CHITRADURGA NEWS | 25 JULY 2024
ಚಿತ್ರದುರ್ಗ: ಲಾರಿ ಡಿಕ್ಕಿಯಾಗಿ ರಾಷ್ಟ್ರೀಯ ಹೆದ್ದಾರಿಯ ತಡೆಗೋಡೆಯೇ ಕುಸಿದು ಬಿದ್ದಿದೆ. ಲಾರಿ ಚಾಲಕ ಮೃತಪಟ್ಟಿದ್ದಾನೆ. ಬುಧವಾರ ತಡರಾತ್ರಿ ಘಟನೆ ನಡೆದಿದೆ.
ಬೆಂಗಳೂರಿನಿಂದ ಬೆಳಗಾವಿ ಕಡೆಗೆ ಸಂಚರಿಸುತ್ತಿದ್ದ ಲಾರಿಯೊಂದು ಕ್ಯಾದಿಗೆರೆ ಬಳಿ ತಡೆಗೋಡೆಗೆ ಡಿಕ್ಕಿಯಾಗಿದೆ. ಮುಂದೆ ಚಲಿಸುತ್ತಿದ್ದ ಲಾರಿಗೆ ಹಿಂದಿನಿಂದ ವೇಗವಾಗಿ ಬಂದ ಲಾರಿ ಡಿಕ್ಕಿ ಹೊಡೆದು ನಂತರ ತಡೆಗೋಡೆಗೆ ಅಪ್ಪಳಿಸಿದೆ. ಲಾರಿ ಗುದ್ದಿದ ರಭಸಕ್ಕೆ ತಡೆಗೋಡೆ ಪಕ್ಕದ ಸರ್ವೀಸ್ ರಸ್ತೆಗೆ ಉರುಳಿ ಬಿದ್ದಿದೆ.
ಇದನ್ನೂ ಓದಿ: ನಟ ದರ್ಶನ್ ಮನೆಗೆ ಬರೋ ವಿಚಾರ | ರೇಣುಕಾಸ್ವಾಮಿ ತಂದೆ ಫಸ್ಟ್ ರಿಯಾಕ್ಷನ್

ಘಟನೆಯಲ್ಲಿ ಲಾರಿ ಚಾಲಕ 35 ವರ್ಷದ ಶಂಕರ ಅಥರ್ಕಿ ಮೃತಪಟ್ಟಿದ್ದಾನೆ. ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು– ಪೂನಾ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ – 4ಕ್ಕೆ ಚಿತ್ರದುರ್ಗ ಬಳಿ ಹೊಸದಾಗಿ ಬೈಪಾಸ್ ನಿರ್ಮಿಸಲಾಗಿತ್ತು. ಚಿತ್ರದುರ್ಗ ಹೊರವಲಯದ ಕ್ಯಾದಿಗೆರೆಯಿಂದ ಸೀಬಾರಕ್ಕೆ ಬೈಪಾಸ್ ಸಂಪರ್ಕ ಕಲ್ಪಿಸುವ ಈ ಹೆದ್ದಾರಿಯಲ್ಲಿ ಕ್ಯಾದಿಗೆರೆ ಬಳಿ ತಡೆಗೋಡೆ ಕುಸಿದಿದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
