By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ಲೋಕಸಭೆ ಸಾರ್ವತ್ರಿಕ ಚುನಾವಣೆ | ಪೋಸ್ಟಲ್ ಬ್ಯಾಲಟ್ ಮೂಲಕ ಮತದಾನಕ್ಕೆ ಅವಕಾಶ| ಬಿ.ಟಿ.ಕುಮಾರಸ್ವಾಮಿ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ಲೋಕಸಭೆ ಸಾರ್ವತ್ರಿಕ ಚುನಾವಣೆ | ಪೋಸ್ಟಲ್ ಬ್ಯಾಲಟ್ ಮೂಲಕ ಮತದಾನಕ್ಕೆ ಅವಕಾಶ| ಬಿ.ಟಿ.ಕುಮಾರಸ್ವಾಮಿ

ಮುಖ್ಯ ಸುದ್ದಿ

ಲೋಕಸಭೆ ಸಾರ್ವತ್ರಿಕ ಚುನಾವಣೆ | ಪೋಸ್ಟಲ್ ಬ್ಯಾಲಟ್ ಮೂಲಕ ಮತದಾನಕ್ಕೆ ಅವಕಾಶ| ಬಿ.ಟಿ.ಕುಮಾರಸ್ವಾಮಿ

News Desk Chitradurga News
Last updated: 12 March 2024 17:33
News Desk Chitradurga News
1 year ago
Share
ಉಪವಿಭಾಗಾಧಿಕಾರಿಗಳ ಕಚೇರಿಯಲ್ಲಿ ಏರ್ಪಡಿಸಿದ್ದ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ
ಉಪವಿಭಾಗಾಧಿಕಾರಿಗಳ ಕಚೇರಿಯಲ್ಲಿ ಏರ್ಪಡಿಸಿದ್ದ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 12 MARCH 2024

ಚಿತ್ರದುರ್ಗ: ಲೋಕಸಭೆ ಸಾರ್ವತ್ರಿಕ ಚುನಾವಣೆಯ ಸಂದರ್ಭದಲ್ಲಿ ಅಗತ್ಯ ಸೇವೆಯಲ್ಲಿ ಕರ್ತವ್ಯ ನಿರತರಾಗಿರುವ ವಿವಿಧ ಕ್ಷೇತ್ರಗಳ ಅಧಿಕಾರಿ, ಸಿಬ್ಬಂದಿಗಳು ಮತದಾನದಿಂದ ವಂಚಿತರಾಗದಂತೆ ಚುನಾವಣಾ ಆಯೋಗ ಪೋಸ್ಟಲ್ ಬ್ಯಾಲಟ್ ಮೂಲಕ ಮತದಾನ ಮಾಡಲು ಅವಕಾಶ ಕಲ್ಪಿಸಿದೆ ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ ಹೇಳಿದರು.

ಇದನ್ನೂ ಓದಿ: ಹಟ್ಟಿ ತಿಪ್ಪೇಶನ ಸನ್ನಿಧಿಯಲ್ಲಿ ಗುಗ್ಗರಿ ಹಬ್ಬ ಸಂಭ್ರಮ | ಜಾತ್ರಾ ಮಹೋತ್ಸವದ ಸಿದ್ಧತೆ ಶುರು

ಪೋಸ್ಟಲ್ ಬ್ಯಾಲಟ್ ನಲ್ಲಿ ಮತದಾನ ಮಾಡುವುದಕ್ಕೆ ಸಂಬಂಧಿಸಿದಂತೆ ಉಪವಿಭಾಗಾಧಿಕಾರಿಗಳ ಕಚೇರಿಯಲ್ಲಿ ಏರ್ಪಡಿಸಿದ್ದ ಸಭೆಯಲ್ಲಿ ಮಾತನಾಡಿದ ಅವರು, ಪ್ರತಿಯೊಂದು ಮತವೂ ಅಮೂಲ್ಯವಾಗಿದ್ದು, ಮತದಾನದ ಮಹತ್ವ ಕುರಿತು ಸ್ವೀಪ್ ಕಾರ್ಯಕ್ರಮಗಳ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ.

