CHITRADURGA NEWS | 05 OCTOBER 2025
ಚಿತ್ರದುರ್ಗ: ನಗರದ ಶ್ರೀ ಮುರುಘರಾಜೇಂದ್ರ ಬೃಹನ್ಮಠದಲ್ಲಿ ನಡೆದ 35ನೇ ವರ್ಷದ ಹತ್ತನೇ ತಿಂಗಳ ಸಾಮೂಹಿಕ ಕಲ್ಯಾಣ ಮಹೋತ್ಸವದಲ್ಲಿ 6 ಜೋಡಿಗಳ ವಿವಾಹ ನೆರವೇರಿಸಲಾಯಿತು.
ಇದನ್ನೂ ಓದಿ: ಜಾತಿ ಗಣತಿ | ಎಚ್.ಆಂಜನೇಯ ಮನೆ ಮನೆಗೆ ಭೇಟಿ ನೀಡಿ ಜಾಗೃತಿ
ಈ ವೇಳೆ ಶ್ರೀ ಬಸವ ಮುರುಘೇಂದ್ರ ಸ್ವಾಮೀಜಿ ಮಾತನಾಡಿ, ಮದುವೆ ಎಂಬುದು ಕೇವಲ ವ್ಯವಹಾರಿಕವಲ್ಲ. ಎರಡು ಸಂಬಂಧಗಳನ್ನು ಒಟ್ಟುಗೂಡಿಸುವುದು. ಬಸವಣ್ಣನವರು ಹೇಳುವಂತೆ ಸತಿಪತಿ ಒಂದಾಗಿ ನಡೆದರೆ ಸಂಸ್ಕಾರವಂತರನ್ನಾಗಿ ಮಾಡುತ್ತದೆ.
ಗಂಡ-ಹೆಂಡತಿಯರು ಜ್ಞಾನದ ಜ್ಯೋತಿಯಾಗಿ ಬೆಳಗಬೇಕು. ಅದಕ್ಕೆ ಪ್ರೀತಿಯೆಂಬ ತೈಲವನ್ನು ಹಾಕಿದರೆ ಮಾತ್ರ ಬೆಳಕು ಚೆಲ್ಲುತ್ತದೆ. ಇದು ದುಬಾರಿ ಕಾಲ ಬಡವರು ಮದುವೆ ಮಾಡುವುದು ಕಷ್ಟವಿರುವ ಕಾಲವಿದು. ಹಾಗಾಗಿ ಇಂಥವರಿಗೆ ಶ್ರೀಮಠವು ಸಾಮೂಹಿಕ ಕಲ್ಯಾಣದ ಮೂಲಕ ಸಹಕಾರಿಯಾಗಿದೆ ಎಂದು ನುಡಿದರು.
ವಧು ವರರು ತಂದೆ-ತಾಯಿಗಳೇ ಕುಲದೈವ ಎಂದು ಭಾವಿಸಬೇಕು. ಸಮಾಜದಲ್ಲಿ ಮದುವೆ ಮಾಡುವುದು ತುಂಬಾ ಕಷ್ಟ. ಶ್ರೀಮಠದಲ್ಲಿ 30 ಸಾವಿರಕ್ಕೂ ಹೆಚ್ಚು ಸರಳ ವಿವಾಹಗಳು ನೆರವೇರಿವೆ. ನವ ವಧು-ವರರು ಬಸವಾದಿ ಪ್ರಮಥರ ಆಶಯದಂತೆ ಸತ್ಯಶುದ್ಧ ಕಾಯಕ ಮಾಡುತ್ತ ಸರಳವಾದ ಜೀವನ ಮಾಡಬೇಕು.
ಇದನ್ನೂ ಓದಿ: ಬಾಲ ವೈಜ್ಞಾನಿಕ್ ಪ್ರದರ್ಶಿನಿ | ಚಳ್ಳಕೆರೆ ತಾಲೂಕಿನ ಸರ್ಕಾರಿ ಶಾಲೆ ವಿದ್ಯಾರ್ಥಿನಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ
ನಮ್ಮ ಕಾಯಕವನ್ನು ನಾವು ನಿರ್ವಹಿಸುತ್ತ ನೆಮ್ಮದಿಯನ್ನು ಕಾಣಬೇಕು. ಮರ್ಯಾದೆ, ಮಾತಿಗೆ ಅಂಜಿ ಕೆಲವರು ಸಾಲ ಮಾಡಿ ಮದುವೆ ಮಾಡಿ ಬದುಕನ್ನು ಸಾಲದ ಕೂಪಕ್ಕೆ ಈಡುಮಾಡುತ್ತಾರೆ. ಸರಳವಾಗಿ ಬದುಕುವುದು ಸಹಜವಾಗಿ ವರ್ತನೆ ನಿಮ್ಮೆಲ್ಲರದಾಗಿರಲಿ ಎಂದು ಹಾರೈಸಿದರು.
