By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಬುನಾದಿ ಕಲಿಕಾ ಸಾಧನೆ ಮೌಲ್ಯಮಾಪನ ಸಮೀಕ್ಷೆ
    ಡಿಜಿಟಲ್ ತಂತ್ರಜ್ಞಾನ ಸಮೀಕ್ಷೆ | ಜಿಲ್ಲೆಯ 90 ವಿದ್ಯಾರ್ಥಿಗಳು ಭಾಗೀ 
    6 minutes ago
    ದಿವ್ಯಾಂಗ ಜನ ಪ್ರಯಾಣಿಕರಿಗೆ ರಿಯಾಯಿತಿ ಗುರುತಿನ ಚೀಟಿ | ಆನ್‌ಲೈನ್ ಮೂಲಕ ವಿತರಣೆ
    59 minutes ago
    ವಿದ್ಯಾರ್ಥಿಗಳಿಗೆ ನ್ಯಾ.ಸುದೀನ್ ಕುಮಾರ್ ಬಹುಮಾನ ವಿತರಣೆ
    ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಚಿತ್ರಕಲಾ ಸ್ಪರ್ಧೆ | ವಿಜೇತ ವಿದ್ಯಾರ್ಥಿಗಳಿಗೆ ನ್ಯಾ.ಸುದೀನ್ ಕುಮಾರ್ ಬಹುಮಾನ ವಿತರಣೆ
    1 hour ago
    ಚಿತ್ರದುರ್ಗ ತಾಲ್ಲೂಕು ಪಂಚಾಯತ್
    ಜೂನ್ 16ರಂದು ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಅಧ್ಯಕ್ಷತೆಯಲ್ಲಿ KDP ಸಭೆ 
    9 hours ago
    ಶಿಕ್ಷಕರ ಆಯ್ಕೆಗೆ ಜೂನ್ 15ರಂದು ತರಗತಿ ಪ್ರಾತ್ಯಕ್ಷಿಕೆ
    9 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    Hosadurga police work
    INSTAGRAM, FECEBOOK ಪರಿಚಯ | ಲೈಂಗಿಕ ದುರ್ಬಳಕೆ ವಂಚನೆ ಮಾಡುತ್ತಿದ್ದ ಆರೋಪಿ ಬಂಧನ | ಚಿನ್ನಾಭರಣ ವಶಕ್ಕೆ
    21 hours ago
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    1 week ago
    Accident near molakalmuru
    ಮೊಳಕಾಲ್ಮೂರು ಬಳಿ ಮತ್ತೊಂದು ಅಪಘಾತ | ಚಳ್ಳಕೆರೆಯ 5 ಜನ ಸಾವು | ಒಂದೇ ದಿನದ ಅಂತರದಲ್ಲಿ ಜಿಲ್ಲೆಯಲ್ಲಿ ಹತ್ತು ಸಾವು
    2 weeks ago
    ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ | 5 ಜನರ ದುರ್ಮರಣ
    2 weeks ago
    Accident between bike and car
    ಬೈಕ್‌ – ಕಾರು ನಡುವೆ ಅಪಘಾತ | ಸ್ಥಳದಲ್ಲೇ ಇಬ್ಬರು ಮೃತ
    3 weeks ago
  • ತಾಲೂಕು
    ತಾಲೂಕುShow More
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    2 days ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    2 weeks ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    2 weeks ago
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    3 weeks ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    3 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    5 days ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    7 days ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    1 week ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    1 week ago
    ARECANUT RATE
    ಅಡಿಕೆ ಧಾರಣೆ | 4 ಜೂನ್‌ | ಇಂದಿನ ರಾಶಿ, ಚಾಲಿ, ಕೆಂಪಡಕೆ ರೇಟ್‌
    1 week ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 13 | ಕೈಗೊಂಡ ಕೆಲಸಗಳಲ್ಲಿ ಅಡಚಣೆಗಳು, ಅರೋಗ್ಯದಲ್ಲಿ ಎಚ್ಚರ
    12 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 12 | ಕೈಗೊಂಡ ಕೆಲಸದಲ್ಲಿ ವಿಳಂಬ, ಆರ್ಥಿಕ ಸಂಕಷ್ಟ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 11 | ಉದ್ಯೋಗದ ವಾತಾವರಣ ಅನುಕೂಲಕರ, ಹೊಸ ವಾಹನ ಖರೀದಿ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 10 | ವ್ಯಾಪಾರ ಮತ್ತು ಉದ್ಯೋಗಗಳಲ್ಲಿ ನಿರುತ್ಸಾಹ ವಾತಾವರಣ, ಹಠಾತ್ ಪ್ರಯಾಣದ ಸೂಚನೆ
    4 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 09 | ಹಠಾತ್ ಆರ್ಥಿಕ ಲಾಭ, ನಿರುದ್ಯೋಗಿಗಳಿಗೆ ಶುಭ ಸುದ್ದಿ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 12 | ರಾಗಿ, ಮೆಕ್ಕೆಜೋಳ ರೇಟ್….
