By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: Lok Sabha Election ಮತದಾನ ಬಹಿಷ್ಕಾರ | ಭರಮಗಿರಿ ಗ್ರಾಮಸ್ಥರಿಂದ ಸ್ಪಷ್ಟ ಸಂದೇಶ | ಕೆರೆಗೆ ವಾಣಿವಿಲಾಸ ಜಲಾಶಯದಿಂದ ನೀರು ತುಂಬಿಸಿ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » Lok Sabha Election ಮತದಾನ ಬಹಿಷ್ಕಾರ | ಭರಮಗಿರಿ ಗ್ರಾಮಸ್ಥರಿಂದ ಸ್ಪಷ್ಟ ಸಂದೇಶ | ಕೆರೆಗೆ ವಾಣಿವಿಲಾಸ ಜಲಾಶಯದಿಂದ ನೀರು ತುಂಬಿಸಿ

ಮುಖ್ಯ ಸುದ್ದಿ

Lok Sabha Election ಮತದಾನ ಬಹಿಷ್ಕಾರ | ಭರಮಗಿರಿ ಗ್ರಾಮಸ್ಥರಿಂದ ಸ್ಪಷ್ಟ ಸಂದೇಶ | ಕೆರೆಗೆ ವಾಣಿವಿಲಾಸ ಜಲಾಶಯದಿಂದ ನೀರು ತುಂಬಿಸಿ

News Desk Chitradurga News
Last updated: 25 March 2024 06:26
News Desk Chitradurga News
1 year ago
Share
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 25 MARCH 2024
ಚಿತ್ರದುರ್ಗ: ವಾಣಿವಿಲಾಸ ಜಲಾಶಯದಿಂದ ಕೇವಲ 3 ಕಿ.ಮೀ. ದೂರದಲ್ಲಿರುವ ಭರಮಗಿರಿ ಗ್ರಾಮದ ಕೆರೆಗೆ ನೀರು ಹರಿಸಬೇಕು. ಇಲ್ಲವಾದರೆ ಲೋಕಸಭಾ ಚುನಾವಣೆ ಮತದಾನ ಬಹಿಷ್ಕರಿಸುವುದು ಖಚಿತ. ನಿಮ್ಮ ನಿರ್ಧಾರದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂಬ ಸ್ಪಷ್ಟ ಸಂದೇಶ ರವಾನಿಸಿದ್ದಾರೆ ಹಿರಿಯೂರು ತಾಲ್ಲೂಕಿನ ಭರಮಗಿರಿ ಗ್ರಾಮದ ಕೆರೆ ಅಚ್ಚುಕಟ್ಟು ಪ್ರದೇಶದ ರೈತರು.

ವಾಣಿವಿಲಾಸ ಜಲಾಶಯದಿಂದ ಶುಕ್ರವಾರ ಕಾಲುವೆಗೆ ನೀರು ಹರಿಸುತ್ತಿದ್ದಂತೆ ಇತ್ತ ಭರಮಗಿರಿ ಗ್ರಾಮದ ಕೆರೆ ಅಚ್ಚುಕಟ್ಟು ಪ್ರದೇಶದ ರೈತರು ಸಭೆ ನಡೆಸಿ ಚುನಾವಣಾ ಬಹಿಷ್ಕಾರದ ನಿರ್ಧಾರ ಕೈಗೊಂಡಿದ್ದರು. ವಿಷಯ ತಿಳಿದು ಭಾನುವಾರ ಗ್ರಾಮಕ್ಕೆ ಭೇಟಿ ನೀಡಿದ್ದ ಸಹಾಯಕ ಚುನಾವಣಾಧಿಕಾರಿ ಶಿವೇಗೌಡ, ತಹಶೀಲ್ದಾರ್‌ ರಾಜೇಶ್‌ ಕುಮಾರ್‌, ವಿಶ್ವೇಶ್ವರಯ್ಯ ನೀರಾವರಿ ನಿಗಮದ ಎಇಇ ವಿಜಯಕುಮಾರ್‌, ಗ್ರಾಮ ಲೆಕ್ಕಾಧಿಕಾರಿ ಗಿರೀಶ್ ನೇತೃತ್ವದ ತಂಡ ಗ್ರಾಮಕ್ಕೆ ಆಗಮಿಸಿ ರೈತರ ಜತೆ ಮಾತುಕತೆ ನಡೆಸಿತು.

