By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಭೂ ಒಡೆತನ ಯೋಜನೆ
    ಭೂ ಒಡೆತನ ಯೋಜನೆಯಡಿ ಆಸಕ್ತ ಭೂ ಮಾಲೀಕರಿಂದ ಜಮೀನು ಖರೀದಿ
    2 hours ago
    ಅಂಚೆ ಜೀವ ವಿಮೆ ಪ್ರತಿನಿಧಿಗಳ ನೇಮಕಾತಿ | ನೇರ ಸಂದರ್ಶನ
    2 hours ago
    ನೆಲ್ಲಿಕಟ್ಟೆ ಗ್ರಾಮದಲ್ಲಿ 1.25 ಕೋಟಿ ವೆಚ್ಚದ ಚೆಕ್‍ಡ್ಯಾಂ ಗೋಕಟ್ಟೆ ನಿರ್ಮಾಣಕ್ಕೆ ಭೂಮಿಪೂಜೆ
    ನೆಲ್ಲಿಕಟ್ಟೆ ಗ್ರಾಮದಲ್ಲಿ 1.25 ಕೋಟಿ ವೆಚ್ಚದ ಚೆಕ್‍ಡ್ಯಾಂ ಗೋಕಟ್ಟೆ ನಿರ್ಮಾಣಕ್ಕೆ ಭೂಮಿಪೂಜೆ 
    2 hours ago
    ಡಿಜಿಟಲ್ ಡೆಮಾಗ್ರಫಿ ಮತ್ತು ಆರ್ಟಿಫಿಷಿಯಲ್ ಇನ್‌ಟೆಲಿಜನ್ಸ್ ಕಾರ್ಯಾಗಾರ
    ಡಿಜಿಟಲ್ ಡೆಮಾಗ್ರಫಿ ಮತ್ತು ಆರ್ಟಿಫಿಷಿಯಲ್ ಇನ್‌ಟೆಲಿಜನ್ಸ್ ಕಾರ್ಯಾಗಾರ ಯಶಸ್ವಿ
    15 hours ago
    ವಿಧಾನಸಭಾ ಕ್ಷೇತ್ರದ ಬಿಜೆಪಿ ನಗರ ಮಂಡಲದ ಮಾಸಿಕ ಸಭೆ
    ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ವಿಧಾನಸಭಾ ಕ್ಷೇತ್ರದ ಬಿಜೆಪಿ ನಗರ ಮಂಡಲದ ಮಾಸಿಕ ಸಭೆ 
    15 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    3 days ago
    Accident near molakalmuru
    ಮೊಳಕಾಲ್ಮೂರು ಬಳಿ ಮತ್ತೊಂದು ಅಪಘಾತ | ಚಳ್ಳಕೆರೆಯ 5 ಜನ ಸಾವು | ಒಂದೇ ದಿನದ ಅಂತರದಲ್ಲಿ ಜಿಲ್ಲೆಯಲ್ಲಿ ಹತ್ತು ಸಾವು
    1 week ago
    ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ | 5 ಜನರ ದುರ್ಮರಣ
    2 weeks ago
    Accident between bike and car
    ಬೈಕ್‌ – ಕಾರು ನಡುವೆ ಅಪಘಾತ | ಸ್ಥಳದಲ್ಲೇ ಇಬ್ಬರು ಮೃತ
    2 weeks ago
    ಬೈಕ್ – ಕಾರ್ ನಡುವೆ ಭೀಕರ ಅಪಘಾತ | ಬೈಕ್ ಸವಾರರು ಇಬ್ಬರು ಸಾವು
    2 months ago
  • ತಾಲೂಕು
    ತಾಲೂಕುShow More
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    6 days ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    6 days ago
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    2 weeks ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    2 weeks ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    4 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    2 days ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    3 days ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    4 days ago
    ARECANUT RATE
    ಅಡಿಕೆ ಧಾರಣೆ | 4 ಜೂನ್‌ | ಇಂದಿನ ರಾಶಿ, ಚಾಲಿ, ಕೆಂಪಡಕೆ ರೇಟ್‌
    5 days ago
    Adike rate
    ಅಡಿಕೆ ಧಾರಣೆ | 2 ಜೂನ್‌ | ಯಾವ ಅಡಿಕೆಗೆ ಎಷ್ಟು ರೇಟ್‌ ?
    6 days ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 08 | ನಿರುದ್ಯೋಗಿಗಳಿಗೆ ಶುಭ ಸುದ್ದಿ, ಹೊಸ ವಾಹನ ಖರೀಧಿ
    4 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 07 | ಪ್ರಯಾಣದಲ್ಲಿ ಅಡೆತಡೆಗಳು, ಆರೋಗ್ಯದ ಕಡೆ ಜಾಗೃತಿ ವಹಿಸಿ
    1 day ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 06 | ಉದ್ಯೋಗಗಳಲ್ಲಿ ನಿರುತ್ಸಾಹ ವಾತಾವರಣ, ಕೈಗೊಂಡ ಕೆಲಸದಲ್ಲಿ ಯಶಸ್ಸು
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 05 | ಉದ್ಯೋಗಿಗಳಿಗೆ ಅಧಿಕಾರಿಗಳ ಬೆಂಬಲ, ವ್ಯವಹಾರದಲ್ಲಿ ನಿರೀಕ್ಷಿತ ಪ್ರಗತಿ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 04 | ವೃತ್ತಿಪರ ವ್ಯವಹಾರಗಳಲ್ಲಿ ಲಾಭ, ದೂರ ಪ್ರಯಾಣದ ಸೂಚನೆ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 05 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್..
    3 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 01 | ಮೆಕ್ಕೆಜೋಳ, ರಾಗಿ ರೇಟ್..
    7 days ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್..
    1 week ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.29 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್..
    1 week ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.27 | ರಾಗಿ, ಶೇಂಗಾ ರೇಟ್..
    2 weeks ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ನೂತನ ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಾಸಕ ಎಂ.ಚಂದ್ರಪ್ಪ ಭೂಮಿಪೂಜೆ 
    3 days ago
    ಸಿ.ಸಿ.ರಸ್ತೆ ಕಾಮಗಾರಿಗೆ ಭೂಮಿ ಪೂಜೆ
    ಮೂರ್ನಾಲ್ಕು ದಿನಗಳಲ್ಲೇ ತಾಳಿಕಟ್ಟೆ ಕೆರೆಗೆ‌ ನೀರು | ಶಾಸಕ‌ ಎಂ.ಚಂದ್ರಪ್ಪ
    1 week ago
    ಪೂರ್ವಭಾವಿ ಸಭೆ
    ಹೊಳಲ್ಕೆರೆ ಜಿಲ್ಲೆಯಲ್ಲಿಯೇ ಮಾದರಿ ಕ್ಷೇತ್ರ | ಶಾಸಕ ಎಂ.ಚಂದ್ರಪ್ಪ 
    1 month ago
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    2 months ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 months ago
  • ಹಿರಿಯೂರು
    ಹಿರಿಯೂರುShow More
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    2 weeks ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    2 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    4 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    4 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    4 months ago
  • ಹೊಸದುರ್ಗ
    ಹೊಸದುರ್ಗShow More
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    6 days ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    6 days ago
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    2 weeks ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    2 weeks ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    4 weeks ago
  • Life Style
    Life StyleShow More
    thyroid problems
    ಥೈರಾಯ್ಡ್ ಸಮಸ್ಯೆ ಇದ್ದಾಗ ಯಾವ ಹಣ್ಣುಗಳನ್ನು ತಪ್ಪಿಸಬೇಕು?
    3 hours ago
    liver
    ಲಿವರ್ ದಾನ ಮಾಡಿದವರು ಶೀಘ್ರವಾಗಿ ಚೇತರಿಸಿಕೊಳ್ಳಲು ವೈದ್ಯರ ಈ ಸಲಹೆಗಳನ್ನು ಪಾಲಿಸಿರಿ
    4 hours ago
    Purple seed powder
    ಖಾಲಿ ಹೊಟ್ಟೆಯಲ್ಲಿ ನೇರಳೆ ಬೀಜದ ಪುಡಿಯನ್ನು ಉಗುರು ಬೆಚ್ಚಗಿನ ನೀರಿನೊಂದಿಗೆ ಕುಡಿದರೆ ಏನಾಗುತ್ತದೆ ಗೊತ್ತಾ?
    1 day ago
    rose water
    ರೋಸ್ ವಾಟರ್ ಬೆರೆಸಿದ ನೀರಿನಲ್ಲಿ ಸ್ನಾನ ಮಾಡಿದರೆ ಈ ಪ್ರಯೋಜನ ಪಡೆಯಬಹುದು
    1 day ago
    Apply beetroot to your hair
    ಕೂದಲಿಗೆ ಬೀಟ್‌ರೂಟ್ ಹಚ್ಚಿ ಈ ಅದ್ಭುತ ಪ್ರಯೋಜನಗಳನ್ನು ಪಡೆಯಿರಿ
    2 days ago
Reading: Murugha muth:ಒಂಟಿ ಕಂಬದ ಮಠದಲ್ಲಿ ಮಲ್ಲಿಕಾರ್ಜುನ ಶ್ರೀ ಸ್ಮರಣೋತ್ಸವ | ಹತ್ತಾರು ಮಠಾಧೀಶರು ಭಾಗೀ | ಯರ‍್ಯಾರು ಏನು ಹೇಳಿದ್ರು
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿಹೊಳಲ್ಕೆರೆ