    1 day ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 11 | ಹತ್ತಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 10 | ಮೆಕ್ಕೆಜೋಳ, ರಾಗಿ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್..
    4 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 08 | ಶೇಂಗಾ, ರಾಗಿ ರೇಟ್ ಎಷ್ಟಿದೆ?
    5 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ನೂತನ ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಾಸಕ ಎಂ.ಚಂದ್ರಪ್ಪ ಭೂಮಿಪೂಜೆ 
    1 week ago
    ಸಿ.ಸಿ.ರಸ್ತೆ ಕಾಮಗಾರಿಗೆ ಭೂಮಿ ಪೂಜೆ
    ಮೂರ್ನಾಲ್ಕು ದಿನಗಳಲ್ಲೇ ತಾಳಿಕಟ್ಟೆ ಕೆರೆಗೆ‌ ನೀರು | ಶಾಸಕ‌ ಎಂ.ಚಂದ್ರಪ್ಪ
    2 weeks ago
    ಪೂರ್ವಭಾವಿ ಸಭೆ
    ಹೊಳಲ್ಕೆರೆ ಜಿಲ್ಲೆಯಲ್ಲಿಯೇ ಮಾದರಿ ಕ್ಷೇತ್ರ | ಶಾಸಕ ಎಂ.ಚಂದ್ರಪ್ಪ 
    1 month ago
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    2 months ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 months ago
  • ಹಿರಿಯೂರು
    ಹಿರಿಯೂರುShow More
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    3 weeks ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    2 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    4 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    4 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    4 months ago
  • ಹೊಸದುರ್ಗ
    ಹೊಸದುರ್ಗShow More
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    2 days ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    2 weeks ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    2 weeks ago
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    3 weeks ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    3 weeks ago
  • Life Style
    Life StyleShow More
    pregnant women to eat pumpkin seeds
    ಗರ್ಭಿಣಿಯರು ಕುಂಬಳಕಾಯಿ ಬೀಜಗಳನ್ನು ತಿನ್ನುವುದು ಸುರಕ್ಷಿತವೇ? 
    11 hours ago
    green chilies
    ಹಸಿರು ಮೆಣಸಿನಕಾಯಿ ಕತ್ತರಿಸುವಾಗ ಕೈ ಖಾರವಾಗಬಾರದಂತಿದ್ದರೆ ಈ ಟ್ರಿಕ್ಸ್ ಫಾಲೋ ಮಾಡಿ
    12 hours ago
    ad habits of yours are increasing your debt burden
    ನಿಮ್ಮ ಈ ನಾಲ್ಕು ಕೆಟ್ಟ ಅಭ್ಯಾಸಗಳು ನಿಮ್ಮ ಸಾಲದ ಹೊರೆಯನ್ನು ಹೆಚ್ಚಿಸುತ್ತಿವೆಯಂತೆ 
    1 day ago
    trawberry-honey
    ಕಳೆದುಹೋದ ತೇವಾಂಶವನ್ನು ಮರಳಿ ತರಲು ಹಚ್ಚಿ ಸ್ಟ್ರಾಬೆರಿ-ಜೇನುತುಪ್ಪದ ಫೇಸ್ ಪ್ಯಾಕ್
    2 days ago
    Shoe Stains From Your Feet
    ಪಾದಗಳಲ್ಲಿ ಮೂಡಿರುವ ಚಪ್ಪಲಿಯ ಕಲೆಗಳನ್ನು ಹೋಗಲಾಡಿಸಲು ಮನೆಯಲ್ಲೇ ಈ ಪ್ಯಾಕ್ ತಯಾರಿಸಿ ಹಚ್ಚಿ
    2 days ago
Reading: ಸಾಹಿತಿ ಬಿ.ಎಲ್‌.ವೇಣು ಅವರಿಗೆ ಸಂದ ಮದಕರಿ ನಾಯಕ ಪ್ರಶಸ್ತಿ ಗೌರವ | ರಾಜನಹಳ್ಳಿ ವಾಲ್ಮೀಕಿ ಜಾತ್ರೆಗೆ ಅಂತಿಮ ಸಿದ್ಧತೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಸಾಹಿತಿ ಬಿ.ಎಲ್‌.ವೇಣು ಅವರಿಗೆ ಸಂದ ಮದಕರಿ ನಾಯಕ ಪ್ರಶಸ್ತಿ ಗೌರವ | ರಾಜನಹಳ್ಳಿ ವಾಲ್ಮೀಕಿ ಜಾತ್ರೆಗೆ ಅಂತಿಮ ಸಿದ್ಧತೆ