ಹೀಗಾಗಿ ಮತದಾನದ ದಿನದಂದು ತಮ್ಮ ಕರ್ತವ್ಯದ ಕಾರಣದಿಂದಾಗಿ ಯಾರೊಬ್ಬ ಅರ್ಹ ಮತದಾರನೂ ಕೂಡ ಮತದಾನದಿಂದ ವಂಚಿತರಾಗಬಾರದು ಎಂಬ ಸದುದ್ದೇಶದಿಂದ ಚುನಾವಣಾ ಆಯೋಗವು ಅಗತ್ಯ ಸೇವೆಯಲ್ಲಿ ಕರ್ತವ್ಯ ನಿರತರಾಗುವ

ಇದನ್ನೂ ಓದಿ: ಕೋಟೆನಾಡಿನ ಸಾಧಕಿಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ

ಬೆಸ್ಕಾಂ, ಬಿಎಸ್‍ಎನ್‍ಎಲ್, ರೈಲ್ವೆ, ದೂರದರ್ಶನ, ಆಕಾಶವಾಣಿ, ಆರೋಗ್ಯ ಇಲಾಖೆ, ವಿಮಾನಯಾನ, ರಾಜ್ಯದ ಸರ್ಕಾರಿ ಸಾರಿಗೆ ಸಂಸ್ಥೆಗಳ ನೌಕರರು, ಅಗ್ನಿಶಾಮಕ ಸೇವೆ, ಮಾನ್ಯತೆ ಹೊಂದಿರುವ ಪತ್ರಕರ್ತರು, ಟ್ರಾಫಿಕ್ ಪೊಲೀಸ್, ಆಂಬುಲೆನ್ಸ್ ಸೇವೆಯಲ್ಲಿರುವರು, ಕಾರಾಗೃಹ, ಕಂಟ್ರೋಲ್ ರೂಂ ನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ಸಿಬ್ಬಂದಿ ಹಾಗೂ ಗ್ರಾಮಾಂತರ ಮತ್ತು ನಗರ ಕುಡಿಯುವ ನೀರು ಸರಬರಾಜು ಇಲಾಖೆಯ ಅಧಿಕಾರಿ, ಸಿಬ್ಬಂದಿಗಳು

ಕರ್ತವ್ಯದ ಕಾರಣದಿಂದಾಗಿ ಮತದಾನದ ದಿನದಂದು ಮತ ಚಲಾಯಿಸಲು ಸಾಧ್ಯವಾಗದ ಸಂದರ್ಭ ಬರಬಹುದಾದ ನೌಕರರಿಗೆ ಮತದಾನ ದಿನದ ಬದಲಿಗೆ ಮತದಾನ ದಿನಕ್ಕೂ ಪೂರ್ವದಲ್ಲಿಯೇ ಫೆಸಿಲಿಟೇಶನ್ ಸೆಂಟರ್‍ನಲ್ಲಿ ಅಥವಾ ಪೋಸ್ಟಲ್ ಬ್ಯಾಲಟ್ ಮೂಲಕ ಮತದಾನ ಮಾಡಬಹುದು.

ಇದನ್ನೂ ಓದಿ: ಅಪ್ಪಾಜಿ ನಡೆದಾಡಿದ ಚಿತ್ರದುರ್ಗ ನನ್ನೂರು | ಕೋಟೆನಾಡಲ್ಲಿ ಸೆಂಚುರಿ ಸ್ಟಾರ್ ಸಂಚಲನ

ನೌಕರರು ಫೆಸಿಲಿಟೇಶನ್ ಸೆಂಟರ್‍ನಲ್ಲಿ ಮತದಾನ ಮಾಡಲು ಹಾಗೂ ಪೋಸ್ಟಲ್ ಬ್ಯಾಲಟ್ ಮತದಾನದ ಸೇವೆ ಪಡೆಯಲು, ಸಂಬಂಧಪಟ್ಟ ಇಲಾಖೆಯಿಂದ ನಮೂನೆ 12ಡಿ ನಮೂನೆಯನ್ನು ಪಡೆದು, ಸ್ವೀಕೃತಿ ನೀಡಬೇಕು. ಬಳಿಕ ಭರ್ತಿ ಮಾಡಿದ ನಮೂನೆಯನ್ನು ಸಂಬಂಧಪಟ್ಟ ಕ್ಷೇತ್ರಕ್ಕೆ ನಿಗದಿಪಡಿಸಲಾಗಿರುವ ನೋಡಲ್ ಅಧಿಕಾರಿಗಳಿಗೆ ಆಯಾ ಇಲಾಖಾ ಅಧಿಕಾರಿಗಳು ಸಲ್ಲಿಸಬೇಕು.

