Connect with us

    ಮೊಳಕಾಲ್ಮೂರಿನಲ್ಲಿ ಬೃಹತ್ ಪ್ರತಿಭಟನೆ | ಸಚಿವ ನಾಗೇಂದ್ರ ರಾಜೀನಾಮೆಗೆ ಅಗ್ರಹ 

    ಸಚಿವ ನಾಗೇಂದ್ರ ರಾಜೀನಾಮೆಗೆ ಅಗ್ರಹ 

    ಮೊಳಕಾಳ್ಮೂರು

    ಮೊಳಕಾಲ್ಮೂರಿನಲ್ಲಿ ಬೃಹತ್ ಪ್ರತಿಭಟನೆ | ಸಚಿವ ನಾಗೇಂದ್ರ ರಾಜೀನಾಮೆಗೆ ಅಗ್ರಹ 

    https://chat.whatsapp.com/Jhg5KALiCFpDwME3sTUl7x

    CHITRADURGA NEWS | 02 JUNE 2024

    ಮೊಳಕಾಲ್ಮೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಹಗರಣಕ್ಕೆ ಸಂಬಂಧಿಸಿದಂತೆ, ಮೊಳಕಾಲ್ಮೂರು ಪಟ್ಟಣದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಬೃಹತ್ ಪ್ರತಿಭಟನೆ ನಡೆಸಿ, ಸಚಿವ ನಾಗೇಂದ್ರ ರಾಜೀನಾಮೆಗೆ ಅಗ್ರಹಿಸಿದರು.

    ಇದನ್ನೂ ಓದಿ: NEP ವಿರೋಧಿ ಸರ್ಕಾರಕ್ಕೆ ಶಿಕ್ಷಕರು ಪಾಠ ಕಲಿಸಿ | MLC ಕೆ.ಎಸ್.ನವೀನ್

    ಈ ವೇಳೆ ಪ್ರತಿಭಟನೆಯಲ್ಲಿ ಮಾತನಾಡಿದ ಮಾಜಿ ಶಾಸಕ ನೇರ‍್ಲಗುಂಟೆ ತಿಪ್ಪೇಸ್ವಾಮಿ, ಸಚಿವ ನಾಗೇಂದ್ರ ರವರು ತಮ್ಮ ಸ್ಥಾನಕ್ಕೆ ರಾಜೀನಾಮೆಯನ್ನು ನೀಡಬೇಕು, ಹಾಗೆಯೇ ಅದಕ್ಕೆ ತಕ್ಕ ಶಿಕ್ಷಯಾಗಬೇಕು ಎಂದು ಅಗ್ರಹಿಸಿದರು.

    ಸರ್ಕಾರ ನಾಯಕ ಜನಾಂಗದವರಿಗಾಗಿಯೇ ಹಣವನ್ನು ಮಿಸಲಿಸಿದೆ. ಇದರಲ್ಲಿ ಈ ಜನಾಂಗದ ಅಭೀವೃದ್ದಿಯನ್ನು ಮಾಡಬೇಕು, ಗಂಗಕಲ್ಯಾಣ ಯೋಜನೆಯಡಿ ಕೊಳವೆಬಾವಿಗಳನ್ನು ಕೊರೆಯಿಸಿ ಕೊಡಬೇಕು, ಮಕ್ಕಳ ವಿದ್ಯಾಭ್ಯಾಸಕ್ಕೆ ಸ್ಕಾಲರಶಿಪ್ ನೀಡಬೇಕು, ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರ ಇಲ್ಲಿ ಇದ್ದ ಹಣವನ್ನು ಬೇರೆ ಕಡೆಗೆ ವರ್ಗಾಯಿಸಿಕೊಂಡು ಚುನಾವಣೆಯನ್ನು ನಡೆಸಿದೆ.

    ಇದನ್ನೂ ಓದಿ: ಆರೋಗ್ಯ ಇಲಾಖೆ ಜಾಗೃತ ದಳದಿಂದ ಜಿಲ್ಲಾಸ್ಪತ್ರೆ ಭೇಟಿ | ಲಂಚ ಪಡೆಯುವ ವೈದ್ಯರು, ಸಿಬ್ಬಂದಿಗೆ ತರಾಟೆ | ಉತ್ತಮ ಕೆಲಸಕ್ಕೆ ಮೆಚ್ಚುಗೆ

    ಇದರಲ್ಲಿ ಸಚಿವರ ಪಾತ್ರ ಬಹಳ ಮುಖ್ಯವಾಗಿದೆ ಅವರ ಅನುಮತಿ ಇಲ್ಲದೆ ಇಷ್ಟೋಂದು ಹಣ ಬೇರೆ ಕಡೆಗೆ ವರ್ಗಾವಣೆಯಾಗಲು ಸಾಧ್ಯವಿಲ್ಲ, ಈ ಹಿನ್ನಲೆಯಲ್ಲಿ ನಾಗೇಂದ್ರ ರವರ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆಯನ್ನು ನೀಡಬೇಕೆಂದು ಎಂದರು.

    ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದು ಒಂದು ವರ್ಷ ಆಯಿತು, ಈ ಅವಧಿಯಲ್ಲಿ ಯಾವುದೇ ಪ್ರಗತಿಪರ ಚಟುವಟಿಕೆಗಳು ನಡೆದಿಲ್ಲ. ರಾಜ್ಯ ಸರ್ಕಾರ ಸಂಪೂರ್ಣವಾಗಿ ಭ್ರಷ್ಟಾಚಾರದಲ್ಲಿ ತೊಡಗಿದೆ. ಇವರು ರಾಜ್ಯದ ಜನತೆಗೆ ನಿರಾಶೆ ಉಂಟು ಮಾಡಿದ್ದಾರೆ.