Murugha muth:ಒಂಟಿ ಕಂಬದ ಮಠದಲ್ಲಿ ಮಲ್ಲಿಕಾರ್ಜುನ ಶ್ರೀ ಸ್ಮರಣೋತ್ಸವ | ಹತ್ತಾರು ಮಠಾಧೀಶರು ಭಾಗೀ | ಯರ‍್ಯಾರು ಏನು ಹೇಳಿದ್ರು

chitradurganews.com
Last updated: 8 August 2024 16:52
chitradurganews.com
2 years ago
Share
Sri Mallikarjuana swamiji smaranothsava
ಲಿಂಗೈಕ್ಯ ಶ್ರೀ ಮಲ್ಲಿಕಾರ್ಜುನ ಮುರುಘರಾಜೇಂದ್ರ ಮಹಾಸ್ವಾಮಿಗಳ 30ನೇ ಸ್ಮರಣೋತ್ಸವ
SHARE

CHITRADURGA NEWS | 08 AUGUST 2024

ಹೊಳಲ್ಕೆರೆ: ಹೊಳಲ್ಕೆರೆ ಒಂಟಿಕ0ಬದ ಮುರುಘಾ ಮಠದಲ್ಲಿ ಗುರುವಾರ ಲಿಂಗೈಕ್ಯ ಶ್ರೀ ಮಲ್ಲಿಕಾರ್ಜುನ ಮುರುಘರಾಜೇಂದ್ರ ಮಹಾಸ್ವಾಮಿಗಳ 30ನೇ ಸ್ಮರಣೋತ್ಸವ ಹಾಗು ಚಿನ್ಮೂಲಾದ್ರಿ ಚಿತ್ಕಳೆ ಸ್ಮರಣೋತ್ಸವ ಸಂಪುಟ ಬಿಡುಗಡೆ ಸಮಾರಂಭ ನೆರವೇರಿತು.