12 ಡಿ ನಮೂನೆಯನ್ನು ಒಮ್ಮೆ ಸಲ್ಲಿಸಿದ ಬಳಿಕ, ಅಂತಹವರು, ಫೆಸಿಲಿಟೇಶನ್ ಸೆಂಟರ್‍ನಲ್ಲಿ ಅಥವಾ ಪೋಸ್ಟಲ್ ಬ್ಯಾಲಟ್ ಮೂಲಕವೇ ಮತದಾನ ಮಾಡಬೇಕು, ಮತದಾನ ದಿನದಂದು ಮತಗಟ್ಟೆಗೆ ತೆರಳಿ ಮತದಾನ ಮಾಡಲು ಅವಕಾಶ ಇರುವುದಿಲ್ಲ ಎಂದು ಅಪರ ಜಿಲ್ಲಾಧಿಕಾರಿಗಳು ಈ ಸಂದರ್ಭದಲ್ಲಿ ಹೇಳಿದರು.

ಇದನ್ನೂ ಓದಿ: ಮುರುಘಾ ಶರಣರ ವಿರುದ್ಧದ ಆರೋಪಗಳ ಮರು ನಿಗಧಿ

ವಿವಿಧ ಇಲಾಖೆಯ ಅಧಿಕಾರಿಗಳು ತಮ್ಮ ಅಧೀನದಲ್ಲಿ ಬರುವಂತಹ ಅಗತ್ಯ ಸೇವೆಗಳ ಸಿಬ್ಬಂದಿಗಳ ವಿವರವನ್ನು ಕೂಡಲೆ ನೋಡಲ್ ಅಧಿಕಾರಿಗಳಿಗೆ ಸಲ್ಲಿಸುವಂತೆ ಸೂಚನೆ ನೀಡಿದರು.

ಮತದಾನ ಕೇಂದ್ರಕ್ಕೆ ತೆರಳಿ ಮತ ಚಲಾಯಿಸಲು ತೊಂದರೆ ಇರುವಂತಹ ವಿಶೇಷ ಚೇತನರು ಹಾಗೂ 85 ವರ್ಷ ಮೇಲ್ಪಟ್ಟ ವಯೋವೃದ್ಧರು ಕೂಡ ಮತದಾನದಿಂದ ವಂಚಿತರಾಗಬಾರದು ಎಂಬ ಸದುದ್ದೇಶದಿಂದ, ಅವರ ಮನೆ ಮನೆಗೆ ತೆರಳಿ, ಮತದಾನ ಪಡೆಯಲು ವ್ಯವಸ್ಥೆ ಮಾಡಲಾಗಿದೆ.

ಇದನ್ನೂ ಓದಿ: ಕುಡಿಯುವ ನೀರಿಗೆ ತೊಂದರೆಯಾಗದಂತೆ ಕ್ರಮ

ನಿಗದಿತ ನಮೂನೆಯನ್ನು ಆಯಾ ಬೂತ್ ಮಟ್ಟದ ಅಧಿಕಾರಿಗಳ ಮೂಲಕ ತಲುಪಿಸಿ, ಮತದಾನ ದಿನಕ್ಕೂ ಪೂರ್ವದಲ್ಲಿಯೇ ವಿಶೇಷ ಚೇತನರು ಹಾಗೂ 85 ವರ್ಷ ಮೇಲ್ಪಟ್ಟ ವಯೋವೃದ್ಧರ ಮನೆ ಮನೆಗೆ ಚುನಾವಣಾ ಸಿಬ್ಬಂದಿ ತೆರಳಿ, ಮತದಾನ ಪಡೆಯುವರು ಎಂದು ಅಪರ ಜಿಲ್ಲಾಧಿಕಾರಿಗಳು ಮಾಹಿತಿ ನೀಡಿದರು.

ಅಗತ್ಯ ಸೇವೆಗಳಡಿ ಬರುವಂತಹ ಇಲಾಖೆಗಳಿಂದ ಅಗತ್ಯ ಮಾಹಿತಿಯನ್ನು ಪಡೆದು, ಅವರ ಮತದಾನಕ್ಕೆ ಪೂರಕ ವ್ಯವಸ್ಥೆ ಕಲ್ಪಿಸುವಲ್ಲಿ, ಅಧಿಕಾರಿಗಳು ಯಾವುದೇ ನಿರ್ಲಕ್ಷ್ಯ ತೋರುವಂತಿಲ್ಲ ಎಂದು ಅಪರ ಜಿಲ್ಲಾಧಿಕಾರಿಗಳು ಎಚ್ಚರಿಕೆ ನೀಡಿದರು.

