By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ಮುರುಘಾ ಮಠದಲ್ಲಿ ಸಾಮೂಹಿಕ ವಿವಾಹ | 12 ಜೋಡಿ ದಾಂಪತ್ಯಕ್ಕೆ | ಜೆಡಿಯು ರಾಜ್ಯಾಧ್ಯಕ್ಷ ಮಹಿಮಾ ಪಟೇಲ್ ಭಾಗೀ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ಮುರುಘಾ ಮಠದಲ್ಲಿ ಸಾಮೂಹಿಕ ವಿವಾಹ | 12 ಜೋಡಿ ದಾಂಪತ್ಯಕ್ಕೆ | ಜೆಡಿಯು ರಾಜ್ಯಾಧ್ಯಕ್ಷ ಮಹಿಮಾ ಪಟೇಲ್ ಭಾಗೀ

ಮುಖ್ಯ ಸುದ್ದಿ

ಮುರುಘಾ ಮಠದಲ್ಲಿ ಸಾಮೂಹಿಕ ವಿವಾಹ | 12 ಜೋಡಿ ದಾಂಪತ್ಯಕ್ಕೆ | ಜೆಡಿಯು ರಾಜ್ಯಾಧ್ಯಕ್ಷ ಮಹಿಮಾ ಪಟೇಲ್ ಭಾಗೀ

chitradurganews.com
Last updated: 5 March 2025 14:41
chitradurganews.com
4 months ago
Share
mass marriege murugha mutt
ಮುರುಘಾ ಮಠದಲ್ಲಿ ಸಾಮೂಹಿಕ ವಿವಾಹ
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 05 MARCH 2025

ಚಿತ್ರದುರ್ಗ: ಬದುಕು ಎಂದರೆ ಬರೀ ಘರ್ಷಣೆ ಅಲ್ಲ. ಅದು ಪ್ರೀತಿ ಬಂಧುತ್ವದ ಸಂಕೇತ. ಪ್ರತಿಯೊಬ್ಬರು ದ್ವೇಷ ಅಸೂಯೆಗಳನ್ನು ಬದಿಗಿಟ್ಟು ಸಮರಸ ಜೀವನ ನಡೆಸುವುದು ಇಂದಿನ ತುರ್ತು ಅವಶ್ಯಕತೆಯಾಗಿದೆ ಎಂದು ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠದ ಆಡಳಿತ ಮಂಡಳಿ ಅಧ್ಯಕ್ಷರಾದ ಶಿವಯೋಗಿ ಸಿ. ಕಳಸದ ಹೇಳಿದರು.

ನಗರದ ಬಸವಕೇಂದ್ರ ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠದಲ್ಲಿಂದು ನಡೆದ 35ನೇ ವರ್ಷದ ಮೂರನೇ ತಿಂಗಳ ಸಾಮೂಹಿಕ ಕಲ್ಯಾಣ ಮಹೋತ್ಸವದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಇದನ್ನೂ ಓದಿ: ಲೇಔಟ್‍ನಲ್ಲಿ ಬೆಳ್ಳಂ ಬೆಳಗ್ಗೆ ಕರಡಿಯ ವಾಕಿಂಗ್

ಶ್ರೀಮಠದ ಸಾಮೂಹಿಕ ಕಲ್ಯಾಣ ಮಹೋತ್ಸವ ಇದೊಂದು ಯಶಸ್ವಿ ಕಾರ್ಯಕ್ರಮ. ಇಲ್ಲಿ ವಧು-ವರರನ್ನು ಜೋಡಿಸುವುದಲ್ಲ. ಮನಸ್ಸುಗಳನ್ನು ಕುಟುಂಬಗಳನ್ನು ಒಂದುಗೂಡಿಸುವ ಕಾರ್ಯ ನಡೆಯುತ್ತಿದೆ. ದೇಶದಲ್ಲಿ ಪ್ರತಿವರ್ಷ 10 ಲಕ್ಷ ಮದುವೆ ಆಗುತ್ತಿವೆ. ಅದರ ಖರ್ಚು 20 ಲಕ್ಷ ಕೋಟಿಗಳು ಎಂಬ ಅಂದಾಜಿದೆ.

