By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಕೇಂದ್ರೀಯ ವಿದ್ಯಾಶಾಲೆಗೆ ಸಂಸದ ಗೋವಿಂದ ಕಾರಜೋಳ ಭೇಟಿ
    ಜಾಲಿಕಟ್ಟೆ ಗ್ರಾಮದ ಬಳಿ ಕೇಂದ್ರೀಯ ವಿದ್ಯಾಲಯ ಸ್ವಂತ ಕಟ್ಟಡ ನಿರ್ಮಾಣ | ಸಂಸದ ಗೋವಿಂದ ಕಾರಜೋಳ 
    13 minutes ago
    ಬೆಂಗಳೂರು ವಿಭಾಗ ಮಟ್ಟದ ಪರಿಶೀಲನಾ ಸಭೆ
    ಪ್ರಜಾಸೇವೆ ನೂತನ ಇಲಾಖೆ ಪ್ರಾರಂಭ | ಸಿಎಂ ಡಿಕೆಶಿ 
    43 minutes ago
    ಜಮೀನುಗಳಿಗೆ ಭೇಟಿ‌ ನೀಡಿದ ಡಿ.ಕೆ.ಶಿವಕುಮಾರ್
    ಕೋಟೆ ನಾಡಲ್ಲಿ ಸಿಎಂ ರೌಂಡ್ಸ್ | ಜಮೀನುಗಳಿಗೆ ಭೇಟಿ‌ ನೀಡಿದ ಡಿ.ಕೆ.ಶಿವಕುಮಾರ್
    8 hours ago
    ಶಾಸಕ ಟಿ.ರಘುಮೂರ್ತಿಗೆ ಸಚಿವ ಸ್ಥಾನ ಸಿಗಬೇಕೆಂದು ಬರಗೇರಮ್ಮ ದೇವಸ್ಥಾನದಲ್ಲಿ ವಿಶೇಷ ಪೂಜೆ
    ಶಾಸಕ ಟಿ.ರಘುಮೂರ್ತಿಗೆ ಸಚಿವ ಸ್ಥಾನ ಸಿಗಬೇಕೆಂದು ಬರಗೇರಮ್ಮ ದೇವಸ್ಥಾನದಲ್ಲಿ ವಿಶೇಷ ಪೂಜೆ 
    13 hours ago
    ಚಿತ್ರದುರ್ಗದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ
    ಬಾಲ್ಯ ವಿವಾಹ, ಬಲವಂತದ ಅತ್ಯಾಚಾರ | ಆರೋಪಿಗೆ 20 ವರ್ಷ ಜೈಲು ಶಿಕ್ಷೆ
    13 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    3 days ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    2 weeks ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    4 weeks ago
    Hosadurga police work
    INSTAGRAM, FECEBOOK ಪರಿಚಯ | ಲೈಂಗಿಕ ದುರ್ಬಳಕೆ ವಂಚನೆ ಮಾಡುತ್ತಿದ್ದ ಆರೋಪಿ ಬಂಧನ | ಚಿನ್ನಾಭರಣ ವಶಕ್ಕೆ
    1 month ago
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    2 months ago
  • ತಾಲೂಕು
    ತಾಲೂಕುShow More
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    2 weeks ago
    Bus crashes into divider
    ಡಿವೈಡರ್‌ಗೆ ಅಪ್ಪಳಿಸಿದ ಬಸ್‌ | 28 ಪ್ರಯಾಣಿಕರಿಗೆ ಗಾಯ | ಇಬ್ಬರು ಮೃತ
    2 weeks ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    4 weeks ago
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ | ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ ಭಾಗೀ 
    1 month ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    1 month ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 weeks ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    2 months ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    2 months ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಜುಲೈ 25 | ನಿರುದ್ಯೋಗಿಗಳಿಗೆ ಹೊಸ ಅವಕಾಶಗಳು, ಹಠಾತ್ ಧನಲಾಭ
    13 hours ago
    today bhavishya
    ದಿನ ಭವಿಷ್ಯ | ಜುಲೈ 24 | ಆದಾಯಕ್ಕಿಂತ ಖರ್ಚು ಹೆಚ್ಚು, ಶುಭ ಸುದ್ದಿ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜುಲೈ 23 | ಕೈಗೊಂಡ ಕಾರ್ಯಗಳು ಪೂರ್ಣ, ವೃತ್ತಿ ಹಾಗೂ ಉದ್ಯೋಗದಲ್ಲಿ ಅನುಕೂಲಕರ ಪರಿಸ್ಥಿತಿ
    3 days ago
    today bhavishya
    ದಿನ ಭವಿಷ್ಯ | ಜುಲೈ 22 | ಉದ್ಯೋಗದಲ್ಲಿ ಗೊಂದಲದ ವಾತಾವರಣ, ಅರೋಗ್ಯದ ಬಗ್ಗೆ ಕಾಳಜಿ ವಹಿಸಿ
    4 days ago
    today bhavishya
    ದಿನ ಭವಿಷ್ಯ | ಜುಲೈ 21 | ಆರ್ಥಿಕ ಪರಿಸ್ಥಿತಿ ಅನುಕೂಲಕರ, ಉದ್ಯೋಗದಲ್ಲಿ ಕೆಲಸದ ಒತ್ತಡ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಜುಲೈ 25 | ಹತ್ತಿ ರೇಟ್ ಎಷ್ಟಿದೆ?
    6 hours ago
    ಮಾರುಕಟ್ಟೆ ಧಾರಣೆ | ಜುಲೈ 24 | ಮೆಕ್ಕೆಜೋಳ, ರಾಗಿ ರೇಟ್….
    1 day ago
