ಚಿತ್ರದುರ್ಗ ನ್ಯೂಸ್.ಕಾಂ: ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠದಲ್ಲಿ ಮಂಗಳವಾರ 6 ಜೋಡಿಗಳು ಸಾಮೂಹಿಕ ಕಲ್ಯಾಣ ಮಹೋತ್ಸವದಲ್ಲಿ ದಾಂಪತ್ಯಕ್ಕೆ ಪದಾರ್ಪಣೆ ಮಾಡಿದರು. ಇದೇ ವೇಳೆ ಶಿಕ್ಷಕರ ದಿನಾಚರಣೆಯೂ ಇದ್ದಿದ್ದರಿಂದ ಮಠದ ಉಸ್ತುವಾರಿಗಳಾದ ಶ್ರೀ ಬಸವಪ್ರಭು ಸ್ವಾಮೀಜಿ ನವ ಜೋಡಿಗಳ ಜತೆಗೂಡಿ ಡಾ.ಸರ್ವಪಲ್ಲಿ ರಾಧಕೃಷ್ಣನ್ ಅವರ ಭಾವಚಿತ್ರಕ್ಕೆ ಪುಷ್ಪವೃಷ್ಠಿ ಮಾಡುವ ಮೂಲಕ ಶಿಕ್ಷಕರ ದಿನಾಚರಣೆ ಆಚರಿಸಿದರು.
ಈ ವೇಳೆ ಮಾತನಾಡಿದ ಶ್ರೀಗಳು, ಮನೆಯಲ್ಲಿ ಅತ್ತು ಮತ್ತು ಸೊಸೆ ತಾಯಿ ಮಗಳಂತಿರಬೇಕು ಇಬ್ಬರೂ ಸಮಾನ ಪ್ರೀತಿ ಹೊಂದಿದ್ದಾಗ ಕುಟುಂಬದಲ್ಲಿ ನೆಮ್ಮದಿ ಕಾಣಲು ಸಾಧ್ಯ. ಮನೆಯಲ್ಲಿ ನೆಮ್ಮದಿ ಇದ್ದರೆ ಅಭಿವೃದ್ಧಿ ತಾನಾಗಿಯೇ ಆಗುತ್ತದೆ ಎಂದು ಹೇಳಿದರು.
ಬೈದವರೊಡನೆ ಜಗಳ ಬೇಡ. ಉಪಕಾರ ಮಾಡಿದ್ದರ ಸ್ಮರಣೆ ಬೇಡ. ಇನ್ನೊಬ್ಬರಿಗೆ ನೋವು ಕೊಡುವುದು ಬೇಡ. ಮನುಷ್ಯ ಯಾವಾಗಲೂ ಸಮಾಜಕ್ಕೆ ಋಣಿಯಾಗಿರಬೇಕು. ನಮ್ಮ ಜೀವನದಲ್ಲಿ ತಂದೆ-ತಾಯಿ-ಗುರು ಅತ್ಯಂತ ಶ್ರೇಷ್ಠ ವ್ಯಕ್ತಿಗಳು. ಅವರನ್ನು ಯಾವತ್ತೂ ನಾವು ಮರೆಯಬಾರದು ಎಂದರು.