ಸಾನ್ನಿಧ್ಯ ವಹಿಸಿದ್ದ ಬೆಂಗಳೂರು ಬೇಲಿಮಠದ ಶ್ರೀ ಶಿವರುದ್ರ ಮಹಾಸ್ವಾಮಿಗಳು ಮಾತನಾಡಿ, 1961ರಲ್ಲಿ ಧಾರವಾಡದ ಮೃತ್ಯುಂಜಯ ಶ್ರೀಗಳು ಗುಬ್ಬಿಯಲ್ಲಿ ನನಗೆ ಮಲ್ಲಿಕಾರ್ಜುನ ಶ್ರೀಗಳ ಆಶೀರ್ವಾದವಾಯಿತು.

ಇದನ್ನೂ ಓದಿ: ಲೋಕ ಅದಾಲತ್‌ನಲ್ಲಿ 4,973 ಪ್ರಕರಣ ಇತ್ಯರ್ಥ | ಪ್ರಧಾನ ಜಿಲ್ಲಾ ನ್ಯಾಯಾಧೀಶ ರೋಣ ವಾಸುದೇವ

ಜಯವಿಭವ ಶ್ರೀಗಳು ಅನಾರೋಗ್ಯದಿಂದ ಬಳಲುತ್ತಿರುವಾಗ ಮುಂದಿನ ಉತ್ತರಾಧಿಕಾರಿ ಆಯ್ಕೆಗೆ ಅಂದಿನ ಮುಖ್ಯಮಂತ್ರಿ ಎಸ್. ನಿಜಲಿಂಗಪ್ಪನವರಿಗೆ ಜವಾಬ್ದಾರಿ ಕೊಟ್ಟರು. ಆದರೆ ಶ್ರೀಗಳು ಮೃತ್ಯುಂಜಯಪ್ಪಗಳಿಗೆ ಅಧಿಕಾರ ಕೊಟ್ಟಾಗ ಹಾವೇರಿಯ ಮಲ್ಲಿಕಾರ್ಜುನ ಸ್ವಾಮಿಗಳನ್ನು ಉತ್ತರಾಧಿಕಾರಿಗಳನ್ನಾಗಿ ಆಯ್ಕೆ ಮಾಡಿದರು. ಜಯದೇವ ಶ್ರೀಗಳ ಅನುಗ್ರಹ, ಜಯವಿಭವ ಶ್ರೀಗಳ ಆಶೀರ್ವಾದ ಮಲ್ಲಿಕಾರ್ಜುನ ಶ್ರೀಗಳಿಗೆ ಇತ್ತು.

ಉತ್ತರಾಧಿಕಾರಿ ಕಾರ್ಯಕ್ರಮದ ಜವಾಬ್ದಾರಿಯನ್ನು ತುಮಕೂರಿನ ಶಿವಕುಮಾರ ಮಹಾಸ್ವಾಮಿಗಳು ವಹಿಸಿದ್ದರು. ಮಲ್ಲಿಕಾರ್ಜುನ ಸ್ವಾಮಿಗಳು ಅಂದಿನಿAದ ನಿರಂತರವಾಗಿ ಶ್ರೀಮಠದ ಅಭಿವೃದ್ಧಿಗೆ ತೊಡಗಿಸಿಕೊಂಡರು. ಅವರದು ಅಂತರ್ಮುಖಿ ಸಾಧನೆ. ಎಲ್ಲರೂ ಸಮಾಜದ ಒಳಿತಿಗಾಗಿ ದುಡಿಯಬೇಕು ಎಂದು ಹೇಳಿದವರು. ನಮ್ಮೆಲ್ಲರಿಗೆ ನಿರಂತರವಾಗಿ ಸ್ಫೂರ್ತಿ ತುಂಬುತ್ತಿದ್ದರು ಎಂದು ಸ್ಮರಿಸಿದರು.

ಇದನ್ನೂ ಓದಿ: ಹಿಂದೂ ಮಹಾಗಣಪತಿ ಉತ್ಸವ ಸಮಿತಿಗೆ ಬಿ.ನಯನ್ ಅಧ್ಯಕ್ಷ

ಸಾಣೇಹಳ್ಳಿಯ ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿಗಳು ಮಾತನಾಡುತ್ತ, ನಮ್ಮ ಬದುಕಿಗೆ ಚೈತನ್ಯ ತುಂಬಿದವರು ಬಸವಣ್ಣನವರು. ಬಸವಣ್ಣನೆಂದರೆ ಜಗತ್ತು. ಇಡೀ ವಿಶ್ವಕ್ಕೆ ಗುರುವಾದವರು. ಹೊಸ ಧರ್ಮದ ಹುಟ್ಟಿಗೆ ಕಾರಣರಾದವರು. ಅವರಿಗೂ ಮೊದಲು ದಯಾಹೀನವಾದ ಧರ್ಮವಿತ್ತು.

