By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: Murder: ಕೊಲೆಯಾದ ಮಂಜುನಾಥ್ ಜೈಲಿಗೂ ಹೋಗಿ ಬಂದಿದ್ದ | ಬೇರೊಂದಿದೆ ಪ್ರೇಮ್ ಕಹಾನಿ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » Murder: ಕೊಲೆಯಾದ ಮಂಜುನಾಥ್ ಜೈಲಿಗೂ ಹೋಗಿ ಬಂದಿದ್ದ | ಬೇರೊಂದಿದೆ ಪ್ರೇಮ್ ಕಹಾನಿ

ಕ್ರೈಂ ಸುದ್ದಿ

Murder: ಕೊಲೆಯಾದ ಮಂಜುನಾಥ್ ಜೈಲಿಗೂ ಹೋಗಿ ಬಂದಿದ್ದ | ಬೇರೊಂದಿದೆ ಪ್ರೇಮ್ ಕಹಾನಿ

chitradurganews.com
Last updated: 28 November 2024 10:52
chitradurganews.com
7 months ago
Share
konanuru manjunath
ಕೋಣನೂರು ಮಂಜುನಾಥ್
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 28 NOVEMBER 2024

ಚಿತ್ರದುರ್ಗ: ಪ್ರೀತಿಸಿ ಮದುವೆಯಾದ ಕಾರಣಕ್ಕೆ ಯುವತಿಯ ಪೋಷಕರಿಂದಲೇ ಭೀಕರವಾಗಿ (Murder) ಕೊಲೆಯಾದ ಕೋಣನೂರು ಗ್ರಾಮದ ಮಂಜುನಾಥ್ ಈ ಹಿಂದೆ ಜೈಲಿಗೂ ಹೋಗಿ ಬಂದ ಹಿನ್ನೆಲೆ ಇದೆ.

ಮಂಜುನಾಥ್ ಈ ಹಿಂದೆ 2019 ರಲ್ಲಿ ಶಿಲ್ಪಾ ಎಂಬ ಯುವತಿ ಜೊತೆ ಮದುವೆಯಾಗಿ, ಊರು ಬಿಟ್ಟು ಹೋಗಿ ದಾವಣಗೆರೆಯಲ್ಲಿ ನೆಲೆಸಿದ್ದರು.

ಇದನ್ನೂ ಓದಿ:

ಆದರೆ, ಇದ್ದಕ್ಕಿದ್ದಂತೆ ಮಂಜುನಾಥ್ ನಾಪತ್ತೆಯಾದಾಗ, ಪ್ರೀತಿಸಿದ ಯುವತಿ ಶಿಲ್ಪಾ ದಾವಣಗೆರೆ ಪೊಲೀಸ್ ಠಾಣೆಯಲ್ಲಿ ನಾಪತ್ತೆಯಾಗಿರುವ ಬಗ್ಗೆ ದೂರನ್ನೂ ನೀಡಿದ್ದಾರೆ.

ಆನಂತರ ಯುವತಿ ಶಿಲ್ಪಾ ದಾವಣಗೆರೆಯಲ್ಲಿ ಆತ್ಮಹತ್ಯೆ ಮಾಡಿಕೊಂಡು ಜೀವ ಕಳೆದುಕೊಳ್ಳುತ್ತಾರೆ.

ಇದನ್ನೂ ಓದಿ: ಪ್ರೀತಿಸಿ ಮದುವೆಯಾಗಿದ್ದಕ್ಕೆ ಬಿತ್ತು ಹೆಣ | ಭೀಕರವಾಗಿ ಕೊಲೆಯಾದ ಯುವಕ

ಈ ಪ್ರಕರಣದಲ್ಲಿ ಮಂಜುನಾಥ್ ಆರೋಪಿಯಾಗಿ ಜೈಲು ಶಿಕ್ಷೆಯಾಗುತ್ತದೆ. ಒಂದಿಷ್ಟು ದಿನ ಜೈಲಿಗೆ ಹೋಗಿ ಆನಂತರ ಹೈಕೋರ್ಟ್‍ನಲ್ಲಿ ಜಾಮೀನು ಪಡೆದು ಹೊರಗೆ ಬರುತ್ತಾನೆ.