ಕೆಪಿಸಿಸಿ ವಕ್ತಾರ ದಾವಣಗೆರೆಯ ಡಿ.ಬಸವರಾಜ್ ಮಾತನಾಡಿ, ಸಾಲ ಮಾಡಿ ಮದುವೆಗಳನ್ನು ಮಾಡುವ ಕಾಲದಲ್ಲಿ ಚಿತ್ರದುರ್ಗದ ಮುರುಘಾ ಮಠ ಸರಳ ವಿವಾಹಗಳಿಗೆ ಆದ್ಯತೆಯನ್ನು ನೀಡಿರುವುದು ಆದರ್ಶಪ್ರಾಯವಾಗಿದೆ. ಇದು ಆರ್ಥಿಕ ಮಿತವ್ಯಯದ ಮೂಲಕ ಸಾಮಾಜಿಕ ಜವಾಬ್ದಾರಿಯನ್ನು ತೋರಿಸುತ್ತದೆ ಮುರುಘಾಮಠದ ಪರಂಪರೆಯಲ್ಲಿ ಯಾವುದೇ ಜಾತಿಭೇದವಿಲ್ಲದೆ ನಿರಂತರವಾಗಿ ಕಳೆದ 33 ವರ್ಷಗಳಿಂದ ಸರಳ ಸಾಮೂಹಿಕ ವಿವಾಹಗಳು ನಡೆಯುತ್ತಿರುವುದು ರಾಜ್ಯ ಮತ್ತು ರಾಷ್ಟ್ರಮಟ್ಟದ ದಾಖಲೆಯಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಇದನ್ನೂ ಓದಿ: ನಾಗರಪಂಚಮಿ ಹಾಲು ಕುಡಿಸುವ ಹಬ್ಬವಾಗಬೇಕು: ಶ್ರೀ ಬಸವಪ್ರಭು ಸ್ವಾಮೀಜಿ
ಶ್ರೀ ಗಜದಂಡ ಸ್ವಾಮಿಗಳು ಮಾತನಾಡಿ, ವ್ಯಕ್ತಿಯ ಜೀವನದಲ್ಲಿ ಕುಟುಂಬ ದೊಡ್ಡ ರಥವಿದ್ದ ಹಾಗೆ. ಅದನ್ನು ಸಮಾನವಾಗಿ ಎಳೆದುಕೊಂಡು ಹೋಗಬೇಕು. ಅದೇರೀತಿ ಸಂಸಾರವೆಂಬ ರಥವನ್ನು ಸತಿ-ಪತಿಗಳಿಬ್ಬರೂ ಕಷ್ಟ-ಸುಖಗಳನ್ನು ಅರ್ಥಮಾಡಿಕೊಂಡು ಸಮಾನವಾಗಿ ಎಳೆದುಕೊಂಡು ಹೋಗಬೇಕು. ಜತೆ ಜತೆಗೆ ನಿಮ್ಮಿಂದ ಸಾಧ್ಯವಾದಷ್ಟು ಸಮಾಜಕ್ಕೆ ಕೊಡುಗೆ ಸಲ್ಲುವಂತಾಗಲಿ ಎಂದು ತಿಳಿಸಿದರು.
ಡಾ. ಶಶಿಕುಮಾರ್ ವಿ. ಮೆಹರವಾಡ ಮಾತನಾಡಿ, ಇಂದಿನ ದಿನಮಾನಗಳಲ್ಲಿ ಒಂದು ಮದುವೆ ಮಾಡುವುದೇ ಕಷ್ಟ. ಆದರೆ ಶ್ರೀಮಠವು 25 ಸಾವಿರಕ್ಕೂ ಹೆಚ್ಚು ವಿವಾಹಗಳನ್ನು ಮಾಡಿರುವುದು ದೊಡ್ಡ ಸಾಧನೆ. ಇಲ್ಲಿ ವಿವಾಹವಾಗುವ ದಂಪತಿಗಳಿಗೆ ಒಳ್ಳೆಯದಾಗಲಿ ಎಂದು ತಿಳಿಸಿದರು.
ಜಮುರಾ ಕಲಾವಿದರು ವಚನ ಪ್ರಾರ್ಥನೆ ನಡೆಸಿಕೊಟ್ಟರು. ವೀರಭದ್ರಪ್ಪ ಸ್ವಾಗತಿಸಿದರು. ಟಿ.ಪಿ.ಜ್ಞಾನಮೂರ್ತಿ ವಂದಿಸಿದರು.
(ಚಿತ್ರದುರ್ಗದ ಸಮಗ್ರ ಸುದ್ದಿಗಳಿಗಾಗಿ WhatsApp Group ಸೇರಿ. https://chat.whatsapp.com/HOKagK96PgX5hCdhvtFLfw)
(ಚಿತ್ರದುರ್ಗದ ಕ್ಷಣ ಕ್ಷಣದ ಮಾಹಿತಿಗಾಗಿ Facebook page follow ಮಾಡಿ https://www.facebook.com/chitradurganews?mibextid=ZbWKwL)
(ಚಿತ್ರದುರ್ಗದ ಸಮಗ್ರ ಸುದ್ದಿಗಳಿಗಾಗಿ WhatsApp Group ಸೇರಿ.
https://chat.whatsapp.com/EQUQpKalYFT1fVcJDTDjCk)



________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
