CHITRADURGA NEWS | 10 FEBRUARY 2026
ಚಿತ್ರದುರ್ಗ: ತಾಲ್ಲೂಕಿನ ಬೆಳಗಟ್ಟ ಗ್ರಾಮದಲ್ಲಿ ಶ್ರೀ ಗುರು ಕರಿಬಸವೇಶ್ವರಜ್ಜಯ್ಯ ಸ್ವಾಮಿಯ 25ನೇ ವರ್ಷದ ಮಹಾರಥೋತ್ಸವ ಇದೇ ಫೆ.19ರಂದು ಬೆಳಿಗ್ಗೆ 10.30ಕ್ಕೆ ಜರುಗಲಿದೆ. ರಥೋತ್ಸವದ ನಂತರ ಸಾಧಕರಿಗೆ ಸನ್ಮಾನ, ಪ್ರತಿಭಾ ಪುರಸ್ಕಾರ ಮತ್ತು ಜ್ಞಾನದಾಸೋಹ ಕಾರ್ಯಕ್ರಮ ಏರ್ಪಡಿಸಲಾಗಿದೆ.
ಇದನ್ನೂ ಓದಿ: ಬಿಜೆಪಿ ಜಿಲ್ಲಾ ಪದಾಧಿಕಾರಿಗಳ ಆಯ್ಕೆ | ನಾಲ್ವರು ಪ್ರಧಾನ ಕಾರ್ಯದರ್ಶಿಗಳು | ಕೆ.ಟಿ.ಕುಮಾರಸ್ವಾಮಿ ಪ್ರಕಟಣೆ
ಬೆಳಗಟ್ಟ ಗ್ರಾಮದಲ್ಲಿರುವ ಶ್ರೀ ಗುರು ಕರಿಬಸವೇಶ್ವರಜ್ಜಯ್ಯ ಸ್ವಾಮಿ ಮಠದಲ್ಲಿ ಪವಾಡಪುರುಷ ಶ್ರೀಗುರುಕರಿಬಸವೇಶ್ವರಜ್ಜಯ್ಯಸ್ವಾಮಿಯ ಪೂಜೆ, ಆರಾಧನೆಯ ಜೊತೆಗೆ ಧಾರ್ಮಿಕ, ಆಧ್ಯಾತ್ಮಿಕ ಮತ್ತು ಸಾಮಾಜಿಕ ಸೇವೆಯು ಸುಮಾರು ನಾಲ್ಕು ದಶಕಗಳಿಂದ ನಡೆಯುತ್ತಾ ಬಂದಿದೆ. ಪ್ರತಿ ಸೋಮವಾರ, ಗುರುವಾರ, ಅಮಾವಾಸ್ಯೆ, ಹುಣ್ಣಿಮೆಗಳಲ್ಲಿ ತ್ರಿವಿಧ ದಾಸೋಹ ಕಾರ್ಯಕ್ರಮಗಳು ಜರುಗುತ್ತವೆ.
ಧಾರ್ಮಿಕ, ಆಧ್ಯಾತ್ಮಿಕ, ಸಾಮಾಜಿಕ ಮತ್ತು ಶೈಕ್ಷಣಿಕ ಕ್ಷೇತ್ರಗಳಲ್ಲಿ ಅಪೂರ್ವವಾದ ಮತ್ತು ಅನನ್ಯವಾದ ಸೇವೆ ಸಲ್ಲಿಸಿರುವ ಮತ್ತು ಸಲ್ಲಿಸುತ್ತಿರುವ ಕೊಪ್ಪಳ ಗವಿಮಠದ ಗವಿಸಿದ್ದೇಶ್ವರ ಮಹಾಸ್ವಾಮಿಗಳು, ಚಿತ್ರದುರ್ಗ ಸದ್ಗುರು ಕಬೀರಾನಂದಾಶ್ರಮದ ಪೀಠಾಧ್ಯಕ್ಷರಾದ ಶಿವಲಿಂಗಾನಂದ ಮಹಾಸ್ವಾಮಿಗಳು, ರಾಜನಹಳ್ಳಿ ಶ್ರೀ ವಾಲ್ಮೀಕಿ ಗುರುಪೀಠದ ಪೀಠಾಧ್ಯಕ್ಷರಾದ ಪ್ರಸನ್ನಾನಂದಸ್ವಾಮಿಗಳು, ಆಂದ್ರಪ್ರದೇಶದ ಉರವಕೊಂಡದ ಕರಿಬಸವರಾಜೇಂದ್ರ ಮಹಾಸ್ವಾಮಿಗಳು ದಿವ್ಯಸಾನಿಧ್ಯ ವಹಿಸಿ, ಪ್ರವಚನ ಮಾಡುವರು.
ಶ್ರೀಗುರು ಕರಿಬಸವೇಶ್ವರಜ್ಜಯ್ಯಸ್ವಾಮಿ ಮಠದ ಪೀಠಾಧ್ಯಕ್ಷರಾದ ಅಮ್ಮ ಮಹದೇವಮ್ಮ ಅವರು ಅಧ್ಯಕ್ಷತೆ ವಹಿಸುವರು. ಸಂಸದರಾದ ಗೋವಿಂದ ಎಂ. ಕಾರಜೋಳ, ಶಾಸಕರಾದ ಟಿ.ರಘುಮೂರ್ತಿ, ಕೆ.ಸಿ.ವೀರೇಂದ್ರ (ಪಪ್ಪಿ) ಮಾಜಿ ಮಂತ್ರಿಗಳಾದ ಬಿ. ಶ್ರೀರಾಮುಲು ಉದ್ಘಾಟಿಸುವರು.
ಇದನ್ನೂ ಓದಿ: ಅಡಿಕೆ ಧಾರಣೆ | ರಾಶಿ ಅಡಿಕೆ ಬೆಲೆಯಲ್ಲಿ ಏರಿಕೆ
ಮುಖ್ಯ ಅತಿಥಿಗಳಾಗಿ ಶಾಸಕರಾದ ಎಂ.ಚಂದ್ರಪ್ಪ, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾಸ್ವಾಮಿ, ಗಣ್ಯರಾದ ಎನ್. ತಿಪ್ಪೇಸ್ವಾಮಿ, ಕೆ.ಸಿ. ನಾಗರಾಜ್, ಅನಿತ್ ಕುಮಾರ್, ಬಿ.ಟಿ.ಸಿದ್ದೇಶ್, ಬಿ.ತಿಮ್ಮಪ್ಪ, ಚಂದ್ರಶೇಖರ್, ಯುಗಧರ್ಮರಾಮಣ್ಣ, ಡಾ.ನಾಗೇಂದ್ರ ಆಚಾರ್ಯ, ಶಶಿಧರಗುಪ್ತ, ಪಾಪೇಶ ನಾಯಕ, ವಿ.ಎಲ್. ಪ್ರಶಾಂತ್, ಅರುಣಾಚಲಮೂರ್ತಿ ಸೇರಿದಂತೆ ಮತ್ತಿತರೆ ಗಣ್ಯರು ಭಾಗವಹಿಸುವರು ಎಂದು ಅರ್ಚಕರಾದ ಟಿ.ನಾಗೇಶ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