ಈ ಕಾರಣಕ್ಕೆ ರಕ್ಷಿತಾ ಪೋಷಕರು ಮಂಜುನಾಥನ ಜೊತೆಗೆ ಮಗಳು ಇರುವುದನ್ನು ಸಹಿಸಲಾರದೆ ಕೊಲೆ ಮಾಡುವ ಹಂತಕ್ಕೆ ದ್ವೇಷ ಬೆಳೆಸಿಕೊಂಡಿದ್ದರು ಎನ್ನಲಾಗಿದೆ.

ಮಂಜುನಾಥ್ ರಕ್ಷಿತಾ ಮಾತುಕತೆ ಆಡಿಯೋ ವೈರಲ್:

ಇನ್ನೂ ಕೊಲೆ ಪ್ರಕರಣದ ನಂತರ ಮಂಜುನಾಥ್ ಹಾಗೂ ರಕ್ಷಿತಾ ನಡುವೆ ಈ ಹಿಂದೆ ನಡೆದಿರುವ ಮಾತುಕತೆಯ ಕೆಲ ಆಡಿಯೋ ವೈರಲ್ ಆಗಿದ್ದು, ಅದರಲ್ಲಿ ರಕ್ಷಿತಾ ಮಂಜುನಾಥನ ಹಿಂದೆ ಬಿದ್ದು, ನೀನಿಲ್ಲದೆ ನಾನಿರುವುದಿಲ್ಲ. ನನ್ನನ್ನು ಕರೆದುಕೊಂಡು ಹೋಗು, ಮದುವೆ ಆಗು ಎಂಬುದಾಗಿ ರಕ್ಷಿತಾ ಮಂಜುನಾಥನಿಗೆ ಕೇಳಿಕೊಂಡಿರುವ ಆಡಿಯೋ ವೈರಲ್ ಆಗಿದೆ.

ಇದನ್ನೂ ಓದಿ: ಅಡಿಕೆ ಧಾರಣೆ | ರಾಜ್ಯದ ಯಾವ ಮಾರುಕಟ್ಟೆಯಲ್ಲಿ ಎಷ್ಟು ರೇಟ್

ಈ ವೇಳೆ ಮಂಜುನಾಥ, ನನ್ನ ಹಿನ್ನೆಲೆ ಗೊತ್ತೇ ಇದೆ, ಊರಲ್ಲಿ ಜನ ಛೀ, ಥೂ ಎನ್ನುತ್ತಾರೆ, ಇದೆಲ್ಲಾ ಸರಿಯಾಗುವುದಿಲ್ಲ. ಮನೆಯಲ್ಲಿ ತೋರಿಸಿದವರನ್ನು ಮದುವೆಯಾಗಿ ಚೆನ್ನಾಗಿರು ಎಂದು ಬುದ್ದಿ ಹೇಳುತ್ತಾನೆ. ಆದರೆ, ಯುವತಿ ಯಾವುದನ್ನೂ ಕೇಳಿಸಿಕೊಳ್ಳದೆ ಪಟ್ಟು ಹಿಡಿಯುವುದು ಆಡಿಯೋದಲ್ಲಿದೆ.

