By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ಮಾ.4 ರಿಂದ ಮಾವಿನಹಳ್ಳಿ ಬಸವೇಶ್ವರ ಸ್ವಾಮಿ ರಥೋತ್ಸವ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ಮಾ.4 ರಿಂದ ಮಾವಿನಹಳ್ಳಿ ಬಸವೇಶ್ವರ ಸ್ವಾಮಿ ರಥೋತ್ಸವ

ಮುಖ್ಯ ಸುದ್ದಿ

ಮಾ.4 ರಿಂದ ಮಾವಿನಹಳ್ಳಿ ಬಸವೇಶ್ವರ ಸ್ವಾಮಿ ರಥೋತ್ಸವ

chitradurganews.com
Last updated: 6 February 2025 16:25
chitradurganews.com
5 months ago
Share
Mavinahally Basaveshwara swamy
ಮಾವಿನಹಳ್ಳಿ ಬಸವೇಶ್ವರ ಸ್ವಾಮಿ
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 06 FEBRUARY 2025

ಚಿತ್ರದುರ್ಗ: ತಾಲೂಕಿನ ಭೀಮಸಮುದ್ರ ಬಳಿಯಿರುವ ಶ್ರೀ ಮಾವಿನಹಳ್ಳಿ ಬಸವೇಶ್ವರ ಸ್ವಾಮಿ ರಥೋತ್ಸವ ಮಾರ್ಚ್ 4 ರಿಂದ 9 ರವರೆಗೆ ನಡೆಯಲಿದೆ ಎಂದು ದೇವಸ್ಥಾನದದ ಟ್ರಸ್ಟ್ ಪ್ರಕಟಣೆಯಲ್ಲಿ ತಿಳಿಸಿದೆ.

ಮಾ.04 ರಂದು ಸ್ವಾಮಿಗೆ ಮಹಾ ರುದ್ರಾಭೀಷೇಕ ಕಂಕಣ ಧಾರಣೆ ಪಲ್ಲಕ್ಕಿ ಉತ್ಸವ ಧ್ವಜಾರೋಹಣ ಸೇವೆ, ಮಾ.5 ರಂದು “ಅಪ್ಪೋತ್ಸವ” ಸೇವೆ, ಮಾ.06 ರಂದು ವೃಷಭೋತ್ಸವ ಸೇವೆ.

ಇದನ್ನೂ ಓದಿ: ಸಮಾಧಿಯಿಂದ ದೇಹ ಹೊರ ತೆಗೆದು ತನಿಖೆ | ನಾಲ್ಕು ತಿಂಗಳ ಹಿಂದೆ ಅಂತ್ಯಕ್ರಿಯೆ

ಮಾ.07 ರಂದು ಬೆಳಿಗ್ಗೆ 6 ಗಂಟೆಗೆ ಹೂವಿನ ಉತ್ಸವ ಸೇವೆ, ನಂತರ ಗಜೋತ್ಸವ, ತದ ನಂತರ 10 ಗಂಟೆಗೆ ಸ್ವಾಮಿಗೆ ಕೆಂಡಾರ್ಚನೆ ಸೇವೆ ನಡೆಯಲಿದೆ.

ಮಾ.8 ರಂದು ಬೆಳಿಗ್ಗೆ 11 ಗಂಟೆಗೆ ಸಾಮೂಹಿಕ ವಿವಾಹ ಮಹೋತ್ಸವ ನಡೆಯಲಿದೆ. ಈ ಸಂದರ್ಭದಲ್ಲಿ ವಿವಾಹವಾಗುವ ಮಧು-ವರರಿಗೆ ಬಟ್ಟೆ, ತಾಳಿ ನೀಡಲಾಗುವುದು ಅಸಕ್ತರು ದೇವಸ್ಥಾನದಲ್ಲಿ ಹೆಸರನ್ನು ನೊಂದಾಯಿಸಬಹುದಾಗಿದೆ.

ಇದನ್ನೂ ಓದಿ: APMC: ಮಾರುಕಟ್ಟೆ ಧಾರಣೆ | ಇಂದಿನ ಹತ್ತಿ ರೇಟ್ ಎಷ್ಟಿದೆ? 

ಸಂಜೆ 4.30 ಗಂಟೆಗೆ ಹೂವಿನ ಅಡ್ಡ ಪಲ್ಲಕ್ಕಿ ಉತ್ಸವ ಸೇವೆ ನಡೆಯಲಿದ್ದು ತದ ನಂತರ ಸ್ವಾಮಿಯ ರಥೋತ್ಸವ ಕಾರ್ಯಕ್ರಮ ನಡೆಯಲಿದೆ, ಕೆಂಡಾರ್ಚನೆ ಮತ್ತು ರಥೋತ್ಸವ ಸಮಯದಲ್ಲಿ ಆಗಮಿಸುವ ಭಕ್ತಾಧಿಗಳಿಗೆ ದಾಸೋಹ ಸೇವೆಯನ್ನು ಏರ್ಪಡಿಸಲಾಗಿದೆ.

