
CHITRADURGA NEWS | 30 APRIL 2024
ಚಿತ್ರದುರ್ಗ: ಹಿರಿಯೂರು ತಾಲೂಕಿನ ವಾಣಿವಿಲಾಸ ಸಾಗರ ಜಲಾಶಯ ಡ್ಯಾಂ ಮುಂಭಾಗದಲ್ಲಿರುವ ಶ್ರೀ ಕಣಿವೆ ಮಾರಮ್ಮ ದೇವಿಯ ಜಾತ್ರಾ ಮಹೋತ್ಸವ ಹಾಗೂ ಬ್ರಹ್ಮ ರಥೋತ್ಸವ ಮೇ.7 ರಿಂದ ಪ್ರಾರಂಭವಾಗಲಿದೆ.
ಮಾರಿ ಕಣಿವೆ ಎಂದೇ ಪ್ರಸಿದ್ಧಿಯಾಗಿರುವ ವಿವಿ ಸಾಗರದ ಬಳಿ ನೆಲೆ ನಿಂತಿರುವ ಶ್ರೀ ಕಣಿವೆ ಮಾರಮ್ಮ ದೇವಿಯ ಬ್ರಹ್ಮ ರಥೋತ್ಸವದ ಜೊತೆಗೆ ದನಗಳ ಜಾತ್ರೆಯೂ ನಡೆಯಲಿದೆ.


ಇದನ್ನೂ ಓದಿ: ಮೇ.27 ರವರೆಗೆ ಶಿವಮೂರ್ತಿ ಶರಣರು ನ್ಯಾಯಾಂಗ ಬಂಧನಕ್ಕೆ | ಮತ್ತೆ ಚಿತ್ರದುರ್ಗ ಕಾರಾಗೃಹ ಸೇರಿದ ಮುರುಘಾಶ್ರೀ
ಮೇ 7 ಮಂಗಳವಾರ ಶ್ರೀ ಕಣಿವೆ ಮಾರಮ್ಮ ದೇವಿಗೆ ಮದಲಿಂಗಿತ್ತಿ ಶಾಸ್ತ್ರ ನಡೆಯಲಿದೆ. ಮೇ 8 ಬುಧವಾರ ಗಂಗಾಭಿಷೇಕ ಮತ್ತು ಜಲಧಿ ಉತ್ಸವ ನೆರವೇರುವುರು. ಮೇ 9 ಗುರುವಾರ ಉತ್ಸವ ಮತ್ತು ಆರತಿ ಕಾರ್ಯಕ್ರಮಗಳು ಜರುಗಲಿವೆ.
ಮೇ 10 ಶುಕ್ರವಾರ ಮಧ್ಯಾಹ್ನ 3 ಗಂಟೆಗೆ ಶ್ರೀ ಕಣಿವೆ ಮಾರಮ್ಮ ದೇವಿಯ ಬ್ರಹ್ಮ ರಥೋತ್ಸವ ವಿಜೃಂಭಣೆಯಿಂದ ಜರುಗಲಿದೆ. ಮೇ.11 ಶನಿವಾರ ಸಿಡಿ ಉತ್ಸವ ನೆರವೇರಲಿದೆ ಎಂದು ವಾಣಿವಿಲಾಸ ಸಾಗರದ ಶ್ರೀ ಕಣಿವೆ ಮಾರಮ್ಮ ದೇವಿ ದೇವಸ್ಥಾನದ ವ್ಯವಸ್ಥಾಪಕರು ತಿಳಿಸಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
