
CHITRADURGA NEWS |06 NOVEMBER 2025
ಚಿತ್ರದುರ್ಗ: ಮತಗಳ್ಳತನದ ಮೂಲಕ ಜನಾದೇಶ ಕಗೊಲೆಯಾಗುತ್ತಿದೆ. ಇಂತಹ ಕೃತ್ಯದ ವಿರುದ್ಧ ರಾಹುಲ್ ಗಾಂಧಿ ಅವರು ಜನಜಾಗೃತಿಯ ಚಳುವಳಿ ನಡೆಸುತ್ತಿದ್ದಾರೆ ಎಂದು ಮಾಜಿ ಸಂಸದ ಬಿ.ಎನ್.ಚಂದ್ರಪ್ಪ ಹೇಳಿದರು.
ಇದನ್ನೂ ಓದಿ: ಗಿನ್ನೀಸ್ ರೆಕಾರ್ಡ್ ಮಾಡಿದ ಶಾಸಕ ಕೆ.ಸಿ.ವೀರೇಂದ್ರ ಪುತ್ರಿ ಸರಸ್ವತಿ

ನಗರದ ಹೊಳಲ್ಕೆರೆ ರಸ್ತೆಯಲ್ಲಿನ ಆಗಸನಕಲ್ಲಿನ ಟಿಪ್ಪು ಸರ್ಕಲ್ನಲ್ಲಿ ವಾರ್ಡ್ 12ರಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ, ನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಆಯೋಜಿಸಿದ್ದ ಬಿಜೆಪಿ ಮತಗಳ್ಳತನ ವಿರುದ್ಧ ವೋಟ್ ಚೌರಿ ಸಹಿ ಸಂಗ್ರಹ ಅಭಿಯಾನದಲ್ಲಿ ಭಾಗವಹಿಸಿ ಮಾತನಾಡಿದ ಅವರು,
ಬಿಜೆಪಿ ಸೇರಿದಂತೆ ಕೋಮುವಾದಿ ಪಕ್ಷಗಳು ದೇಶದಲ್ಲಿ ಸರ್ವಾಧಿಕಾರಿ ಆಯೋಗ ಅಧಿಕಾರಕ್ಕೋಸ್ಕರ ಆಯೋಗದ ಮೂಲಕ ನಡೆಸುತ್ತಿರುವ ಮತಗಳ್ಳತನ ನಿಲ್ಲಬೇಕು.
ಚುನಾವಣಾ ನಿಷ್ಪಕ್ಷಪಾತವಾಗಿ ಚುನಾವಣೆಗಳನ್ನು ಉದ್ದೇಶದಿಂದ ಮೂಡಿಸಲು ಪಾರದರ್ಶಕವಾಗಿ ನಡೆಸಬೇಕೆಂಬ ಜನಜಾಗೃತಿಯನ್ನು ಕಾಂಗ್ರೆಸ್ ದೇಶದಾದ್ಯಂತ ಕಳುವಿನ (ಚೌರಿ) ವಿರುದ್ಧ ಚಳುವಳಿ ಮಾದರಿಯಲ್ಲಿ ಅಭಿಯಾನವನ್ನು ನಡೆಸುತ್ತಿದೆ ಎಂದರು.
ಇದನ್ನೂ ಓದಿ: 66 ಶಿವಶರಣ-ಶರಣೆಯರ ವಚನ ಕಂಠಪಾಠ ಸ್ಪರ್ಧೆ
ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಎಂ.ಕೆ.ತಾಜ್ಪೀರ್ ಮಾತನಾಡಿ, ಇತ್ತೀಚಿನ ದಿನದಲ್ಲಿ ಚುನಾವಣೆಯಲ್ಲಿ ನಮ್ಮ ಮತ ಇರುತ್ತೇದೆಯೋ ಇಲ್ಲವೂ ಎಂಬ ಅನುಮಾನ ಮೂಡಿದೆ, ಯಾವ ಸಮಯದಲ್ಲಿ ಬೇಕಾದರೂ ಸಹಾ ನಮ್ಮ ಮತಗಳು ಕಾಣೆಯಾಗಬಹುದಾಗಿದೆ. ಈ ಹಿನ್ನಲೆಯಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಮತಗಳ್ಳತನದ ವಿರುದ್ದ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ ಇದಕ್ಕೆ ಜನತೆ ಸಹಕಾರವನ್ನು ನೀಡಬೇಕಿದೆ ಎಂದು ತಿಳಿಸಿದರು.
ಸ್ವಾತಂತ್ರ್ಯದ ನಂತರ ಸಂವಿಧಾನ ರಚನೆಯಾಗಿ ಎಲ್ಲರಿಗೂ ಸಹಾ ಮತದಾನದ ಹಕ್ಕನ್ನು ನೀಡಲಾಯಿತು, ಇದರಿಂದ ಎಲ್ಲರು ಸಹಾ ತಮಗೆ ಬೇಕಾದ ವ್ಯಕ್ತಿಯನ್ನು ಆರಿಸಿಕೊಳ್ಳಲು ಅನುವು ಮಾಡಿಕೊಡಲಾಗಿದೆ.