ಮಾ. 9ರ ಶನಿವಾರ ಸಂಜೆ 4 ಗಂಟೆಗೆ ಸ್ವಾಮಿಯ ಕಂಕಣ ವಿಸರ್ಜನೆ, ಮಹಾ ಮಂಗಳಾರತಿಯೊಂದಿಗೆ ಶ್ರೀ ಸ್ವಾಮಿಯ ಸೇವಾ ಕಾರ್ಯಕ್ರಮಗಳು ಮುಕ್ತಾಯವಾಗಲಿದೆ.

ಇದನ್ನೂ ಓದಿ: ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್

ಬಸವೇಶ್ವರ ಸ್ವಾಮಿಯ ದೇವಸ್ಥಾನದ ನೂತನ ಕಟ್ಟಡದ ಕಾರ್ಯ ಪ್ರಗತಿಯಲ್ಲಿದ್ದು ಇದರ ಅಂದಾಜು ಮೊತ್ತ ಸುಮಾರು 5 ಕೋಟಿಗಳಾಗಿರುತ್ತದೆ. ಆದ್ದರಿಂದ ಭಕ್ತಾದಿಗಳು ನೂತನ ದೇವಸ್ಥಾನದ ನಿರ್ಮಾಣಕ್ಕೆ ಹೆಚ್ಚಿನ ಧನಸಹಾಯ ಮಾಡುವವರು ಹಾಗೂ ವಾಗ್ದಾನ ಮಾಡಿರುವವರು ಜಾತ್ರಾ ಸಮಯದಲ್ಲಿ ಹಣವನ್ನು ಕೊಟ್ಟು ಶ್ರೀ ಸ್ವಾಮಿ ಕೃಪೆಗೆ ಪಾತ್ರರಾಗಬೇಕಾಗಿ ವಿನಂತಿ ಮಾಡಲಾಗಿದೆ.

ಹಿಂದಿನ ವರ್ಷ ರಥೋತ್ಸವ ಸಮಯದಲ್ಲಿ ಭಾವುಟ ಮತ್ತು ಹೂವಿನ ಹಾರಗಳನ್ನು ಹರಾಜಿನಲ್ಲಿ ಪಡೆದವರು ಶ್ರೀ ಸ್ವಾಮಿಯ ರಥೋತ್ಸವದ ದಿವಸ ಹಣ ಕೊಟ್ಟು ರಸೀದಿ ಪಡೆಯಬೇಕೆಂದು ಮನವಿ ಮಾಡಲಾಗಿದೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:bheemasamudraChitradurga LatestChitradurga newsfeaturedKannada NewsKendarchaneMavinahalliMavinahalli Basaveshwara SwamiRathotsavaಕನ್ನಡ ಸುದ್ದಿಕೆಂಡಾರ್ಚನೆಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಲೇಟೆಸ್ಟ್ಭೀಮಸಮುದ್ರಮಾವಿನಹಳ್ಳಿಮಾವಿನಹಳ್ಳಿ ಬಸವೇಶ್ವರ ಸ್ವಾಮಿರಥೋತ್ಸವ
Share This Article
Facebook Email Print
Previous Article APMC: ಮಾರುಕಟ್ಟೆ ಧಾರಣೆ | ಇಂದಿನ ಹತ್ತಿ ರೇಟ್ ಎಷ್ಟಿದೆ? 
Next Article SRS rank bed students B.Ed ಫಲಿತಾಂಶ | SRS ಕಾಲೇಜಿಗೆ ಮೂರು ರ್ಯಾಂಕ್
Leave a Comment

Leave a Reply Cancel reply

Your email address will not be published. Required fields are marked *

ಬೆಳೆವಿಮೆ
ಫಸಲ್ ಭೀಮಾ ಯೋಜನೆ | ನೋಂದಣಿ ಆರಂಭ
ಮುಖ್ಯ ಸುದ್ದಿ
ಬೆಳೆ ಸಮೀಕ್ಷೆ | ರೈತರೇ Mobile App ಮೂಲಕ ಮಾಹಿತಿ ಅಪ್‍ಲೋಡ್ ಮಾಡಬಹುದು | ಅದು ಹೇಗೆ ಎಂದು ತಿಳಿಯಿರಿ 
ಮುಖ್ಯ ಸುದ್ದಿ
arecanut price list
ಅಡಿಕೆ ಧಾರಣೆ | ಜುಲೈ 1 | ಯಾವ ಅಡಿಕೆಗೆ ಎಷ್ಟು ರೇಟ್‌
ಅಡಕೆ ಧಾರಣೆ
ರಕ್ತದಾನದಿಂದ ಆರೋಗ್ಯ ವೃದ್ಧಿ | ಎಂ.ಕೆ.ರವೀಂದ್ರ
ಮುಖ್ಯ ಸುದ್ದಿ
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up