ಕ್ಲಿಕ್ ಮಾಡಿ ಓದಿ: ನಾಯಕನಹಟ್ಟಿ ತಿಪ್ಪೇರುದ್ರಸ್ವಾಮಿ ಆಶೀರ್ವಾದ ಪಡೆದ ಶಾಮನೂರು ಶಿವಶಂಕರಪ್ಪ | ಒಳಮಠ, ಹೊರಮಠದಲ್ಲಿ ವಿಶೇಷ ಪೂಜೆ

ನೀತಿಸಂಹಿತೆ ಜಾರಿಯಲ್ಲಿರುವ ಕಾರಣದಿಂದ ಕೆರೆಗೆ ನೀರು ಹರಿಸುವ ಯೋಜನೆ ಜಾರಿ ಸಾಧ್ಯವಾಗದು. ಕುಡಿಯುವ ನೀರಿಗೆ ತೊಂದರೆ ಆಗದಂತೆ ನೋಡಿಕೊಳ್ಳುತ್ತೇವೆ ಎಂದು ಮನವರಿಕೆ ಮಾಡಿದರು.

ನೀರಿಗೆ ತೊಂದರೆ ಇರುವ ಎಲ್ಲಾ ಹಳ್ಳಿಗಳಿಗೆ ಟ್ಯಾಂಕರ್ ಮೂಲಕ ನೀರು ಕೊಡುತ್ತೇವೆ. ಇಷ್ಟು ಮಾತ್ರ ನಮ್ಮಿಂದ ಸಾಧ್ಯ. ಯಾವುದೇ ಕಾರಣಕ್ಕೂ ಮತದಾನ ಬಹಿಷ್ಕರಿಸುವಂತಹ ನಿರ್ಧಾರ ಬೇಡ. ಚುನಾವಣೆ ಮುಗಿದ ನಂತರ ನಿಮ್ಮ ಅಹವಾಲನ್ನು ಸರ್ಕಾರದ ಗಮನಕ್ಕೆ ತರುತ್ತೇವೆ ಎಂದು ಸಹಾಯಕ ಚುನಾವಣಾಧಿಕಾರಿ ಹಾಗೂ ತಹಶೀಲ್ದಾರರು ಭರವಸೆ ನೀಡಿದರೂ. ಆದರೆ ಈ ಯಾವುದಕ್ಕೂ ಸಮ್ಮತಿಸಿದ ರೈತರು ಚುನಾವಣಾ ಮತದಾನ ಬಹಿಷ್ಕಾರ ಮಾಡುವುದು ಖಚಿತ ಎಂದು ತಿಳಿಸಿದರು.

ವಾಣಿವಿಲಾಸ ಅಣೆಕಟ್ಟೆ ನಿರ್ಮಾಣಕ್ಕೂ ಮೊದಲು ಅಂದಾಜು 300 ವರ್ಷದ ಹಿಂದೆ ಭರಮಪ್ಪ ನಾಯಕ ಎಂಬುವರು ಭರಮಗಿರಿ ಕೆರೆ ನಿರ್ಮಿಸಿದ್ದರು. ಹೊಸದುರ್ಗ ತಾಲ್ಲೂಕಿನ ಲಕ್ಕಿಹಳ್ಳಿ, ಮಾದಿಹಳ್ಳಿ ಭಾಗದಲ್ಲಿ ಮಳೆಯಾದರೆ ಭರಮಗಿರಿ ಕೆರೆ ತುಂಬುತ್ತಿತ್ತು. ಈಚಿನ ವರ್ಷಗಳಲ್ಲಿ ಹತ್ತಾರು ಗೋಕಟ್ಟೆ, ಚೆಕ್ ಡ್ಯಾಂಗಳನ್ನು ನಿರ್ಮಿಸಿರುವ ಕಾರಣ ಕೆರೆಗೆ ನೀರು ಬರದಂತಾಗಿದೆ. ಕೆರೆ ಕೋಡಿ ಹರಿದು 25 ವರ್ಷದ ಮೇಲಾಗಿದೆ ಎಂದು ಅಚ್ಚುಕಟ್ಟು ರೈತರು ಹೇಳಿದರು.

ವಿವಿ ಸಾಗರ ನೀರನ್ನು ರಾಜಕಾರಣಿಗಳು ತಮ್ಮ ಪ್ರಭಾವ ಬಳಸಿ ಚಳ್ಳಕೆರೆ ತಾಲ್ಲೂಕಿಗೆ ಒಯ್ದಿದ್ದಾರೆ. ಆದರೆ ಜಲಾಶಯಕ್ಕೆ ಕೂಗಳತೆ ದೂರದಲ್ಲಿರುವ ಭರಮಗಿರಿ ಕೆರೆಗೆ ಏಕೆ ಹರಿಸಬಾರದು? ನಾವೇನು ಪಾಪ ಮಾಡಿದ್ದೇವೆ? ಎಂದು ಪ್ರಶ್ನಿಸಿದರು.