ಈ ಸಮಯದಲ್ಲಿ ಪಾರದರ್ಶಕತೆಯಿಂದ ಚುನಾವಣೆ ನಡೆಸಲಾಗುತ್ತಿತು ತದ ನಂತರ ಬಂದ ಚುನಾವಣೆಗಳಲ್ಲಿ ಅಕ್ರಮ ಪ್ರಾರಂಭವಾಯಿತು, ಬಿಜೆಪಿ ಅಧಿಕಾರಕ್ಕೆ ಬರಲು ಮತಗಳ್ಳತನ ಪ್ರಾರಂಭವಾಯಿತು.
ಇದನ್ನೂ ಓದಿ: ಕುರಿ ಕಳ್ಳನ ಬಂಧನ | 9.92 ಲಕ್ಷ ಬೆಲೆ ಬಾಳುವ ಕುರಿಗಳು ವಶ
ಈ ಸಮಯದಲ್ಲಿ ಬೇರೆ ಕಡೆಯಿಂದ ಮತದಾರರು ಬಂದು ಬಿಜೆಪಿ ಪರವಾಗಿ ಮತವನ್ನು ಚಲಾಯಿಸಲು ಪ್ರಾರಂಭ ಮಾಡಿದರು. ಇದರಿಂದ ಬಿಜೆಪಿ ಅಧಿಕಾರ ಹಿಡಿಯಲು ಅನುವು ಮಾಡಿಕೊಡಲಾಯಿತು ಎಂದರು.
ಜಿಲ್ಲಾ ಗ್ಯಾರೆಂಟಿ ಅಧಿಕಾರದ ಅಧ್ಯಕ್ಷರಾದ ಶಿವಣ್ಣ ಮಾತನಾಡಿ, ದೇಶದಲ್ಲಿ ರಾಹುಲ್ ಗಾಂಧಿಯವರು ಮತಗಳ್ಳತನದ ವಿರುದ್ದ ಹೋರಾಟವನ್ನು ಪ್ರಾರಂಭ ಮಾಡಿದ್ದಾರೆ. ಇದಕ್ಕೆ ಎಲ್ಲರೂ ಸಹಾ ಸಾಥ್ ನೀಡಬೇಕಿದೆ, ಕೇಂದ್ರದಲ್ಲಿ ಅಧಿಕಾರ ನಡೆಸುತ್ತಿರುವ ಬಿಜೆಪಿ ಜನಾಭೀಪ್ರಾಯದಿಂದ ಬಂದಿದ್ದಲ್ಲ ಮತಗಳ್ಳತನದಿಂದ ಬಂದಿದ್ದು.
ಪ್ರತಿ ಸಲ ಮತದಾರರು ತಮ್ಮ ಮತಪಟ್ಟಿಯಲ್ಲಿ ತಮ್ಮ ಹೆಸರು ಇದ್ದೇಯೇ ಎಂದು ಪರಿಶೀಲಿಸಬೇಕಿದೆ. ಕಾಂಗ್ರೆಸ್ ಸರ್ಕಾರ ಪ್ರತಿ ತಿಂಗಳು ಪ್ರತಿಯೊಂದು ಮನೆಗೂ ಸಹಾ 5 ರಿಂದ 6 ಸಾವಿರ ರೂಗಳವರೆಗೆ ಸಹಾಯವನ್ನು ಮಾಡುತ್ತಿದೆ. ಕಾಂಗ್ರೆಸ್ ಪಕ್ಷ ಬಡವರ ಪರವಾಗಿ ಕೆಲಸವನ್ನು ಮಾಡುತ್ತಿದೆ ಎಂದರು.
ಕೆ.ಎಂ.ಪಿ.ಸಿ.ಸಿ. ರಾಜ್ಯ ಪ್ರಧಾನ ಕಾರ್ಯದರ್ಶಿ ಆಶ್ರಯ ಸಮಿತಿ ಸದಸ್ಯರಾದ ಮುನೀರಾ ಎ ಮಕನದಾರ್ ಮಾತನಾಡಿದರು.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ನವೆಂಬರ್ 05 | ಹತ್ತಿ ರೇಟ್ ಎಷ್ಟಿದೆ?
ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಾರ್ಯಾಧ್ಯಕ್ಷ ಹಾಲಸ್ವಾಮಿ ಪ್ರಧಾನ ಕಾರ್ಯದರ್ಶಿಗಳಾದ ಸಂಪತ್ ಕುಮಾರ್, ಮೈಲಾರಪ್ಪ, ಗ್ಯಾರೆಂಟಿ ಪ್ರಾಧಿಕಾರದ ಅಧ್ಯಕ್ಷ ಶಿವಣ್ಣ ಗಂಜಿಗಟ್ಟೆ, ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷರಾದ ನಂದಿನಿಗೌಡ, ನಗರಧ್ಯಕ್ಷರಾದ ಲಕ್ಷ್ಮೀಕಾಂತ, ನಂದೀಶ್, ಆಶ್ವಕ್ ಆಲಿ, ಪಟೇಲ್ ಮೌಸೀನ, ಕಿಸಾನ್ ಸೆಲ್ನ ಉಪಾಧ್ಯಕ್ಷರಾದ ಶಿವಣ್ಣ, ಮುನ್ನಾ, ಖುದ್ದುಸ್ ಸೇರಿದಂತೆ ಇತರರು ಭಾಗವಹಿಸಿದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
