್ಟುಕೊಳ್ಳಬೇಕು’ ಎಂದರು.

ಕ್ಲಿಕ್ ಮಾಡಿ ಓದಿ: Chitradurganews.com/sslc-exam-from-march-25/

ಕಬೀರಾನಂದಾಶ್ರಮದ ಶಿವಲಿಂಗಾನಂದ ಸ್ವಾಮೀಜಿ ಮಾತನಾಡಿ, ‘ದೇವಸ್ಥಾನ ಕಟ್ಟುವುದು ಸುಲಭವಲ್ಲ ಪ್ರಯತ್ನ ಮಾಡಿದರೆ ಎಲ್ಲವೂ ಸಾಧ್ಯ. ಒಂದು ಕಾಲದಲ್ಲಿ ಚಹ ಮಾರುತ್ತಿದ್ದ ಹುಡುಗ ಈಗ ದೇಶದ ಪ್ರಧಾನಿಯಾಗಿ ದೇಶ ಕಟ್ಟುವ ಕೆಲಸ ಮಾಡುತ್ತಿಲ್ಲವೇ? ಕಠಿಣ ಪರಿಶ್ರಮ ಮನಸ್ಸಿದ್ದರೆ ಯಾವುದೂ ಅಸಾಧ್ಯವಲ್ಲ’ ಎಂದು ಹೇಳಿದರು.

ದೇವಾಲಯ ಸಂವರ್ಧನಾ ಸಮಿತಿ ರಾಜ್ಯ ಸಂಯೋಜಕ ಮನೋಹರ್ ಮಠದ್ ಮಾತನಾಡಿ, ‘ದೇವರು ಸರ್ವಾಂತರ್‍ಯಾಮಿ. ಪ್ರತಿಯೊಬ್ಬರು ಸನ್ಮಾರ್ಗ ಸತ್ಯದ ದಾರಿಯಲ್ಲಿ ನಡೆಯಬೇಕು. ಅಸತ್ಯದಿಂದ ಸತ್ಯದ ಕಡೆಗೆ, ಕತ್ತೆಲೆಯಿಂದ ಬೆಳಕಿನೆಡೆಗೆ ಹೋಗಲು ದೇವಸ್ಥಾನ ಬೇಕು. ಇಡಿ ಸಮಾಜವನ್ನು ಒಂದು ಮಾಡುವುದಕ್ಕೆ ಓಂಕಾರ್ ದೇವಸ್ಥಾನ ಜೀರ್ಣೋದ್ದಾರಕ್ಕೆ ಮುಂದಾಗಿದ್ದಾರೆ. ಎಲ್ಲರೂ ಅವರಿಗೆ ಕೈಜೋಡಿಸಿ’ ಎಂದು ವಿನಂತಿಸಿದರು.

ನಗರಸಭೆ ಸದಸ್ಯ ಎನ್‌.ಚಂದ್ರಶೇಖರ್, ದೇವಸ್ಥಾನ ಕಾರ್ಯಕಾರಿ ಸಮಿತಿ ಅಧ್ಯಕ್ಷ ಎನ್.ಓಂಕಾರ್, ಉಪಾಧ್ಯಕ್ಷ ಇ.ರವಿಚಂದ್ರಪ್ಪ, ಎ.ಮಂಜುನಾಥ, ಸಂಘಟನಾ ಕಾರ್ಯದರ್ಶಿ ಹನುಮಂತಪ್ಪ, ಜಿ. ಕಾರ್ಯದರ್ಶಿ ಕೆ.ಶಶಿಕಿರಣ, ಸಹಕಾರ್ಯದರ್ಶಿ ವೆಂಕಟೇಶಬಾಬು, ಖಜಾಂಚಿ ಮೋಹನ್ ಕುಮಾರ್ ಎಲ್. ಜಿತೇಂದ್ರ ಹುಲಿಕುಂಟೆ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:Basava Prabhu SwamijiConstitutionHariharpurLifePeaceನೆಮ್ಮದಿಬದುಕುಸಂವಿಧಾನಸ್ವಾಮೀಜಿಹರಿಹರಪುರ
Share This Article
Facebook Email Print
Previous Article 24,228 ವಿದ್ಯಾರ್ಥಿಗಳಿಗೆ 78 ಪರೀಕ್ಷಾ ಕೇಂದ್ರ | ಪ್ರತಿ ಹಂತಕ್ಕೂ ಪೊಲೀಸ್‌ ಭದ್ರತೆ
Next Article ಚಿತ್ರದುರ್ಗದ ಮಹಡಿ ಶಿವಮೂರ್ತಿ ಮನೆಯಲ್ಲಿ ಸಭೆ ಹನುಮಲಿ ಷಣ್ಮುಖಪ್ಪ ಅವರಿಗೆ ಎಂಎಲ್ಸಿ ಸ್ಥಾನ ಕೊಡಿ | ಸಭೆ ನಡೆಸಿ ವರಿಷ್ಟರ ಬಳಿ ತೆರಳಲು ಸಿದ್ಧರಾದ ಅಭಿಮಾನಿಗಳು
Leave a Comment

Leave a Reply Cancel reply

Your email address will not be published. Required fields are marked *

ಉಸಿರಾಟದ ಕಾಯಿಲೆಗಳಿಗೆ ಈ ಎಲೆಯನ್ನು ಬಳಸಿ
Life Style
ಹೃದಯಾಘಾತದ ನಂತರ ಈ ತಪ್ಪುಗಳನ್ನು ಮಾಡಬೇಡಿ
Life Style
ಸ್ವಸ್ತಿಕ್ ಚಿಹ್ನೆ ಬಿಡಿಸುವಾಗ ನೀವು ಈ ತಪ್ಪನ್ನು ಮಾಡಬೇಡಿ
Life Style
today bhavishya
Astrology: ದಿನ ಭವಿಷ್ಯ | ಜೂನ್ 29 | ಆಕಸ್ಮಿಕ ಧನ ವ್ಯಯದ ಸೂಚನೆ, ಆಸ್ತಿ ವಿಷಯಗಳಲ್ಲಿ ವಿವಾದಗಳು
Dina Bhavishya
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up