By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ಲೋಕಸಭಾ ಚುನಾವಣೆ ಜಿಲ್ಲಾಡಳಿತ ಸರ್ವ ಸನ್ನದ್ಧ | ಏಪ್ರಿಲ್ 25 ರಂದು ಮತಯಂತ್ರ ಹಂಚಿಕೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ಲೋಕಸಭಾ ಚುನಾವಣೆ ಜಿಲ್ಲಾಡಳಿತ ಸರ್ವ ಸನ್ನದ್ಧ | ಏಪ್ರಿಲ್ 25 ರಂದು ಮತಯಂತ್ರ ಹಂಚಿಕೆ

ಲೋಕಸಮರ 2024

ಲೋಕಸಭಾ ಚುನಾವಣೆ ಜಿಲ್ಲಾಡಳಿತ ಸರ್ವ ಸನ್ನದ್ಧ | ಏಪ್ರಿಲ್ 25 ರಂದು ಮತಯಂತ್ರ ಹಂಚಿಕೆ

News Desk Chitradurga News
Last updated: 16 April 2024 20:17
News Desk Chitradurga News
1 year ago
Share
ಪೂರ್ವ ಸಿದ್ಧತೆ ಸಭೆಯಲ್ಲಿ ಜಿಲ್ಲಾಧಿಕಾರಿ ಟಿ. ವೆಂಕಟೇಶ್
ಪೂರ್ವ ಸಿದ್ಧತೆ ಸಭೆಯಲ್ಲಿ ಜಿಲ್ಲಾಧಿಕಾರಿ ಟಿ. ವೆಂಕಟೇಶ್
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 16 APRIL 2024

ಚಿತ್ರದುರ್ಗ: ಏಪ್ರಿಲ್ 26ರಂದು ನಡೆಯಲಿರುವ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ  ಜಿಲ್ಲಾ ಚುನಾವಣಾ ಶಾಖೆಯು ಅಗತ್ಯ ಸಿದ್ಧತೆಗಳನ್ನು ಕೈಗೊಂಡಿದ್ದು, ಏಪ್ರಿಲ್ 25 ರಂದು ಮತಯಂತ್ರ ಹಂಚಿಕೆ ಕಾರ್ಯ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಟಿ.ವೆಂಕಟೇಶ್ ಹೇಳಿದರು.

 

ಇದನ್ನೂ ಓದಿ: ಹಂಪಿ ಉತ್ಸವದ ಮಾದರಿಯಲ್ಲಿ ಮದಕರಿ ನಾಯಕ ಉತ್ಸವ | ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಉಮೇದುವಾರರಿಗೆ ಹಾಗೂ ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ಮತದಾನ ಪೂರ್ವ ಸಿದ್ಧತೆಗಳ ಮಾಹಿತಿ ನೀಡಿದರಲ್ಲದೇ ತುಮಕೂರು ಜಿಲ್ಲೆಯ ಶಿರಾ ಮತ್ತು ಪಾವಗಡ ತಾಲೂಕುಗಳು ಸೇರಿದಂತೆ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೊಳಪಡುವ 08ವಿಧಾನಸಭಾ ಕ್ಷೇತ್ರಗಳ ಮತಗಟ್ಟೆಗಳಿಗೆ ಸರಬರಾಜಾಗಲಿರುವ ಬ್ಯಾಲೆಟ್ ಯುನಿಟ್, ಕಂಟ್ರೋಲ್ ಯುನಿಟ್ ಮತ್ತು ವಿವಿಪ್ಯಾಟ್‍ಗಳ 2ನೇ ಹಂತದ ರ‍್ಯಾಂಡಮೈಜೇಶನ್ ಮತ್ತು ಹಂಚಿಕೆ ವಿಧಾನಗಳ ಕುರಿತು ಮಾಹಿತಿ ನೀಡಿದರು.

ಈ ಎಲ್ಲಾ ಪ್ರಕ್ರಿಯೆಗಳನ್ನು ಉಮೇದುವಾರರು ಅಥವಾ ಅವರಿಂದ ನಿಯೋಜಿಸಲಾದ ಸಿಬ್ಬಂಧಿಗಳು ಖುದ್ದು ಸ್ಥಳದಲ್ಲಿ ಹಾಜರಿದ್ದು, ವೀಕ್ಷಿಸಬಹುದಾಗಿದೆ ಎಂದ ಅವರು, ಈ ಎಲ್ಲಾ ವಿದ್ಯಾಮಾನಗಳನ್ನು ಪ್ರತಿ ಮತಗಟ್ಟೆಗಳಿಗೆ ನೇಮಿಸಲಾಗುವ ರಾಜಕೀಯ ಪಕ್ಷಗಳ ಏಜೆಂಟರಿಗೆ ತಿಳಿಸುವಂತೆ ಹಾಗೂ ಯಾವುದೇ ಅಡಚಣೆಗಳಾಗದಂತೆ ನೋಡಿಕೊಳ್ಳಲು ಸೂಚಿಸಿದರು.

