CHITRADURGA NEWS | 29 OCTOBER 2024
ಚಿತ್ರದುರ್ಗ: ತಾಲ್ಲೂಕಿನ ಜೆ.ಎನ್.ಕೋಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಜ್ಜನಕೆರೆ ಗ್ರಾಮದ ವಿಶೇಷಚೇತನರಾದ ಕೀರ್ತನಾ ಹಾಗೂ ಅವರನ್ನು ವಿವಾಹವಾದ ನರಸಿಂಹ ಮೂರ್ತಿ ದಂಪತಿಗಳಿಗೆ ಹೂಡಿಕೆ ಮಾಡಿರುವ ರೂ.50,000/- ಪ್ರೋತ್ಸಾಹ ಧನದ ಬಾಂಡ್ ಅನ್ನು ಮಂಗಳವಾರ ತಾಲ್ಲೂಕು ಪಂಚಾಯಿತಿ ಕಚೇರಿಯಲ್ಲಿ ತಾ.ಪಂ ಇಒ ರವಿಕುಮಾರ್ ವಿತರಿಸಿದರು.
ಕ್ಲಿಕ್ ಮಾಡಿ ಓದಿ: ಅಂಬೇಡ್ಕರ್ ವೃತ್ತದಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನ | ರಕ್ಷಣೆ ಮಾಡಿ ಆಸ್ಪತ್ರೆಗೆ ದಾಖಲಿಸಿದ ಪೊಲೀಸರು
ವಿಶೇಷಚೇತನ ಯುವಕ, ಯುವತಿಯರನ್ನು ಸಾಮಾನ್ಯ ವ್ಯಕ್ತಿಗಳು ವಿವಾಹವಾಗುವ ಬಗ್ಗೆ ನಿರ್ಲಕ್ಷತೆ ತೋರಬಾರದು ಹಾಗೆ ಇದರಿಂದ ವಿಶೇಷಚೇತನರು ವೈವಾಹಿಕ ಜೀವನದಿಂದ ವಂಚಿತರಾಗದೆ ಸಾಮಾನ್ಯರಂತೆ ವೈವಾಹಿಕ ಜೀವನ ಸಾಗಿಸಬೇಕು.
ಹಾಗಾಗಿ ವಿಶೇಷಚೇತನ ಯುವಕ-ಯುವತಿಯರನ್ನು ಸಾಮಾನ್ಯ ವ್ಯಕ್ತಿಗಳು ಮದುವೆಯಾಗುವುದಕ್ಕೆ ಪ್ರೋತ್ಸಾಹ ನೀಡುವುದರಿಂದ ಹೆಚ್ಚು ಹೆಚ್ಚು ಸಾಮಾನ್ಯ ವ್ಯಕ್ತಿಗಳು ವಿಕಲಚೇತನ ವ್ಯಕ್ತಿಗಳನ್ನು ವಿವಾಹವಾಗಲು ಮುಂದೆ ಬಂದು ವಿಕಲಚೇತನರ ವೈವಾಹಿಕ ಜೀವನ ಸುಗುಮವಾಗಿ ನಡೆಸಲು ಅನುಕೂಲವಾಗುತ್ತದೆ ಎಂದು ಸರ್ಕಾರವು ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಭಲೀಕರಣ ಇಲಾಖೆಯ ಮೂಲಕ ವಿವಾಹವಾಗುವ ಸಾಮಾನ್ಯ ಯುವಕ,ಯುವತಿಯರಿಗೆ ನಿರಂತರವಾಗಿ ಮಾಸಿಕ ಒಂದಷ್ಟು ಸಹಾಯ ದೊರಕಿಸಲು ವಿಕಲಚೇತನರ ವ್ಯಕ್ತಿಯ ಹೆಸರಿನಲ್ಲಿ ರೂ.50,000/- ಗಳನ್ನು ಹೂಡಿಕೆಯ ರೂಪದಲ್ಲಿ ಪ್ರೋತ್ಸಾಹ ನೀಡಲು ಹಾಗೂ ಅದರಿಂದ ಬರುವ ಬಡ್ಡಿ ಹಣವನ್ನು ಭತ್ಯೆಯಾಗಿ ಮದುವೆಯಾದ ಸಾಮಾನ್ಯ ವ್ಯಕ್ತಿ ಪಡೆಯಲು ಅನುವಾಗುವಂತೆ ಯೋಜನೆ ಅನುಷ್ಠಾನಗೊಳಿಸಿದೆ.
ಕ್ಲಿಕ್ ಮಾಡಿ ಓದಿ: ಚಿತ್ರದುರ್ಗ ಮಾರುಕಟ್ಟೆ ಧಾರಣೆ | ಅಕ್ಟೋಬರ್ 29 | ಇಂದಿನ ಹತ್ತಿ ರೇಟ್
ಈ ಸಂದರ್ಭದಲ್ಲಿ ತಾಲ್ಲೂಕು ಯೋಜನಾಧಿಕಾರಿ ರಾಘವೇಂದ್ರ, ತಾ.ಪಂ ವ್ಯವಸ್ಥಾಪಕ ಇರ್ಫಾನ್ ಹಾಗೂ ಎಂಆರ್ಡಬ್ಲ್ಯೂ ಮೈಲಾರಪ್ಪ ಇದ್ದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