    ಮಾರುಕಟ್ಟೆ ಧಾರಣೆ | ಜುಲೈ 23 | ಹತ್ತಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ | ಜುಲೈ 22 | ಶೇಂಗಾ, ರಾಗಿ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ | ಜುಲೈ 21 | ಹತ್ತಿ ರೇಟ್ ಎಷ್ಟಿದೆ?
    4 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಚಾಲನೆ
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ
    1 day ago
    ಮಾದಕ ವಸ್ತುಗಳ ಬಳಕೆ ತಡೆಗಟ್ಟುವಿಕೆ ವಿಷಯ ಕುರಿತು ಉಪನ್ಯಾಸಕ ಎಸ್.ಬಸವರಾಜು ಮಾತನಾಡಿದರು
    ಮಾದಕ ವಸ್ತುಗಳ ದುಶ್ಚಟಮುಕ್ತ ಜೀವನದಿಂದ ಉತ್ತಮ ಆರೋಗ್ಯ | ಎಸ್.ಬಸವರಾಜು
    6 days ago
    ಶಾಸಕ ಡಾ.ಎಂ.ಚಂದ್ರಪ್ಪ ಅಧ್ಯಕ್ಷತೆಯಲ್ಲಿ ತ್ರೈಮಾಸಿಕ ಕೆಡಿಪಿ ಸಭೆ
    ಸಬೂಬು ಹೇಳಿಕೊಂಡು ಕಾಲಹರಣ ಮಾಡಿದರೆ ಸಹಿಸಲ್ಲ | KDP ಸಭೆಯಲ್ಲಿ ಶಾಸಕ ಎಂ.ಚಂದ್ರಪ್ಪ ಅಧಿಕಾರಿಗಳಿಗೆ ಎಚ್ಚರಿಕೆ 
    1 week ago
    ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಇಸಿಸಿಇ ತರಬೇತಿ ಕಾರ್ಯಾಗಾರ
    ಹೊಳಲ್ಕೆರೆ : ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಇಸಿಸಿಇ ತರಬೇತಿ ಕಾರ್ಯಾಗಾರ
    1 week ago
    ಪುರಾತನ ದೇವಾಲಯದ ಜೀರ್ಣೋದ್ಧಾರ, ವಿಶೇಷ ಪೂಜಾ ಕಾರ್ಯಕ್ರಮ
    ಈಗೀಗ ಮನುಷ್ಯ- ಮನುಷ್ಯರ ನಡುವೆ ಹೊಂದಾಣಿಕೆ, ಸಹಬಾಳ್ವೆ ಇಲ್ಲ | ಡಾ.ಕೇದಾರಲಿಂಗ ಶ್ರೀಗಳು
    2 weeks ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    1 month ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    1 month ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    2 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    3 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    5 months ago
  • ಹೊಸದುರ್ಗ
    ಹೊಸದುರ್ಗShow More
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    4 weeks ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    1 month ago
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    1 month ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    2 months ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    2 months ago
  • Life Style
    Life StyleShow More
    damaged skin after waxing
    ವ್ಯಾಕ್ಸಿಂಗ್ ನಂತರ ಹಾನಿಗೊಳಗಾದ ಚರ್ಮವನ್ನು ಗುಣಪಡಿಸಲು ಹೀಗೆ ಮಾಡಿ
    12 hours ago
    Phyllanthus amarus
    ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ನೆಲನೆಲ್ಲಿ(ಫಿಲಾಂತಸ್ ಅಮರಸ್) ನೀರು ಕುಡಿದರೆ ಏನಾಗುತ್ತದೆ ಗೊತ್ತಾ?
    13 hours ago
    endometrial cancer that plague women
    ಮಹಿಳೆಯರನ್ನು ಕಾಡುವ ಎಂಡೊಮೆಟ್ರಿಯಲ್ ಕ್ಯಾನ್ಸರ್‍ನ ಲಕ್ಷಣಗಳ ಬಗ್ಗೆ ತಿಳಿಯಿರಿ
    1 day ago
    cow's milk to children
    ಒಂದು ವರ್ಷದೊಳಗಿನ ಮಕ್ಕಳಿಗೆ ಹಸುವಿನ ಹಾಲು ನೀಡಿದರೆ ಏನಾಗುತ್ತದೆ ಗೊತ್ತಾ?
    2 days ago
    Damaged electronic item
    ಹಾಳಾದ ಎಲೆಕ್ಟ್ರಾನಿಕ್ ವಸ್ತುಗಳನ್ನು ಮನೆಯಲ್ಲಿ ಇಡುವುದರಿಂದ ಏನಾಗುತ್ತದೆ ಗೊತ್ತಾ?
    2 days ago
Reading: ಹಳ್ಳಿಹಳ್ಳಿಗೂ ಯೋಗ ಪಸರಿಸಿದ ಮಲ್ಲಾಡಿಹಳ್ಳಿ ರಾಘವೇಂದ್ರ ಸ್ವಾಮೀಜಿ | ವಿಧಾನ ಪರಿಷತ್‌ ಸದಸ್ಯ ಕೆ.ಎಸ್‌.ನವೀನ್‌
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಹಳ್ಳಿಹಳ್ಳಿಗೂ ಯೋಗ ಪಸರಿಸಿದ ಮಲ್ಲಾಡಿಹಳ್ಳಿ ರಾಘವೇಂದ್ರ ಸ್ವಾಮೀಜಿ | ವಿಧಾನ ಪರಿಷತ್‌ ಸದಸ್ಯ ಕೆ.ಎಸ್‌.ನವೀನ್‌