News Desk Chitradurga News
Last updated: 7 February 2024 11:15
News Desk Chitradurga News
2 years ago
Share
SHARE

CHITRADURGA NEWS | 07 FEBRUARY 2024
ಚಿತ್ರದುರ್ಗ: ಹರಿಹರ ತಾಲ್ಲೂಕಿನ ರಾಜನಹಳ್ಳಿ ವಾಲ್ಮೀಕಿ ಗುರುಪೀಠ ನೀಡುವ ಮದಕರಿ ನಾಯಕ ಪ್ರಶಸ್ತಿಗೆ ಕತೆಗಾರರಾಗಿ ಮತ್ತು ಚಲನಚಿತ್ರ ಸಂಭಾಷಣಕಾರರಾಗಿ ಪ್ರಸಿದ್ಧಿ ಪಡೆದ ಸಾಹಿತಿ ಬಿ.ಎಲ್.ವೇಣು ಹಾಗೂ ವಾಲ್ಮೀಕಿ ರತ್ನ ಪ್ರಶಸ್ತಿಗೆ ಆಂಧ್ರಪ್ರದೇಶದ ಕೇಂದ್ರೀಯ ಬುಡಕಟ್ಟು ವಿಶ್ವವಿದ್ಯಾಲಯದ ಕುಲಪತಿ ತೇಜಸ್ವಿ ಕಟ್ಟಿಮನಿ ಆಯ್ಮೆಯಾಗಿದ್ದಾರೆ.

ಪ್ರಶಸ್ತಿಗಳು ತಲಾ ₹ 1 ಲಕ್ಷ ನಗದು ಹಾಗೂ ಫಲಕ ಒಳಗೊಂಡಿವೆ. ಫೆ.9 ರಂದು ಮಧ್ಯಾಹ್ನ 12.30ಕ್ಕೆ ರಾಜನಹಳ್ಳಿ ವಾಲ್ಮೀಕಿ ಗುರುಪೀಠದಲ್ಲಿ ನಡೆಯುವ ಜನ ಜಾಗೃತಿ ಜಾತ್ರಾ ಮಹೋತ್ಸವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಗುರುಪೀಠದ ಪೀಠಾಧಿಪತಿ ಪ್ರಸನ್ನಾನಂದ ಸ್ವಾಮೀಜಿ ತಿಳಿಸಿದ್ದಾರೆ.

ಇದನ್ನೂ ಓದಿ: ಚಲನಚಿತ್ರಗಳ ಆಯ್ಕೆ ಸಮಿತಿ ಅಧ್ಯಕ್ಷರಾಗಿ ಬಿ.ಎಲ್‌.ವೇಣು | ಅಭಿಮಾನಿಗಳ ಮನದಲ್ಲಿ ಸಂತಸ

ಫೆ. 8 ಮತ್ತು 9ರಂದು ನಡೆಯುವ 6ನೇ ವರ್ಷದ ಮಹರ್ಷಿ ವಾಲ್ಮೀಕಿ ಜಾತ್ರಾ ಮಹೋತ್ಸವಕ್ಕೆ ತಾಲ್ಲೂಕಿನ ರಾಜನಹಳ್ಳಿ ಮಹರ್ಷಿ ವಾಲ್ಮೀಕಿ ಗುರುಪೀಠದ ಆವರಣ ಸಿದ್ಧಗೊಂಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಹಾಗೂ ಹಲವು ಸಚಿವರು, ಮಾಜಿ ಮುಖ್ಯಮಂತ್ರಿಗಳು, ಶಾಸಕರು, ನಾಡಿನ ವಿವಿಧ ಮಠಾಧೀಶರು, ಚಿಂತಕರು, ಸಾಹಿತಿಗಳು, ಲೇಖಕರು, ನಟರು ಎರಡು ದಿನಗಳ ಮಹೋತ್ಸವದಲ್ಲಿ ಭಾಗವಹಿಸುವರು.

ಫೆ.8ರಂದು ಪೀಠಾಧಿಪತಿ ಪ್ರಸನ್ನಾನಂದ ಸ್ವಾಮೀಜಿ ಸಾನ್ನಿಧ್ಯದಲ್ಲಿ ಬೆಳಿಗ್ಗೆ 7ಕ್ಕೆ ರಾಜನಹಳ್ಳಿ ಗ್ರಾಮದಿಂದ ಶ್ರೀಮಠದವರೆಗೆ ಶ್ರೀ ಮಹರ್ಷಿ ವಾಲ್ಮೀಕಿ ಭಾವಚಿತ್ರದ ಮೆರವಣಿಗೆ ನಡೆಯಲಿದೆ. ನಂತರ ರಾಜನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶಕುಂತಲಮ್ಮ ಯಲ್ಲಪ್ಪ, ಸದಸ್ಯರು, ಗ್ರಾಮದ ಹಿರಿಯರು ಧ್ವಜಾರೋಹಣ ನೆರೆವೇರಿಸುವರು. ಸಚಿವ, ಜಾತ್ರಾ ಸಮಿತಿ ಅಧ್ಯಕ್ಷ ಕೆ.ಎನ್.ರಾಜಣ್ಣ, ಸಮಿತಿ ಸಂಚಾಲಕ ಬಿ.ಶಿವಪ್ಪ, ಗುರುಪೀಠದ ಆಡಳಿತಾಧಿಕಾರಿ ಟಿ.ಓಬಳಪ್ಪ ಉಪಸ್ಥಿತರಿರುವರು.

