By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ವೈಮನಸ್ಸು ಬಿಟ್ಟು ಒಂದಾದ ದಂಪತಿಗಳು; ವಿಶೇಷ ಕ್ಷಣಕ್ಕೆ ಸಾಕ್ಷಿಯಾದ ನ್ಯಾಯಾಲಯ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ವೈಮನಸ್ಸು ಬಿಟ್ಟು ಒಂದಾದ ದಂಪತಿಗಳು; ವಿಶೇಷ ಕ್ಷಣಕ್ಕೆ ಸಾಕ್ಷಿಯಾದ ನ್ಯಾಯಾಲಯ

ಮುಖ್ಯ ಸುದ್ದಿ

ವೈಮನಸ್ಸು ಬಿಟ್ಟು ಒಂದಾದ ದಂಪತಿಗಳು; ವಿಶೇಷ ಕ್ಷಣಕ್ಕೆ ಸಾಕ್ಷಿಯಾದ ನ್ಯಾಯಾಲಯ

News Desk Chitradurga News
Last updated: 15 December 2023 14:50
News Desk Chitradurga News
2 years ago
Share
SHARE
https://chat.whatsapp.com/Jhg5KALiCFpDwME3sTUl7x

ಚಿತ್ರದುರ್ಗ ನ್ಯೂಸ್‌.ಕಾಂ

ಇಷ್ಟು ದಿನ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿ ನ್ಯಾಯಾಲಯಕ್ಕೆ ಬರುತ್ತಿದ್ದ ದಂಪತಿಗಳು ತಮ್ಮ ವೈಮನಸ್ಸು ಬಿಟ್ಟು ಪುನಃ ಒಂದಾಗಿದ್ದಾರೆ. ಜಿಲ್ಲೆಯಲ್ಲಿ ಕಳೆದ ಡಿ.9ರಂದು ನಡೆದ ರಾಷ್ಟ್ರೀಯ ಲೋಕ್ ಅದಾಲತ್‌ನಲ್ಲಿ 9 ದಂಪತಿಗಳು ಹಾರ ಬದಲಾಯಿಸಿಕೊಂಡಿದ್ದಾರೆ.

ಇದನ್ನೂ ಓದಿ: ಮೂಢನಂಬಿಕೆ ಹೆಸರಲ್ಲಿ ಕಲ್ಲತ್ತಿಗಿರಿ ಪಾವಿತ್ರ್ಯತೆಗೆ ಧಕ್ಕೆ ತರಬೇಡಿ; ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ

ಹಿರಿಯೂರು ನ್ಯಾಯಾಲಯದಲ್ಲಿ ಮೂರು ದಂಪತಿಗಳು, ಮೊಳಕಾಲ್ಮೂರು ನ್ಯಾಯಾಲಯದಲ್ಲಿ ಇಬ್ಬರು ಹಾಗೂ ಚಿತ್ರದುರ್ಗ, ಚಳ್ಳಕೆರೆ, ಹೊಳಲ್ಕೆರೆ, ಹೊಸದುರ್ಗ ನ್ಯಾಯಾಲಯದಲ್ಲಿ ತಲಾ ಒಂದು ದಂಪತಿ ಹಳೇ ತಪ್ಪುಗಳನ್ನು ‌ಮರೆತು ಪುನಃ ಜತೆಯಾಗಿ ಜೀವನ ಸಾಗಿಸಲು ಮುಂದಾಗಿದ್ದಾರೆ.

‘ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಚಾಲ್ತಿಯಲ್ಲಿದ್ದ ಒಟ್ಟು 3204 ಪ್ರಕರಣಗಳು ಮತ್ತು ವ್ಯಾಜ್ಯ ಪೂರ್ವ 1,06,421 ಪ್ರಕರಣಗಳನ್ನು ರಾಷ್ಟ್ರೀಯ ಲೋಕ್ ಅದಾಲತ್‌ನಲ್ಲಿ ರಾಜೀ ಮುಖಾಂತರ ಇತ್ಯರ್ಥಪಡಿಸಲಾಗಿದ್ದು, ಇತ್ಯರ್ಥದ ಒಟ್ಟು ಮೊತ್ತ 17,36,39,597 ರೂ. ಆಗಿದೆ’ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಕೆ.ಬಿ.ಗೀತಾ ತಿಳಿಸಿದ್ದಾರೆ.