News Desk Chitradurga News
Last updated: 21 June 2024 12:25
News Desk Chitradurga News
2 years ago
Share
DIST YOGA
ಚಿತ್ರದುರ್ಗ ನಗರದ ಹಳೇ ಮಾಧ್ಯಮಿಕ ಶಾಲಾ ಆವರಣದಲ್ಲಿ ವಿಶೇಷ ಯೋಗ ನೃತ್ಯ ಪ್ರದರ್ಶಿಸಿದ ಅಮೃತ ಆಯುರ್ವೇದ ಕಾಲೇಜಿನ ವೈದ್ಯ ವಿದ್ಯಾರ್ಥಿಗಳು
SHARE

CHITRADURGA NEWS | 21 JUNE 2024
ಚಿತ್ರದುರ್ಗ: ‘ಯೋಗ ದೈಹಿಕವಾಗಿ ಶಕ್ತಿ ಹಾಗೂ ಚೈತನ್ಯ ತುಂಬುವದರ ಜೊತೆಗೆ ಮಾನಸಿಕವಾಗಿ ಸಹ ಸದೃಢರನ್ನಾಗಿಸುತ್ತದೆ. ಇಂದಿನ ನಿತ್ಯದ ಬದುಕಿನಲ್ಲಿ ಯುವ ಜನರಿಗೆ ಮಾನಸಿಕ ಶಕ್ತಿ ಅವಶ್ಯಕವಾಗಿದೆ. ಜೀವನದಲ್ಲಿ ಅನೇಕ ಸವಾಲುಗಳನ್ನು ಎದುರಿಸಲು ಮಾನಸಿಕವಾಗಿ ಸದೃಢರಾಗಿರಲು ಹಾಗೂ ಒತ್ತಡ ಮುಕ್ತ ಜೀವನಕ್ಕೆ ಯೋಗ ಸಹಕಾರಿಯಾಗಿದೆ’ ಎಂದು ವಿಧಾನ ಪರಿಷತ್‌ ಸದಸ್ಯ ಕೆ.ಎಸ್‌.ನವೀನ್‌ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಆಯುಷ್ ಇಲಾಖೆ ಹಾಗೂ ವಿವಿಧ ಯೋಗ ಸಂಸ್ಥೆಗಳ ಸಹಯೋಗದಲ್ಲಿ ನಗರದ ಹಳೇ ಮಾಧ್ಯಮಿಕ ಶಾಲಾ ಆವರಣದಲ್ಲಿ ಆಯೋಜಿಸಲಾದ 10ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ವೇದಿಕೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