ಇದನ್ನೂ ಓದಿ: ರೈಲ್ವೇ ಇಲಾಖೆಯಲ್ಲಿ 9144 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಸಭೆಯಲ್ಲಿ ಬ್ಯಾಲಟ್ ನೋಡಲ್ ಅಧಿಕಾರಿಯಾದ ರೇಷ್ಮೆ ಇಲಾಖೆ ಉಪನಿರ್ದೇಶಕ ಎಂ.ಬಿ. ಬೀರಲದಿನ್ನಿ, ಡಿಹೆಚ್‍ಒ ಡಾ. ರೇಣುಪ್ರಸಾದ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಕಾರ್ಯಪಾಲಕ ಅಭಿಯಂತರ ಬಸವನಗೌಡ ಪಾಟೀಲ್, ಚುನಾವಣಾ ಶಾಖೆಯ ಮಲ್ಲಿಕಾರ್ಜುನ್ ಸೇರಿದಂತೆ ರೈಲ್ವೆ, ಆಕಾಶವಾಣಿ, ಅಗ್ನಿಶಾಮಕ, ಕೆಎಸ್‍ಆರ್‍ಟಿಸಿ, ಟ್ರಾಫಿಕ್ ಪೊಲೀಸ್, ಬೆಸ್ಕಾಂ ಇಲಾಖೆಯ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:B.T. KumaraswamyChitradurgaLok Sabha ElectionsPostal BallotVotingಚಿತ್ರದುರ್ಗಪೋಸ್ಟಲ್ ಬ್ಯಾಲಟ್ಬಿ.ಟಿ.ಕುಮಾರಸ್ವಾಮಿಮತದಾನಲೋಕಸಭೆ ಚುನಾವಣೆ
Share This Article
Facebook Email Print
Previous Article ರುಡ್‌ಸೆಟ್‌ ಸಂಸ್ಥೆಯಲ್ಲಿ ತರಬೇತಿ | ಮಾರ್ಚ್‌ 18 ರಂದು ಆಯ್ಕೆ ಸಂದರ್ಶನ
Next Article ಚುನಾವಣೆ ಹೊಸ್ತಿಲಲ್ಲಿ ಸರ್ಕಾರಿ ನೌಕರರಿಗೆ ಬಂಪರ್‌ | ಹೆಚ್ಚಳವಾಯ್ತು ತುಟ್ಟಿಭತ್ಯೆ | ಯಾರಿಗೆ ಎಷ್ಟು ಏರಿಕೆ ಇಲ್ಲಿದೆ ಕಂಪ್ಲೀಟ್‌ ಡಿಟೇಲ್ಸ್
Leave a Comment

Leave a Reply Cancel reply

Your email address will not be published. Required fields are marked *

Sadguru Pradeep participate hosadurga bandh
ಹೊಸದುರ್ಗ ಬಂದ್‌ | ಇಂದು ಅಂತ್ಯವಲ್ಲ, ಆರಂಭ | ಸದ್ಗುರು ಪ್ರದೀಪ್‌
ಹೊಸದುರ್ಗ
ಹೊಸದುರ್ಗ ಸ್ಥಿತಿ ಸಮುದ್ರದ ನೆಂಟಸ್ಥನ, ಉಪ್ಪಿಗೆ ಬರ | ಕೆ.ಎಸ್.ನವೀನ್
ಹೊಸದುರ್ಗ
ಹೊಸದುರ್ಗ ಬಂದ್ | ನೀರಿಗೆ ಅಡ್ಡಿ ಕಿಡಿಗೇಡಿ ಕೃತ್ಯ | ಎಸ್.ಲಿಂಗಮೂರ್ತಿ
ಹೊಸದುರ್ಗ
ಹೊಸದುರ್ಗ ಬಂದ್ | ಶಾಸಕ ಬಿ.ಜಿ.ಗೋವಿಂದಪ್ಪ ನೇತೃತ್ವದಲ್ಲಿ ಹೋರಾಟ
ಹೊಸದುರ್ಗ
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up