ಇದನ್ನೂ ಓದಿ: ಸಂಸದರ ಕಚೇರಿಗೆ ತಲೆಯಿಟ್ಟು ಮಲಗಿದ ರೈತರು

8.30ಕ್ಕೆ ಸರ್ವಧರ್ಮ ಸಾಮೂಹಿಕ ವಿವಾಹ ಮಹೋತ್ಸವ, 9.30ಕ್ಕೆ ಉದ್ಯೋಗ ಮೇಳ, 10.30ಕ್ಕೆ ಕೃಷಿ ವಸ್ತು ಪ್ರದರ್ಶನ ಉದ್ಘಾಟನೆ ನಡೆಯಲಿದೆ. ನಂತರ ಬೆಳಿಗ್ಗೆ 11 ರಿಂದ ಮಧ್ಯಾಹ್ನ 1.30ರ ವರೆಗೆ ಮಹಿಳಾ ಗೋಷ್ಠಿ, ಸಾಧಕ ಮಹಿಳೆಯರಿಗೆ ಗೌರವ ಸಮರ್ಪಣೆ, ಮಧ್ಯಾಹ್ನ 2.30ರಿಂದ ಸಂಜೆ 5.30ರ ವರೆಗೆ ನೌಕರರ ಗೋಷ್ಠಿ, ಸಂಜೆ 6ರಿಂದ 8.30ರ ವರೆಗೆ ‘ಎಸ್‌ಸಿ ಮತ್ತು ಎಸ್‌ಟಿ ಒಂದಾಗಬೇಕು ಏಕೆ’? ಕುರಿತು ಸಂಘಟನಾ ಗೋಷ್ಠಿ, ರಾತ್ರಿ 8.30ರಿಂದ ಕರಪಾಲ ಮೇಳ ಜಾನಪದ ನೃತ್ಯ, ರಾತ್ರಿ 10.30ರಿಂದ ಸಂಪೂರ್ಣ ರಾಮಾಯಣ ನಾಟಕ ಪ್ರದರ್ಶನ ನಡೆಯಲಿದೆ. ಫೆ.9ರಂದು ಬೆಳಿಗ್ಗೆ 6ರಿಂದ 7ರ ವರೆಗೆ ಸ್ವಚ್ಛತಾ ಕಾರ್ಯದ ನಂತರ ಬೆಳಿಗ್ಗೆ 9ಕ್ಕೆ 63 ಅಡಿ ಎತ್ತರದ ಭವ್ಯ ತೇರಿನ ರಥೋತ್ಸವ, ಬೆಳಿಗ್ಗೆ 9.30ರಿಂದ ನಡೆಯುವ ಧರ್ಮ ಸಭೆಯಲ್ಲಿ ನಾಡಿನ ವಿವಿಧ ಮಠಾಧೀಶರು ಭಾಗವಹಿಸುವರು. ನಂತರ ವಿವಿಧ ಕ್ಷೇತ್ರಗಳ ಸಾಧಕರಿಗೆ ಸನ್ಮಾನ ನಡೆಯಲಿದೆ.

ಮಧ್ಯಾಹ್ನ 12.30ರಿಂದ ನಡೆಯುವ ಜನ ಜಾಗೃತಿ ಜಾತ್ರಾ ಮಹೋತ್ಸವವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸುವರು. ಸಚಿವ ಕೆ.ಎನ್.ರಾಜಣ್ಣ ಅಧ್ಯಕ್ಷತೆ ವಹಿಸುವರು. ಡಿಸಿಎಂ ಡಿ.ಕೆ.ಶಿವಕುಮಾರ್, ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ, ಎಚ್.ಡಿ.ಕುಮಾರಸ್ವಾಮಿ, ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಹಾಲಿ, ಮಾಜಿ ಸಚಿವರು, ಸಂಸದರು, ಶಾಸಕರು, ಮುಖಂಡರು ಭಾಗವಹಿಸುವರು.

ಅನ್ನ ದಾಸೋಹಕ್ಕಾಗಿ 500 ಜನ ಬಾಣಸಿಗರು ಕೆಲಸ ಮಾಡುತ್ತಿದ್ದಾರೆ. 100ಕ್ಕೂ ಹೆಚ್ಚು ಊಟದ ಕೌಂಟರ್ ಸ್ಥಾಪಿಸಲಾಗುತ್ತಿದೆ. ರಾಜ್ಯ ಹಾಗೂ ಹೊರ ರಾಜ್ಯದ ವಿವಿಧ ಭಾಗಗಳಿಂದ ಜನರು ಜಾತ್ರೆಗೆ ಆಗಮಿಸುತ್ತಿದ್ದಾರೆ.

ಬಿ.ಎಲ್. ವೇಣು ಕಿರು ಪರಿಚಯ: ಐತಿಹಾಸಿಕ ಕಾದಂಬರಿಗಳ ಮೂಲಕ ಜನಪ್ರಿಯರಾಗಿರುವ ಲೇಖಕ ಬಿ.ಎಲ್. ವೇಣು. ರಂಗಭೂಮಿ ಹಿನ್ನೆಲೆಯ ಅವರು ಇತಿಹಾಸ ಮತ್ತು ಸಂಶೋಧನೆಗಳಲ್ಲಿ ಪ್ರೀತಿ ಹೊಂದಿದ್ದಾರೆ.

