CHITRADURGA NEWS | 22 JULY 2024
ಚಿತ್ರದುರ್ಗ: ಕೋಟೆನಾಡಿನ ಜನರ ಬಹುನಿರೀಕ್ಷಿತ ಕೇಂದ್ರೀಯ ವಿದ್ಯಾಲಯದ ಕನಸು ನನಸಾಗುವ ಕಾಲ ಬಂದಿದೆ. 18ನೇ ಲೋಕಸಭಾ ಅಧಿವೇಶದ ಮೊದಲ ದಿನವೇ ಜಿಲ್ಲೆಯ ಅಭಿವೃದ್ಧಿಯ ಹೆಬ್ಬಾಗಿಲು ತೆರೆದಂತಾಗಿದೆ. ಅಧಿವೇಶದ ಮೊದಲ ದಿನದ ಮೊದಲನೇ ಪ್ರಶ್ನೆ ಚಿತ್ರದುರ್ಗ ಜಿಲ್ಲೆಯದ್ದಾಗಿತ್ತು ಎಂಬುದು ವಿಶೇಷ.
ಸಂಸದ ಗೋವಿಂದ ಎಂ.ಕಾರಜೋಳರವರು, ಚಿತ್ರದುರ್ಗಕ್ಕೆ ಕೇಂದ್ರೀಯ ವಿದ್ಯಾಲಯ ಶಾಲೆ ಕುರಿತಂತೆ ಧ್ವನಿ ಎತ್ತಿದರು. ‘ನನ್ನ ಕ್ಷೇತ್ರ ಚಿತ್ರದುರ್ಗದಲ್ಲಿ ಹಿಂದುಳಿದ ವರ್ಗಕ್ಕೆ ಸೇರಿದ ಪರಿಶಿಷ್ಟ ಜಾತಿ, ಪಂಗಡ, ಕಾಡುಗೊಲ್ಲ ಸಮಾಜಗಳ ಜನರು ಶೇ. 52 ಕ್ಕೂ ಅಧಿಕವಿದ್ದಾರೆ. ಅಂಕಿ ಅಂಶಗಳ ಪ್ರಕಾರ ನಮ್ಮದು ದೇಶದಲ್ಲೇ ಅತೀ ಹಿಂದುಳಿದ ಜಿಲ್ಲೆಯಾಗಿದೆ. ಹಾಗಾಗಿ ಜಿಲ್ಲೆಯಲ್ಲಿನ ಬಡಮಕ್ಕಳು ಗುಣಮಟ್ಟದ ಶಿಕ್ಷಣದಿಂದ ವಂಚಿತರಾಗಿದ್ದಾರೆ. ಈ ಕಾರಣದಿಂದ ಶಿಕ್ಷಣ ಸಚಿವರು ಚಿತ್ರದುರ್ಗದಲ್ಲಿ ಕೇಂದ್ರೀಯ ವಿದ್ಯಾಲಯದ ಸ್ಥಾಪನೆ ಬಗ್ಗೆ ಸೂಕ್ತವಾಗಿ ಶೀಘ್ರ ಕ್ರಮ ಕೈಗೊಳ್ಳಬೇಕಿದೆ’ ಎಂದು ಮನವಿ ಮಾಡಿದರು.
ಇದನ್ನೂ ಓದಿ: ಪರೀಕ್ಷೆಯಲ್ಲಿ ಕಡಿಮೆ ಅಂಕ | ಎಸ್ಎಸ್ಎಲ್ಸಿ ವಿದ್ಯಾರ್ಥಿ ಆತ್ಮಹತ್ಯೆ
‘ಗೋವಿಂದ ಕಾರಜೋಳರವರು ಕೇಳಿರುವ ವಿಷಯ ಗಮನಕ್ಕೆ ಬಂದಿದೆ. ಈ ಬಗ್ಗೆ ಪರಿಶೀಲಿಸಿ ಉತ್ತರ ಕೊಡುತ್ತೇನೆ’ ಎಂದು ರಾಜ್ಯ ಶಿಕ್ಷಣ ಸಚಿವ ಜಯಂತ್ ಚೌದರಿ ತಿಳಿಸಿದರು.
‘ಇಲ್ಲಿಗೆ ಆರಿಸಿ ಬಂದಿರುವ ಸದಸ್ಯರು ಪ್ರಶ್ನೋತ್ತರ ವೇಳೆಯಲ್ಲಿ ಬೇಡಿಕೆಗಳನ್ನು ಖಂಡಿತವಾಗಿ ಇಡುತ್ತಾರೆ. ಬೇಡಿಕೆಗಳ ಇಡದಿದ್ದ ಮೇಲೆ ಪ್ರಶ್ನೋತ್ತರ ವೇಳೆಯಲ್ಲಿ ಇನ್ನೇನು ಕೇಳಬೇಕು ಹೇಳಿ ?’ ಎಂದು ಸಭಾಪತಿ ಓಂ ಬಿರ್ಲಾ ಅವರು ನಗುತ್ತಲೇ ಶಿಕ್ಷಣ ಸಚಿವರಿಗೆ ಹೇಳಿದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number