‘ಯುವಜನರು ಒತ್ತಡದಿಂದ ಹೃದಯಾಘಾತಕ್ಕೆ ಒಳಗಾಗುವುದು. ಜೀವನದ ಕಠಿಣ ಸಮಯ ಎದುರಿಸಲಾಗದೆ ಆತ್ಮಹತ್ಯೆ ಅಂತಹ ಕೃತ್ಯಗಳಿಗೆ ಮುಂದಾಗುವುದನ್ನು ದಿನ ನಿತ್ಯ ಕಾಣುತ್ತಿದ್ದೇವೆ. ಬಹಳಷ್ಟು ಯುವ ಜನರು ದುಶ್ಚಟಗಳಿಗೆ ಬಲಿಯಾಗುತ್ತಿದ್ದಾರೆ. ಯೋಗದಿಂದ ಈ ಇವೆಲ್ಲವೂಗಳಿಗೂ ಪರಿಹಾರ ದೊರಕಲಿದೆ’ ಎಂದರು.

ಕ್ಲಿಕ್ ಮಾಡಿ ಓದಿ: ಮನಸ್ಸಿನ ಹತೋಟಿಗೆ ಯೋಗ ಸಹಕಾರಿ |ಸಾಣೇಹಳ್ಳಿ ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ

‘ಜೀವನದಲ್ಲಿ ಸಕಾರಾತ್ಮಕ ಚಿಂತನೆ ಹಾಗೂ ಸದೃಢ ಮನೋಭಾವ ಹೊಂದಲು ಯೋಗವನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವುದು ಅತ್ಯಗತ್ಯವಾಗಿದೆ. ಯುವಜನತೆಯಲ್ಲಿ ಕ್ರೋಧ ಮತ್ಸರ, ದ್ವೇಷ, ಸಮಾಜ ಘಾತುಕ ಮನೋಭಾವ ಮೂಡದಂತೆ ಯೋಗಾಭ್ಯಾಸ ತಡೆಯುತ್ತದೆ. ಇದರಿಂದ ಯುವ ಜನತೆಗೆ ಲಾಭವಾಗುತ್ತದೆ’ ಎಂದು ಅಭಿಪ್ರಾಯಪಟ್ಟರು.