ವೇಣು ಚಿತ್ರದುರ್ಗದಲ್ಲಿ 1945ರ ಮೇ 27ರಂದು ಜನಿಸಿದರು. ತಂದೆ ವೃತ್ತಿ ರಂಗಭೂಮಿ ನಟರಾಗಿದ್ದ ಲಕ್ಷ್ಮಯ್ಯ. ತಾಯಿ ಸುಶೀಲಮ್ಮ ಹಾರ್ಮೋನಿಯಂ ವಾದಕಿಯಾಗಿದ್ದರು. ವೇಣು ಅವರಿಗೆ ಪ್ರೈಮರಿ ಶಾಲೆಯಲ್ಲಿದ್ದಾಗಲೇ ನಾಟಕದ ಬಗ್ಗೆ ಆಸ್ಥೆ ಮೂಡಿತು. ದುರ್ಗಕ್ಕೆ ಬಂದ ದ ಕಂಪನಿ ನಾಟಕಗಳನ್ನು ನೋಡಿ ಗೆಳೆಯರ ಜೊತೆಗೂಡಿ ತಾವೂ ನಾಟಕ ಆಡುತ್ತಿದ್ದರು. ಹೈಸ್ಕೂಲು ವಿದ್ಯಾರ್ಥಿಯಾಗಿದ್ದಾಗ ಮಾಸ್ಟರ್ ಹಿರಣ್ಣಯ್ಯನವರ ಕಂಪನಿ ನಾಟಕದಲ್ಲಿ ಬಾಲ ಕಲಾವಿದನ ಪಾತ್ರ ವಹಿಸಿದ್ದರು.

ಎಸ್‌.ಎಸ್‌.ಎಲ್‌.ಸಿ ಯಲ್ಲಿ ಉತ್ತೀರ್ಣರಾಗಿ ವಿದ್ಯಾರ್ಥಿವೇತನದಿಂದ ಬಿ.ಎಸ್ಸಿ. ಮುಗಿಸಿ ನಂತರ ಪಿಡಬ್ಲ್ಯೂಡಿ ಗುತ್ತಿಗೆದಾರರ ಕೈ ಕೆಳಗೆ ಮೇಸ್ತ್ರಿಯಾಗಿ, ಚಿತ್ರದುರ್ಗ ಕಾನೂನು ಕಾಲೇಜಿನಲ್ಲಿ ಗುಮಾಸ್ತರಾಗಿ, ಕಾಲೇಜು ಹುಡುಗ ಹುಡುಗಿಯರಲ್ಲಿ ಹಾಡು ಬರುವವರ ದಂಡುಕಟ್ಟಿ ಉಮಾವಾದ್ಯಗೋಷ್ಠಿ ನಿರ್ವಾಹಕರಾಗಿ ಹೀಗೆ ಹಲವು ವೃತ್ತಿ ಮಾಡಿದರು. ಕೆ.ಪಿ.ಎಸ್‌.ಸಿ. ಪರೀಕ್ಷೆಗೆ ಕುಳಿತು ಗುಲಬರ್ಗಾ ಜಿಲ್ಲಾ ಆಸ್ಪತ್ರೆಯಲ್ಲಿ ಎರಡನೆಯ ದರ್ಜೆಯ ಗುಮಾಸ್ತನ ಕೆಲಸ ಗಳಿಸಿದರು.

ವೇಣು ತಾವು ಸಾಹಿತ್ಯ ಓದಿ ಪ್ರೇರಿತರಾಗಿ ಬರೆದ ಕಥೆಗಳು ಜನಪ್ರಗತಿ ಪತ್ರಿಕೆಯಲ್ಲಿ ಪ್ರಕಟಗೊಂಡವು. ಮುಂದೆ ಸುಧಾ, ಮಯೂರ, ಪ್ರಜಾವಾಣಿ, ಕನ್ನಡಪ್ರಭ, ಪತ್ರಿಕೆಗಳಿಗೆ ಸಣ್ಣ ಕತೆಗಳನ್ನು ಬರೆದರು. ‘ಪ್ರೇಮ ಮದುವೆ ಮತ್ತು ಶೀಲ’ ಮಯೂರ ಮಾಸ ಪತ್ರಿಕೆಯಲ್ಲಿ ಪ್ರಕಟಗೊಂಡು ವಿಶೇಷ ಚರ್ಚೆಗೆ ನಾಂದಿ ಹಾಡಿತು. ಬಂಡಾಯದ ಎಳೆಯ ‘ಲಿಂಗನೆಟ್ಟ ಪ್ರಸಂಗ’ (1978), ‘ಬೆತ್ತಲೆ ಸೇವೆ’ ಕಾದಂಬರಿ (1979)‘ಸುಡುಗಾಡು ಸಿದ್ಧನ ಪ್ರಸಂಗ’ ಕಥೆಗಳು.

