By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: Mass marriage: ದುಂದು ವೆಚ್ಚಕ್ಕೆ ಕಡಿವಾಣ ಹಾಕಿ | ಡಾ.ಬಸವಕುಮಾರ ಸ್ವಾಮೀಜಿ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » Mass marriage: ದುಂದು ವೆಚ್ಚಕ್ಕೆ ಕಡಿವಾಣ ಹಾಕಿ | ಡಾ.ಬಸವಕುಮಾರ ಸ್ವಾಮೀಜಿ

ಮುಖ್ಯ ಸುದ್ದಿ

Mass marriage: ದುಂದು ವೆಚ್ಚಕ್ಕೆ ಕಡಿವಾಣ ಹಾಕಿ | ಡಾ.ಬಸವಕುಮಾರ ಸ್ವಾಮೀಜಿ

News Desk Chitradurga News
Last updated: 5 August 2024 13:24
News Desk Chitradurga News
11 months ago
Share
MURUGA MATTA
ಚಿತ್ರದುರ್ಗದ ಮುರುಘಾ ಮಠದಲ್ಲಿ ಸೋಮವಾರ ನಡೆದ ಸಾಮೂಹಿಕ ಕಲ್ಯಾಣ ಮಹೋತ್ಸವದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ವಧು–ವರರು.
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 05 AUGUST 2024
ಚಿತ್ರದುರ್ಗ: ದುಂದು ವೆಚ್ಚಕ್ಕೆ ಕಡಿವಾಣ ಹಾಕಲು ಸಾಮೂಹಿಕ ಕಲ್ಯಾಣ ಮಹೋತ್ಸವದಲ್ಲಿ ಹೆಚ್ಚು ಹೆಚ್ಚು ಪಾಲ್ಗೊಳ್ಳಬೇಕು. ಅಂಬೇಡ್ಕರ್, ಗಾಂಧೀಜಿ ಸೇರಿದಂತೆ ಮೊದಲಾದ ದಾರ್ಶನಿಕರು ಸಾಮೂಹಿಕ ವಿವಾಹಕ್ಕೆ ಉತ್ತೇಜನ ನೀಡಿದರು ಎಂದು ಎಸ್‌ಜೆಎಂ ವಿದ್ಯಾಪೀಠದ ಆಡಳಿತ ಮಂಡಳಿ ಸದಸ್ಯ ಡಾ.ಬಸವಕುಮಾರ ಸ್ವಾಮೀಜಿ ಹೇಳಿದರು.

ನಗರದ ಮುರುಘರಾಜೇಂದ್ರ ಮಠದಲ್ಲಿ ಸೋಮವಾರ ಆಯೋಜಿಸಿದ್ದ 34ನೇ ವರ್ಷದ ಎಂಟನೇ ತಿಂಗಳ ಸಾಮೂಹಿಕ ಕಲ್ಯಾಣ ಮಹೋತ್ಸವದ ನೇತೃತ್ವವಹಿಸಿ ಮಾತನಾಡಿದರು.

‘ಶ್ರೀಮಂತರು ಕೋಟಿ ಕೋಟಿ ಖರ್ಚು ಮಾಡುವ ಮದುವೆಗಳಲ್ಲಿ ಹಸಿದ ಹೊಟ್ಟೆಗಳಿಗಿಂತ ತುಂಬಿದ ಹೊಟ್ಟೆಗಳಿಗೆ ತುಂಬಿಸುವ ಕೆಲಸ ನಡೆಯುತ್ತದೆ. ಶ್ರೀಮಠವು ಬಡವರ ಪರವಾಗಿ ನಿಂತಿದೆ. ಇಲ್ಲಿ ಆಗಿಹೋಗಿರುವ ಎಲ್ಲ ಜಗದ್ಗುರುಗಳು ಅಭಿವೃದ್ಧಿಗೆ ಶ್ರಮಿಸಿದ್ದಾರೆ’ ಎಂದರು.