ಇಂಥ ಸಾಮೂಹಿಕ ಕಲ್ಯಾಣ ಮಹೋತ್ಸವದಲ್ಲಿ ಭಾಗವಹಿಸಿ ಆರ್ಥಿಕ ಹೊರೆಯನ್ನು ತಗ್ಗಿಸಬೇಕಿದೆ. ಶ್ರೀಮಠವು ಬಸವ ಚಿಂತನೆಗಳ ಮೂಲಕ ಮುನ್ನಡೆಯುತ್ತಿದೆ. ನಮ್ಮ ಎಲ್ಲಾ ಶಾಖಾಮಠಗಳ ಸ್ವಾಮಿಗಳು ತಮ್ಮ ಮಠಗಳಲ್ಲಿ ಕಲ್ಯಾಣ ಮಹೋತ್ಸವವನ್ನು ನಡೆಸಬೇಕು. ಮಠ-ಮಠಗಳು ಒಂದುಗೂಡಿ ಸಮಾಜದ ಸ್ವಾಸ್ಥ್ಯಕ್ಕಾಗಿ ಯೋಚಿಸಬೇಕಾಗಿದೆ. ಅನಗತ್ಯವಾಗಿ ಖರ್ಚು ಆಗುವುದನ್ನು ನಿಲ್ಲಿಸಬೇಕಿದೆ. ಆ ಹಣವನ್ನು ಒಳ್ಳೆಯ ಕಾರ್ಯಯೋಜನೆಗಳಿಗೆ ಬಳಸಕೊಳ್ಳಬಹುದು. ಬಡವರ ಬದುಕಿಗೆ ಬೆಳಕಾಗಬೇಕು. ನೊಂದವರ ಜೀವನದಲ್ಲಿ ಒಂದಿಷ್ಟು ಭರವಸೆ ಮೂಡಿಸಬೇಕು.

ಇದನ್ನೂ ಓದಿ: ಮೂವರ ಸಾವು | ಕಲ್ಲಂಗಡಿ ತುಂಬಿದ್ದ ಲಾರಿಗೆ ಮತ್ತೆರಡು ಲಾರಿ ಡಿಕ್ಕಿ | ಸರಣಿ ಅಪಘಾತ 

ಅಂತಹವರನ್ನು ಸಮಾಜದ ಮುಖ್ಯವಾಹಿನಿಗೆ ತರಬೇಕು. ಎಲ್ಲರನ್ನು ನಮ್ಮವರಂತೆ ಕಾಣಬೇಕು. ಇವನಾರವ ಇವನಾರವ ಎನ್ನದ ಇವ ನಮ್ಮವ ಇವ ನಮ್ಮವ ಎಂಬ ವಚನಕಾರರ ಮಾತಿನಂತೆ ಎಲ್ಲರನ್ನು ನಮ್ಮವರಂತೆ ಕಾಣಬೇಕು. ನಾವು ಬದುಕಬೇಕು, ಇತರರನ್ನು ಬದಕಲು ಬಿಡಬೇಕು ಎಂದು ಹೇಳಿದರು.

ಗುರುಮಠಕಲ್‍ನ ಶ್ರೀ ಶಾಂತವೀರ ಗುರುಮುರುಘರಾಜೇಂದ್ರ ಸ್ವಾಮಿಗಳು ಮಾತನಾಡಿ, 5ನೇ ತಾರೀಖು ಬಂದರೆ ಚಿತ್ರದುರ್ಗದ ಮುರುಘಾಮಠವು ಜ್ಞಾಪಕಕ್ಕೆ ಬರುತ್ತದೆ. ಶ್ರೀಮಠಕ್ಕೆ ನಾಲ್ಕುನೂರು ವರ್ಷಗಳ ಇತಿಹಾಸವಿದೆ. ಶ್ರೀಮಠವು ಕಳೆದ 35ವರ್ಷಗಳಿಂದ ಸಾಮೂಹಿಕ ಕಲ್ಯಾಣ ಮಹೋತ್ಸವ ನೆರವೇರಿಸುತ್ತ ಬರುತ್ತಿದ್ದು, ಅದರ ಸದುಪಯೋಗವನ್ನು ಈ ಭಾಗದ ಜನತೆ ಪಡೆಯುತ್ತಿರುವುದು ಶ್ರೀಮಠದ ಜನಪರ ಕಾಳಜಿಯುಳ್ಳ ಈ ಕಾರ್ಯಕ್ರಮವು ಸಾರ್ಥಕತೆಯನ್ನು ಸಫಲತೆಯನ್ನು ಕಂಡಂತಾಗಿದೆ ಎಂದು ಪ್ರಾಸ್ತಾವಿಕವಾಗಿ ನುಡಿದರು.