ಇದನ್ನೂ ಓದಿ: ಅಭಿವೃದ್ಧಿ ಸಹಿಸದೇ ಏಕಾಂತಯ್ಯ ಆರೋಪ; ಬಸವಪ್ರಭು ಸ್ವಾಮೀಜಿ

ಈ ಬಾರಿ ನಡೆದ ಲೋಕ್ ಅದಾಲತ್‍ನಲ್ಲಿ ವಿಶೇಷವಾಗಿ 41 ಪಾಲು ವಿಭಾಗದ ಪ್ರಕರಣಗಳು, 80 ಬ್ಯಾಂಕ್ ಸಾಲ ವಸೂಲಾತಿ ಪ್ರಕರಣಗಳು, 200 ಚೆಕ್ ಬೌನ್ಸ್ ಪ್ರಕರಣ, 42 ಅಪರಾಧಿಕ ಕಾಂಪೌಂಡ್ ಪ್ರಕರಣಗಳು, 76 ಅಪಘಾತ ವಿಮಾ ಪ್ರಕರಣಗಳು, 14 ಕೌಟುಂಬಿಕ ಪ್ರಕರಣಗಳು, 144 ಅಮಲ್ ಜಾರಿ ಪ್ರಕರಣಗಳು, ಕರಾರಿಗೆ ಸಂಬಂಧಿಸಿದ 10 ದಾವೆಗಳು, ವಿವಿಧ ರೀತಿಯ 94 ಸಿವಿಲ್ ದಾವೆಗಳು, ಅಪರಾಧಿಕ ಕಾಂಪೌಂಡಬಲ್ ಪ್ರಕರಣಗಳು (ವಿವಿಧ ಅಪರಾಧಿಕ ಕಾಯ್ದೆ ಅಡಿಯಲ್ಲಿ ದಾಖಲಾದ ಪ್ರಕರಣಗಳು) ಇತರೆ ಅಪರಾಧಿಕ ಕಾಯ್ದೆಗಳ ಸಾವಿರಕ್ಕೂ ಹೆಚ್ಚು ಪ್ರಕರಣಗಳು ಇತ್ಯರ್ಥವಾಗಿವೆ.

ವಿಶೇಷವಾಗಿ ಸುಮಾರು 374 ಸಿವಿಲ್ ದಾವೆಗಳು ರಾಜಿಯಾಗಿರುತ್ತದೆ. ಅಲ್ಲದೇ 200 ಚೆಕ್ ಅಮಾನ್ಯ ಪ್ರಕರಣಗಳು ರಾಜಿಯಾಗಿದ್ದು, ಈ ಬಾರಿಯ ಲೋಕ್ ಅದಾಲತ್‍ನಲ್ಲಿ ಒಟ್ಟಾರೆ ಮೊತ್ತ ರೂ 17,36,39,597/- ಆಗಿರುತ್ತದೆ. ಮುಂಬರುವ ಲೋಕ್ ಅದಾಲತ್‍ನಲ್ಲಿ ಇನ್ನೂ ಹೆಚ್ಚು ಪ್ರಕರಣಗಳನ್ನು ರಾಜೀ ಮೂಲಕ ಬಗೆಹರಿಸಿಕೊಳ್ಳಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಕೆ.ಬಿ.ಗೀತಾ ಸಾರ್ವಜನಿಕರಿಗೆ ವಿನಂತಿಸಿದ್ದಾರೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:ActCaseCompromiseCoupleCourtLok Adalatಕಾಯ್ದೆದಂಪತಿನ್ಯಾಯಾಲಯಪ್ರಕರಣರಾಜಿಲೋಕ್‌ ಅದಾಲತ್‌
Share This Article
Facebook Email Print
Previous Article ಅಭಿವೃದ್ಧಿ ಸಹಿಸದೇ ಏಕಾಂತಯ್ಯ ಆರೋಪ; ಬಸವಣ್ಣನ‌ ಪ್ರತಿಮೆ ವಿಚಾರಕ್ಕೆ ಬಸವಪ್ರಭು ಸ್ವಾಮೀಜಿ‌ ಸ್ಪಷ್ಟನೆ
Next Article ಚಿತ್ರದುರ್ಗ ನೆಲದಲ್ಲಿ DRDO ಮಹತ್ವದ ಸಾಧನೆ | ಸದ್ದಿಲ್ಲದೆ ಎದುರಾಳಿ ಮೇಲೆರಗುವ ಸ್ವದೇಶಿ ಡ್ರೋನ್ ಯಶಸ್ವಿ ಹಾರಾಟ
Leave a Comment

Leave a Reply Cancel reply

Your email address will not be published. Required fields are marked *

ಕಾಂಗ್ರೆಸ್ ಅವಧಿಯಲ್ಲಿ ಶೇ.60 ರಷ್ಟು ಕಮಿಷನ್ ನಡೆಯುತ್ತಿದೆ | AAP ಜಿಲ್ಲಾಧ್ಯಕ್ಷ ಜಗದೀಶ್
ಮುಖ್ಯ ಸುದ್ದಿ
ಗಾಂಧಿವೃತ್ತ, ಸಂತೆಹೊಂಡದ ಬಳಿಯ ವಾಣಿಜ್ಯ ಸಂಕೀರ್ಣಗಳ ಕಾಮಗಾರಿ ವೀಕ್ಷಿಸಿದ ಸಚಿವರು
ಮುಖ್ಯ ಸುದ್ದಿ
ಸಚಿವ ಸ್ಥಾನದಿಂದ ಜಮೀರ್ ಅಹಮದ್‍ ಖಾನ್ ವಜಾಗೊಳಿಸಿ | ಜೆಡಿಎಸ್ ಪ್ರತಿಭಟನೆ
ಮುಖ್ಯ ಸುದ್ದಿ
ಡಾ.ಶ್ರೀ.ಶಿವಮೂರ್ತಿ ಮುರುಘಾ ಶರಣರು
ಮುರುಘಾ ಶ್ರೀಗಳ ಪ್ರಕರಣ ಅಂತಿಮ ಹಂತಕ್ಕೆ | ಖುದ್ದು ಹೇಳಿಕೆ ದಾಖಲಿಸಲು ದಿನಾಂಕ ನಿಗಧಿ | ನ್ಯಾಯಾಲಯಕ್ಕೆ ಹಾಜರಾಗಲಿದ್ದಾರೆ ಶರಣರು
ಮುಖ್ಯ ಸುದ್ದಿ
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up