ಇದನ್ನು ಓದಿ: ವಿವಿ ಸಾಗರದತ್ತ ಭದ್ರೆ ಪಯಣ | ಬೆಟ್ಟದಾವರೆ ಮೋಟರ್‌ ಪಂಪ್‌ ಚಾಲನೆ

‘ಬಯಲು ಸೀಮೆಯ ನಾಡಿನಲ್ಲಿರುವ ಶ್ರೀಮಠದಲ್ಲಿ ಪ್ರೀತಿ ಇದೆ. ಹಸಿದವರಿಗೆ ಅನ್ನ, ಜ್ಞಾನ ಎಲ್ಲ ರೀತಿಯ ದಾಸೋಹ ನಡೆಯುತ್ತಿದೆ. ದಂಪತಿಗಳಲ್ಲಿ ಪರಸ್ಪರ ಹೊಂದಾಣಿಕೆ ಮುಖ್ಯ. ಪ್ರೀತಿ ಇಲ್ಲದ ಬದುಕು ಅರ್ಥವಿಲ್ಲದ್ದು. ಪರಸ್ಪರ ಅರ್ಥೈಸಿಕೊಳ್ಳುವಲ್ಲಿ ನಾವು ಸೋಲಬಾರದು. ಏನೇ ಕಷ್ಟಗಳು ಬಂದರೂ ಜೊತೆಗಿದ್ದುಕೊಂಡು ಎದುರಿಸಬೇಕು. ಸಂಸಾರದ ಬಂಡಿಯನ್ನು ಪ್ರೀತಿಯಿಂದ ಎಳೆಯಬೇಕು’ ಎಂದು ತಿಳಿಸಿದರು.

ದಾವಣಗೆರೆ ವಿಶ್ವವಿದ್ಯಾಲಯದ ಇತಿಹಾಸ ಪ್ರಾಧ್ಯಾಪಕ ಪ್ರೊ.ಪಾಲಾಟೆ ವೆಂಕಟರಾವ್‌ ಮಾತನಾಡಿ, ‘12ನೇ ಶತಮಾನದ ಆಶೋತ್ತರಗಳನ್ನು ನಿಜವಾಗಿ ಆಚರಿಸುತ್ತಿರುವುದು ಚಿತ್ರದುರ್ಗದ ಬೃಹನ್ಮಠ. ಯಾವುದೇ ಲಿಂಗಭೇದ ಜಾತಿಭೇದವಿಲ್ಲದೆ ವಿವಾಹಗಳು ನಡೆಯುತ್ತಿರುವುದು ಪ್ರೀತಿಯ ದ್ಯೋತಕವಾಗಿದೆ’ ಎಂದರು.

‘ರಾಷ್ಟ್ರೀಯ, ಅಂತರ ರಾಷ್ಟ್ರೀಯ ಮಟ್ಟದಲ್ಲಿ ಶ್ರೀಮಠ ಹೆಸರುವಾಸಿಯಾಗಿದೆ. ಇಲ್ಲಿ ವಿದ್ಯಾದಾನ ಮತ್ತು ಅನ್ನದಾಸೋಹ ನಡೆಯುತ್ತಿರುವುದು ಸಂತಸದ ವಿಷಯ. ಆರ್ಥಿಕವಾಗಿ ಸಾಮಾಜಿಕವಾಗಿ ಜನರನ್ನು ಉನ್ನತಮಟ್ಟಕ್ಕೆ ಕೊಂಡೊಯ್ಯುವುದರಲ್ಲಿ ಶ್ರೀಮಠದ ಹಿರಿಮೆ ದೊಡ್ಡದಾಗಿದೆ. ಎಲ್ಲರನ್ನು ಸಮಾನವಾಗಿ ಪರಿಗಣಿಸುವ ಮಠವು ಕಳೆದ 35ವರ್ಷಗಳಿಂದ ಉಚಿತ ಸಾಮೂಹಿಕ ಕಲ್ಯಾಣ ಮಹೋತ್ಸವವನ್ನು ನಿರಂತರವಾಗಿ ನಡೆಸಿಕೊಂಡು ಬಂದಿರುವುದು ಶ್ಲಾಘನೀಯ’ ಎಂದು ತಿಳಿಸಿದರು.

ಇದನ್ನು ಓದಿ: ಮಲ್ಲಿಕಾರ್ಜುನ ಸ್ವಾಮೀಜಿ 30ನೇ ಸ್ಮರಣೋತ್ಸವ | ಒಂಟಿಕಂಬದ ಮಠದಲ್ಲಿ ಸಿದ್ಧತೆ

ದಾವಣಗೆರೆ ವಿರಕ್ತ ಮಠದ ಡಾ.ಬಸವಪ್ರಭು ಸ್ವಾಮೀಜಿ ಮಾತನಾಡಿ, ‘ದೇಹ ಎರಡಾದರೂ ಮನಸ್ಸು ಒಂದೇ ರೀತಿ ಇರಬೇಕು. ಹಾಗೆ ನವದಂಪತಿಗಳು ಒಂದೇ ಆಗಿರಬೇಕು. ಸಂಸಾರದಲ್ಲಿ ನೆಮ್ಮದಿ ಬೇಕು. ಕಾರು, ಸಂಪತ್ತು ಇದ್ದರೆ ಮಾತ್ರ ಸಾಂಸಾರಿಕ ಬದುಕು ಸುಧಾರಿಸುವುದಿಲ್ಲ. ಆದರೆ ಸತಿ ಪತಿಯ ಮಧ್ಯೆ ಪ್ರೀತಿ ಇರಬೇಕು’ ಎಂದರು.