ಪ್ರಜಾಮತ, ಪ್ರಜಾವಾಣಿಗಳಲ್ಲಿ ಬಹುಮಾನ ಪಡೆದವು. ಬೆಲ್ಚಿಯ ನಾರಾಯಣ ಪುರದಲ್ಲಿ ಸವರ್ಣೀಯರು ದಲಿತರನ್ನು ಜೀವಂತವಾಗಿ ಸುಟ್ಟ ವರದಿಯನ್ನಾಧರಿಸಿ ಬರೆದ ‘ಅತಂತ್ರರು’ ಕಾದಂಬರಿಗೆ ಸುಧಾ ಪತ್ರಿಕೆಯ ಮೊದಲ ಬಹುಮಾನ (1982) ಸಂದಿದ್ದಲ್ಲದೆ ಧಾರಾವಾಹಿಯಾಗಿ ಪ್ರಕಟಗೊಂಡಾಗ ವೇಣುರವರ ಸಾಹಿತ್ಯ ಸೃಷ್ಟಿಯ ಬಗ್ಗೆ ಸಾಹಿತ್ಯಾಸಕ್ತರು ಗಮನಹರಿಸಿದರು.

ಕನ್ನಡ ಪ್ರಭದಲ್ಲಿ ಪ್ರಕಟಗೊಂಡ ‘ದೊಡ್ಡಮನೆ’ ಕಥೆಯಾಧರಿಸಿ ‘ದೊಡ್ಡಮನೆ ಎಸ್ಟೇಟ್‌’ ಚಲನಚಿತ್ರವಾಯಿತು. ಸಿದ್ಧಲಿಂಗಯ್ಯನವರ ನಿರ್ದೇಶನದಲ್ಲಿ ‘ಪರಾಜಿತ’ ಕಾದಂಬರಿ ಚಲನಚಿತ್ರವಾಗಿ ಬಿಡುಗಡೆಯಾಗಿ ಶತದಿನೋತ್ಸವ ಆಚರಿಸಿತು. ಈ ಮಧ್ಯೆ ಚಿತ್ರದುರ್ಗದ ಇತಿಹಾಸದ ಮದಕರಿನಾಯಕ ಕಾದಂಬರಿ ಬರೆದು ವಾದವಿವಾದಗಳಾದರೂ ಸಮರ್ಥವಾಗಿ ಉತ್ತರಿಸಿದರು. ‘ಪ್ರೇಮಪರ್ವ’ ಕಾದಂಬರಿಯು ಚಲನಚಿತ್ರವಾಗಿ ಲವ್‌ಸ್ಟೋರಿಗಳ ಟ್ರೆಂಡ್‌ಗೆ ನಾಂದಿ ಹಾಡಿತು. ಇದೇ ಚಲನಚಿತ್ರವು ತಮಿಳಿನಲ್ಲಿ ‘ಪೂವಿಳಂಗು’ ತೆಲುಗಿನಲ್ಲಿ ‘ವಾಲಕ್ಕೋಸಿ’ ಮತ್ತು ಹಿಂದಿಯಲ್ಲಿ ‘ಜೀನಾ ಮರ್ನಾ ತೇರೇಸಂಗ್‌’ ಆಗಿ ಜಯಭೇರಿ ಬಾರಿಸಿತು. ‘ಅಮೃತಘಳಿಗೆ’ ಚಲನಚಿತ್ರಕ್ಕೆ ಸಂಭಾಷಣೆ ಬರೆಯಲು ಪುಟ್ಟಣ್ಣ ಕಣಗಾಲರು ಆಹ್ವಾನಿಸಿದರು. ಹೀಗೆ ಚಲನಚಿತ್ರಗಳಿಗೆ ಸಂಭಾಷಣೆ, ಕಾದಂಬರಿಗಳ ರಚನೆಯಲ್ಲಿ ತೊಡಗಿದರು.

ತರಂಗ ವಾರಪತ್ರಿಕೆಯಲ್ಲಿ ‘ಪ್ರೀತಿವಾತ್ಸಲ್ಯ’ ಎಂಬ ಕಾದಂಬರಿ ಧಾರಾವಾಹಿಯಾಗಿ ಮೂಡಿಬಂತು. ಚಲನಚಿತ್ರಗಳಿಗೆ ಸಂಭಾಷಣೆ, ಚಿತ್ರಕತೆ ಬರೆದಂತೆಲ್ಲ ಅಲ್ಲಿನ ಬಾಂಧವ್ಯ ವೃದ್ಧಿಸುತ್ತಾ ಬಂತು. ಭಾರ್ಗವ ನಿರ್ದೇಶಿಸಿದ, ವಿಷ್ಣುವರ್ಧನ್‌ ನಾಯಕ ನಟರಾಗಿ ಅಭಿನಯಿಸಿದ ಜನನಾಯಕ, ಕೃಷ್ಣರುಕ್ಮಿಣಿ ಚಿತ್ರಗಳಿಗೂ ಸಂಭಾಷಣೆ ಬರೆದು ಅವು ಯಶಸ್ವಿ ಚಿತ್ರಗಳೆನಿಸಿದವು. ವೇಣು ಅವರು ಸುಮಾರು 70 ಚಲನಚಿತ್ರಗಳಿಗೆ ಸಂಭಾಷಣೆ ಬರೆದಿದ್ದಾರೆ.