ಇದನ್ನೂ ಓದಿ: ರೈತರಿಗೆ ಶುಭ ಸುದ್ದಿ | ವಾಡಿಕೆಗಿಂತ ಅಧಿಕ ಸುರಿಯಲಿದೆ ಮುಂಗಾರು

ಕ್ಷೇತ್ರದ ವ್ಯಾಪ್ತಿಯಲ್ಲಿ ಸ್ಥಾಪಿಸಲಾಗುವ 2168ಮತಗಟ್ಟೆಗಳಿಗೆ ಪ್ರತಿ ಕೇಂದ್ರಕ್ಕೆ 2 ಮತಯಂತ್ರದಂತೆ ಒಟ್ಟು 4336 ಮತಯಂತ್ರಗಳನ್ನು ಹಂಚಿಕೆ ಮಾಡಲಾಗುವುದು.

ಅಲ್ಲದೇ ತಾಂತ್ರಿಕ ದೋಷ ಮತ್ತಿತರ ತುರ್ತು ಸಂದರ್ಭಗಳಲ್ಲಿ ಎದುರಾಗಬಹುದಾದ ಸಮಸ್ಯೆಗಳ ಪರಿಹಾರ ಕ್ರಮವಾಗಿ ಹೆಚ್ಚುವರಿಯಾಗಿ 897ಮತಯಂತ್ರಗಳನ್ನು ಕಾಯ್ದಿರಿಸಲಾಗಿದೆ ಎಂದ ಅವರು, ಈ ಚುನಾವಣೆಗಾಗಿ ಒಟ್ಟು 5233 ಬ್ಯಾಲೆಟ್ ಯುನಿಟ್‍ಗಳನ್ನು ಬಳಸಿಕೊಳ್ಳಲಾಗುತ್ತಿದೆ. ಪ್ರತಿ ಯುನಿಟ್‍ಗೂ ನಂಬರುಗಳನ್ನು ಹಾಕಲಾಗಿದೆ ಎಂದರು.

85+ ವರ್ಷ ಮೇಲ್ಪಟ್ಟ ವಯಸ್ಕರ ತಮ್ಮ ಕೋರಿಕೆ ಮತದಾನಕ್ಕೆ ಇಂದು ಅಂತಿಮ ದಿನವಾಗಿದೆ. ಈಗಾಗಲೇ ಕೋರಿಕೆ ಸಲ್ಲಿಸಿದ ವಿಕಲಚೇತನರೂ ಕೂಡ ಮನೆಯಲ್ಲಿಯೇ ಮತ ಚಲಾಯಿಸಲು ಅನುಮತಿ ನೀಡಲಾಗಿದೆ.

ಅಗತ್ಯ ಸೇವೆಗಳಿಗೆ ನಿಯೋಜಿತ ಮತದಾರರು ಮತ ಚಲಾಯಿಸಲು ಜಿಲ್ಲೆಯ ತಹಶೀಲ್ದಾರರ ಕಚೇರಿಯಲ್ಲಿ ಮತದಾನಕ್ಕೆ ಅವಕಾಶ ಕಲ್ಪಿಸಲಾಗಿದೆ. ಅರ್ಹರು ಏಪ್ರಿಲ್ 19, 20 ಮತ್ತು 21ರಂದು ಬೆಳಿಗ್ಗೆ 10ರಿಂದ ಸಂಜೆ 5ಗಂಟೆಯೊಳಗಾಗಿ ಮತಚಲಾಯಿಸಬಹುದಾಗಿದೆ ಎಂದರು.

ಇದನ್ನೂ ಓದಿ: ನಾನು ಈಗ ಯಾವುದೇ ಪಕ್ಷದಲ್ಲಿ ಇಲ್ಲ | ಮಾಜಿ ಸಚಿವ ಗೂಳಿಹಟ್ಟಿ ಡಿ. ಶೇಖರ್

ಪ್ರಸಕ್ತ ಚುನಾವಣೆಯಲ್ಲಿ ಮತ ಚಲಾಯಿಸುವ ಮತದಾರರ ಅನುಕೂಲಕ್ಕಾಗಿ ಮತಗಟ್ಟೆ ಗುರುತಿನ ಚೀಟಿಗಳನ್ನು ವಿತರಿಸುವ ಕಾರ್ಯ ಜಿಲ್ಲೆಯಾದ್ಯಂತ ಇಂದಿನಿಂದ ಆರಂಭಗೊಳ್ಳಲಿದೆ. ಖಾಸಗಿಯವರು ವಿತರಿಸುವ ಪಕ್ಷದ ಗುರುತು ಚಿಹ್ನೆಗಳುಳ್ಳ ಚೀಟಿಗಳನ್ನು ಮತಗಟ್ಟೆಯೊಳಗೆ ಕೊಂಡೊಯ್ಯುವುದನ್ನು ಕಡ್ಡಾಯವಾಗಿ ನಿಷೇಧಿಸಿದೆ.