ಮೊದಲು ಪುರಾಣ, ಶಾಸ್ತç ವೇದಗಳ ಬಗ್ಗೆ ಪ್ರಚಾರ ನಡೆದಿತ್ತು. ಲಿಂಗಾಯತ ಎಂದರೆ ಹಿಂದೂ ಧರ್ಮದ ಭಾಗವಲ್ಲ. ನಮ್ಮದು ಸ್ವತಂತ್ರ ಲಿಂಗಾಯತ ಧರ್ಮ. ಮಲ್ಲಿಕಾರ್ಜುನ ಶ್ರೀಗಳು ಎಲ್ಲರನ್ನು ಪ್ರೀತಿಯಿಂದ ನೋಡುತ್ತಿದ್ದರು. ಗುರುತ್ವಕ್ಕೆ ಸಾಕ್ಷಿಯಾಗಿದ್ದರು. ಸಿರಿಗೆರೆ ಮಠಕ್ಕೂ ಮುರುಘಾಮಠಕ್ಕೂ ಹಾವು ಮುಂಗಸಿಯAತಿತ್ತು. ಆದರೆ ಮಲ್ಲಿಕಾರ್ಜುನ ಶ್ರೀಗಳು ಅದನ್ನು ತಿಳಿಗೊಳಿಸಿದರು. 1977ರಲ್ಲಿ ನಮ್ಮ ಪಟ್ಟಾಭಿಷೇಕಕ್ಕೆ ದಯಮಾಡಿಸಿ ನಮಗೆ ಆಶೀರ್ವಾದ ಮಾಡಿದ್ದರು. 1979ರಲ್ಲಿ ಸಿರಿಗೆರೆ ಶ್ರೀಗಳ ಪಟ್ಟಾಧಿಕಾರ ಸಂದರ್ಭದಲ್ಲಿ ಆಶೀರ್ವಾದ ಮಾಡಿದ್ದರು ಎಂದು ಸ್ಮರಿಸಿದರು.

ಇದನ್ನೂ ಓದಿ: ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ | ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

ಬಸವತತ್ವವನ್ನು ಹೃಧ್ವತ್ ಮಾಡಿಕೊಂಡಿದ್ದರು. ಇಂದು ಸ್ವಾಮಿಗಳಾದ ನಾವು ಬದಲಾಗಬೇಕಿದೆ. ಗುರುವಿಗೆ ಅಂಜಿ ನಡೆಯುವ ಭಕ್ತ, ಭಕ್ತನಿಗೆ ಅಂಜುವ ಗುರು ಇದ್ದಾಗ ಮಾತ್ರ ಸಮಾಜ ಸುಧಾರಣೆಯಾಗುತ್ತದೆ. 30ನೇ ವರ್ಷದ ಶ್ರೀಗಳ ಸ್ಮರಣೋತ್ಸವ ಎಲ್ಲರಿಗೂ ಸ್ಫೂರ್ತಿಯಾಗಲಿ ಎಂದರು.

ನಿಡುಮಾಮಿಡಿ ಮಠದ ಶ್ರೀ ವೀರಭದ್ರ ಚನ್ನಮಲ್ಲ ದೇಶೀಕೇಂದ್ರ ಸ್ವಾಮಿಗಳು ಮಾತನಾಡಿ, ಶ್ರೀಗಳೊಂದಿಗಿನ ನನ್ನ ಒಡನಾಟ ಬಹಳ ದಿನಗಳದ್ದು. ಅವರೊಂದಿಗಿನ ಸಂದರ್ಭಗಳು ಉತ್ತಮವಾದುವು. ಅವರು ಆಧುನಿಕ ಅಲ್ಲಮಪ್ರಭು ಇದ್ದಹಾಗೆ. ಅವರು ಜ್ಞಾನಿಗಳು. ಸಮದರ್ಶಿತ್ವವುಳ್ಳವರು. ಸರ್ವ ಸಮಾಜಗಳ ಶ್ರೇಯಸ್ಸು ಬಯಸುವ ಶುದ್ಧ ಮನಸ್ಸಿನವರು. ಅವರು ಸಮಾಜಕ್ಕೆ ಬೆಳಕಿನ ರೀತಿ ಇದ್ದರು.

ಇದನ್ನೂ ಓದಿ:

ಅವರು ಬೆಳಕಿನಲ್ಲಿ ಬೆಳೆದು, ಬೆಳಕನ್ನು ಬಿತ್ತಿ ಬೆಳಕಾದವರು. ಅವರ ಸಂಪರ್ಕದಿ0ದ ನನ್ನ ಮನಸ್ಸು, ಬುದ್ಧಿ ಎಲ್ಲವನ್ನು ತಿದ್ದಿಕೊಂಡಿz್ದೆÃನೆ. ಬೇರೆ ಸ್ವಾಮಿಗಳವರ ಸೇವೆ ಮಾಡುವ ಅವಕಾಶ ಇದ್ದರೂ ಸಹ ಮಲ್ಲಿಕಾರ್ಜುನ ಶ್ರೀಗಳವರ ಪ್ರೀತಿ ಆಶೀರ್ವಾದ ಯಾವತ್ತೂ ನನ್ನ ಮೇಲೆ ಇತ್ತು.

Sri Mallikarjuna swamiji smaranothsava
ಸ್ಮರಣೋತ್ಸವ ಹಾಗು ಚಿನ್ಮೂಲಾದ್ರಿ ಚಿತ್ಕಳೆ ಸ್ಮರಣೋತ್ಸವ ಸಂಪುಟ ಬಿಡುಗಡೆ ಸಮಾರಂಭ