ಇದನ್ನೂ ಓದಿ: ಎಪಿಎಂಸಿ ಗೋದಾಮಿಗೆ ಬೆಂಕಿ | ಕಾರ್ಮೋಡದಂಥ ಹೊಗೆ | ಬೆಂಕಿ ನಂದಿಸಲು ಹರಸಾಹಸ

ಜೆಡಿಯು ರಾಜ್ಯಾಧ್ಯಕ್ಷ ಹಾಗೂ ಮಾಜಿ ಶಾಸಕ ಮಹಿಮಾ ಜೆ.ಪಟೇಲ್ ಮಾತನಾಡಿ, ನವ ವಧು-ವರರ ಜೀವನ ಮುಂದಿನ ದಿನಗಳಲ್ಲಿ ಸುಖಮಯವಾಗಿರಲಿ. ಕಲ್ಯಾಣ ಎಂದರೆ ಎಲ್ಲರಿಗೂ ಒಳ್ಳೆಯದಾಗುವುದು. ಒಳ್ಳೆಯ ಭಾವನೆಗಳನ್ನು ನಮ್ಮೊಳಗೆ ತುಂಬಿಕೊಳ್ಳುವುದು. ಶ್ರೀಮಠಕ್ಕೆ ದೊಡ್ಡ ಇತಿಹಾಸ ಇದೆ. ಈ ಮಠಕ್ಕೆ ಎಲ್ಲ ಜಾತಿಧರ್ಮದವರು ನಡೆದುಕೊಳ್ಳುತ್ತಿದ್ದಾರೆ. ಎಲ್ಲರೂ ಇದನ್ನು ನಮ್ಮ ಮಠ ಎನ್ನುತ್ತಾರೆ.  ನಮ್ಮ ಪೂರ್ವಜರು ಶ್ರೀಮಠಕ್ಕೆ ನಡೆದುಕೊಂಡು ಬಂದಿದ್ದಾರೆ. ಎಲ್ಲ ಮಠಗಳು ಒಟ್ಟಾಗಿ ಸರ್ವೋದಯದ ಭಾವನೆ ಮೂಡಿಸಬೇಕೆಂದರು.

ಕರ್ನಾಟಕದ ಐದುನೂರು ಸ್ವಾಮಿಗಳು ಸೇರಿ ಚಿತ್ರದುರ್ಗದಲ್ಲಿ 10 ಕಿಲೋಮೀಟರ್ ಪಾದಯಾತ್ರೆ ಮಾಡಬೇಕಿದೆ. ಆಡಳಿತ, ಕೃಷಿ, ಪರಿಸರ, ಆರೋಗ್ಯ – ಈ ಕಲ್ಪನೆಯಲ್ಲಿ ಪಾದಯಾತ್ರೆ ಹಮ್ಮಿಕೊಳ್ಳಬೇಕು. ಇದು ಸರ್ವೋದಯದ ಕಲ್ಪನೆಯಲ್ಲಿ ಮೂಡಿಬರಬೇಕಿದೆ. ಅದುವೇ ಸಾವಯವ ರಾಜಕಾರಣವಾಗಬೇಕು. ರಾಜಕಾರಣದಲ್ಲಿ ಬೆಳಕನ್ನು ಹಚ್ಚಬೇಕು. ಎಲ್ಲರಲ್ಲಿ ಅರಿವು ಮೂಡಿಸುವ ಕಾರ್ಯ ನಡೆಯಬೇಕಿದೆ ಎಂದರು.

ಇದನ್ನೂ ಓದಿ: ಖ್ಯಾತ ವಾಣಿಜ್ಯೋದ್ಯಮಿ ಆರ್.ಎಸ್.ರುದ್ರಪ್ಪ ನಿಧನ

ಕಾರ್ಯಕ್ರಮದಲ್ಲಿ 12 ಜೋಡಿಗಳ ವಿವಾಹ ನೆರವೇರಿತು.