ವೇಣು ಅವರು ಸಾಹಿತ್ಯ ಕ್ಷೇತ್ರದಲ್ಲಿ, ಚಲನಚಿತ್ರ ಕ್ಷೇತ್ರದಲ್ಲಿ ಯಶಸ್ಸು ಸಾಧಿಸುತ್ತಿದ್ದಂತೆ ಒಮ್ಮೆ ಅಪಘಾತಕ್ಕೀಡಾಗಿ ಬಲಗೈ ಮುರಿದುಕೊಂಡು ಬರವಣಿಗೆಯೇ ಸಂಪೂರ್ಣ ನಿಂತೇ ಹೋಯಿತೇನೋ ಎಂಬ ಅಧೀರತೆ ಮನಸ್ಸಿಗೆ ಬಂದರೂ ಧೃತಿಗೆಡದೆ ಎಡಗೈಯಲ್ಲೇ ಬರೆಯುವುದನ್ನು ರೂಢಿಸಿಕೊಂಡು ಪತ್ರಿಕೆಗಳಿಗೆ ಬರೆಯತೊಡಗಿದರು. ಚೇತರಿಸಿಕೊಳ್ಳುತ್ತಿರುವಾಗಲೇ ಬೃಹನ್ಮಠದ ಮೂಲಪುರುಷರ ಬಗ್ಗೆ ಬರೆದ ಐತಿಹಾಸಿಕ ಕಾದಂಬರಿ ‘ಕ್ರಾಂತಿಯೋಗಿ ಮರುಳ ಸಿದ್ಧ’. ಕಷ್ಟಗಳು ಎದುರಾದಾಗಲೆಲ್ಲ ಧೃತಿಗೆಡದೆ ಬರೆಯತೊಡಗಿದರು.

ವೇಣು ಅವರ ಕಥಾಸಂಕಲನಗಳಲ್ಲಿ ಬಣ್ಣಗಳು, ದೊಡ್ಡಮನೆ ಎಸ್ಟೇಟ್‌, ಪ್ರೇಮ ಮದುವೆ ಮತ್ತು ಶೀಲ, ನೀಲವರ್ಣ, ದಲಿತಾವತಾರ ಮತ್ತು ಬಣ್ಣದ ಗೊಂಬಿ ಸೇರಿವೆ.‍ ನಾಟಕಗಳಲ್ಲಿ ಯಮಲೋಕದಲ್ಲಿ ಮಾನವ (ನಗೆನಾಟಕ), ಭೂಲೋಕಕ್ಕೆ ಬಂದ ಬಸವಣ್ಣ, ರಾಜಾ ವೀರ ಗಂಡುಗಲಿ ಮದಕರಿನಾಯಕ, ಹೋರಾಟ (ಏಡ್ಸ್‌ ಬಗ್ಗೆ) ಮುಂತಾದವು ಇವೆ. ಮಿನಿಕಾದಂಬರಿಗಳು ಗುಹೆ ಸೇರಿದವರು (ಮಕ್ಕಳಿಗಾಗಿ), ಸಹೃದಯಿ, ಬೇರುಬಿಟ್ಟವರು, ಶೋಧನೆ, ವೀರವನಿತೆ ಓಬವ್ವ, ಕ್ರಾಂತಿ ಮೊದಲಾದವು.

ಕಾದಂಬರಿಗಳಲ್ಲಿ ಪರಾಜಿತ, ಪ್ರೇಮಪರ್ವ, ಅಜೇಯ, ಮೋಬಳ್ಳಿಯೋರ ಬೆತ್ತಲೆಸೇವೆ, ಅತಂತ್ರರು ಮುಂತಾದ ಸುಮಾರು 30 ಕೃತಿಗಳಿವೆ. ಇವುಗಳಲ್ಲಿ ಗಂಡುಗಲಿ ಮದಕರಿನಾಯಕ, ರಾಜಾಬಿಚ್ಚುಕತ್ತಿ ಭರಮಣ್ಣನಾಯಕ, ಕಲ್ಲರಳಿ ಹೂವಾಗಿ, ಕ್ರಾಂತಿಯೋಗಿ ಮರುಳಸಿದ್ಧ, ಹೆಬ್ಬುಲಿ ಹಿರೇಮದಕರಿನಾಯಕ ಮುಂತಾದ 5 ಐತಿಹಾಸಿಕ ಕಾದಂಬರಿಗಳೂ ಸೇರಿ 50 ಕ್ಕೂ ಹೆಚ್ಚು ಕೃತಿಗಳು ಪ್ರಕಟಗೊಂಡಿವೆ.

ವೇಣು ಅವರಿಗೆ ಸಾಹಿತ್ಯ ಕ್ಷೇತ್ರದಲ್ಲಿ ಪ್ರಶಸ್ತಿಗಳಾದ ರನ್ನ ಸಾಹಿತ್ಯ ಪ್ರಶಸ್ತಿ, ಸರ್.ಎಂ. ವಿಶ್ವೇಶ್ವರಯ್ಯ ಪ್ರಶಸ್ತಿ, ಗೊರೂರು ಸಾಹಿತ್ಯ ಪ್ರಶಸ್ತಿ, ಆರ್ಯಭಟ ಪ್ರಶಸ್ತಿ, ಅ.ನ.ಕೃ. ಪ್ರಶಸ್ತಿ, ಚಿತ್ರದುರ್ಗದ ಬೃಹನ್ಮಠದಿಂದ, ಸಿರಿಗೆರೆ ಶ್ರೀ ಗಳಿಂದ ಸನ್ಮಾನ, ರಾಜ್ಯೋತ್ಸವ ಪ್ರಶಸ್ತಿ, ಕರ್ನಾಟಕ ಸಾಹಿತ್ಯ ಅಕಾಡಮಿ ಪ್ರಶಸ್ತಿಗಳು ಸಂದಿವೆ.