ಆರ್ಥಿಕವಾಗಿ ಸಂಕಷ್ಟದಲ್ಲಿದ್ದ ಶ್ರೀಮಠವನ್ನು ಸದೃಢ ಮಾಡಿದರು. ಅನಾವಶ್ಯಕವಾಗಿ ಹಣ ವ್ಯರ್ಥ ಮಾಡುತ್ತಿರಲಿಲ್ಲ. ಶಿಕ್ಷಣ ಸಂಸ್ಥೆಗಳ ನೌಕರರಿಗೆ ಸಂಬಳ ಕೊಡಲು ಸಾಧ್ಯವಾಗುತ್ತಿರಲಿಲ್ಲ. ಭಕ್ತರ ಸಹಾಯದಿಂದ ಅದನ್ನು ನೆರವೇರಿಸುತ್ತಿದ್ದರು. ನಾವುಗಳು ನಮ್ಮ ಸಂಸ್ಕೃತಿ, ಪರಂಪರೆಗಳ ಜ್ಞಾನ ಪಡೆದುಕೊಳ್ಳಬೇಕು. ಮಠಾಧಿಪತಿಗಳೆಂದರೆ ಸರ್ವಜ್ಞರಲ್ಲ. ಅವರ ಮಾತೇ ಅಂತಿಮವಲ್ಲ. ಜೈನ, ಬೌದ್ಧಧರ್ಮಕ್ಕೆ ಪರ್ಯಾಯವಾಗಿ ಧರ್ಮ ಸಂಸ್ಕೃತಿಯನ್ನು ರೂಪಿಸಿದ್ದು ವಚನಕಾರರ ಹೋರಾಟ. ಅದು ಶಿವಭಕ್ತಿಯನ್ನು ಊರ್ಜಿತಗೊಳಿಸಿತು. ದ್ರಾವಿಡ ಸಂಸ್ಕೃತಿಯನ್ನು ಪುನರುಜ್ಜೀವನಗೊಳಿಸಿತು. ನಮಗೆ ಅನುಭಾವ ಪರಂಪರೆ ಇದೆ. ಮಠಾಧೀಶರು ಉತ್ಸಾಹದಿಂದ ಪರಂಪರೆಯನ್ನು ಬಿತ್ತಬೇಕು. ಪರಂಪರೆಯನ್ನು ತಿರಸ್ಕರಿಸಬಾರದು. ಪಾಶ್ಚಾತ್ಯ ಮಾದರಿಯಲ್ಲಿ ಬಸವಣ್ಣನವರನ್ನು ಸೀಮಿತಗೊಳಿಸಬಾರದು. ಸಂಸ್ಕೃತಿಯ ನೆಲೆಯಲ್ಲಿ ಪರಂಪರೆ ನೋಡಬೇಕು. ನಮ್ಮ ಕಾಲಘಟ್ಟದ ದಾರ್ಶನಿಕರು ಘನವ್ಯಕ್ತಿತ್ವವುಳ್ಳವರು. ಮಠಾಧೀಶರು ನೈತಿಕ ಶಕ್ತಿಯನ್ನು ಉಳಿಸಿಕೊಳ್ಳಬೇಕು. ಮುರುಘಾಮಠದ ಬೆಳಕು ಎಲ್ಲೆಡೆ ಪಸರಿಸಲಿ ಎಂದು ನುಡಿದರು.

ಇದನ್ನೂ ಓದಿ: ವೇದಾವತಿ ಜೊತೆಗೆ ನೇತ್ರಾವತಿ ಸಮಾಗಮ | ಎತ್ತಿನಹೊಳೆ ನೀರು ವಿವಿ ಸಾಗರಕ್ಕೆ | ಈ ವರ್ಷವೂ ಮಾರಿಕಣಿವೆ ಕೋಡಿ ಪಕ್ಕಾ

ಇಳಕಲ್‌ನ ಶ್ರೀ ಗುರುಮಹಾಂತ ಸ್ವಾಮಿಗಳು ಮಾತನಾಡಿ, ದಾರ್ಶನಿಕರದು ನಿಸ್ವಾರ್ಥ ಸೇವೆ. ಸಕಲ ಜೀವರಾಶಿಗಳ ಮೇಲೆ ಅಂತಃಕರಣ ಇರಬೇಕು. ಹಾಗಾಗಿ ಮಲ್ಲಿಕಾರ್ಜುನ ಶ್ರೀಗಳಲ್ಲಿ ದಾರ್ಶನಿಕತೆ ಇತ್ತು. ಅವರು ದೊಡ್ಡ ಪಂಡಿತರು. ಅವರ ದಾರ್ಶನಿಕತೆಯ ಅನಾವರಣ ಈ ಪುಸ್ತಕದಲ್ಲಿದೆ.

ಶ್ರೀಗಳು ಅಲ್ಲಮ ಸ್ವರೂಪಿಗಳು. ಅವರ ದಿನಚರಿ ತುಂಬಾ ಚೆನ್ನಾಗಿತ್ತು. ಪಂಡಿತರನ್ನು ಪ್ರೀತಿ ಮಾಡುತ್ತಿದ್ದರು. ಅಂಥವರ ಮ್ಞೇಲೆ ಅವರಿಗೆ ಕರುಣೆ ಇತ್ತು. ಅವರ ಶಿವಯೋಗ ಶಕ್ತಿಯಿಂದ ಹಾರೈಸುತ್ತಿದ್ದರು. ಬಡವರ ಬಗ್ಗೆ ಕಾಳಜಿ ಇತ್ತು. ಬಸವತತ್ವದ ಮೇಲೆ ಅತೀವ ನಿಷ್ಠೆ, ಜಗತ್ತಿಗೆ ಬಸವಣ್ಣನೇ ಭಕ್ತ ಎನ್ನುತ್ತಿದ್ದರು. ಕಷ್ಟ ಕಾಲದಲ್ಲಿ ಸಂಸ್ಥಾನವನ್ನು ಎತ್ತಿ ಹಿಡಿದರು.

ಇದನ್ನೂ ಓದಿ: ಕೇಂದ್ರ ಬಜೆಟ್‌ನಲ್ಲಿ ಚಿತ್ರದುರ್ಗ ರೈಲ್ವೇ ಯೋಜನೆಗೆ 150 ಕೋಟಿ

ಅವರಿಗೆ ಭಕ್ತರ ಮೇಲೆ ಅಪಾರವಾದ ಪ್ರೇಮ. ಅವರಿಗೆ ತುಂಬಾ ಸಿಟ್ಟು ಅಷ್ಟೇ ಪ್ರೀತಿವಾತ್ಸಲ್ಯವುಳ್ಳವರು ತಾಯಿ ಗುಣ ಅವರದಾಗಿತ್ತು ಎಂದು ನುಡಿದರು.