1,000 ಅಡಿ ಕೊರೆಸಿದರೂ ಕೊಳವೆ ಬಾವಿಗಳಲ್ಲಿ ನೀರು ಸಿಗುತ್ತಿಲ್ಲ. ನೀರು ಬಂದರೂ 15–20 ದಿನದಲ್ಲಿ ಒಣಗಿ ಹೋಗುತ್ತವೆ. ಕೆಲವೇ ಲಕ್ಷ ಮೊತ್ತದಲ್ಲಿ ಪೈಪ್‌ಲೈನ್ ಮೂಲಕ ಭರಮಗಿರಿ ಕೆರೆಗೆ ನೀರು ಹರಿಸಬಹುದಾಗಿದೆ. ಈ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಪತ್ರ ಬರೆದಿದ್ದೇವೆ. ನೀತಿ ಸಂಹಿತೆಯ ನೆಪ ಹೇಳದೆ ಜಿಲ್ಲಾಧಿಕಾರಿಗಳ ಆದೇಶದ ಮೂಲಕ ನೀರು ಹರಿಸುವ ಕೆಲಸ ಮಾಡಬೇಕು. ಇಲ್ಲವಾದಲ್ಲಿ ಲೋಕಸಭಾ ಚುನಾವಣೆಯ ಮತದಾನ ಮಾಡುವುದಿಲ್ಲ ಎಂದು ಅಚ್ಚುಕಟ್ಟು ರೈತರು ಎಚ್ಚರಿಸಿದರು.

ಕ್ಲಿಕ್ ಮಾಡಿ ಓದಿ: ರೈತರ ಗಮನಕ್ಕೆ…ಬೋರ್‌ವೆಲ್‌ ಪ್ರತಿ ಅಡಿಗೆ ರೂ.105ಫಿಕ್ಸ್‌ | ಕೃಷಿ ಇಲಾಖೆ ಜಂಟಿ ನಿರ್ದೇಶಕ ಡಾ.ಬಿ.ಮಂಜುನಾಥ್‌

ವಾಣಿವಿಲಾಸ ಅಣೆಕಟ್ಟೆಯ ನೀರನ್ನು 100 ಕಿ.ಮೀ. ದೂರದಲ್ಲಿರುವ ಚಳ್ಳಕೆರೆ ತಾಲ್ಲೂಕಿನ ಹಳ್ಳಿಗಳಿಗೆ ಒಯ್ಯಲು ಸಾಧ್ಯವಿದೆ. ಕೇವಲ 3 ಕಿ.ಮೀ. ದೂರದಲ್ಲಿರುವ ಭರಮಗಿರಿ ಕೆರೆಗೆ ತರಲು ಸಾಧ್ಯವಿಲ್ಲವೇ? ಕೆರೆ ತುಂಬಿದರೆ ವಾಣಿವಿಲಾಸ ಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತಳವಾರಹಟ್ಟಿ, ಕಕ್ಕಯ್ಯನಹಟ್ಟಿ, ಕುಂಟಪ್ಪನಹಟ್ಟಿ, ಬಳಗಟ್ಟ, ಭರಮಗಿರಿ, ಅಗಳೇರಹಟ್ಟಿ, ಕುರುಬರಹಳ್ಳಿ, ಕೂನಿಕೆರೆ ಪಂಚಾಯಿತಿ ವ್ಯಾಪ್ತಿಯ ಬೀರೇನಹಳ್ಳಿ, ಎ.ವಿ ಕೊಟ್ಟಿಗೆ ಗುಡಿಹಳ್ಳಿ ಗ್ರಾಮದವರೆಗೆ ಅಂತರ್ಜಲ ಹೆಚ್ಚುತ್ತದೆ.

2022 ರಲ್ಲಿ ರಾಜ್ಯದ ಬಹುತೇಕ ಕೆರೆಗಳು ತುಂಬಿದ್ದವು. ವಾಣಿವಿಲಾಸ ಜಲಾಶಯವೂ ಕೋಡಿ ಹರಿದು ದಾಖಲೆ ನಿರ್ಮಿಸಿತ್ತು. ಆದರೆ ಭರಮಗಿರಿ ಕೆರೆಗೆ ನೀರು ಬಂದಿರಲಿಲ್ಲ. ಕೆರೆಯ ಮೇಲ್ಭಾಗದಲ್ಲಿರುವ ಹೊಸದುರ್ಗ ತಾಲ್ಲೂಕಿನ ಲಕ್ಕಿಹಳ್ಳಿ, ಮಾದಿಹಳ್ಳಿ ಭಾಗದಲ್ಲಿ ಹತ್ತಾರು ಗೋಕಟ್ಟೆ, ಚೆಕ್ ಡ್ಯಾಂಗಳನ್ನು ನಿರ್ಮಿಸಿರುವ ಕಾರಣ ಕೆರೆಗೆ ನೀರು ಬರದಂತಾಗಿದೆ. 25 ವರ್ಷದಿಂದ ಕೆರೆ ಭರ್ತಿಯಾಗಿಲ್ಲ ಎಂದು ಅಧಿಕಾರಿಗಳಿಗೆ ತಿಳಿಸಿದರು.