ಡಾ. ನಾಗರಾಜ ಮಾಲೂರು ಮಾತನಾಡಿದರು. ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠದ ಆಡಳಿತ ಮಂಡಳಿ ಸದಸ್ಯರಾದ ಎಸ್.ಎನ್. ಚಂದ್ರಶೇಖರ್ ವೇದಿಕೆಯಲ್ಲಿದ್ದರು. ಎಂ.ಸಿ.ಕೆ.ಎಸ್. ಫೌಂಡೇಶನ್, ಬೆಂಗಳೂರು ಇವರು ದಾಸೋಹ ಸೇವೆ ವಹಿಸಿಕೊಂಡಿದ್ದರು. ಶ್ರೀ ಬಸವ ಕಬೀರ ಸ್ವಾಮಿಗಳು, ಶ್ರೀ ಬಸವ ಮಲ್ಲಿಕಾರ್ಜುನ ಸ್ವಾಮಿಗಳು, ಶ್ರೀ ಕುಂಬಾರ ಗುಂಡಯ್ಯ ಸ್ವಾಮಿಗಳು, ಶ್ರೀ ಬಸವ ಮಹಾಂತ ಸ್ವಾಮಿಗಳು, ಶ್ರೀ ಬಸವ ನಿರಂಜನ ಸ್ವಾಮಿಗಳು, ಶ್ರೀ ಚೆನ್ನಬಸವ ಸ್ವಾಮಿಗಳು, ಪೈಲ್ವಾನ್ ತಿಪ್ಪೇಸ್ವಾಮಿ ಮೊದಲಾದವರಿದ್ದರು.

ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠದ ಆಡಳಿತ ಮಂಡಳಿ ಸದಸ್ಯರಾದ ಡಾ. ಬಸವಕುಮಾರ ಸ್ವಾಮಿಗಳು ಸ್ವಾಗತಿಸಿದರು. ಜಮುರಾ ಕಲಾವಿದರು ಪ್ರಾರ್ಥನೆ ಮಾಡಿದರು. ಗಂಜಿಗಟ್ಟೆ ಕೃಷ್ಣಮೂರ್ತಿ ವಚನ ಗಾಯನ ಮಾಡಿದರು. ಟಿ.ಪಿ. ಜ್ಞಾನಮೂರ್ತಿ ನಿರೂಪಿಸಿದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:Chitradurga LatestChitradurga newsfeaturedJDUKannada NewsMahima J PatelMass MarriageMuruga MathShivayogi C. Kalasadಕನ್ನಡ ಸುದ್ದಿಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಲೇಟೆಸ್ಟ್ಜೆಡಿಯುಮಹಿಮಾ ಜೆ ಪಟೇಲ್ಮುರುಘಾ ಮಠಶಿವಯೋಗಿ ಸಿ.ಕಳಸದ್ಸಾಮೂಹಿಕ ವಿವಾಹ
Share This Article
Facebook Email Print
Previous Article Lorry accident in national highway ಮೂವರ ಸಾವು | ಕಲ್ಲಂಗಡಿ ತುಂಬಿದ್ದ ಲಾರಿಗೆ ಮತ್ತೆರಡು ಲಾರಿ ಡಿಕ್ಕಿ | ಸರಣಿ ಅಪಘಾತ |
Next Article APMC: ಮಾರುಕಟ್ಟೆ ಧಾರಣೆ | ಇಂದಿನ ಮೆಕ್ಕೆಜೋಳ ರೇಟ್ ಎಷ್ಟಿದೆ?
Leave a Comment

Leave a Reply Cancel reply

Your email address will not be published. Required fields are marked *

ಉಸಿರಾಟದ ಕಾಯಿಲೆಗಳಿಗೆ ಈ ಎಲೆಯನ್ನು ಬಳಸಿ
Life Style
ಹೃದಯಾಘಾತದ ನಂತರ ಈ ತಪ್ಪುಗಳನ್ನು ಮಾಡಬೇಡಿ
Life Style
ಸ್ವಸ್ತಿಕ್ ಚಿಹ್ನೆ ಬಿಡಿಸುವಾಗ ನೀವು ಈ ತಪ್ಪನ್ನು ಮಾಡಬೇಡಿ
Life Style
today bhavishya
Astrology: ದಿನ ಭವಿಷ್ಯ | ಜೂನ್ 29 | ಆಕಸ್ಮಿಕ ಧನ ವ್ಯಯದ ಸೂಚನೆ, ಆಸ್ತಿ ವಿಷಯಗಳಲ್ಲಿ ವಿವಾದಗಳು
Dina Bhavishya
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up