ಪಂಚಮಸಾಲಿ ಗುರುಪೀಠದ ಶ್ರೀ ವಚನಾನಂದ ಸ್ವಾಮಿಗಳು ಮಾತನಾಡಿ, ಅಥಣಿಯ ಶಿವಯೋಗಿಗಳ ಆಶೀರ್ವಾದದಲ್ಲಿ ಬೆಳೆದವರು ಮಲ್ಲಿಕಾರ್ಜುನ ಶ್ರೀಗಳು. ಧಾರವಾಡ ಮುರುಘಾಮಠಕ್ಕೆ ಚಿತ್ರದುರ್ಗ ಮುರುಘಾಮಠಕ್ಕೆ ಹಾಗು ಅಥಣಿಯ ಗಚ್ಚಿನಮಠಕ್ಕೆ ಅವಿನಾಭಾವ ಸಂಬ0ಧ ಇತ್ತು ಎಂದರು.

ಇದನ್ನೂ ಓದಿ:  ಈಚಘಟ್ಟದಲ್ಲಿ ಮುರುಘಾ ಮಠದ ಕಾರ್ಯಕ್ರಮ | ಅನುಭಾವ ಶ್ರಾವಣಕ್ಕೆ ಹಲವು ಮಠಾಧೀಶರು

ಹಿ0ದೂ ಎನ್ನುವುದು ಮಹಾಸಾಗರ. ಅಲ್ಲಿ ಎಲ್ಲರೂ ಇದ್ದರು. ಅಲ್ಲಿ ಲಿಂಗಾಯತ, ವೈದಿಕ, ಬೌದ್ಧ, ಜೈನರು ಇದ್ದರು. ವೀರಶೈವ ತತ್ವ ಲಿಂಗಾಯತ ತತ್ವ ಬೇರೆ ಬೇರೆ ಇರಬಹುದು. ಇವರು ಒಂದಾದಾಗ ಮಾತ್ರ ಅಭಿವೃದ್ಧಿ ಹೊಂದಲು ಸಾಧ್ಯವಾಗುತ್ತದೆ ಎಂದರು.

ಕಬೀರಾನ0ದಾಶ್ರಮದ ಶ್ರೀ ಶಿವಲಿಂಗಾನ0ದ ಸ್ವಾಮಿಗಳು ಮಾತನಾಡಿ, ನನ್ನನ್ನು ಅತ್ಯಂತ ಪ್ರೀ್ರತಿಯಿಂದ ಮಲ್ಲಿಕಾರ್ಜುನ ಶ್ರೀಗಳು ಕಾಣುತ್ತಿದ್ದರು. ಸ್ವಾಮೀಜಿಗಳ ಒಡನಾಟದಲ್ಲಿದ್ದ ಅನೇಕ ಸಂದರ್ಭಗಳನ್ನು ನೆನಪಿಸಿಕೊಂಡರಲ್ಲದೆ, ಶಿವಪೂಜೆಯಲ್ಲಿ ನಿಷ್ಠಾವಂತರು ರುದ್ರಾಭಿಷೇಕವನ್ನು ಮಾಡದೆ ಪ್ರಸಾದ ಮಾಡುತ್ತಿರಲಿಲ್ಲ ಎಂದು ಸ್ಮರಿಸಿಕೊಂಡರು.

ಇದನ್ನೂ ಓದಿ: ವಿವಿ ಸಾಗರಕ್ಕೆ ಹರಿದು ಬಂತು 2195 ಕ್ಯೂಸೆಕ್ ನೀರು

ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠ ಮತ್ತು ವಿದ್ಯಾಪೀಠದ ಆಡಳಿತ ಮಂಡಳಿ ಅಧ್ಯಕ್ಷ ಶಿವಯೋಗಿ ಸಿ. ಕಳಸದ ಮಾತನಾಡಿ, ಇದೊಂದು ವಿನೂತನವಾದ ಕಾರ್ಯಕ್ರಮ. ಶ್ರೀಗಳ ಬದುಕು ಮತ್ತು ಸಾಧನೆ ಅಪೂರ್ವವಾದುದು. ಶ್ರೀಗಳ ದಿನವನ್ನು ಸಂಸ್ಥಾಪನಾ ದಿನವನ್ನಾಗಿ ಆಚರಿಸಲಾಗುವುದು ಎಂದರು.

ಧಾರವಾಡ ಮುರುಘಾಮಠದ ಶ್ರೀ ಮಲ್ಲಿಕಾರ್ಜುನ ಸ್ವಾಮಿಗಳು ಮಾತನಾಡಿ, ಶರೀರ ಒಂದುದಿನ ಕರಗಿ ಹೋಗುತ್ತದೆ. ಆದರೆ ಮಾಡಿದ ಸೇವೆ ಎಂದಿಗೂ ಕರಗುವುದಿಲ್ಲ. ಮಲ್ಲಿಕಾರ್ಜುನ ಶ್ರೀಗಳ ಸಾಧನೆಗಳು ಇಂದಿಗೂ ನೂತನವಾಗಿವೆ. ಶ್ರೀಗಳವರು ಸ್ಮರಣೀಯರು. ಈ ಸ್ಮರಣೆ ನನಗೆ ಸಂತೋಷ ತಂದಿದೆ ಎಂದರು.