ಎಫ್‍ಐಆರ್‍ನಲ್ಲಿ 19 ಜನರ ಹೆಸರು ಉಲ್ಲೇಖ:

ಇನ್ನೂ ಮಂಜುನಾಥ್ ಕೊಲೆ ಪ್ರಕರಣ ಭರಮಸಾಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು, ಪ್ರಕರಣದಲ್ಲಿ 19 ಜನರ ಹೆಸರುಗಳು ಉಲ್ಲೇಖವಾಗಿವೆ.
ಯುವತಿ ರಕ್ಷಿತಾ ತಂದೆ ಜಗದೀಶ್ ಸೇರಿದಂತೆ ಸಂಬಂಧಿಕರ ಹೆಸರುಗಳು ಎಫ್‍ಐಆರ್‍ನಲ್ಲಿ ಉಲ್ಲೇಖವಾಗಿವೆ.

ಇದನ್ನೂ ಓದಿ: ದಿನ ಭವಿಷ್ಯ | 28 ನವೆಂಬರ್ 2024 | ಈ ದಿನ ಹೇಗಿದೆ ನಿಮ್ಮ ರಾಶಿ ಫಲ…

ಮಂಜುನಾಥ್ ಮನೆಗೆ ನುಗ್ಗಿರುವ ಆರೋಪಿಗಳು ಭೀಕರವಾಗಿ ಹಲ್ಲೆ ನಡೆಸಿ ಕಲ್ಲು ಎತ್ತಿ ಹಾಕಿರುವ ಬಗ್ಗೆ ದೂರಿನಲ್ಲಿ ತಿಳಿಸಲಾಗಿದೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:BharamasagarChitradurgaChitradurga LatestChitradurga newscrimeKonanurLoveManjunath MurderMarriageMurderPolicePrem KahaniYouthಕೊಲೆಕೋಣನೂರುಕ್ರೈಂಚಿತ್ರದುರ್ಗಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಲೇಟೆಸ್ಟ್ಪೊಲೀಸ್ಪ್ರೀತಿಪ್ರೇಮ್ ಕಹಾನಿಭರಮಸಾಗರಮಂಜುನಾಥ್ ಕೊಲೆಮದುವೆಯುವಕ
Share This Article
Facebook Email Print
Previous Article arecanut price list Adake: ಅಡಿಕೆ ಧಾರಣೆ | ರಾಜ್ಯದ ಯಾವ ಮಾರುಕಟ್ಟೆಯಲ್ಲಿ ಎಷ್ಟು ರೇಟ್
Next Article today bhavishya Astrology: ದಿನ ಭವಿಷ್ಯ | 28 ನವೆಂಬರ್ 2024 | ಈ ದಿನ ಹೇಗಿದೆ ನಿಮ್ಮ ರಾಶಿ ಫಲ…
Leave a Comment

Leave a Reply Cancel reply

Your email address will not be published. Required fields are marked *

today bhavishya
Astrology: ದಿನ ಭವಿಷ್ಯ | ಜೂನ್ 29 | ಆಕಸ್ಮಿಕ ಧನ ವ್ಯಯದ ಸೂಚನೆ, ಆಸ್ತಿ ವಿಷಯಗಳಲ್ಲಿ ವಿವಾದಗಳು
Dina Bhavishya
ಸೋಲು ಗೆಲುವಿಗಿಂತ ಚುನಾವಣೆಯಲ್ಲಿ ಸ್ಪರ್ಧಿಸುವುದು ಮುಖ್ಯ | ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮಂಜುನಾಥ್‍ ಗೌಡ
ಮುಖ್ಯ ಸುದ್ದಿ
Sadguru Pradeep participate hosadurga bandh
ಹೊಸದುರ್ಗ ಬಂದ್‌ | ಇಂದು ಅಂತ್ಯವಲ್ಲ, ಆರಂಭ | ಸದ್ಗುರು ಪ್ರದೀಪ್‌
ಹೊಸದುರ್ಗ
ಹೊಸದುರ್ಗ ಸ್ಥಿತಿ ಸಮುದ್ರದ ನೆಂಟಸ್ಥನ, ಉಪ್ಪಿಗೆ ಬರ | ಕೆ.ಎಸ್.ನವೀನ್
ಹೊಸದುರ್ಗ
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up