DIST YOGA 2
ಚಿತ್ರದುರ್ಗ ನಗರದ ಹಳೇ ಮಾಧ್ಯಮಿಕ ಶಾಲಾ ಆವರಣದಲ್ಲಿ ಆಯೋಜಿಸಿದ್ದ 10ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ವೇದಿಕೆ ಕಾರ್ಯಕ್ರಮವನ್ನು ವಿಧಾನ ಪರಿಷತ್‌ ಸದಸ್ಯ ಕೆ.ಎಸ್‌.ನವೀನ್‌ ಉದ್ಘಾಟಿಸಿದರು

‘ಜಗತ್ತಿಗೆ ಯೋಗ ಪರಿಚಯಿಸಿದ ಕೀರ್ತಿ ಭಾರತದ್ದು, ವಿಶ್ವ ಸಂಸ್ಥೆ 2014 ರಲ್ಲಿ ಸರ್ವಾನುಮತದಿಂದ ಜೂನ್21ನ್ನು ಯೋಗ ದಿನಾಚರಣೆಯಾಗಿ ಘೋಷಣೆ ಮಾಡಿದೆ. ಇಂದು ವಿಶ್ವದ 187 ದೇಶಗಳಲ್ಲಿ ಯೋಗ ದಿನಾಚರಣೆ ಆಚರಿಸಲಾಗುತ್ತಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಯೋಗವನ್ನು ವಿಶ್ವದಾದ್ಯಂತ ಪಸರಿಸಲು ಪ್ರಯತ್ನ ಮಾಡುತ್ತಿದ್ದಾರೆ’ ಎಂದರು.

‘ಯಾವುದೇ ಎಲೆಕ್ಟ್ರಾನಿಕ್ ಮಾಧ್ಯಮಗಳು ಇಲ್ಲದ ಸಂದರ್ಭದಲ್ಲಿ ಮಲ್ಲಾಡಿಹಳ್ಳಿಯ ರಾಘವೇಂದ್ರ ಸ್ವಾಮಿಗಳು ಯೋಗವನ್ನು ಗ್ರಾಮ ಗ್ರಾಮಗಳಿಗೆ ಕೊಂಡೊಯ್ಯದರು. ರಾಜ್ಯದಲ್ಲಿ ಯೋಗವನ್ನು ಹೆಚ್ಚು ಪ್ರಚಾರ ಮಾಡಿದವರು ನಟ ಸಾರ್ವಭೌಮ ಡಾ.ರಾಜಕುಮಾರ್‌ ಅವರ ಕಾಮನಬಿಲ್ಲು ಎಂಬ ಚಲನಚಿತ್ರದಲ್ಲಿ ಸ್ವತಃ ಯೋಗ ಮಾಡುವುದರ ಮೂಲಕ ಎಲ್ಲರಿಗೂ ಪ್ರೇರಣೆಯಾದರು. ಇದೇ ಮಾದರಿಯಲ್ಲಿ ಇಂದು ಯೋಗಭ್ಯಾಸದಲ್ಲಿ ಪಾಲ್ಗೊಂಡ ಎಲ್ಲರೂ ಯೋಗ ರಾಯಭಾರಿಗಳಾಗಿ ಯೋಗವನ್ನು ಎಲ್ಲಡೆ ಪಸರಿಸಬೇಕು. ಮುಂದಿನ ಅಂತರಾಷ್ಟ್ರೀಯ ಯೋಗ ದಿನಾಚರಣೆ ವೇಳೆಗೆ ಚಿತ್ರದುರ್ಗ ಜಿಲ್ಲೆಯಲ್ಲಿ ರಾಜ್ಯದಲ್ಲೇ ಅತಿ ಹೆಚ್ಚು ಜನರು ಸಾಮೂಹಿಕ ಯೋಗಾಭ್ಯಾಸದಲ್ಲಿ ತೊಡಗುವಂತಾಗಬೇಕು. ಆಯುಷ್ ಇಲಾಖೆ ಈ ಕಾರ್ಯ ಕೈಗೊಳ್ಳುವ ಮೂಲಕ ಇತರೆ ಜಿಲ್ಲೆಗಳಿಗೆ ಮಾದರಿಯಾಗಲಿ’ ಎಂದು ಹೇಳಿದರು.

ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ತಾಜ್‍ಪೀರ್ ಮಾತನಾಡಿ, ‘ಯೋಗವನ್ನು ಯಾವುದೇ ಒಂದು ಧರ್ಮಕ್ಕೆ ಸೀಮಿತಗೊಳಿಸಿ ನೋಡಬಾರದು. ಇಂದು ವಿಶ್ವದ ಎಲ್ಲಾ ರಾಷ್ಟ್ರಗಳು ಯೋಗದ ಮಹತ್ವ ಅರಿತುಕೊಂಡಿವೆ. ಯುವ ಜನತೆ ಯೋಗದ ಬಗ್ಗೆ ಒಲವು ಬೆಳಸಿಕೊಳ್ಳಬೇಕು. ನಮ್ಮ ಆರೋಗ್ಯ ನಮ್ಮ ಕೈಕಾಲುಗಳಲ್ಲಿ ಅಡಗಿದೆ. ಯುವಕರು ದೇಹಕ್ಕೆ ಹಾನಿಕರವಾದ ದುಶ್ಚಟಗಳಿಂದ ದೂರ ಇರಬೇಕು’ ಎಂದರು.

ಕ್ಲಿಕ್ ಮಾಡಿ ಓದಿ: ಉದ್ಯೋಗಾಸಕ್ತರಿಗೆ ಸುವರ್ಣಾವಕಾಶ | ವರ್ಷಾ ಅಸೋಸಿಯೇಟ್ಸ್ ಉಚಿತ ತರಬೇತಿ

‘ನಾಡಿನೆಲ್ಲೆಡೆ ಯೋಗವನ್ನು ಪ್ರಚಾರ ಮಾಡುವಲ್ಲಿ ಮಲ್ಲಾಡಿಹಳ್ಳಿಯ ರಾಘವೇಂದ್ರ ಸ್ವಾಮಿಗಳ ಕೊಡುಗೆ ಮಹತ್ವದಾಗಿದೆ. ಶತಾಯುಷಿಗಳಾಗಿದ್ದ ಅವರು ತಮ್ಮ ಇಡೀ ಜೀವನವನ್ನು ಯೋಗಕ್ಕೆ ಮುಡಿಪಾಗಿಟ್ಟಿದ್ದರು. ಯೋಗಾಸಕ್ತರು ಮಲ್ಲಾಡಿಹಳ್ಳಿ ಆಶ್ರಮಕ್ಕೆ ಭೇಟಿ ನೀಡಿ ಅವರ ಯೋಗ ಸಾಧನೆಗಳನ್ನು ಅರಿಯಬೇಕು’ ಎಂದು ಹೇಳಿದರು.

ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಮಾತನಾಡಿ, ಯೋಗ ದೇಶದ ಸಾಂಸ್ಕೃತಿಕತೆಯ ಪ್ರತೀಕವಾಗಿದೆ. ಯೋಗ ಅಂತರಾಷ್ಟ್ರೀಯ ಮನ್ನಣೆಗಳಿಸಿದೆ. ನಿತ್ಯ ಜೀವನದಲ್ಲಿ ಯೋಗವನ್ನು ಅಳವಡಿಸಿಕೊಳ್ಳುವ ಮೂಲಕ ಉತ್ತಮ ಆರೋಗ್ಯ ಹೊಂದಲು ಕರೆ ನೀಡಿದರು.