ಇದನ್ನೂ ಓದಿ: ಲಿಂಗೈಕ್ಯ ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ ಸ್ಮರಣೋತ್ಸವ | ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ವಿಶೇಷ ಲೇಖನ

ಹೆಬ್ಬಾಳು ಶ್ರೀ ರುದ್ರೇಶ್ವರ ಸ್ವಾಮಿಗಳು ಮಾತನಾಡಿ, ನನಗೆ ತಮ್ಮ ಮರಣದ ದಿನಾಂಕವನ್ನು ಬರೆದು ಹೇಳಿದ್ದರು. ಆಗಸ್ಟ್ 8ನೇ ತಾರೀಕು ಒಂಟಿಕ0ಬದ ಮಠದಲ್ಲಿ ವ್ಯವಸ್ಥೆ ಮಾಡಲು ತಿಳಿಸಿದರು. ಶ್ರೀಗಳು ಶಿಕ್ಷಣಪ್ರೇಮಿಗಳು. ಅಂದಿನ ಮಠದ ಪರಿಸ್ಥಿತಿ ಕಷ್ಟದಲ್ಲಿತ್ತು. ಅಂತಹ ಸ್ಥಿತಿಯನ್ನು ಬಹಳವಾಗಿ ಸುಧಾರಿಸಿದರು. ಅವರ ಮಾತುಗಳು ಜ್ಯೋತಿರ್ಲಿಂಗ ಎಂದು ಹೇಳಿದರು.

ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಮಾತನಾಡಿ, ನಮ್ಮ ಕುಟುಂಬಕ್ಕು ಮತ್ತು ಮುರುಘಾಮಠಕ್ಕೆ ಅವಿನಾಭಾವ ಸಂಬAಧ ಇತ್ತು. ಶ್ರೀಗಳು ತಮ್ಮ ಜೀವನವನ್ನು ಸಮಾಜದ ಏಳಿಗೆಗಾಗಿ ಮುಡುಪಾಗಿಟ್ಟಿದ್ದರು ಎಂದರು.

ಇದನ್ನೂ ಓದಿ: ವಿದ್ಯಾರ್ಥಿ ನಿಲಯದ ವಾರ್ಡನ್‌ ಅಮಾನತು | ಜಿಪಂ ಸಿಇಒ ಆದೇಶ

ಪ್ರೊ. ಲಕ್ಷ್ಮಣ ತೆಲಗಾವಿ ಮಾತನಾಡಿ, 1989ರಲ್ಲಿ ಚಿನ್ಮೂಲಾದ್ರಿ ಚೇತನ ಬಿಡುಗಡೆಯಾಗಿತ್ತು. ಈಗ ಚಿನ್ಮೂಲಾದ್ರಿ ಚಿತ್ಕಳೆ ಪ್ರಧಾನ ಸಂಪಾದಕನಾಗಿ ಕೆಲಸ ಮಾಡಿ ಬೃಹತ್ ಕೃತಿ ಹೊರತಂದಿತಂದಿದ್ದೇನೆ. ನನ್ನ ಜೊತೆ ಅನೇಕರು ಸಹಕಾರ ನೀಡಿದ್ದಾರೆ. ನನಗೆ ಗುರುಗಳ ಸೇವೆ ಈ ರೀತಿ ಮಾಡುವ ಭಾಗ್ಯ ದೊರೆಯಿತು. ಇದು ಮೊದಲ ಸಂಪುಟ. ಎರಡನೇ ಸಂಪುಟವನ್ನು ಹೊರತರುವ ಯೋಜನೆಯಲ್ಲಿದ್ದೇವೆ ಎಂದರು.

ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠ ಮತ್ತು ವಿದ್ಯಾಪೀಠದ ಆಡಳಿತ ಮಂಡಳಿ ಸದಸ್ಯರಾದ ಡಾ. ಬಸವಕುಮಾರ ಸ್ವಾಮಿಗಳು, ಶ್ರೀ ಮೋಕ್ಷಪತಿ ಸ್ವಾಮಿಗಳು, ಶ್ರೀ ಬಸವಮೂರ್ತಿ ಮಾದಾರಚೆನ್ನಯ್ಯ ಸ್ವಾಮಿಗಳು, ಎಸ್.ಎನ್. ಚಂದ್ರಶೇಖರ್, ಡಾ. ಬಸವಜಯಚಂದ್ರ ಸ್ವಾಮಿಗಳು, ಶ್ರೀ ಶಾಂತವೀರ ಗುರುಮುರುಘರಾಜೇಂದ್ರ ಸ್ವಾಮಿಗಳು ಶ್ರೀ ಬಸವಶಾಂತಲಿ0ಗ ಸ್ವಾಮಿಗಳು, ಶ್ರೀ ಮಲ್ಲಿಕಾರ್ಜುನ ಸ್ವಾಮಿಗಳು, ಶ್ರೀ ಬಸವ ರಮಾನಂದ ಸ್ವಾಮಿಗಳು, ಶ್ರೀ ಶಿವಬಸವ ಸ್ವಾಮಿಗಳು ಬೇಲೂರು ಇನ್ನು ಮುಂತಾದ ಹರಗುರು ಚರಮೂರ್ತಿಗಳು ಹಾಗೂ ಡಾ. ಕೆ.ಎಲ್. ರಾಜಶೇಖರ್, ಎ.ವಿ. ಉಮಾಪತಿ, ಪಿ. ರಮೇಶ್, ಎಚ್. ಆನಂದಪ್ಪ, ಡಿ.ಎಸ್. ಸುರೇಶ್‌ಬಾಬು, ಬಿ.ಎಸ್. ರುದ್ರಪ್ಪ, ಆರ್.ಎ. ಅಶೋಕ, ಕೆ.ಸಿ. ರಮೇಶ್, ವಿಜಯಸಿಂಹ, ಎಂ.ಕೆ. ತಾಜಪೀರ್ ಮೊದಲಾದವರಿದ್ದರು.