ಅಪರಂಜಿ ಚಿತ್ರದ ಸಂಭಾಷಣೆಗಾಗಿ ರಾಜ್ಯ ಚಲನಚಿತ್ರ ಪ್ರಶಸ್ತಿ, ಚಲನಚಿತ್ರ ಅಕಾಡೆಮಿ ಪ್ರಶಸ್ತಿ ಮತ್ತು ಅನೇಕ ಚಿತ್ರಗಳಿಗೆ ಚಿತ್ರಮಾಧ್ಯಮ ಲೋಕದ ಹಲವು ಪುರಸ್ಕಾರಗಳು ಸಂದಿವೆ. ವೇಣು ಅವರಿಗೆ 2009ರಲ್ಲಿ ಅರ್ಪಿಸಿದ ಅಭಿನಂದನ ಗ್ರಂಥ ‘ಚಿನ್ಮೂಲಾದ್ರಿಸಿರಿ’. ಅವರಿಗೆ ಕುವೆಂಪು ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ನೀಡಿದೆ.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:BL VenuHariharaMadkari Nayaka AwardRajanahalliValmiki GurpeethValmiki Ratna Awardಬಿ.ಎಲ್.ವೇಣುಮದಕರಿ ನಾಯಕ ಪ್ರಶಸ್ತಿರಾಜನಹಳ್ಳಿವಾಲ್ಮೀಕಿ ಗುರುಪೀಠವಾಲ್ಮೀಕಿ ರತ್ನ ಪ್ರಶಸ್ತಿಹರಿಹರ
Share This Article
Facebook Email Print
Previous Article ಸಂಸದರ ಕಚೇರಿಗೆ ಮುತ್ತಿಗೆ ಹಾಕಿದ ರೈತರು ಸಂಸದರ ಕಚೇರಿಗೆ ತಲೆಯಿಟ್ಟು ಮಲಗಿದ ರೈತರು | ದಿಲ್ಲಿಯಿಂದ ಪೋನಾಯಿಸಿ ಮಾತನಾಡಿದ ಸಂಸದ ಎ.ನಾರಾಯಣಸ್ವಾಮಿ
Next Article ರಾಜೇಂದ್ರ ಸಿಂಗ್ ಬಾಬು ಸೇರಿ ಐವರಿಗೆ ಭಗೀರಥ ರತ್ನ ಪ್ರಶಸ್ತಿ | ಭಗೀರಥ ಶ್ರೀಗಳ ರಜತ ಮಹೋತ್ಸವ
Leave a Comment

Leave a Reply Cancel reply

Your email address will not be published. Required fields are marked *

ಬುನಾದಿ ಕಲಿಕಾ ಸಾಧನೆ ಮೌಲ್ಯಮಾಪನ ಸಮೀಕ್ಷೆ
ಡಿಜಿಟಲ್ ತಂತ್ರಜ್ಞಾನ ಸಮೀಕ್ಷೆ | ಜಿಲ್ಲೆಯ 90 ವಿದ್ಯಾರ್ಥಿಗಳು ಭಾಗೀ 
ಮುಖ್ಯ ಸುದ್ದಿ
ದಿವ್ಯಾಂಗ ಜನ ಪ್ರಯಾಣಿಕರಿಗೆ ರಿಯಾಯಿತಿ ಗುರುತಿನ ಚೀಟಿ | ಆನ್‌ಲೈನ್ ಮೂಲಕ ವಿತರಣೆ
ಮುಖ್ಯ ಸುದ್ದಿ
ವಿದ್ಯಾರ್ಥಿಗಳಿಗೆ ನ್ಯಾ.ಸುದೀನ್ ಕುಮಾರ್ ಬಹುಮಾನ ವಿತರಣೆ
ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಚಿತ್ರಕಲಾ ಸ್ಪರ್ಧೆ | ವಿಜೇತ ವಿದ್ಯಾರ್ಥಿಗಳಿಗೆ ನ್ಯಾ.ಸುದೀನ್ ಕುಮಾರ್ ಬಹುಮಾನ ವಿತರಣೆ
ಮುಖ್ಯ ಸುದ್ದಿ
ಚಿತ್ರದುರ್ಗ ತಾಲ್ಲೂಕು ಪಂಚಾಯತ್
ಜೂನ್ 16ರಂದು ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಅಧ್ಯಕ್ಷತೆಯಲ್ಲಿ KDP ಸಭೆ 
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com

Loading Comments...

    Welcome Back!

    Sign in to your account

    Username or Email Address
    Password

    Lost your password?

    Not a member? Sign Up