ಶ್ರೀ ಸರ್ದಾರ್ ಸೇವಾಲಾಲ್ ಸ್ವಾಮೀಜಿ ಮಾತನಾಡಿ, ಮದುವೆ ಅಂದರೆ ಗಲಾಟೆ, ಗದ್ದಲ, ಆಡಂಬರ, ದುಂದುವೆಚ್ಚ, ವೈಭವದ ಭೋಜನಾದಿಗಳನ್ನು ಮಾಡುವುದನ್ನು ನಾವು ಕಾಣುತ್ತೇವೆ. ಆದರೆ ಮುರುಘಾಮಠದಲ್ಲಿ ನಡೆಯುವ ಸಾಮೂಹಿಕ ಕಲ್ಯಾಣ ಮಹೋತ್ಸವವು ಅತ್ಯಂತ ಸರಳವಾಗಿ ಜಾತಿ ವರ್ಣ ವರ್ಗಭೇದ ರಹಿತವಾಗಿ ಒಂದೇ ವೇದಿಕೆಯಲ್ಲಿ ಅತ್ಯಂತ ಸರಳವಾಗಿ ನೆರವೇರುತ್ತಿರುವುದು ಈ ಭಾಗದ ಬಡಜನರಿಗೆ ಉಪಯುಕ್ತ ಕಾರ್ಯಕ್ರಮ ವಾಗಿದೆ.
ಇಲ್ಲಿ ಮದುವೆ ಮಾಡುವುದರೊಂದಿಗೆ ಸತಿ ಪತಿಗಳಾದವರು ಮುಂದಿನ ದಾಂಪತ್ಯ ಜೀವನವನ್ನು ಸಾಮಾಜಿಕ ಮೌಲ್ಯಗಳೊಟ್ಟಿಗೆ ನಡೆಸುವತ್ತ ಮಾರ್ಗದರ್ಶನವನ್ನು ಪಡೆಯುತ್ತಾರೆ ಎಂದರು.
ನಿಪ್ಪಾಣಿಯ ಶ್ರೀ ಬಸವ ಮಲ್ಲಿಕಾರ್ಜುನ ಸ್ವಾಮಿಗಳು ಮಾತನಾಡಿ, ಮುರುಘಾಮಠವು ನಾಡಿನಲ್ಲಿ ತ್ರಿವಿಧ ದಾಸೋಹಕ್ಕೆ ಹೆಸರುವಾಸಿಯಾಗಿದೆ. ಮಠದಲ್ಲಿ ಅನ್ನದಾಸೋಹ ನಿರಂತರವಾಗಿ ನಡೆದಿದೆ. ಅಂತೆಯೇ ಜ್ಞಾನದಾಸೋಹ. ಈ ರೀತಿಯ ಕಾರ್ಯಗಳ ಮೂಲಕ ಅರಿವನ್ನು ನೀಡುತ್ತಿದೆ ಎಂದರು.
ಇದನ್ನೂ ಓದಿ: ಕಥೆಗಾರ ಮೊಗಳ್ಳಿ ನಿಧನಕ್ಕೆ ಸಾಹಿತಿ ಜಡೆಕುಂಟೆ ಸಂತಾಪ
ಇದೇ ಸಂದರ್ಭದಲ್ಲಿ ದಾವಣಗೆರೆಯ ರಂಗಭೂಮಿ ಕಲಾವಿದೆ ಜಿ.ಉಮಾಶ್ರೀ ಅವರನ್ನು ಸನ್ಮಾನಿಸಲಾಯಿತು.
ಜಮುರಾ ಕಲಾವಿದರು ಪ್ರಾರ್ಥಿಸಿದರು. ಗಿರೀಶಾಚಾರ್ ಸ್ವಾಗತಿಸಿದರು. ನಿವೃತ್ತ ಪ್ರಾಚಾರ್ಯ ಟಿ.ಪಿ. ಜ್ಞಾನಮೂರ್ತಿ ನಿರೂಪಿಸಿದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