ಇದನ್ನೂ ಓದಿ: ಶಾಲಾ ಮಕ್ಕಳಿಗೆ ತೋಟಗಾರಿಕೆ ತರಬೇತಿ | ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ

ಇದೇ ಸಂದರ್ಭದಲ್ಲಿ ಚಿನ್ಮೂಲಾದ್ರಿ ಚಿತ್ಕಳೆ ಸ್ಮರಣೋತ್ಸವ ಸಂಪುಟವನ್ನು ವೇದಿಕೆಯಲ್ಲಿದ್ದ ಎಲ್ಲಾ ಪೂಜ್ಯರು ಹಾಗು ಅತಿಥಿಗಳು ಬಿಡುಗಡೆ ಮಾಡಿದರು. ಸಮುದಾಯ ಭವನದ ರೂಂಗಳನ್ನು ಉದ್ಘಾಟಿಸಲಾಯಿತು. ಬೆಂಗಳೂರು ಲಕ್ಷ್ಮೀ ಮುದ್ರಣಾಲಯದ ಅಶೋಕ್‌ಕುಮಾರ್ ಅವರು ಶ್ರೀಗಳ ಛಾಯಾಚಿತ್ರ ಪ್ರದರ್ಶನ ಉದ್ಘಾಟಿಸಿದರು.

ಗಾನಯೋಗಿ ಪಂಚಾಕ್ಷರಿ ಬಳಗದವರು ವಚನ ಗೀತೆ ಹಾಡಿದರು. ಜಮುರಾ ಕಲಾವಿದರು ವಚನ ಪ್ರಾರ್ಥನೆ ಹಾಡಿದರು. ಡಾ.ಬಸವಪ್ರಭು ಸ್ವಾಮಿಗಳು ಸ್ವಾಗತಿಸಿದರು. ಪಿ.ಹೆಚ್.ಮುರುಗೇಶ್ ನಿರೂಪಿಸಿದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga UpdatesHinduismHolalkereKannada Latest NewsKarnataka NewsLingayat DharmaMallikarjuna Swamiji CommemorationMuruga MathOntika0bada MathSanehalli SriVachanananda Swamijiಒಂಟಿಕ0ಬದ ಮಠಕನ್ನಡ ಲೇಟೆಸ್ಟ್ ನ್ಯೂಸ್ಕರ್ನಾಟಕ ಸುದ್ದಿಚಿತ್ರದುರ್ಗಚಿತ್ರದುರ್ಗ ಅಪ್ಡೇಟ್ಸ್ಮಲ್ಲಿಕಾರ್ಜುನ ಸ್ವಾಮೀಜಿ ಸ್ಮರಣೋತ್ಸವಮುರುಘಾ ಮಠಲಿಂಗಾಯತ ಧರ್ಮವಚನಾನಂದ ಸ್ವಾಮೀಜಿಸಾಣೇಹಳ್ಳಿ ಶ್ರೀಹಿಂದೂ ಧರ್ಮಹೊಳಲ್ಕೆರೆ
Share This Article
Facebook Email Print
Previous Article Horticulture training Horticulture training: ಶಾಲಾ ಮಕ್ಕಳಿಗೆ ತೋಟಗಾರಿಕೆ ತರಬೇತಿ | ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ
Next Article Power Cut chitradurga News (3) Power cut; 8 ದಿನ ವಿದ್ಯುತ್ ವ್ಯತ್ಯಯ | ಎಲ್ಲೆಲ್ಲಿ ಅಂತೀರಾ… ಈ ಸುದ್ದಿ ಓದಿ…
Leave a Comment

Leave a Reply Cancel reply

Your email address will not be published. Required fields are marked *

ಭೂ ಒಡೆತನ ಯೋಜನೆ
ಭೂ ಒಡೆತನ ಯೋಜನೆಯಡಿ ಆಸಕ್ತ ಭೂ ಮಾಲೀಕರಿಂದ ಜಮೀನು ಖರೀದಿ
ಮುಖ್ಯ ಸುದ್ದಿ
ಅಂಚೆ ಜೀವ ವಿಮೆ ಪ್ರತಿನಿಧಿಗಳ ನೇಮಕಾತಿ | ನೇರ ಸಂದರ್ಶನ
ಮುಖ್ಯ ಸುದ್ದಿ
ನೆಲ್ಲಿಕಟ್ಟೆ ಗ್ರಾಮದಲ್ಲಿ 1.25 ಕೋಟಿ ವೆಚ್ಚದ ಚೆಕ್‍ಡ್ಯಾಂ ಗೋಕಟ್ಟೆ ನಿರ್ಮಾಣಕ್ಕೆ ಭೂಮಿಪೂಜೆ
ನೆಲ್ಲಿಕಟ್ಟೆ ಗ್ರಾಮದಲ್ಲಿ 1.25 ಕೋಟಿ ವೆಚ್ಚದ ಚೆಕ್‍ಡ್ಯಾಂ ಗೋಕಟ್ಟೆ ನಿರ್ಮಾಣಕ್ಕೆ ಭೂಮಿಪೂಜೆ 
ಮುಖ್ಯ ಸುದ್ದಿ
thyroid problems
ಥೈರಾಯ್ಡ್ ಸಮಸ್ಯೆ ಇದ್ದಾಗ ಯಾವ ಹಣ್ಣುಗಳನ್ನು ತಪ್ಪಿಸಬೇಕು?
Life Style
© Chitradurga News 2025 | Powered By Karnatakabest.com

Loading Comments...

    Welcome Back!

    Sign in to your account

    Username or Email Address
    Password

    Lost your password?

    Not a member? Sign Up