DIST YOGA 1
ಚಿತ್ರದುರ್ಗ ನಗರದ ಹಳೇ ಮಾಧ್ಯಮಿಕ ಶಾಲಾ ಆವರಣದಲ್ಲಿ ಸಾಮೂಹಿಕ ಯೋಗಾಭ್ಯಾಸ

ಸರ್ಕಾರದ ಗ್ಯಾರಂಟಿ ಯೋಜನೆಗಳ ಜಿಲ್ಲಾ ಮಟ್ಟದ ಅನುಷ್ಠಾನ ಸಮಿತಿ ಅಧ್ಯಕ್ಷ ಶಿವಣ್ಣ ಮಾತನಾಡಿ, ಪ್ರತಿ ಮನೆ ಮನೆಗಳಲ್ಲಿ ಯೋಗಭ್ಯಾಸ ಮಾಡಬೇಕು. ಯೋಗವು ಉತ್ತಮ ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಳ್ಳಲು ಸಹಾಯಕವಾಗಿದೆ ಎಂದರು.

ಅಮೃತ ಆಯುರ್ವೇದ ಕಾಲೇಜಿನ ವೈದ್ಯ ವಿದ್ಯಾರ್ಥಿಗಳು ವಿಶೇಷ ಯೋಗ ನೃತ್ಯ ಪ್ರದರ್ಶಿಸಿದರು. ನಗರದ ನಿಸರ್ಗ ಯೋಗ ಕೇಂದ್ರದ 73 ವರ್ಷದ ಯೋಗಗುರು ಶಿವಲಿಂಗಪ್ಪ ವೇದಿಕೆ ಮೇಲೆ ಯೋಗಾಭ್ಯಾಸ ನೆಡಿಸಿ ಗಮನ ಸೆಳೆದರು. ಯೋಗ ಶಿಕ್ಷಕ ಭರಮಸಾಗರದ ತಿಪ್ಪೇಸ್ವಾಮಿ ಸಾಮೂಹಿಕ ಯೋಗಭ್ಯಾಸ ಆಸನಗಳನ್ನು ಬೋಧಿಸುವ ಮೂಲಕ ಯೋಗದ ಮಹತ್ವ ತಿಳಿಸಿದರು.

ಕ್ಲಿಕ್ ಮಾಡಿ ಓದಿ: ಸಾಹಿತಿಗಳು ರಾಜಕಾರಣಿಗಳೇ ಎಂದಿದ್ದು ತಪ್ಪು | ಸಾಣೇಹಳ್ಳಿ ಶ್ರೀ

ಈ ಬಾರಿಯ ಯೋಗ ದಿನಾಚರಣೆಯ ಘೋಷವಾಕ್ಯ ಸ್ವಂತ ಹಾಗೂ ಸಮಾಜಕ್ಕಾಗಿ ಯೋಗ ಎನ್ನುವುದನ್ನು ಸಾರುವ ನಿಟ್ಟಿನಲ್ಲಿ 2000 ಕ್ಕೂ ಹೆಚ್ಚು ಯೋಗಾಸಕ್ತರು ಸುಮಾರು 45 ನಿಮಿಷಗಳ ಕಾಲ ಸಾಮೂಹಿಕ ಯೋಗಾಭ್ಯಾಸ ಮಾಡಿದರು. ಆಯುಷ್ ವೈದ್ಯಾಧಿಕಾರಿ ಡಾ.ಶಿವಕುಮಾರ್ ಕಾರ್ಯಕ್ರಮ ನಿರೂಪಿಸಿದರು. ವೈದ್ಯಾಧಿಕಾರಿ ಗಿರೀಶ್ ಸ್ವಾಗತಿಸಿದರು. ವೈದ್ಯಾಧಿಕಾರಿ ಪ್ರಶಾಂತ್ ವಂದಿಸಿದರು.