‘ಎಷ್ಟೋ ದಂಪತಿಗಳ ನಡುವೆ ಮಾತುಕತೆಗಳು ಇರುವುದಿಲ್ಲ. ಗಂಡ ಹೆಂಡತಿ ಜೊತೆಯಾಗಿರಬೇಕು. ಕೈ ಕೈ ಹಿಡಿದುಕೊಂಡವರು ಕೊನೆಯವರೆಗೆ ಹಾಗೇ ಇರಬೇಕು. ಪ್ರೀತಿಗೆ ಬಡತನವಿರಬಾರದು. ಪ್ರೀತಿಯ ಜಲ ಬತ್ತಿ ಹೋಗಬಾರದು. ಸಂಸಾರದಲ್ಲಿ ಸುಖದುಃಖ ಬರುವುದು ಸಾಮಾನ್ಯ. ಅನುಸರಿಸಿಕೊಂಡು ಹೋಗಬೇಕು’ ಎಂದು ತಿಳಿಸಿದರು.
‘ಸಂಸಾರವೆಂಬ ನದಿಯಲ್ಲಿ ಸಾಗುವಾಗ ತೆಪ್ಪದಂತೆ ತೆಪ್ಪಗಿರಬೇಕು. ಜಗಳ ಪ್ರೀತಿಯಿಂದಿರಬೇಕು. ಯಾವ ದಿನವೂ ಶ್ರೇಷ್ಠ, ಕನಿಷ್ಠವಲ್ಲ. ಎಲ್ಲ ದಿನವೂ ಶ್ರೇಷ್ಠ ಎನ್ನುವ ಮಾತಿಗೆ ಮುರುಘಾಮಠವು ಸಾಕ್ಷಿಯಾಗಿದೆ. ವೈಚಾರಿಕ ಮಂತ್ರ ಮಾಂಗಲ್ಯ ಇಲ್ಲಿ ನಡೆಯುತ್ತದೆ’ ಎಂದು ಹೇಳಿದರು.

4 ಜೋಡಿಗಳು ವಿವಾಹ ನೆರವೇರಿತು. ಜಮುರಾ ಕಲಾವಿದರು ಪ್ರಾರ್ಥಿಸಿದರು. ವೀರಭದ್ರಪ್ಪ, ಟಿ.ಪಿ.ಜ್ಞಾನಮೂರ್ತಿ ಇದ್ದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:Basavakumar SwamijiChitradurgacut offMass WeddingMuruga Muttಕಡಿವಾಣಚಿತ್ರದುರ್ಗದುಂದು ವೆಚ್ಚಬಸವಕುಮಾರ ಸ್ವಾಮೀಜಿಮುರುಘಾ ಮಠಸಾಮೂಹಿಕ ವಿವಾಹ
Share This Article
Facebook Email Print
Previous Article bhadra water lift VV Sagar: ವಿವಿ ಸಾಗರದತ್ತ ಭದ್ರೆ ಪಯಣ | ಬೆಟ್ಟದಾವರೆ ಮೋಟರ್‌ ಪಂಪ್‌ ಚಾಲನೆ
Next Article liquor ban liquor transport: ಮದ್ಯ ಸಾಗಣೆ ಮೇಲೆ ಮಹಿಳಾ ಟೀಂ ಹದ್ದಿನ ಕಣ್ಣು | ತಕ್ಕ ಪಾಠ ಕಲಿಸಲು ನಿರ್ಧಾರ
Leave a Comment

Leave a Reply Cancel reply

Your email address will not be published. Required fields are marked *

Gavayi smaranothsava
ಶಾರದಮ್ಮ ರುದ್ರಪ್ಪ ಕಲ್ಯಾಣ ಮಂಟಪದಲ್ಲಿ ಗಾನಯೋಗಿಗಳ ಪುಣ್ಯ ಸ್ಮರಣೆ | ಸಾಧಕರಿಗೆ ಸನ್ಮಾನ
ಮುಖ್ಯ ಸುದ್ದಿ
ಮುರುಘಾಮಠದಲ್ಲಿ ಜಾಗತಿಕ ಲಿಂಗಾಯತ ಮಹಾಸಭಾದ ಮೊದಲನೇ ಕಾರ್ಯಕಾರಿ ಸಭೆ | ಮಠಾಧೀಶರು ಸೇರಿದಂತೆ ಗಣ್ಯರು ಭಾಗೀ
ಮುಖ್ಯ ಸುದ್ದಿ
ಉಸಿರಾಟದ ಕಾಯಿಲೆಗಳಿಗೆ ಈ ಎಲೆಯನ್ನು ಬಳಸಿ
Life Style
ಹೃದಯಾಘಾತದ ನಂತರ ಈ ತಪ್ಪುಗಳನ್ನು ಮಾಡಬೇಡಿ
Life Style
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up