CHITRADURGA NEWS | 03 JUNE 2025
ಚಿತ್ರದುರ್ಗ: ಶ್ರೀ ರಾಘವೇಂದ್ರ ಸ್ವಾಮೀಜಿ ಸ್ಥಾಪಿಸಿದ ಮಲ್ಲಾಡಿಹಳ್ಳಿ ಅನಾಥ ಸೇವಾಶ್ರಮ ವಿಶ್ವಸ್ಥ ಸಮಿತಿ ಅಧ್ಯಕ್ಷರಾಗಿ ಚಿತ್ರದುರ್ಗ ಮಾದಾರ ಚನ್ನಯ್ಯ ಗುರುಪೀಠದ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಆಯ್ಕೆ ಆಗಿದ್ದಾರೆ.
Also Read: ಸೌಟ್ಸ್ ಮತು ಗೈಡ್ಸ್ ನಾ ರಾಜ್ಯ ಪುರಸ್ಕಾರ ಪ್ರಶಸ್ತಿ | ಜಿ.ಪಂ. ಸಿಇಒ ಎಸ್.ಜೆ.ಸೋಮಶೇಖರ್ ವಿತರಣೆ

ಜಿಲ್ಲೆಯ ಹೊಳಲ್ಕೆರೆ ತಾಲ್ಲೂಕಿನ ಮಲ್ಲಾಡಿಹಳ್ಳಿ ಅನಾಥ ಸೇವಾಶ್ರಮ ವಿಶ್ವಸ್ಥ ಸಮಿತಿ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆ ಆಗಿದ್ದಾರೆ.
ಮಲ್ಲಾಡಿಹಳ್ಳಿ ರಾಘವೇಂದ್ರ ಶ್ರೀ, ಸೂರ್ ದಾಸ್ ಶ್ರೀಗಳ ಕಟ್ಟಿದ ಆಶ್ರಮ ಇದಾಗಿದ್ದು, ಅನಾಥ ಸೇವಾಶ್ರಮ ವಿಶ್ವಸ್ಥ ಸಮಿತಿ ಸಭೆಯಲ್ಲಿ ಅವಿರೋಧ ಆಯ್ಕೆಯಾಗಿದ್ದಾರೆ.
ಅಧ್ಯಕ್ಷರಾಗಿ ಆಯ್ಕೆಯಾದ ಬಳಿಕ ರಾಘವೇಂದ್ರ ಸ್ವಾಮಿ, ಸೂರ್ ದಾಸ್ ಶ್ರೀಗಳ ಗದ್ದುಗೆ ದರ್ಶನ, ಪೂಜೆ ಸಲ್ಲಿಸಿ ಅಧಿಕಾರ ಸ್ವೀಕಾರಿಸಿದರು.
ಮಾದಾರ ಚೆನ್ನಯ್ಯ ಶ್ರೀಗಳಿಗೆ ವಿಶ್ವಸ್ಥ ಸಮಿತಿ ಉಪಾದ್ಯಕ್ಷ ರಾಘವೇಂದ್ರ ಪಾಟೀಲ್, ಕಾರ್ಯದರ್ಶಿ ಎಸ್.ಕೆ.ಬಸವರಾಜನ್ ಸೇರಿ ಸಮಿತಿ ಸದಸ್ಯರ ಸಾಥ್ ನೀಡಿದರು.
Also Read: RCB ಕಪ್ ಗೆಲ್ಲಲಿ | ಬಂಗಾರದ IPL CUP ತಯಾರಿಸಿದ ಹೊಸದುರ್ಗದ ಯುವಕರು
ಈ ಹಿಂದೆ ಚಿತ್ರದುರ್ಗ ಮುರುಘಾ ಮಠದ ಡಾ.ಶ್ರೀ ಶಿವಮೂರ್ತಿ ಶರಣರು ಅಧ್ಯಕ್ಷರಾಗಿದ್ದರು.
ಫೋಕ್ಸೋ ಕೇಸಲ್ಲಿ ಮುರುಘಾ ಶ್ರೀಗೆ ಜೈಲಾದ ಬಳಿಕ ತೆರವಾಗಿದ್ದ ಅಧ್ಯಕ್ಷ ಸ್ಥಾನ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