ಉಪವಿಭಾಗಾಧಿಕಾರಿ ಎಂ.ಕಾರ್ತಿಕ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳಾದ ಎಸ್.ಜೆ.ಕುಮಾರಸ್ವಾಮಿ, ಲಕ್ಷ್ಮೀನಾರಾಯಣ, ನಗರ ಸಭೆ ಆಯುಕ್ತೆ ಎಂ.ರೇಣುಕಾ, ಜಿಲ್ಲಾ ಆಯುಷ್ ಅಧಿಕಾರಿ ಡಾ.ಚಂದ್ರಕಾಂತ್ ನಾಗಸಮುದ್ರ ಸೇರಿದಂತೆ ವಿವಿಧ ಇಲಾಕೆ ಅಧಿಕಾರಿಗಳು, ಜಿಲ್ಲೆಯ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳು, ವಿವಿಧ ಯೋಗ ಸಂಸ್ಥೆಗಳ ಮುಖ್ಯಸ್ಥರು, ಸದಸ್ಯರು ಪಾಲ್ಗೊಂಡಿದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:MalladihalliRaghavendraSwamijivillageYogaಮಲ್ಲಾಡಿಹಳ್ಳಿಯೋಗರಾಘವೇಂದ್ರಸ್ವಾಮೀಜಿಹಳ್ಳಿ
Share This Article
Facebook Email Print
Previous Article sanehali yoga ಮನಸ್ಸಿನ ಹತೋಟಿಗೆ ಯೋಗ ಸಹಕಾರಿ | ಸಾಣೇಹಳ್ಳಿ ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ
Next Article dc ಕಲ್ಲು ಗಣಿ ಗುತ್ತಿಗೆ ಮಂಜೂರಾತಿಗೆ 160 ಅರ್ಜಿ ಬಾಕಿ | ಜಿಲ್ಲಾಧಿಕಾರಿ ಟಿ.ವೆಂಕಟೇಶ್‌
Leave a Comment

Leave a Reply Cancel reply

Your email address will not be published. Required fields are marked *

ಕೇಂದ್ರೀಯ ವಿದ್ಯಾಶಾಲೆಗೆ ಸಂಸದ ಗೋವಿಂದ ಕಾರಜೋಳ ಭೇಟಿ
ಜಾಲಿಕಟ್ಟೆ ಗ್ರಾಮದ ಬಳಿ ಕೇಂದ್ರೀಯ ವಿದ್ಯಾಲಯ ಸ್ವಂತ ಕಟ್ಟಡ ನಿರ್ಮಾಣ | ಸಂಸದ ಗೋವಿಂದ ಕಾರಜೋಳ 
ಮುಖ್ಯ ಸುದ್ದಿ
ಬೆಂಗಳೂರು ವಿಭಾಗ ಮಟ್ಟದ ಪರಿಶೀಲನಾ ಸಭೆ
ಪ್ರಜಾಸೇವೆ ನೂತನ ಇಲಾಖೆ ಪ್ರಾರಂಭ | ಸಿಎಂ ಡಿಕೆಶಿ 
ಮುಖ್ಯ ಸುದ್ದಿ
ಮಾರುಕಟ್ಟೆ ಧಾರಣೆ | ಜುಲೈ 25 | ಹತ್ತಿ ರೇಟ್ ಎಷ್ಟಿದೆ?
ಮಾರುಕಟ್ಟೆ ಧಾರಣೆ
ಜಮೀನುಗಳಿಗೆ ಭೇಟಿ‌ ನೀಡಿದ ಡಿ.ಕೆ.ಶಿವಕುಮಾರ್
ಕೋಟೆ ನಾಡಲ್ಲಿ ಸಿಎಂ ರೌಂಡ್ಸ್ | ಜಮೀನುಗಳಿಗೆ ಭೇಟಿ‌ ನೀಡಿದ ಡಿ.ಕೆ.ಶಿವಕುಮಾರ್
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com

Loading Comments...

    Welcome Back!

    Sign in to your account

    Username or Email Address
    Password

    Lost your password?

    Not a member? Sign Up