    ಇದನ್ನೂ ಓದಿ: ಶಿಕ್ಷಕರ ಪರವಾದ ತೀರ್ಮಾನ ತೆಗೆದುಕೊಳ್ಳಲು ಕಾಂಗ್ರೆಸ್ ಸರ್ಕಾರ ಬದ್ಧ | ಕೆಡಿಪಿ ಸದಸ್ಯ ಕೆ.ಸಿ.ನಾಗರಾಜ್

    ಸುಳ್ಳು ಹೇಳುವುದೇ ಸಿದ್ದರಾಮಯ್ಯರವರ ಸಾಧನೆ. ಮಾರ್ಚ್ ತಿಂಗಳಲ್ಲೇ ಎಸ್.ಟಿ. ಕಾರ್ಪೊರೇಷನ್ ನಿಂದ 187 ಕೋಟಿ ರೂ. ಹಗಲು ದರೋಡೆಯಾಗಿದೆ. ಖಜಾನೆಯಿಂದ ವರ್ಗಾವಣೆ ಮಾಡಿ ಚುನಾವಣೆಗೆ ಹೋಗಿದೆ. ಪ್ರಕರಣ ಬಯಲಿಗೆ ಬಂದರು ಮುಖ್ಯಮಂತ್ರಿಗಳು, ಮಂತ್ರಿಗಳು ಬಾಯಿ ಬಿಡುತ್ತಿಲ್ಲ ಎಂದು ದೂರಿದರು.

    ಕೇಂದ್ರ ಸರ್ಕಾರದ ತನಿಖಾ ಸಂಸ್ಥೆಗಳಿಗೆ ವಹಿಸಬೇಕು. ಸಿಬಿಐ ತನಿಖಾ ತಂಡಕ್ಕೆ ಈ ಪ್ರಕರಣ ಕೊಡಬೇಕು.ಈ ಹಗರಣದಲ್ಲಿ ಸರ್ಕಾರದ ಪಾಲುದಾರಿಕೆ ಇದೆ. ಮುಖ್ಯಮಂತ್ರಿ ಕೂಡಲೇ ರಾಜೀನಾಮೆ ನೀಡಿ ತನಿಖೆಗೆ ಸಹಕರಿಸಬೇಕು ಎಂದು ತಿಪ್ಪೇಸ್ವಾಮಿ ಒತ್ತಾಯಿಸಿದರು.

    ಇದನ್ನೂ ಓದಿ: ಸೀರೆಯಲ್ಲಿ ಮಿಂಚಿದ ವಿದ್ಯಾರ್ಥಿನಿಯರು | ಎಸ್‍ಜೆಎಂ ಕಾಲೇಜಿನಲ್ಲಿ ಸಾಂಪ್ರದಾಯಿಕ ಉಡುಗೆ ಸ್ಪರ್ಧೆ

    ಮೊಳಕಾಲ್ಮೂರು ತಾಲ್ಲೂಕು ಮಂಡಲ ಅಧ್ಯಕ್ಷ ಡಾ.ಪಿ. ಮಂಜುನಾಥ್ ಮಾತನಾಡಿ, ಸಿದ್ದರಾಮಯ್ಯರವರು ಶೋಷಿತ ಸಮುದಾಯಗಳ ಪರವಾದ ಸರ್ಕಾರ ಅಂತ ಹೇಳುತ್ತಾರೆ ಆದರೆ ಅವರ ಕಲ್ಯಾಣಕ್ಕಾಗಿ ಇಟ್ಟಂತಹ ಹಣವನ್ನು ಏಕೆ ದುರುಪಯೋಗ ಪಡಿಸಿಕೊಂಡಿದ್ದೀರಿ.

    ವಾಲ್ಮೀಕಿ ಸಮುದಾಯಕ್ಕೆ ಇಟ್ಟಂತಹ ಹಣವನ್ನು ತೆಲಂಗಾಣ, ಆಂಧ್ರಪ್ರದೇಶಕ್ಕೆ ಕಳಿಸಿದ್ದೀರಿ. ಕಣ್ಣು ಹೊರೆಸುವ ಸಲುವಾಗಿ ಎಸ್‌ಐಟಿ ತಂಡ ರಚನೆ ಮಾಡಿ ಎಂ.ಡಿ ಅರೆಸ್ಟ್ ಮಾಡುವ ಪ್ರಯತ್ನ ಮಾಡುತ್ತಿದ್ದೀರಿ.

    ಇದನ್ನೂ ಓದಿ: ಒಂದೇ ವರ್ಷಕ್ಕೆ ಸರ್ಕಾರಿ ಖಜಾನೆ ಲೂಟಿ | ಮಾಜಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಆರೋಪ

    ಸಿದ್ದರಾಮಯ್ಯರವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿ ತನಿಖೆಗೆ ಸಹಕರಿಸಬೇಕು. ಸಮಾಜ ಕಲ್ಯಾಣ ಇಲಾಖೆ ಸಚಿವರು ಆರೋಪ ಬಂದಾಗ ರಾಜೀನಾಮೆ ಕೊಡಬೇಕು. ಅವರು ಹಗರಣ ಮುಚ್ಚಿಹಾಕಲು ಸಂಪುಟವೇ ಮುಂದಾಗಿದೆ. ಇಂದು ಸಚಿವರು ರಾಜೀನಾಮೆ ಕೊಟ್ಟು ತನಿಖೆಗೆ ಸಹಕರಿಸಬೇಕು ಎಂದರು.

    Click to comment

    Leave a Reply

    Your email address will not be published. Required fields are marked *

    More in ಮೊಳಕಾಳ್ಮೂರು

    To Top