ವಿಶೇಷವಾಗಿ ಜಿಲ್ಲಾ ಚುನಾವಣಾ ಶಾಖೆಯಿಂದ ವಿತರಿಸಲಾಗುವ ಗುರುತಿನ ಚೀಟಿಗಳಲ್ಲಿ ಮತಗಟ್ಟೆಯ ವಿವರವಾದ ಮಾಹಿತಿ ಒದಗಿಸುವ ಕ್ಯೂಆರ್ ಕೋಡನ್ನು ನಮೂದಿಸಲಾಗಿದೆ. ಈ ಕ್ಯೂಆರ್ ಕೋಡನ್ನು ಮತದಾರರು ಬಳಸಿಕೊಳ್ಳಬಹುದಾಗಿದೆ ಎಂದರು.

ಇದನ್ನೂ ಓದಿ: ಎಇಇ, ಲೆಕ್ಕ ಸಹಾಯಕ ಲೋಕಾಯುಕ್ತ ಬಲೆಗೆ

ಈ ಸಂದರ್ಭದಲ್ಲಿ ಚುನಾವಣಾ ವೀಕ್ಷಕ ಮನೋಹರ ಮರಾಂಡಿ, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೇರಿದಂತೆ ಪ್ರಸಕ್ತ ಚುನಾವಣೆಯಲ್ಲಿ ಆಯ್ಕೆ ಬಯಸಿ ನಾಮಪತ್ರ ಸಲ್ಲಿಸಿರುವ ಉಮೇದುವಾರರು ಅಥವಾ ಅವರ ಪ್ರತಿನಿಧಿಗಳು ಉಪಸ್ಥಿತರಿದ್ದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:ChitradurgaLok Sabha ElectionsPreparationsharingt venkateshvoting machineಚಿತ್ರದುರ್ಗಟಿ.ವೆಂಕಟೇಶ್ಮತಯಂತ್ರಲೋಕಸಭಾ ಚುನಾವಣೆಸಿದ್ಧತೆಹಂಚಿಕೆ
Share This Article
Facebook Email Print
Previous Article ಹಂಪಿ ಉತ್ಸವದ ಮಾದರಿಯಲ್ಲಿ ಮದಕರಿ ನಾಯಕ ಉತ್ಸವ | ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ
Next Article arecanut price list ಶಿವಮೊಗ್ಗ ಮಾರುಕಟ್ಟೆಯಲ್ಲೂ ರಾಶಿ ಅಡಿಕೆ ಬೆಲೆಯಲ್ಲಿ ಹೆಚ್ಚಳ
Leave a Comment

Leave a Reply Cancel reply

Your email address will not be published. Required fields are marked *

ಬೆಳೆ ಸಮೀಕ್ಷೆ | ರೈತರೇ Mobile App ಮೂಲಕ ಮಾಹಿತಿ ಅಪ್‍ಲೋಡ್ ಮಾಡಬಹುದು | ಅದು ಹೇಗೆ ಎಂದು ತಿಳಿಯಿರಿ 
ಮುಖ್ಯ ಸುದ್ದಿ
arecanut price list
ಅಡಿಕೆ ಧಾರಣೆ | ಜುಲೈ 1 | ಯಾವ ಅಡಿಕೆಗೆ ಎಷ್ಟು ರೇಟ್‌
ಅಡಕೆ ಧಾರಣೆ
ರಕ್ತದಾನದಿಂದ ಆರೋಗ್ಯ ವೃದ್ಧಿ | ಎಂ.ಕೆ.ರವೀಂದ್ರ
ಮುಖ್ಯ ಸುದ್ದಿ
SSLC ಪರೀಕ್ಷೆ-3 | ಜುಲೈ 5 ರಿಂದ ಆರಂಭ | ಜಿಲ್ಲೆಯಲ್ಲಿ 24 ಪರೀಕ್ಷಾ ಕೇಂದ್ರ | 7453 ವಿದ್ಯಾರ್ಥಿಗಳು
ಮುಖ್ಯ ಸುದ್ದಿ
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up