ಪ್ರಾದೇಶಿಕ ಆಯುಕ್ತರು ಚಳ್ಳಕೆರೆ ತಾಲ್ಲೂಕಿಗೆ 0.25 ಟಿಎಂಸಿ ಅಡಿ ನೀರು ಹರಿಸುವಂತೆ ಆದೇಶ ಹೊರಡಿಸಿದ್ದು, ಅವರ ಆದೇಶದಂತೆ ವೇದಾವತಿ ನದಿಯ ಮೂಲಕ ನೀರು ಬಿಡಲಾಗುತ್ತಿದೆ. ಅದೇ ರೀತಿ ಚುನಾವಣೆ ಒಳಗೆ ಪೈಪ್‌ಲೈನ್ ಮೂಲಕ ಕೆರೆಗೆ ನೀರು ಹರಿಸಲು ಆಯುಕ್ತರು ಆದೇಶ ಮಾಡಲಿ ಎಂದು ಅಚ್ಚುಕಟ್ಟು ರೈತರು ಪಟ್ಟು ಹಿಡಿದರು.

ನೀರು ಇಲ್ಲದ ಕಾರಣ ನೂರಾರು ಎಕರೆ ಅಡಿಕೆ, ತೆಂಗು, ಬಾಳೆ, ದಾಳಿಂಬೆ ತೋಟಗಳು ಒಣಗಿ ಹೋಗಿವೆ. ಇದು ನಮ್ಮ ನಿರ್ಣಾಯಕ ಹೋರಾಟ. ಭರಮಗಿರಿ ಕೆರೆಗೆ ಪೈಪ್ ಲೈನ್ ಮೂಲಕ ವಾಣಿವಿಲಾಸದ ನೀರು ಹರಿಸುವವರೆಗೆ ಹೋರಾಟ ನಿಲ್ಲದು ಎಂದು ಮುಖಂಡರಯ ಎಚ್ಚರಿಸಿದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:BharamagiriBoycottClear MessageLok Sabha ElectionsVanivilasa Reservoirಭರಮಗಿರಿಮತದಾನ ಬಹಿಷ್ಕಾರಲೋಕಸಭೆ ಚುನಾವಣೆವಾಣಿವಿಲಾಸ ಜಲಾಶಯಸ್ಪಷ್ಟ ಸಂದೇಶ
Share This Article
Facebook Email Print
Previous Article ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆಯಲ್ಲಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮತದಾರರ ಪಟ್ಟಿಗೆ ಹೆಸರು ಸೇರಿಸಲು ಲಾಸ್ಟ್ ಚಾನ್ಸ್ | ಇಂದೇ ಕಡೆಯ ದಿನ
Next Article ಅಲಂಕೃತಗೊಂಡ ನಾಯಕನಹಟ್ಟಿ ಶ್ರೀ ಗುರುತಿಪ್ಪೇರುದ್ರಸ್ವಾಮಿ ರಥೋತ್ಸವ | ನೆರಳಿಗಾಗಿ ಬೃಹತ್ ಚಪ್ಪರ
Leave a Comment

Leave a Reply Cancel reply

Your email address will not be published. Required fields are marked *

Sadguru Pradeep participate hosadurga bandh
ಹೊಸದುರ್ಗ ಬಂದ್‌ | ಇಂದು ಅಂತ್ಯವಲ್ಲ, ಆರಂಭ | ಸದ್ಗುರು ಪ್ರದೀಪ್‌
ಹೊಸದುರ್ಗ
ಹೊಸದುರ್ಗ ಸ್ಥಿತಿ ಸಮುದ್ರದ ನೆಂಟಸ್ಥನ, ಉಪ್ಪಿಗೆ ಬರ | ಕೆ.ಎಸ್.ನವೀನ್
ಹೊಸದುರ್ಗ
ಹೊಸದುರ್ಗ ಬಂದ್ | ನೀರಿಗೆ ಅಡ್ಡಿ ಕಿಡಿಗೇಡಿ ಕೃತ್ಯ | ಎಸ್.ಲಿಂಗಮೂರ್ತಿ
ಹೊಸದುರ್ಗ
ಹೊಸದುರ್ಗ ಬಂದ್ | ಶಾಸಕ ಬಿ.ಜಿ.ಗೋವಿಂದಪ್ಪ ನೇತೃತ್ವದಲ್ಲಿ ಹೋರಾಟ
ಹೊಸದುರ್ಗ
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up